Homeಮುಖಪುಟಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಮಂದಿ ರೋಗಿಗಳು ಸಾವು, ಹಲವರಿಗೆ ಗಾಯ

ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಮಂದಿ ರೋಗಿಗಳು ಸಾವು, ಹಲವರಿಗೆ ಗಾಯ

- Advertisement -
- Advertisement -

ಜೈಪುರದ ಸವಾಯಿ ಮಾನ್ ಸಿಂಗ್ (ಎಸ್‌ಎಂಎಸ್) ಆಸ್ಪತ್ರೆಯ ಟ್ರಾಮಾ ಸೆಂಟರ್‌ನ ಐಸಿಯುನಲ್ಲಿ ಭಾನುವಾರ (ಅ.5) ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಎಂಟು ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ.

ಎಸ್‌ಎಂಎಸ್‌ ನಗರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾಗಿದ್ದು, ರಾತ್ರಿ 11.20ರ ಸುಮಾರಿಗೆ ಬೆಂಕಿ ದುರಂತ ನಡೆದಿದೆ. ಮೂವರು ಮಹಿಳೆಯರು ಸೇರಿದಂತೆ ಎಂಟು ಮಂದಿ ರೋಗಿಗಳು ಸಾವಿಗೀಡಾಗಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ಹೇಳಿವೆ.

ಐಸಿಯು ವಾರ್ಡ್‌ನ ಸ್ಟೋರ್‌ ರೂಮ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಅಲ್ಲಿ ಕಾಗದಗಳು, ವೈದ್ಯಕೀಯ ಉಪಕರಣಗಳು ಮತ್ತು ರಕ್ತದ ಮಾದರಿ ಕೊಳವೆಗಳನ್ನು ಇರಿಸಲಾಗಿತ್ತು.

ಬೆಂಕಿ ಹತ್ತಿಕೊಂಡ ತಕ್ಷಣ ಸಂಪೂರ್ಣ ವಾರ್ಡ್‌ಗೆ ಆವರಿಸಿದೆ ಮತ್ತು ಹೊಗೆ ತುಂಬಿಕೊಂಡಿದೆ. ಹಾಗಾಗಿ, ಐಸಿಯುನಲ್ಲಿದ್ದ ರೋಗಿಗಳನ್ನು ರಕ್ಷಿಸಲು ಸಾಧ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಆಸ್ಪತ್ರೆಯ ಆಡಳಿತ ಮಂಡಳಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಸಂಭವಿಸಿದಾಗ ಒಟ್ಟು 18 ರೋಗಿಗಳು ಐಸಿಯು ಮತ್ತು ಸೆಮಿ-ಐಸಿಯುನಲ್ಲಿ ದಾಖಲಾಗಿದ್ದರು. ಅವರಲ್ಲಿ 11 ರೋಗಿಗಳು ಬೆಂಕಿ ಕಾಣಿಸಿಕೊಂಡ ವಾರ್ಡ್‌ನಲ್ಲೇ ಇದ್ದರು.

ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದಿತ್ತು. ಆದರೆ, ಬೆಂಕಿ ಮತ್ತು ವಿಷಕಾರಿ ಹೊಗೆ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು. ಕುಟುಂಬ ಸದಸ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಯ ಸಹಾಯದಿಂದ ಕಿಟಕಿಗಳು ಮತ್ತು ಬಾಗಿಲುಗಳನ್ನು ಒಡೆದು ಅನೇಕ ರೋಗಿಗಳನ್ನು ರಕ್ಷಿಸಲಾಯಿತು. ರೋಗಿಗಳನ್ನು ತಕ್ಷಣ ಬೀದಿಯಲ್ಲಿ ಹಾಸಿಗೆಗಳ ಮೇಲೆ ಇರಿಸಿ ಆಮ್ಲಜನಕ ಮತ್ತು ಪ್ರಥಮ ಚಿಕಿತ್ಸೆ ನೀಡಲಾಯಿತು ಎಂದು ವರದಿಗಳು ವಿವರಿಸಿವೆ.

ಬೆಂಕಿ ಹತ್ತಿಕೊಂಡ ನಂತರ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಉಂಟಾಯಿತು. ಐಸಿಯುಗೆ ದಾಖಲಾಗಿದ್ದ ಗಂಭೀರ ರೋಗಿಗಳನ್ನು ಸ್ಥಳಾಂತರಿಸಲು ಸಿಬ್ಬಂದಿ ಹೆಣಗಾಡಿದರು. ಬೆಂಕಿ ನಿಯಂತ್ರಿಸಲು ಒಂದರಿಂದ ಒಂದೂವರೆ ಗಂಟೆ ಬೇಕಾಯಿತು. ಎಲ್ಲಾ ರೋಗಿಗಳನ್ನು ಅವರ ಹಾಸಿಗೆಗಳ ಜೊತೆಗೆ ಹೊರಗಿನ ಬೀದಿಗೆ ಸ್ಥಳಾಂತರಿಸಲಾಯಿತು ಎಂದು ವರದಿಗಳು ಹೇಳಿವೆ.

“ಒಂದು ಐಸಿಯುನಲ್ಲಿ 11 ರೋಗಿಗಳಿದ್ದರು. ಅವರಲ್ಲಿ ಕೆಲವರನ್ನು ತಕ್ಷಣವೇ ಸ್ಥಳಾಂತರಿಸಲಾಯಿತು. ಪಕ್ಕದ ಐಸಿಯುನಲ್ಲಿ 13 ರೋಗಿಗಳಿದ್ದರು. ಬೆಂಕಿ ಹರಡುತ್ತಿದ್ದಂತೆ ಆರು ರೋಗಿಗಳು ಒಳಗೆ ಸಿಲುಕಿಕೊಂಡರು” ಎಂದು
ಟ್ರಾಮಾ ಸೆಂಟರ್‌ನ ನೋಡಲ್ ಅಧಿಕಾರಿ ಡಾ. ಅನುರಾಗ್ ಧಕಾಡ್ ತಿಳಿಸಿದ್ದಾರೆ.

ಘಟನೆಯ ನಂತರ ಆಸ್ಪತ್ರೆಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಬೆಂಕಿ ಹತ್ತಿಕೊಂಡ ಆರಂಭಿಕ ನಿಮಿಷಗಳಲ್ಲಿ ಅಗ್ನಿಶಾಮಕ ಎಚ್ಚರಿಕೆ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಮತ್ತು ಆಮ್ಲಜನಕ ಮಾರ್ಗವನ್ನು ಸ್ಥಗಿತಗೊಳಿಸುವಲ್ಲಿ ವಿಳಂಬವಾಯಿತು ಎಂದು ಜನರು ಆರೋಪಿಸಿದ್ದಾರೆ. ಸಿಬ್ಬಂದಿಗೆ ಸಾಕಷ್ಟು ಅಗ್ನಿಶಾಮಕ ಸುರಕ್ಷತಾ ಸಾಧನಗಳ ಕೊರತೆಯಿತ್ತು, ಇದು ಬೆಂಕಿಯ ಹರಡುವಿಕೆಯನ್ನು ಮತ್ತಷ್ಟು ವೇಗಗೊಳಿಸಿತು ಎಂದಿದ್ದಾರೆ.

ಮೃತರ ಕುಟುಂಬಸ್ಥರು ಎಸ್‌ಎಂಎಸ್ ಟ್ರಾಮಾ ಸೆಂಟರ್ ಹೊರಗೆ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಕುಟುಂಬಸ್ಥರು, ಆಸ್ಪತ್ರೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯ ಬಗ್ಗೆ ಆರೋಪ ಮಾಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆಗಳನ್ನು ತಕ್ಷಣ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

“ಇದು ತುಂಬಾ ದುಃಖಕರ ಮತ್ತು ಆತಂಕಕಾರಿ ಘಟನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿ ಅಂಬರೀಶ್ ಕುಮಾರ್, ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್, ಜೈಪುರ ಕಲೆಕ್ಟರ್ ಜಿತೇಂದ್ರ ಸೋನಿ ಮತ್ತು ಎಸ್‌ಎಂಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ದೀಪಕ್ ಮಹೇಶ್ವರಿ ಅವರಿಂದ ಘಟನೆಯ ಕುರಿತು ವಿವರವಾದ ವರದಿಯನ್ನು ಸಿಎಂ ಕೋರಿದ್ದಾರೆ.

ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಮುಖ್ಯಮಂತ್ರಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲು ನಿರ್ದೇಶನ ನೀಡಿದ್ದಾರೆ. ದುರಂತಕ್ಕೆ ಯಾರ ನಿರ್ಲಕ್ಷ್ಯ ಕಾರಣ ಮತ್ತು ಆಸ್ಪತ್ರೆಯ ಅಗ್ನಿಶಾಮಕ ಉಪಕರಣಗಳು ಮತ್ತು ಸುರಕ್ಷತಾ ಕ್ರಮಗಳು ಸಮರ್ಪಕವಾಗಿವೆಯೇ ಎಂಬುದನ್ನು ಸಮಿತಿ ತನಿಖೆ ಮಾಡಲಿದೆ.

ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಗ್ರಹಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೋಮು ಉದ್ವಿಗ್ನತೆ: ಒಡಿಶಾದ ಕಟಕ್‌ನಲ್ಲಿ 36 ಗಂಟೆಗಳ ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...