Homeಮುಖಪುಟಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಮೇಲೆ FIR!

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಮೇಲೆ FIR!

- Advertisement -
- Advertisement -

ಪ್ರಮುಖ ರಿಯಲ್ ಎಸ್ಟೇಟ್ ಗ್ರೂಪ್ ಆಮ್ರಪಾಲಿ ಜೊತೆಗಿನ ಒಡನಾಟ ಭಾರತ ಕ್ರೀಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ದೋನಿಗೆ ಉರುಳಾಗಿ ಪರಿಣಾಮಿಸಿದೆ. ಅಮ್ರಪಾಲಿ ಹಗರಣದ ಪಿತೂರಿಯಲ್ಲಿ ಎಂ.ಎಸ್.ಧೋನಿ ಭಾಗಿಯಾಗಿದ್ದಾರೆಂದು ಆರೋಪಿಸಿ ಎಫ್.ಐ.ಆರ್ ದಾಖಲಿಸಲಾಗಿದೆ.

ಆಮ್ರಪಾಲಿ ರಿಯಲ್ ಎಸ್ಟೇಟ್ ಗ್ರೂಪ್‌ನ ರಾಯಭಾರಿಯಾಗಿದ್ದ ಧೋನಿ ಮತ್ತು ಬಿಲ್ಡರ್ ಅನಿಲ್ ಶರ್ಮ ಹೆಸರಾಂತ ವ್ಯಕ್ತಿಗಳಾಗಿದ್ದು ಅವರ ಮೇಲಿನ ನಂಬಿಕೆಯಿಂದಲೇ ನಾವು ಪ್ಲಾಟುಗಳನ್ನು ಕೊಂಡಕೊಳ್ಳಲು ಹಣ ಹೂಡಿಕೆ ಮಾಡಿದ್ದಾಗಿ ಎಫ್.ಐ.ಆರ್ ನಲ್ಲಿ ಬಾಧಿತರು ಹೇಳಿಕೊಂಡಿದ್ದಾರೆ.

ಆಮ್ರಪಾಲಿ ಸಂಸ್ಥೆ ಪ್ಲಾಟ್‌ಗಳನ್ನು ನೀಡುವ ನೆಪದಲ್ಲಿ ದೊಡ್ಡ ಮೊತ್ತದಲ್ಲಿ ಹಣ ಸಂಗ್ರಹಿಸಿ ನಂತರ ಬೇರೆ ಕಂಪನಿಗಳಿಗೆ ನಿಯಮಗಳಿಗೆ ವಿರುದ್ಧವಾಗಿ ಹಣ ವರ್ಗಾಯಿಸಿದೆ ಎಂದು ಆರೋಪಿಸಲಾಗಿದೆ. ಹೀಗೆ ವರ್ಗಾಯಿಸಿದ ಕಂಪನಿಗಳಲ್ಲಿ ಎಂ.ಎಸ್.ಧೋನಿಯ ಹೆಂಡತಿ ಸಾಕ್ಷಿ ಧೋನಿಯ ಕಂಪನಿಯೂ ಕೂಡ ಇದೆ ಎಂದು ಹೇಳಲಾಗಿದೆ.

ಜುಲೈ 23ರಿಂದ ಇಲ್ಲಿಯವರೆಗೆ ಎಫ್‌ಐಆರ್ ದಾಖಲಿಸಿರುವ ಏಳು ಖರೀದಿದಾರರ ಗುಂಪುಗಳು ಒ2 ವ್ಯಾಲಿ, ಲಾ ರೆಸಿಡೆಂಟಿಯಾ, ಸಿಲಿಕಾನ್ ಸಿಟಿ, ಕರಿಸ್ಟಲ್ ಹೋಮ್ಸ್, ಲೀಜರ್ ವ್ಯಾಲಿ, ಆದರ್ಶ್ ಆವಾಸ್ ಯೋಜನೆ ಮತ್ತು ಕಿಂಗ್ಸ್ವುಡ್‌ನ ವಸತಿ ಯೋಜನೆಗಳಿಗೆ ಸೇರಿವೆ. ಎಫ್‌ಐಆರ್‌ಗಳಲ್ಲಿ ಅನಿಲ್ ಕೆ ಶರ್ಮಾ ಮತ್ತು ಇತರ ನಿರ್ದೇಶಕರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

ಆದರೆ ಎಂ.ಎಸ್.ಧೋನಿ ಪಾತ್ರವನ್ನು ಪರಿಶೀಲಿಸುವಂತೆ ನಾವು ತನಿಖಾ ಸಂಸ್ಥೆಗೆ ವಿನಂತಿಸಿಲಾಗಿದೆ. ನೋಯ್ಢಾ ಪ್ರಾಧಿಕಾರಗಳಿಂದ ಯಾವುದೇ ಅನುಮೋದನೆ ಪಡೆಯದೆ ಡೆವಲಪರ್ ಈ ಎಲ್ಲಾ ಯೋಜನೆಗಳನ್ನು ಪ್ರಾರಭಿಸಿದ್ದಾರೆ ಎನ್ನುವ ಆರೋಪವು ಆಮ್ರಪಾಲಿ ಸಂಸ್ಥೆಯ ಮೇಲಿದೆ.

ಇದನ್ನೂ ಓದಿ: ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ಠೇವಣಿದಾರರ ಜೊತೆಗಿನ ಒಪ್ಪಂದದ ಪ್ರಕಾರ ಆಮ್ರಪಾಲಿ ಕಂಪನಿ ಪ್ಲಾಟ್‌ಗಳನ್ನು ಹಸ್ತಾಂತರಿಸಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ದೂರುಗಳು ಹೋಗಿದ್ದವು. ಇದರಿಂದ ಸುಪ್ರೀಂಕೋರ್ಟ್ 2017ರಲ್ಲಿ ತನಿಖೆಗೆ ಆದೇಶಿಸಿತ್ತು . ನ್ಯಾಯಾಲದಿಂದ ನೇಮಕಗೊಂಡ ಲೆಕ್ಕಪರಿಶೋಧಕರು ಕಂಪನಿಯ ಖಾತೆಯನ್ನು ಪರಿಶೀಲಿಸಿ ಈ ಸಂಸ್ಥೆ ಸಾವಿರಾರು ಕೋಟಿ ಜನಸಾಮಾನ್ಯರ ಹಣವನ್ನು ಸಂಗ್ರಹಿಸಿರುವುದನ್ನು ಬಹಿರಂಗಪಡಿಸಲಾಯಿತು.

2003ರಲ್ಲಿ ಸ್ಥಾಪನೆಯಾದ ಅಮ್ರಪಾಲಿ ಗ್ರೂಪ್ ತನ್ನ ಸಿ.ಎಂ.ಡಿ ಅನಿಲ್ ಶರ್ಮಾರ ಆಡಳಿತದಲ್ಲಿ 2010ರ ವೇಳೆಗೆ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾಗಿ ಹೊರಹೊಮ್ಮಿತು. ಹಾಗೇಯೇ ಶಿಕ್ಷಣ, ಮನರಂಜನೆ, ಎಫ್.ಎಮ್.ಸಿ.ಜಿ, ಮೂಲಸೌಕರ್ಯ, ಹೋಟೆಲ್‌ಗೆ ಸಂಬಂಧಿಸಿದಂತೆ 150 ಕಂಪನಿಗಳನ್ನು ಈ ಸಮಯದಲ್ಲಿ ಹೊಸದಾಗಿ ಪ್ರಾರಂಭಿಸಿದರು. ಈ ಎಲ್ಲಾ ಚುಟುವಟಿಕೆಗಳಲ್ಲಿ ಆಮ್ರಪಾಲಿ ಸಂಸ್ಥೆ ಜನಸಾಮಾನ್ಯರ ಹಣವನ್ನು ದೊಡ್ಡ ಮಟ್ಟದಲ್ಲಿ ದುರುಪಯೋಗ ಪಡಿಸಿಕೊಂಡಿರುವ ಆರೋಪ ಹೊತ್ತಿಕೊಂಡಿದೆ. ಈಗ ಈ ಸಂಸ್ಥೆಯ ಜೊತೆಗಿದ್ದ ಧೋನಿಗೂ ಇದರ ಬಿಸಿ ತಟ್ಟಿದಂತೆ ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...