Homeಕರ್ನಾಟಕಸಹಕಾರ ಸಚಿವ ರಾಜಣ್ಣ ಮಗನ ಹತ್ಯೆಗೆ ಸಂಚು ಆರೋಪ: ಐವರ ವಿರುದ್ಧ ಎಫ್‌ಐಆರ್‌ ದಾಖಲು

ಸಹಕಾರ ಸಚಿವ ರಾಜಣ್ಣ ಮಗನ ಹತ್ಯೆಗೆ ಸಂಚು ಆರೋಪ: ಐವರ ವಿರುದ್ಧ ಎಫ್‌ಐಆರ್‌ ದಾಖಲು

- Advertisement -
- Advertisement -

ಸಹಕಾರ ಸಚಿವ ಕೆ.ಎನ್‌ ರಾಜಣ್ಣ ಅವರ ಮಗ, ವಿಧಾನಪರಿಷತ್ ಸದಸ್ಯ ಆರ್‌.ರಾಜೇಂದ್ರ ಅವರ ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ಐವರ ವಿರುದ್ದ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ (ಮಾ.28) ಎಫ್‌ಐಆರ್ ದಾಖಲಾಗಿದೆ.

“ಬೆಂಗಳೂರಿನ ಪ್ರಭಾವಿ ವ್ಯಕ್ತಿಯೊಬ್ಬರು ನನ್ನ ಕೊಲೆಗೆ 70 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದರು” ಎಂದು ರಾಜೇಂದ್ರ ಅವರು ತಮ್ಮ ದೂರಿನಲ್ಲಿ ಆರೋಪಿಸಿರುವುದಾಗಿ ವರದಿಯಾಗಿದೆ.

ಕಳೆದ ನವೆಂಬರ್​ನಲ್ಲಿ ನನ್ನ ಕೊಲೆಗೆ ಯತ್ನ ನಡೆದಿತ್ತು ಎಂದು ಆರೋಪಿಸಿ ರಾಜೇಂದ್ರ ಅವರು ತುಮಕೂರು ಎಸ್​ಪಿಗೆ ಶುಕ್ರವಾರ ದೂರು ನೀಡಿದ್ದು, ಈ ದೂರಿನ ಅನ್ವಯ ಕೆ.ಎನ್.ರಾಜಣ್ಣ ಅವರ ಮನೆ ಇರುವ ವ್ಯಾಪ್ತಿಯ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಸೋಮ, ಭರತ್, ಅಮಿತ್, ಗುಂಡಾ, ಯತೀಶ್ ಹಾಗೂ ಇತರರ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಕಲಂ 109 (ಕೊಲೆ ಯತ್ನ ) 329 (4)(ಅತಿಕ್ರಮ ಪ್ರವೇಶ) 190 (ಕಾನೂನು ಬಾಹಿರ ಚಟುವಟಿಕೆ) ಮತ್ತು 61(2) (ಕ್ರಿಮಿನಲ್ ಸಂಚು) ಅನ್ವಯ ಎಫ್‌ಐಆರ್‌ ದಾಖಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿಗಳ ಪೈಕಿ ಸೋಮ ಎಂಬಾತ ರೌಡಿ ಶೀಟರ್ ಎಂದು ವರದಿಗಳು ಹೇಳಿವೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಮೋಹನ್ ಅವರನ್ನು ಗುರುವಾರ (ಮಾ.27) ಭೇಟಿ ಮಾಡಿದ್ದ ರಾಜೇಂದ್ರ ಅವರು ದೂರು ಸಲ್ಲಿಸಿದ್ದರು. ಘಟನೆ ತುಮಕೂರಿನಲ್ಲಿ ನಡೆದಿರುವುದರಿಂದ ತುಮಕೂರು ಎಸ್‌ಪಿಯವರಿಗೆ ದೂರು ನೀಡುವಂತೆ ಡಿಜಿಪಿ ಸೂಚಿಸಿದ್ದರು. ಅದರಂತೆ ಶುಕ್ರವಾರ ಎಸ್‌ಪಿ ಕಚೇರಿಗೆ ತೆರಳಿದ ರಾಜೇಂದ್ರ ಕೊಲೆಗೆ ಸಂಚು ರೂಪಿಸಲಾಗಿದೆ ಎಂದು ದೂರು ನೀಡಿದ್ದಾರೆ. ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಈ ಬೆನ್ನಲ್ಲೇ ಪೊಲೀಸರು ಐವರ ವಿರುದ್ದ ಎಫ್‌ಐಆರ್ ದಾಖಲಿಸಿದ್ದಾರೆ.

ರಾಜೇಂದ್ರ ದೂರಿನಲ್ಲಿ ಏನಿದೆ?

“ಬೆಂಗಳೂರಿನ ಪ್ರಭಾವಿ ವ್ಯಕ್ತಿಯೊಬ್ಬರು ನನ್ನ ಕೊಲೆಗೆ ಪಿತೂರಿ ನಡೆಸಿದ್ದು, ಒಂದು ಗುಂಪಿಗೆ 70 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದಾರೆ. ಮುಂಗಡವಾಗಿ 5 ಲಕ್ಷ ರೂಪಾಯಿ ಪಾವತಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಆಡಿಯೋ ತುಣುಕು ಲಭ್ಯವಾಗಿದೆ. ಅದರಲ್ಲಿ ಇಬ್ಬರು ವ್ಯಕ್ತಿಗಳು ಸಂಭಾಷಣೆ ನಡೆಸಿದ್ದು ಇದೆ. ಸೋಮ, ಭರತ್, ಅಮಿತ್, ಗುಂಡಾ ಹಾಗೂ ಇತರರು ನನ್ನ ಹತ್ಯೆಗೆ ಸಂಚು ರೂಪಿಸಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ”.

“ಸೋಮ, ಭರತ್ ಹಾಗೂ ಇತರರು ತುಮಕೂರು ನಗರದ ಶಿರಾ ಗೇಟ್ ತೋಟದ ಮನೆಯಲ್ಲಿ ನನ್ನ ಕೊಲೆಗೆ ಸಂಚು ರೂಪಿಸಿದ್ದರು. ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ್ದರು. ಕೊಲೆ ಮಾಡುವುದಕ್ಕಾಗಿಯೇ ಕಾರನ್ನೂ ಖರೀದಿಸಿದ್ದರು. ಬೆಂಗಳೂರಿನ ಕಲಾಸಿಪಾಳ್ಯ, ಮಧುಗಿರಿ ಭಾಗದಲ್ಲಿ ನನ್ನ ಚಲನವಲನ ತಿಳಿದುಕೊಳ್ಳಲು ಕೆಲವು ಹಿಂಬಾಲಕರನ್ನು ನೇಮಿಸಿಕೊಂಡಿದ್ದರು” ಎಂದು ರಾಜೇಂದ್ರ ಅವರು ದೂರಿನಲ್ಲಿ ಆರೋಪಿಸಿರುವುದಾಗಿ ವರದಿಗಳು ವಿವರಿಸಿವೆ

ಮಗಳ ಜನ್ಮ ದಿನದಂದು ಕೊಲೆ ಯತ್ನ

“ಕಳೆದ ನವೆಂಬರ್ ತಿಂಗಳಲ್ಲಿ ಕ್ಯಾತ್ಸಂದ್ರದ ಮನೆಯಲ್ಲಿ ನನ್ನ ಹಿರಿಯ ಮಗಳ ಜನ್ಮದಿನಾಚರಣೆ ಕಾರ್ಯಕ್ರಮವಿತ್ತು. ಆವತ್ತು ಕಾರ್ಮಿಕರ ವೇಷದಲ್ಲಿ ಬಂದಿದ್ದ ಆರೋಪಿಗಳು ಹತ್ಯೆಗೆ ಪ್ರಯತ್ನಿಸಿದ್ದರು. ಆದರೆ, ಅದು ಸಾಧ್ಯವಾಗಿರಲಿಲ್ಲ. ಹಾಗಾಗಿ, ಮುಂದಿನ ದಿನಗಳಲ್ಲಿ ಹತ್ಯೆ ಮಾಡಲು ನನ್ನ ಕಾರಿಗೆ ಜಿಪಿಎಸ್‌ ಅಳವಡಿಸುವ ಯತ್ನ ನಡೆಸಿದ್ದರು” ಎಂದು ರಾಜೇಂದ್ರ ಅವರು ದೂರಿನಲ್ಲಿ ಆರೋಪಿಸಿದ್ದಾಗಿ ವರದಿಯಾಗಿದೆ.

ಒಳ ಮೀಸಲಾತಿ: ಜಸ್ಟೀಸ್ ನಾಗಮೋಹನದಾಸ್ ಆಯೋಗ ‘ಹೊಸ ಸಮೀಕ್ಷೆ’ಗೆ ಶಿಫಾರಸ್ಸು ಮಾಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....