Homeಮುಖಪುಟಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಮೇಲೆ FIR!

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಮೇಲೆ FIR!

- Advertisement -
- Advertisement -

ಪ್ರಮುಖ ರಿಯಲ್ ಎಸ್ಟೇಟ್ ಗ್ರೂಪ್ ಆಮ್ರಪಾಲಿ ಜೊತೆಗಿನ ಒಡನಾಟ ಭಾರತ ಕ್ರೀಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ದೋನಿಗೆ ಉರುಳಾಗಿ ಪರಿಣಾಮಿಸಿದೆ. ಅಮ್ರಪಾಲಿ ಹಗರಣದ ಪಿತೂರಿಯಲ್ಲಿ ಎಂ.ಎಸ್.ಧೋನಿ ಭಾಗಿಯಾಗಿದ್ದಾರೆಂದು ಆರೋಪಿಸಿ ಎಫ್.ಐ.ಆರ್ ದಾಖಲಿಸಲಾಗಿದೆ.

ಆಮ್ರಪಾಲಿ ರಿಯಲ್ ಎಸ್ಟೇಟ್ ಗ್ರೂಪ್‌ನ ರಾಯಭಾರಿಯಾಗಿದ್ದ ಧೋನಿ ಮತ್ತು ಬಿಲ್ಡರ್ ಅನಿಲ್ ಶರ್ಮ ಹೆಸರಾಂತ ವ್ಯಕ್ತಿಗಳಾಗಿದ್ದು ಅವರ ಮೇಲಿನ ನಂಬಿಕೆಯಿಂದಲೇ ನಾವು ಪ್ಲಾಟುಗಳನ್ನು ಕೊಂಡಕೊಳ್ಳಲು ಹಣ ಹೂಡಿಕೆ ಮಾಡಿದ್ದಾಗಿ ಎಫ್.ಐ.ಆರ್ ನಲ್ಲಿ ಬಾಧಿತರು ಹೇಳಿಕೊಂಡಿದ್ದಾರೆ.

ಆಮ್ರಪಾಲಿ ಸಂಸ್ಥೆ ಪ್ಲಾಟ್‌ಗಳನ್ನು ನೀಡುವ ನೆಪದಲ್ಲಿ ದೊಡ್ಡ ಮೊತ್ತದಲ್ಲಿ ಹಣ ಸಂಗ್ರಹಿಸಿ ನಂತರ ಬೇರೆ ಕಂಪನಿಗಳಿಗೆ ನಿಯಮಗಳಿಗೆ ವಿರುದ್ಧವಾಗಿ ಹಣ ವರ್ಗಾಯಿಸಿದೆ ಎಂದು ಆರೋಪಿಸಲಾಗಿದೆ. ಹೀಗೆ ವರ್ಗಾಯಿಸಿದ ಕಂಪನಿಗಳಲ್ಲಿ ಎಂ.ಎಸ್.ಧೋನಿಯ ಹೆಂಡತಿ ಸಾಕ್ಷಿ ಧೋನಿಯ ಕಂಪನಿಯೂ ಕೂಡ ಇದೆ ಎಂದು ಹೇಳಲಾಗಿದೆ.

ಜುಲೈ 23ರಿಂದ ಇಲ್ಲಿಯವರೆಗೆ ಎಫ್‌ಐಆರ್ ದಾಖಲಿಸಿರುವ ಏಳು ಖರೀದಿದಾರರ ಗುಂಪುಗಳು ಒ2 ವ್ಯಾಲಿ, ಲಾ ರೆಸಿಡೆಂಟಿಯಾ, ಸಿಲಿಕಾನ್ ಸಿಟಿ, ಕರಿಸ್ಟಲ್ ಹೋಮ್ಸ್, ಲೀಜರ್ ವ್ಯಾಲಿ, ಆದರ್ಶ್ ಆವಾಸ್ ಯೋಜನೆ ಮತ್ತು ಕಿಂಗ್ಸ್ವುಡ್‌ನ ವಸತಿ ಯೋಜನೆಗಳಿಗೆ ಸೇರಿವೆ. ಎಫ್‌ಐಆರ್‌ಗಳಲ್ಲಿ ಅನಿಲ್ ಕೆ ಶರ್ಮಾ ಮತ್ತು ಇತರ ನಿರ್ದೇಶಕರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

ಆದರೆ ಎಂ.ಎಸ್.ಧೋನಿ ಪಾತ್ರವನ್ನು ಪರಿಶೀಲಿಸುವಂತೆ ನಾವು ತನಿಖಾ ಸಂಸ್ಥೆಗೆ ವಿನಂತಿಸಿಲಾಗಿದೆ. ನೋಯ್ಢಾ ಪ್ರಾಧಿಕಾರಗಳಿಂದ ಯಾವುದೇ ಅನುಮೋದನೆ ಪಡೆಯದೆ ಡೆವಲಪರ್ ಈ ಎಲ್ಲಾ ಯೋಜನೆಗಳನ್ನು ಪ್ರಾರಭಿಸಿದ್ದಾರೆ ಎನ್ನುವ ಆರೋಪವು ಆಮ್ರಪಾಲಿ ಸಂಸ್ಥೆಯ ಮೇಲಿದೆ.

ಇದನ್ನೂ ಓದಿ: ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ಠೇವಣಿದಾರರ ಜೊತೆಗಿನ ಒಪ್ಪಂದದ ಪ್ರಕಾರ ಆಮ್ರಪಾಲಿ ಕಂಪನಿ ಪ್ಲಾಟ್‌ಗಳನ್ನು ಹಸ್ತಾಂತರಿಸಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ದೂರುಗಳು ಹೋಗಿದ್ದವು. ಇದರಿಂದ ಸುಪ್ರೀಂಕೋರ್ಟ್ 2017ರಲ್ಲಿ ತನಿಖೆಗೆ ಆದೇಶಿಸಿತ್ತು . ನ್ಯಾಯಾಲದಿಂದ ನೇಮಕಗೊಂಡ ಲೆಕ್ಕಪರಿಶೋಧಕರು ಕಂಪನಿಯ ಖಾತೆಯನ್ನು ಪರಿಶೀಲಿಸಿ ಈ ಸಂಸ್ಥೆ ಸಾವಿರಾರು ಕೋಟಿ ಜನಸಾಮಾನ್ಯರ ಹಣವನ್ನು ಸಂಗ್ರಹಿಸಿರುವುದನ್ನು ಬಹಿರಂಗಪಡಿಸಲಾಯಿತು.

2003ರಲ್ಲಿ ಸ್ಥಾಪನೆಯಾದ ಅಮ್ರಪಾಲಿ ಗ್ರೂಪ್ ತನ್ನ ಸಿ.ಎಂ.ಡಿ ಅನಿಲ್ ಶರ್ಮಾರ ಆಡಳಿತದಲ್ಲಿ 2010ರ ವೇಳೆಗೆ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾಗಿ ಹೊರಹೊಮ್ಮಿತು. ಹಾಗೇಯೇ ಶಿಕ್ಷಣ, ಮನರಂಜನೆ, ಎಫ್.ಎಮ್.ಸಿ.ಜಿ, ಮೂಲಸೌಕರ್ಯ, ಹೋಟೆಲ್‌ಗೆ ಸಂಬಂಧಿಸಿದಂತೆ 150 ಕಂಪನಿಗಳನ್ನು ಈ ಸಮಯದಲ್ಲಿ ಹೊಸದಾಗಿ ಪ್ರಾರಂಭಿಸಿದರು. ಈ ಎಲ್ಲಾ ಚುಟುವಟಿಕೆಗಳಲ್ಲಿ ಆಮ್ರಪಾಲಿ ಸಂಸ್ಥೆ ಜನಸಾಮಾನ್ಯರ ಹಣವನ್ನು ದೊಡ್ಡ ಮಟ್ಟದಲ್ಲಿ ದುರುಪಯೋಗ ಪಡಿಸಿಕೊಂಡಿರುವ ಆರೋಪ ಹೊತ್ತಿಕೊಂಡಿದೆ. ಈಗ ಈ ಸಂಸ್ಥೆಯ ಜೊತೆಗಿದ್ದ ಧೋನಿಗೂ ಇದರ ಬಿಸಿ ತಟ್ಟಿದಂತೆ ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...