Homeಮುಖಪುಟಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಮೇಲೆ FIR!

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಮೇಲೆ FIR!

- Advertisement -
- Advertisement -

ಪ್ರಮುಖ ರಿಯಲ್ ಎಸ್ಟೇಟ್ ಗ್ರೂಪ್ ಆಮ್ರಪಾಲಿ ಜೊತೆಗಿನ ಒಡನಾಟ ಭಾರತ ಕ್ರೀಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ದೋನಿಗೆ ಉರುಳಾಗಿ ಪರಿಣಾಮಿಸಿದೆ. ಅಮ್ರಪಾಲಿ ಹಗರಣದ ಪಿತೂರಿಯಲ್ಲಿ ಎಂ.ಎಸ್.ಧೋನಿ ಭಾಗಿಯಾಗಿದ್ದಾರೆಂದು ಆರೋಪಿಸಿ ಎಫ್.ಐ.ಆರ್ ದಾಖಲಿಸಲಾಗಿದೆ.

ಆಮ್ರಪಾಲಿ ರಿಯಲ್ ಎಸ್ಟೇಟ್ ಗ್ರೂಪ್‌ನ ರಾಯಭಾರಿಯಾಗಿದ್ದ ಧೋನಿ ಮತ್ತು ಬಿಲ್ಡರ್ ಅನಿಲ್ ಶರ್ಮ ಹೆಸರಾಂತ ವ್ಯಕ್ತಿಗಳಾಗಿದ್ದು ಅವರ ಮೇಲಿನ ನಂಬಿಕೆಯಿಂದಲೇ ನಾವು ಪ್ಲಾಟುಗಳನ್ನು ಕೊಂಡಕೊಳ್ಳಲು ಹಣ ಹೂಡಿಕೆ ಮಾಡಿದ್ದಾಗಿ ಎಫ್.ಐ.ಆರ್ ನಲ್ಲಿ ಬಾಧಿತರು ಹೇಳಿಕೊಂಡಿದ್ದಾರೆ.

ಆಮ್ರಪಾಲಿ ಸಂಸ್ಥೆ ಪ್ಲಾಟ್‌ಗಳನ್ನು ನೀಡುವ ನೆಪದಲ್ಲಿ ದೊಡ್ಡ ಮೊತ್ತದಲ್ಲಿ ಹಣ ಸಂಗ್ರಹಿಸಿ ನಂತರ ಬೇರೆ ಕಂಪನಿಗಳಿಗೆ ನಿಯಮಗಳಿಗೆ ವಿರುದ್ಧವಾಗಿ ಹಣ ವರ್ಗಾಯಿಸಿದೆ ಎಂದು ಆರೋಪಿಸಲಾಗಿದೆ. ಹೀಗೆ ವರ್ಗಾಯಿಸಿದ ಕಂಪನಿಗಳಲ್ಲಿ ಎಂ.ಎಸ್.ಧೋನಿಯ ಹೆಂಡತಿ ಸಾಕ್ಷಿ ಧೋನಿಯ ಕಂಪನಿಯೂ ಕೂಡ ಇದೆ ಎಂದು ಹೇಳಲಾಗಿದೆ.

ಜುಲೈ 23ರಿಂದ ಇಲ್ಲಿಯವರೆಗೆ ಎಫ್‌ಐಆರ್ ದಾಖಲಿಸಿರುವ ಏಳು ಖರೀದಿದಾರರ ಗುಂಪುಗಳು ಒ2 ವ್ಯಾಲಿ, ಲಾ ರೆಸಿಡೆಂಟಿಯಾ, ಸಿಲಿಕಾನ್ ಸಿಟಿ, ಕರಿಸ್ಟಲ್ ಹೋಮ್ಸ್, ಲೀಜರ್ ವ್ಯಾಲಿ, ಆದರ್ಶ್ ಆವಾಸ್ ಯೋಜನೆ ಮತ್ತು ಕಿಂಗ್ಸ್ವುಡ್‌ನ ವಸತಿ ಯೋಜನೆಗಳಿಗೆ ಸೇರಿವೆ. ಎಫ್‌ಐಆರ್‌ಗಳಲ್ಲಿ ಅನಿಲ್ ಕೆ ಶರ್ಮಾ ಮತ್ತು ಇತರ ನಿರ್ದೇಶಕರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

ಆದರೆ ಎಂ.ಎಸ್.ಧೋನಿ ಪಾತ್ರವನ್ನು ಪರಿಶೀಲಿಸುವಂತೆ ನಾವು ತನಿಖಾ ಸಂಸ್ಥೆಗೆ ವಿನಂತಿಸಿಲಾಗಿದೆ. ನೋಯ್ಢಾ ಪ್ರಾಧಿಕಾರಗಳಿಂದ ಯಾವುದೇ ಅನುಮೋದನೆ ಪಡೆಯದೆ ಡೆವಲಪರ್ ಈ ಎಲ್ಲಾ ಯೋಜನೆಗಳನ್ನು ಪ್ರಾರಭಿಸಿದ್ದಾರೆ ಎನ್ನುವ ಆರೋಪವು ಆಮ್ರಪಾಲಿ ಸಂಸ್ಥೆಯ ಮೇಲಿದೆ.

ಇದನ್ನೂ ಓದಿ: ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ಠೇವಣಿದಾರರ ಜೊತೆಗಿನ ಒಪ್ಪಂದದ ಪ್ರಕಾರ ಆಮ್ರಪಾಲಿ ಕಂಪನಿ ಪ್ಲಾಟ್‌ಗಳನ್ನು ಹಸ್ತಾಂತರಿಸಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ದೂರುಗಳು ಹೋಗಿದ್ದವು. ಇದರಿಂದ ಸುಪ್ರೀಂಕೋರ್ಟ್ 2017ರಲ್ಲಿ ತನಿಖೆಗೆ ಆದೇಶಿಸಿತ್ತು . ನ್ಯಾಯಾಲದಿಂದ ನೇಮಕಗೊಂಡ ಲೆಕ್ಕಪರಿಶೋಧಕರು ಕಂಪನಿಯ ಖಾತೆಯನ್ನು ಪರಿಶೀಲಿಸಿ ಈ ಸಂಸ್ಥೆ ಸಾವಿರಾರು ಕೋಟಿ ಜನಸಾಮಾನ್ಯರ ಹಣವನ್ನು ಸಂಗ್ರಹಿಸಿರುವುದನ್ನು ಬಹಿರಂಗಪಡಿಸಲಾಯಿತು.

2003ರಲ್ಲಿ ಸ್ಥಾಪನೆಯಾದ ಅಮ್ರಪಾಲಿ ಗ್ರೂಪ್ ತನ್ನ ಸಿ.ಎಂ.ಡಿ ಅನಿಲ್ ಶರ್ಮಾರ ಆಡಳಿತದಲ್ಲಿ 2010ರ ವೇಳೆಗೆ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾಗಿ ಹೊರಹೊಮ್ಮಿತು. ಹಾಗೇಯೇ ಶಿಕ್ಷಣ, ಮನರಂಜನೆ, ಎಫ್.ಎಮ್.ಸಿ.ಜಿ, ಮೂಲಸೌಕರ್ಯ, ಹೋಟೆಲ್‌ಗೆ ಸಂಬಂಧಿಸಿದಂತೆ 150 ಕಂಪನಿಗಳನ್ನು ಈ ಸಮಯದಲ್ಲಿ ಹೊಸದಾಗಿ ಪ್ರಾರಂಭಿಸಿದರು. ಈ ಎಲ್ಲಾ ಚುಟುವಟಿಕೆಗಳಲ್ಲಿ ಆಮ್ರಪಾಲಿ ಸಂಸ್ಥೆ ಜನಸಾಮಾನ್ಯರ ಹಣವನ್ನು ದೊಡ್ಡ ಮಟ್ಟದಲ್ಲಿ ದುರುಪಯೋಗ ಪಡಿಸಿಕೊಂಡಿರುವ ಆರೋಪ ಹೊತ್ತಿಕೊಂಡಿದೆ. ಈಗ ಈ ಸಂಸ್ಥೆಯ ಜೊತೆಗಿದ್ದ ಧೋನಿಗೂ ಇದರ ಬಿಸಿ ತಟ್ಟಿದಂತೆ ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...