Homeಮುಖಪುಟಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಮೇಲೆ FIR!

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಮೇಲೆ FIR!

- Advertisement -
- Advertisement -

ಪ್ರಮುಖ ರಿಯಲ್ ಎಸ್ಟೇಟ್ ಗ್ರೂಪ್ ಆಮ್ರಪಾಲಿ ಜೊತೆಗಿನ ಒಡನಾಟ ಭಾರತ ಕ್ರೀಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ದೋನಿಗೆ ಉರುಳಾಗಿ ಪರಿಣಾಮಿಸಿದೆ. ಅಮ್ರಪಾಲಿ ಹಗರಣದ ಪಿತೂರಿಯಲ್ಲಿ ಎಂ.ಎಸ್.ಧೋನಿ ಭಾಗಿಯಾಗಿದ್ದಾರೆಂದು ಆರೋಪಿಸಿ ಎಫ್.ಐ.ಆರ್ ದಾಖಲಿಸಲಾಗಿದೆ.

ಆಮ್ರಪಾಲಿ ರಿಯಲ್ ಎಸ್ಟೇಟ್ ಗ್ರೂಪ್‌ನ ರಾಯಭಾರಿಯಾಗಿದ್ದ ಧೋನಿ ಮತ್ತು ಬಿಲ್ಡರ್ ಅನಿಲ್ ಶರ್ಮ ಹೆಸರಾಂತ ವ್ಯಕ್ತಿಗಳಾಗಿದ್ದು ಅವರ ಮೇಲಿನ ನಂಬಿಕೆಯಿಂದಲೇ ನಾವು ಪ್ಲಾಟುಗಳನ್ನು ಕೊಂಡಕೊಳ್ಳಲು ಹಣ ಹೂಡಿಕೆ ಮಾಡಿದ್ದಾಗಿ ಎಫ್.ಐ.ಆರ್ ನಲ್ಲಿ ಬಾಧಿತರು ಹೇಳಿಕೊಂಡಿದ್ದಾರೆ.

ಆಮ್ರಪಾಲಿ ಸಂಸ್ಥೆ ಪ್ಲಾಟ್‌ಗಳನ್ನು ನೀಡುವ ನೆಪದಲ್ಲಿ ದೊಡ್ಡ ಮೊತ್ತದಲ್ಲಿ ಹಣ ಸಂಗ್ರಹಿಸಿ ನಂತರ ಬೇರೆ ಕಂಪನಿಗಳಿಗೆ ನಿಯಮಗಳಿಗೆ ವಿರುದ್ಧವಾಗಿ ಹಣ ವರ್ಗಾಯಿಸಿದೆ ಎಂದು ಆರೋಪಿಸಲಾಗಿದೆ. ಹೀಗೆ ವರ್ಗಾಯಿಸಿದ ಕಂಪನಿಗಳಲ್ಲಿ ಎಂ.ಎಸ್.ಧೋನಿಯ ಹೆಂಡತಿ ಸಾಕ್ಷಿ ಧೋನಿಯ ಕಂಪನಿಯೂ ಕೂಡ ಇದೆ ಎಂದು ಹೇಳಲಾಗಿದೆ.

ಜುಲೈ 23ರಿಂದ ಇಲ್ಲಿಯವರೆಗೆ ಎಫ್‌ಐಆರ್ ದಾಖಲಿಸಿರುವ ಏಳು ಖರೀದಿದಾರರ ಗುಂಪುಗಳು ಒ2 ವ್ಯಾಲಿ, ಲಾ ರೆಸಿಡೆಂಟಿಯಾ, ಸಿಲಿಕಾನ್ ಸಿಟಿ, ಕರಿಸ್ಟಲ್ ಹೋಮ್ಸ್, ಲೀಜರ್ ವ್ಯಾಲಿ, ಆದರ್ಶ್ ಆವಾಸ್ ಯೋಜನೆ ಮತ್ತು ಕಿಂಗ್ಸ್ವುಡ್‌ನ ವಸತಿ ಯೋಜನೆಗಳಿಗೆ ಸೇರಿವೆ. ಎಫ್‌ಐಆರ್‌ಗಳಲ್ಲಿ ಅನಿಲ್ ಕೆ ಶರ್ಮಾ ಮತ್ತು ಇತರ ನಿರ್ದೇಶಕರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

ಆದರೆ ಎಂ.ಎಸ್.ಧೋನಿ ಪಾತ್ರವನ್ನು ಪರಿಶೀಲಿಸುವಂತೆ ನಾವು ತನಿಖಾ ಸಂಸ್ಥೆಗೆ ವಿನಂತಿಸಿಲಾಗಿದೆ. ನೋಯ್ಢಾ ಪ್ರಾಧಿಕಾರಗಳಿಂದ ಯಾವುದೇ ಅನುಮೋದನೆ ಪಡೆಯದೆ ಡೆವಲಪರ್ ಈ ಎಲ್ಲಾ ಯೋಜನೆಗಳನ್ನು ಪ್ರಾರಭಿಸಿದ್ದಾರೆ ಎನ್ನುವ ಆರೋಪವು ಆಮ್ರಪಾಲಿ ಸಂಸ್ಥೆಯ ಮೇಲಿದೆ.

ಇದನ್ನೂ ಓದಿ: ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ಠೇವಣಿದಾರರ ಜೊತೆಗಿನ ಒಪ್ಪಂದದ ಪ್ರಕಾರ ಆಮ್ರಪಾಲಿ ಕಂಪನಿ ಪ್ಲಾಟ್‌ಗಳನ್ನು ಹಸ್ತಾಂತರಿಸಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ದೂರುಗಳು ಹೋಗಿದ್ದವು. ಇದರಿಂದ ಸುಪ್ರೀಂಕೋರ್ಟ್ 2017ರಲ್ಲಿ ತನಿಖೆಗೆ ಆದೇಶಿಸಿತ್ತು . ನ್ಯಾಯಾಲದಿಂದ ನೇಮಕಗೊಂಡ ಲೆಕ್ಕಪರಿಶೋಧಕರು ಕಂಪನಿಯ ಖಾತೆಯನ್ನು ಪರಿಶೀಲಿಸಿ ಈ ಸಂಸ್ಥೆ ಸಾವಿರಾರು ಕೋಟಿ ಜನಸಾಮಾನ್ಯರ ಹಣವನ್ನು ಸಂಗ್ರಹಿಸಿರುವುದನ್ನು ಬಹಿರಂಗಪಡಿಸಲಾಯಿತು.

2003ರಲ್ಲಿ ಸ್ಥಾಪನೆಯಾದ ಅಮ್ರಪಾಲಿ ಗ್ರೂಪ್ ತನ್ನ ಸಿ.ಎಂ.ಡಿ ಅನಿಲ್ ಶರ್ಮಾರ ಆಡಳಿತದಲ್ಲಿ 2010ರ ವೇಳೆಗೆ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾಗಿ ಹೊರಹೊಮ್ಮಿತು. ಹಾಗೇಯೇ ಶಿಕ್ಷಣ, ಮನರಂಜನೆ, ಎಫ್.ಎಮ್.ಸಿ.ಜಿ, ಮೂಲಸೌಕರ್ಯ, ಹೋಟೆಲ್‌ಗೆ ಸಂಬಂಧಿಸಿದಂತೆ 150 ಕಂಪನಿಗಳನ್ನು ಈ ಸಮಯದಲ್ಲಿ ಹೊಸದಾಗಿ ಪ್ರಾರಂಭಿಸಿದರು. ಈ ಎಲ್ಲಾ ಚುಟುವಟಿಕೆಗಳಲ್ಲಿ ಆಮ್ರಪಾಲಿ ಸಂಸ್ಥೆ ಜನಸಾಮಾನ್ಯರ ಹಣವನ್ನು ದೊಡ್ಡ ಮಟ್ಟದಲ್ಲಿ ದುರುಪಯೋಗ ಪಡಿಸಿಕೊಂಡಿರುವ ಆರೋಪ ಹೊತ್ತಿಕೊಂಡಿದೆ. ಈಗ ಈ ಸಂಸ್ಥೆಯ ಜೊತೆಗಿದ್ದ ಧೋನಿಗೂ ಇದರ ಬಿಸಿ ತಟ್ಟಿದಂತೆ ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...