Homeಕರ್ನಾಟಕ’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮೈಸೂರಿನ "ಪ್ರಜಾಭಾರತ" ಸುದ್ದಿವಾಹಿನಿಯು "ಮತಭಾರತ" ಎಂಬ ಸರಣಿ ಸಂಚಿಕೆಯೊಂದರಲ್ಲಿ "ಬಿಜೆಪಿ ಮಿಷನ್:360-ಭಾರತಕ್ಕೆ ಆಪತ್ತು" ಎಂಬ ಪ್ರಸಾರ ಮಾಡಿತ್ತು.

- Advertisement -
- Advertisement -

ದೇಶದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನೆಲ್ಲಾ ಕೈ ವಶಮಾಡಿಕೊಂಡಿರುವ “ಭಕ್ತರ ಫ್ರಭುತ್ವ” ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಫ್ಯಾಸಿಸಂ ಧೋರಣೆಯನ್ನು ಮುಂದುವರೆಸಿದೆ.

ತನ್ನ ಸುಳ್ಳುಗಳನ್ನು, ಮತೋನ್ಮತ್ತ ಕ್ರೌರ್ಯವನ್ನು ಖಂಡಿಸುವ, ಅದೇ ಕಾಲಕ್ಕೆ ಸತ್ಯವನ್ನು ಜನರ ಮುಂದಿಡುವ ಯಾರೊಬ್ಬರನ್ನೂ ಸಹಿಸಿಕೊಳ್ಳದ ಬಿಜೆಪಿ ರಾಜ್ಯದಲ್ಲೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡುವ ಕೆಲಸಕ್ಕೆ ಕೈ ಹಾಕಿರುವ ಮತ್ತೊಂದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಬಯಲಾಗಿದೆ.

ಇದನ್ನೂ ಓದಿ: 2019ರಲ್ಲಿ ದಿಟ್ಟವಾಗಿ ಧ್ವನಿಯೆತ್ತಿದ 10 ಪತ್ರಕರ್ತೆಯರ ಕುರಿತು

ಮೈಸೂರಿನ ಹಿರಿಯ ಪತ್ರಕರ್ತ ‘ಪ್ರಜಾಭಾರತ’ ಸುದ್ದಿವಾಹಿನಿಯ ಸಂಪಾದಕ ಕೆ. ದೀಪಕ್ ವಿರುದ್ಧ ಬಿಜೆಪಿಯ ರಾಜ್ಯ ಜಂಟೀ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ ಎಂಬುವರು ಸದ್ದಿಲ್ಲದೆ ಪೊಲೀಸ್ ದೂರು ದಾಖಲಿಸಿ ದೀಪಕ್ ಅವರನ್ನು ಜೈಲಿಗೆ ನೂಕುವ ಷಡ್ಯಂತ್ರ ದೀಪಕ್ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದ್ದರಿಂದ ವಿಫಲವಾಗಿದೆ.

ದೀಪಕ್ ಮಾಡಿದ ಅಪರಾಧವಾದರೂ ಏನು ಗೊತ್ತಾ?

ಕಳೆದ 2019 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೈಸೂರಿನ “ಪ್ರಜಾಭಾರತ” ಸುದ್ದಿವಾಹಿನಿಯು  “ಮತಭಾರತ” ಎಂಬ ಸರಣಿ ಸಂಚಿಕೆಯೊಂದರಲ್ಲಿ “ಬಿಜೆಪಿ ಮಿಷನ್:360-ಭಾರತಕ್ಕೆ ಆಪತ್ತು” ಪ್ರಸಾರ ಮಾಡಿದ್ದು. ಬಿಜೆಪಿಯ ಸಂವಿಧಾನ ವಿರೋಧಿ ಆಡಳಿತವನ್ನು ಎಳೆ ಎಳೆಯಾಗಿ ವಿಶ್ಲೇಷಿಸಲಾಗಿತ್ತು.

ಇದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಮೈಸೂರಿನ ಪ್ರಜಾಭಾರತ ಸುದ್ದಿವಾಹಿನಿ ಸಂಪಾದಕ ಕೆ.ದೀಪಕ್ ವಿರುದ್ಧ ಕೋಮು ಸೌಹಾರ್ದ ಕದಡುವ ಸಂಚು ನಡೆಸಿದ ಆರೋಪ ಹೊರಿಸಿ ಬಿಜೆಪಿ ರಾಜ್ಯ ಜಂಟೀ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ಸದ್ದಿಲ್ಲದೆ ಎಫ್‌ಐಅರ್ (ಐಪಿಸಿ 504, 505, 153 ಎ) ದಾಖಲಾಗಿದ್ದು, 17 ತಿಂಗಳ ನಂತರ ದೀಪಕ್ ಅವರನ್ನು ಬಂಧಿಸಿ ಜೈಲಿಗೆ ನೂಕುವಂತೆ ಪೊಲೀಸರಿಗೆ ತೀವ್ರ ಒತ್ತಡಗಳನ್ನು ಹೇರಲಾಗಿತ್ತು. ದೀಪಕ್ ನಿರೀಕ್ಷಣಾ ಜಾಮೀನು ಪಡೆದು ಬಿಜೆಪಿಯ ಷಡ್ಯಂತ್ರವನ್ನು ವಿಫಲಗೊಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಜಾಭಾರತ ಸುದ್ದಿವಾಹಿನಿ ಮತಭಾರತ ಸರಣಿಯಲ್ಲಿ ಕೇಂದ್ರದ ಮೋದಿ ಸರ್ಕಾರದ ವೈಫಲ್ಯ, ಸಮುದಾಯ ವಿರೋಧಿತನಗಳನ್ನು ಬಯಲಿಗೆಳೆಯುತ್ತಾ ಬಂದಿದ್ದರು. ಮೈಸೂರಿನ ಸಂಸದ ಪ್ರತಾಪ ಸಿಂಹ ಅವರ ಲೈಂಗಿಕ ಹಗರಣವನ್ನು ಸ್ಪೋಟಿಸಿದ್ದರು. ಇದೇ ಸೇಡಿಗೆ ದೀಪಕ್ ವಿರುದ್ಧ ಬೆಂಗಳೂರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ದೂರು ದಾಖಲಾದದ್ದು ದೀಪಕ್ ಅವರಿಗೆ ತಿಳಿಯಲು 17 ತಿಂಗಳೇ ಬೇಕಾಯಿತು!. ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುತ್ತಿದ್ದಂತೆ ದೀಪಕ್ ವಿರುದ್ಧ ಕೇಸು ದಾಖಲಾಗಿರುವುದು ಬೆಳಕಿಗೆ ಬಂದಿದ್ದು. ಅವರನ್ನು ಬಂಧಿಸಿಯೇ ತೀರಬೇಕೆಂಬ ಒತ್ತಡಗಳು ಪೊಲೀಸರ ಮೇಲಿತ್ತು.

ಪತ್ರಕರ್ತ ದೀಪಕ್ ಅವರನ್ನು ಜೈಲಿಗೆ ನೂಕಿ ಭಯಪಡಿಸಿ ಬಾಯಿ ಮುಚ್ಚಿಸುವ ಪ್ರತಾಪಸಿಂಹನ ಕೇಡಿ ಕೃತ್ಯ ಸದ್ಯಕ್ಕೆ ಈಡೇರಿಲ್ಲ.

ಕೆ.ದೀಪಕ್ ಕಳೆದ 21 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದಾರೆ. ಅವರೋರ್ವ ಜರ್ನಲಿಸ್ಟ್ ಆ್ಯಕ್ಟ್ವೀಸ್ಟ್. ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಡಿಹೊತ್ತಿಗೆಯಾಗಿದ್ದ ಮೈಸೂರಿನ ‘ಸಾಧ್ವಿ’ ಪತ್ರಿಕೆಯ ಮೂಲಕ ಪರ್ತಕರ್ತ ಬದುಕು ಕಟ್ಟಿಕೊಂಡ ದೀಪಕ್ ‘ವಿಜಯ’, ಸೂರ್ಯೋದಯ, ಪ್ರಜಾನುಡಿ, ಸಂಜೆವಾಣಿ, ವಾರ್ತಾಭಾರತಿ ಪತ್ರಿಕೆಗಳು ಸೇರಿದಂತೆ ದೃಶ್ಯಮಾಧ್ಯಮಗಳಲ್ಲೂ ವೃತ್ತಿಪರ ಪತ್ರಕರ್ತನಾಗಿಯೂ ಅದೇ ಕಾಲಕ್ಕೆ ಬುದ್ದ, ಬಸವ, ಅಂಬೇಡ್ಕರ್ ಪ್ರೇಣಿತ ವೈಚಾರಿಕ ಚಿಂತನೆಗಳೊಂದಿಗೆ ಸಾಮಾಜಿಕ ಚಳವಳಿಗಳ ಜೊತೆ ಹೆಜ್ಜೆ ಹಾಕುತಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ದೀಪಕ್ ಹಾಲಿ ಮೈಸೂರು ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ಪತ್ರಕರ್ತರ ಹಿತಕ್ಕಾಗಿ ಶ್ರಮಿಸುತ್ತಿದ್ದಾರೆ.

ಬಿಜೆಪಿ ಯಾರೊಬ್ಬರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಹಿಸಿಕೊಳ್ಳದು ಎಂಬುದಕ್ಕೆ ಅನೇಕ ನಿದರ್ಶನಗಳು ಮತ್ತೆ ಮತ್ತೆ ಬಯಲಾಗುತ್ತಲೆ ಇವೆ.

ಇದನ್ನೂ ಓದಿ: ಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಪ್ರಶ್ನಿಸುವ ಪತ್ರಕರ್ತರನ್ನು, ಸಾಹಿತಿ- ಬರಹಗಾರರನ್ನ, ವಿಮರ್ಶಕರನ್ನು, ಸೈದ್ಧಾಂತಿಕ ವಿರೋಧಿಗಳಿಗೆ ದೇಶದ್ರೋಹಿ ಎಂಬ  ಹಣೆ ಪಟ್ಟಿ ಕಟ್ಟಿ ದಮನ ಮಾಡುವ ಮತ್ತು ವಿಚಾರ ಸಂಘರ್ಷದ ಮೂಲಕ  ಎದುರುಗೊಳ್ಳಲಾರದ ಮನುವಾದಿ ಪ್ರೇಣಿತ ಬಿಜೆಪಿ ಮತ್ತದರ ಸಂತತಿಗಳು ಕಾನೂನು ದುರ್ಬಳಕೆ ಮಾಡಿಕೊಂಡೊ ಇಲ್ಲವೆ ಇನ್ನಾವುದಾದರೂ ದಾರಿಯಲ್ಲಿ ಹತ್ತಿಕ್ಕುವ ಕುಕೃತ್ಯಗಳು ಮುಂದುವರೆದಿವೆ.

ಪತ್ರಕರ್ತ ದೀಪಕ್ ವಿರುದ್ಧ ಕೇಸು ದಾಖಲಿಸಿದ ಬಿಜೆಪಿ ಕ್ರಮ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನಕಾರಿಯಾದದ್ದು ಎಂದು ಪತ್ರಕರ್ತರ ಸಮೂಹ ತೀವ್ರ‌ಖಂಡನೆ ವ್ಯಕ್ತಪಡಿಸಿದೆ.

“ನನ್ನ ಮೇಲೆ ಇಂತಹ ಹತ್ತಾರು ಕೇಸು ಹಾಕಿದರೂ ಸತ್ಯ ಹೇಳುವ ನನ್ನ ದನಿಯನ್ನು ಅಡಗಿಸಲಾಗದು. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನದ ಹಕ್ಕನ್ನು ಹತ್ತಿಕ್ಕುವ ಯಾವುದೇ ಶಕ್ತಿಗಳ ವಿರುದ್ಧ ಹೋರಾಡುತ್ತೇನೆ.”

ಕೆ.ದೀಪಕ್

ವಿಡಿಯೋ ನೋಡಿ:ಮಾಧ್ಯಮಗಳು ಸೃಷ್ಟಿಸಿರುವ ಸಾವಿನ ಬಾವಿ – ಡಾ.ವಾಸು ಎಚ್‌.ವಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...