Homeಮುಖಪುಟಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಮೇಲೆ FIR!

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಮೇಲೆ FIR!

- Advertisement -
- Advertisement -

ಪ್ರಮುಖ ರಿಯಲ್ ಎಸ್ಟೇಟ್ ಗ್ರೂಪ್ ಆಮ್ರಪಾಲಿ ಜೊತೆಗಿನ ಒಡನಾಟ ಭಾರತ ಕ್ರೀಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ದೋನಿಗೆ ಉರುಳಾಗಿ ಪರಿಣಾಮಿಸಿದೆ. ಅಮ್ರಪಾಲಿ ಹಗರಣದ ಪಿತೂರಿಯಲ್ಲಿ ಎಂ.ಎಸ್.ಧೋನಿ ಭಾಗಿಯಾಗಿದ್ದಾರೆಂದು ಆರೋಪಿಸಿ ಎಫ್.ಐ.ಆರ್ ದಾಖಲಿಸಲಾಗಿದೆ.

ಆಮ್ರಪಾಲಿ ರಿಯಲ್ ಎಸ್ಟೇಟ್ ಗ್ರೂಪ್‌ನ ರಾಯಭಾರಿಯಾಗಿದ್ದ ಧೋನಿ ಮತ್ತು ಬಿಲ್ಡರ್ ಅನಿಲ್ ಶರ್ಮ ಹೆಸರಾಂತ ವ್ಯಕ್ತಿಗಳಾಗಿದ್ದು ಅವರ ಮೇಲಿನ ನಂಬಿಕೆಯಿಂದಲೇ ನಾವು ಪ್ಲಾಟುಗಳನ್ನು ಕೊಂಡಕೊಳ್ಳಲು ಹಣ ಹೂಡಿಕೆ ಮಾಡಿದ್ದಾಗಿ ಎಫ್.ಐ.ಆರ್ ನಲ್ಲಿ ಬಾಧಿತರು ಹೇಳಿಕೊಂಡಿದ್ದಾರೆ.

ಆಮ್ರಪಾಲಿ ಸಂಸ್ಥೆ ಪ್ಲಾಟ್‌ಗಳನ್ನು ನೀಡುವ ನೆಪದಲ್ಲಿ ದೊಡ್ಡ ಮೊತ್ತದಲ್ಲಿ ಹಣ ಸಂಗ್ರಹಿಸಿ ನಂತರ ಬೇರೆ ಕಂಪನಿಗಳಿಗೆ ನಿಯಮಗಳಿಗೆ ವಿರುದ್ಧವಾಗಿ ಹಣ ವರ್ಗಾಯಿಸಿದೆ ಎಂದು ಆರೋಪಿಸಲಾಗಿದೆ. ಹೀಗೆ ವರ್ಗಾಯಿಸಿದ ಕಂಪನಿಗಳಲ್ಲಿ ಎಂ.ಎಸ್.ಧೋನಿಯ ಹೆಂಡತಿ ಸಾಕ್ಷಿ ಧೋನಿಯ ಕಂಪನಿಯೂ ಕೂಡ ಇದೆ ಎಂದು ಹೇಳಲಾಗಿದೆ.

ಜುಲೈ 23ರಿಂದ ಇಲ್ಲಿಯವರೆಗೆ ಎಫ್‌ಐಆರ್ ದಾಖಲಿಸಿರುವ ಏಳು ಖರೀದಿದಾರರ ಗುಂಪುಗಳು ಒ2 ವ್ಯಾಲಿ, ಲಾ ರೆಸಿಡೆಂಟಿಯಾ, ಸಿಲಿಕಾನ್ ಸಿಟಿ, ಕರಿಸ್ಟಲ್ ಹೋಮ್ಸ್, ಲೀಜರ್ ವ್ಯಾಲಿ, ಆದರ್ಶ್ ಆವಾಸ್ ಯೋಜನೆ ಮತ್ತು ಕಿಂಗ್ಸ್ವುಡ್‌ನ ವಸತಿ ಯೋಜನೆಗಳಿಗೆ ಸೇರಿವೆ. ಎಫ್‌ಐಆರ್‌ಗಳಲ್ಲಿ ಅನಿಲ್ ಕೆ ಶರ್ಮಾ ಮತ್ತು ಇತರ ನಿರ್ದೇಶಕರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

ಆದರೆ ಎಂ.ಎಸ್.ಧೋನಿ ಪಾತ್ರವನ್ನು ಪರಿಶೀಲಿಸುವಂತೆ ನಾವು ತನಿಖಾ ಸಂಸ್ಥೆಗೆ ವಿನಂತಿಸಿಲಾಗಿದೆ. ನೋಯ್ಢಾ ಪ್ರಾಧಿಕಾರಗಳಿಂದ ಯಾವುದೇ ಅನುಮೋದನೆ ಪಡೆಯದೆ ಡೆವಲಪರ್ ಈ ಎಲ್ಲಾ ಯೋಜನೆಗಳನ್ನು ಪ್ರಾರಭಿಸಿದ್ದಾರೆ ಎನ್ನುವ ಆರೋಪವು ಆಮ್ರಪಾಲಿ ಸಂಸ್ಥೆಯ ಮೇಲಿದೆ.

ಇದನ್ನೂ ಓದಿ: ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ಠೇವಣಿದಾರರ ಜೊತೆಗಿನ ಒಪ್ಪಂದದ ಪ್ರಕಾರ ಆಮ್ರಪಾಲಿ ಕಂಪನಿ ಪ್ಲಾಟ್‌ಗಳನ್ನು ಹಸ್ತಾಂತರಿಸಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ದೂರುಗಳು ಹೋಗಿದ್ದವು. ಇದರಿಂದ ಸುಪ್ರೀಂಕೋರ್ಟ್ 2017ರಲ್ಲಿ ತನಿಖೆಗೆ ಆದೇಶಿಸಿತ್ತು . ನ್ಯಾಯಾಲದಿಂದ ನೇಮಕಗೊಂಡ ಲೆಕ್ಕಪರಿಶೋಧಕರು ಕಂಪನಿಯ ಖಾತೆಯನ್ನು ಪರಿಶೀಲಿಸಿ ಈ ಸಂಸ್ಥೆ ಸಾವಿರಾರು ಕೋಟಿ ಜನಸಾಮಾನ್ಯರ ಹಣವನ್ನು ಸಂಗ್ರಹಿಸಿರುವುದನ್ನು ಬಹಿರಂಗಪಡಿಸಲಾಯಿತು.

2003ರಲ್ಲಿ ಸ್ಥಾಪನೆಯಾದ ಅಮ್ರಪಾಲಿ ಗ್ರೂಪ್ ತನ್ನ ಸಿ.ಎಂ.ಡಿ ಅನಿಲ್ ಶರ್ಮಾರ ಆಡಳಿತದಲ್ಲಿ 2010ರ ವೇಳೆಗೆ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾಗಿ ಹೊರಹೊಮ್ಮಿತು. ಹಾಗೇಯೇ ಶಿಕ್ಷಣ, ಮನರಂಜನೆ, ಎಫ್.ಎಮ್.ಸಿ.ಜಿ, ಮೂಲಸೌಕರ್ಯ, ಹೋಟೆಲ್‌ಗೆ ಸಂಬಂಧಿಸಿದಂತೆ 150 ಕಂಪನಿಗಳನ್ನು ಈ ಸಮಯದಲ್ಲಿ ಹೊಸದಾಗಿ ಪ್ರಾರಂಭಿಸಿದರು. ಈ ಎಲ್ಲಾ ಚುಟುವಟಿಕೆಗಳಲ್ಲಿ ಆಮ್ರಪಾಲಿ ಸಂಸ್ಥೆ ಜನಸಾಮಾನ್ಯರ ಹಣವನ್ನು ದೊಡ್ಡ ಮಟ್ಟದಲ್ಲಿ ದುರುಪಯೋಗ ಪಡಿಸಿಕೊಂಡಿರುವ ಆರೋಪ ಹೊತ್ತಿಕೊಂಡಿದೆ. ಈಗ ಈ ಸಂಸ್ಥೆಯ ಜೊತೆಗಿದ್ದ ಧೋನಿಗೂ ಇದರ ಬಿಸಿ ತಟ್ಟಿದಂತೆ ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...