Homeಕರ್ನಾಟಕಸಹಕಾರ ಸಚಿವ ರಾಜಣ್ಣ ಮಗನ ಹತ್ಯೆಗೆ ಸಂಚು ಆರೋಪ: ಐವರ ವಿರುದ್ಧ ಎಫ್‌ಐಆರ್‌ ದಾಖಲು

ಸಹಕಾರ ಸಚಿವ ರಾಜಣ್ಣ ಮಗನ ಹತ್ಯೆಗೆ ಸಂಚು ಆರೋಪ: ಐವರ ವಿರುದ್ಧ ಎಫ್‌ಐಆರ್‌ ದಾಖಲು

- Advertisement -
- Advertisement -

ಸಹಕಾರ ಸಚಿವ ಕೆ.ಎನ್‌ ರಾಜಣ್ಣ ಅವರ ಮಗ, ವಿಧಾನಪರಿಷತ್ ಸದಸ್ಯ ಆರ್‌.ರಾಜೇಂದ್ರ ಅವರ ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ಐವರ ವಿರುದ್ದ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ (ಮಾ.28) ಎಫ್‌ಐಆರ್ ದಾಖಲಾಗಿದೆ.

“ಬೆಂಗಳೂರಿನ ಪ್ರಭಾವಿ ವ್ಯಕ್ತಿಯೊಬ್ಬರು ನನ್ನ ಕೊಲೆಗೆ 70 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದರು” ಎಂದು ರಾಜೇಂದ್ರ ಅವರು ತಮ್ಮ ದೂರಿನಲ್ಲಿ ಆರೋಪಿಸಿರುವುದಾಗಿ ವರದಿಯಾಗಿದೆ.

ಕಳೆದ ನವೆಂಬರ್​ನಲ್ಲಿ ನನ್ನ ಕೊಲೆಗೆ ಯತ್ನ ನಡೆದಿತ್ತು ಎಂದು ಆರೋಪಿಸಿ ರಾಜೇಂದ್ರ ಅವರು ತುಮಕೂರು ಎಸ್​ಪಿಗೆ ಶುಕ್ರವಾರ ದೂರು ನೀಡಿದ್ದು, ಈ ದೂರಿನ ಅನ್ವಯ ಕೆ.ಎನ್.ರಾಜಣ್ಣ ಅವರ ಮನೆ ಇರುವ ವ್ಯಾಪ್ತಿಯ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಸೋಮ, ಭರತ್, ಅಮಿತ್, ಗುಂಡಾ, ಯತೀಶ್ ಹಾಗೂ ಇತರರ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಕಲಂ 109 (ಕೊಲೆ ಯತ್ನ ) 329 (4)(ಅತಿಕ್ರಮ ಪ್ರವೇಶ) 190 (ಕಾನೂನು ಬಾಹಿರ ಚಟುವಟಿಕೆ) ಮತ್ತು 61(2) (ಕ್ರಿಮಿನಲ್ ಸಂಚು) ಅನ್ವಯ ಎಫ್‌ಐಆರ್‌ ದಾಖಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿಗಳ ಪೈಕಿ ಸೋಮ ಎಂಬಾತ ರೌಡಿ ಶೀಟರ್ ಎಂದು ವರದಿಗಳು ಹೇಳಿವೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಮೋಹನ್ ಅವರನ್ನು ಗುರುವಾರ (ಮಾ.27) ಭೇಟಿ ಮಾಡಿದ್ದ ರಾಜೇಂದ್ರ ಅವರು ದೂರು ಸಲ್ಲಿಸಿದ್ದರು. ಘಟನೆ ತುಮಕೂರಿನಲ್ಲಿ ನಡೆದಿರುವುದರಿಂದ ತುಮಕೂರು ಎಸ್‌ಪಿಯವರಿಗೆ ದೂರು ನೀಡುವಂತೆ ಡಿಜಿಪಿ ಸೂಚಿಸಿದ್ದರು. ಅದರಂತೆ ಶುಕ್ರವಾರ ಎಸ್‌ಪಿ ಕಚೇರಿಗೆ ತೆರಳಿದ ರಾಜೇಂದ್ರ ಕೊಲೆಗೆ ಸಂಚು ರೂಪಿಸಲಾಗಿದೆ ಎಂದು ದೂರು ನೀಡಿದ್ದಾರೆ. ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಈ ಬೆನ್ನಲ್ಲೇ ಪೊಲೀಸರು ಐವರ ವಿರುದ್ದ ಎಫ್‌ಐಆರ್ ದಾಖಲಿಸಿದ್ದಾರೆ.

ರಾಜೇಂದ್ರ ದೂರಿನಲ್ಲಿ ಏನಿದೆ?

“ಬೆಂಗಳೂರಿನ ಪ್ರಭಾವಿ ವ್ಯಕ್ತಿಯೊಬ್ಬರು ನನ್ನ ಕೊಲೆಗೆ ಪಿತೂರಿ ನಡೆಸಿದ್ದು, ಒಂದು ಗುಂಪಿಗೆ 70 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದಾರೆ. ಮುಂಗಡವಾಗಿ 5 ಲಕ್ಷ ರೂಪಾಯಿ ಪಾವತಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಆಡಿಯೋ ತುಣುಕು ಲಭ್ಯವಾಗಿದೆ. ಅದರಲ್ಲಿ ಇಬ್ಬರು ವ್ಯಕ್ತಿಗಳು ಸಂಭಾಷಣೆ ನಡೆಸಿದ್ದು ಇದೆ. ಸೋಮ, ಭರತ್, ಅಮಿತ್, ಗುಂಡಾ ಹಾಗೂ ಇತರರು ನನ್ನ ಹತ್ಯೆಗೆ ಸಂಚು ರೂಪಿಸಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ”.

“ಸೋಮ, ಭರತ್ ಹಾಗೂ ಇತರರು ತುಮಕೂರು ನಗರದ ಶಿರಾ ಗೇಟ್ ತೋಟದ ಮನೆಯಲ್ಲಿ ನನ್ನ ಕೊಲೆಗೆ ಸಂಚು ರೂಪಿಸಿದ್ದರು. ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ್ದರು. ಕೊಲೆ ಮಾಡುವುದಕ್ಕಾಗಿಯೇ ಕಾರನ್ನೂ ಖರೀದಿಸಿದ್ದರು. ಬೆಂಗಳೂರಿನ ಕಲಾಸಿಪಾಳ್ಯ, ಮಧುಗಿರಿ ಭಾಗದಲ್ಲಿ ನನ್ನ ಚಲನವಲನ ತಿಳಿದುಕೊಳ್ಳಲು ಕೆಲವು ಹಿಂಬಾಲಕರನ್ನು ನೇಮಿಸಿಕೊಂಡಿದ್ದರು” ಎಂದು ರಾಜೇಂದ್ರ ಅವರು ದೂರಿನಲ್ಲಿ ಆರೋಪಿಸಿರುವುದಾಗಿ ವರದಿಗಳು ವಿವರಿಸಿವೆ

ಮಗಳ ಜನ್ಮ ದಿನದಂದು ಕೊಲೆ ಯತ್ನ

“ಕಳೆದ ನವೆಂಬರ್ ತಿಂಗಳಲ್ಲಿ ಕ್ಯಾತ್ಸಂದ್ರದ ಮನೆಯಲ್ಲಿ ನನ್ನ ಹಿರಿಯ ಮಗಳ ಜನ್ಮದಿನಾಚರಣೆ ಕಾರ್ಯಕ್ರಮವಿತ್ತು. ಆವತ್ತು ಕಾರ್ಮಿಕರ ವೇಷದಲ್ಲಿ ಬಂದಿದ್ದ ಆರೋಪಿಗಳು ಹತ್ಯೆಗೆ ಪ್ರಯತ್ನಿಸಿದ್ದರು. ಆದರೆ, ಅದು ಸಾಧ್ಯವಾಗಿರಲಿಲ್ಲ. ಹಾಗಾಗಿ, ಮುಂದಿನ ದಿನಗಳಲ್ಲಿ ಹತ್ಯೆ ಮಾಡಲು ನನ್ನ ಕಾರಿಗೆ ಜಿಪಿಎಸ್‌ ಅಳವಡಿಸುವ ಯತ್ನ ನಡೆಸಿದ್ದರು” ಎಂದು ರಾಜೇಂದ್ರ ಅವರು ದೂರಿನಲ್ಲಿ ಆರೋಪಿಸಿದ್ದಾಗಿ ವರದಿಯಾಗಿದೆ.

ಒಳ ಮೀಸಲಾತಿ: ಜಸ್ಟೀಸ್ ನಾಗಮೋಹನದಾಸ್ ಆಯೋಗ ‘ಹೊಸ ಸಮೀಕ್ಷೆ’ಗೆ ಶಿಫಾರಸ್ಸು ಮಾಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...