Homeಮುಖಪುಟಪೊಲೀಸ್‌ ಠಾಣೆ ಮೇಲೆ ದಾಳಿಗೆ ಪ್ರಚೋದನೆ: ಬಿಜೆಪಿ ಸಂಸದ ಸೇರಿ 17ಮಂದಿ ವಿರುದ್ಧ ಎಫ್‌ಐಆರ್‌

ಪೊಲೀಸ್‌ ಠಾಣೆ ಮೇಲೆ ದಾಳಿಗೆ ಪ್ರಚೋದನೆ: ಬಿಜೆಪಿ ಸಂಸದ ಸೇರಿ 17ಮಂದಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ದುರ್ಗಾ ಮೂರ್ತಿ ನಿಮಜ್ಜನದ ಮೆರವಣಿಗೆ ವೇಳೆ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ವಶಪಡಿಸಿಕೊಂಡಿದ್ದ ವಾಹನವನ್ನು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ ಬಲವಂತವಾಗಿ ತೆಗೆದುಕೊಂಡು ಹೋಗಲು ಜನರ ಗುಂಪಿಗೆ ಪ್ರಚೋದಿಸಿದ ಆರೋಪದ ಮೇಲೆ ಬಿಜೆಪಿ ನಾಯಕ, ಮಹಾರಾಜ್‌ಗಂಜ್ ಸಂಸದ ಜನಾರ್ದನ್ ಸಿಂಗ್ ಸಿಗ್ರಿವಾಲ್ ಮೇಲೆ ಪ್ರಕರಣ ದಾಖಲಾಗಿದೆ. ಇದಲ್ಲದೆ ಕೃತ್ಯ ನಡೆಸಿದ ಇತರ 16 ಮಂದಿ ವಿರುದ್ಧ ಬಿಹಾರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಈ ಕುರಿತು ಸರನ್ ಜಿಲ್ಲೆಯ ಬನಿಯಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಿಮಜ್ಜನ ಮೆರವಣಿಗೆ ವೇಳೆ ಎರಡು ಟ್ರ್ಯಾಕ್ಟರ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಂದು ಟ್ರಾಕ್ಟರ್‌ನಲ್ಲಿ ಪರವಾನಗಿ ಇಲ್ಲದೆ ಧ್ವನಿವರ್ಧಕಗಳನ್ನು ಬಳಸಲಾಗಿತ್ತು ಮತ್ತು ಇನ್ನೊಂದು ಟ್ರಾಕ್ಟರ್‌ಗೆ ಅನುಮತಿ ಪಡೆಯದೆ ಮೆರವಣಿಗೆಗೆ ತರಲಾಗಿದೆ.

ಎರಡೂ ವಾಹನಗಳನ್ನು ವಶಪಡಿಸಿಕೊಂಡ ಪೊಲೀಸರು ಬನಿಯಾಪುರ ಪೊಲೀಸ್ ಠಾಣೆ ಆವರಣದಲ್ಲಿ ನಿಲ್ಲಿಸಿದ್ದರು. ಬಳಿಕ ಪೊಲೀಸ್ ಠಾಣೆಗೆ ನುಗ್ಗಿದ ಜನರ ಗುಂಪು ಅಲ್ಲಿದ್ದ ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ ಬಲವಂತವಾಗಿ ವಾಹನವನ್ನು ತೆಗೆದುಕೊಂಡು ಹೋಗಿದ್ದಾರೆ.

ಪೊಲೀಸ್ ಠಾಣೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಕೃತ್ಯದಲ್ಲಿ ಭಾಗಿಯಾದವರನ್ನು ಅಧಿಕಾರಿಗಳು ಗುರುತಿಸಿದ್ದಾರೆ ಮತ್ತು ಸಂಸದ ಸಿಗ್ರಿವಾಲ್ ಅವರು ಗುಂಪಿಗೆ ನೇತೃತ್ವ ವಹಿಸಿದ್ದರು ಎಂದು ಕಂಡುಕೊಂಡಿದ್ದಾರೆ.

ಪೊಲೀಸರ ಪ್ರಕಾರ, ಸಿಗ್ರಿವಾಲ್ ಪೊಲೀಸ್ ಠಾಣೆಯ ಹೊರಗೆ ತನ್ನ ವಾಹನದೊಳಗೆ ಕುಳಿತುಕೊಂಡು ಕೃತ್ಯ ನಡೆಸಲು ಜನರನ್ನು ಪ್ರಚೋದಿಸಿದ್ದಾರೆ.

ಸರಣ್ ಜಿಲ್ಲೆಯ ಎಸ್ಪಿ ಗೌರವ್ ಮಂಗಳಾ ಈ ಕುರಿತು ಪ್ರತಿಕ್ರಿಯಿಸಿದ್ದು, ನಾವು ಸಿಗ್ರಿವಾಲ್ ಸೇರಿದಂತೆ 17 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ಇವರಲ್ಲಿ ಕೆಲವರು ಅಪರಿಚಿತರು ಕೂಡ ಇದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಸರಣ್ ಜಿಲ್ಲೆಯ ಭಗವಾನ ಬಜಾರ್ ಪೋಲಿಸ್ ಠಾಣಾ ವ್ಯಾಪ್ತಿಯ ನಯಿ ಬಜಾರ್‌ನಲ್ಲಿ ದುರ್ಗಾದೇವಿಯ ವಿಗ್ರಹದ ವಿಸರ್ಜನೆ ಸಂದರ್ಭ ಘಟನೆ ನಡೆದಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...