Homeಮುಖಪುಟಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಮಂದಿ ರೋಗಿಗಳು ಸಾವು, ಹಲವರಿಗೆ ಗಾಯ

ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಮಂದಿ ರೋಗಿಗಳು ಸಾವು, ಹಲವರಿಗೆ ಗಾಯ

- Advertisement -
- Advertisement -

ಜೈಪುರದ ಸವಾಯಿ ಮಾನ್ ಸಿಂಗ್ (ಎಸ್‌ಎಂಎಸ್) ಆಸ್ಪತ್ರೆಯ ಟ್ರಾಮಾ ಸೆಂಟರ್‌ನ ಐಸಿಯುನಲ್ಲಿ ಭಾನುವಾರ (ಅ.5) ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಎಂಟು ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ.

ಎಸ್‌ಎಂಎಸ್‌ ನಗರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾಗಿದ್ದು, ರಾತ್ರಿ 11.20ರ ಸುಮಾರಿಗೆ ಬೆಂಕಿ ದುರಂತ ನಡೆದಿದೆ. ಮೂವರು ಮಹಿಳೆಯರು ಸೇರಿದಂತೆ ಎಂಟು ಮಂದಿ ರೋಗಿಗಳು ಸಾವಿಗೀಡಾಗಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ಹೇಳಿವೆ.

ಐಸಿಯು ವಾರ್ಡ್‌ನ ಸ್ಟೋರ್‌ ರೂಮ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಅಲ್ಲಿ ಕಾಗದಗಳು, ವೈದ್ಯಕೀಯ ಉಪಕರಣಗಳು ಮತ್ತು ರಕ್ತದ ಮಾದರಿ ಕೊಳವೆಗಳನ್ನು ಇರಿಸಲಾಗಿತ್ತು.

ಬೆಂಕಿ ಹತ್ತಿಕೊಂಡ ತಕ್ಷಣ ಸಂಪೂರ್ಣ ವಾರ್ಡ್‌ಗೆ ಆವರಿಸಿದೆ ಮತ್ತು ಹೊಗೆ ತುಂಬಿಕೊಂಡಿದೆ. ಹಾಗಾಗಿ, ಐಸಿಯುನಲ್ಲಿದ್ದ ರೋಗಿಗಳನ್ನು ರಕ್ಷಿಸಲು ಸಾಧ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಆಸ್ಪತ್ರೆಯ ಆಡಳಿತ ಮಂಡಳಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಸಂಭವಿಸಿದಾಗ ಒಟ್ಟು 18 ರೋಗಿಗಳು ಐಸಿಯು ಮತ್ತು ಸೆಮಿ-ಐಸಿಯುನಲ್ಲಿ ದಾಖಲಾಗಿದ್ದರು. ಅವರಲ್ಲಿ 11 ರೋಗಿಗಳು ಬೆಂಕಿ ಕಾಣಿಸಿಕೊಂಡ ವಾರ್ಡ್‌ನಲ್ಲೇ ಇದ್ದರು.

ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದಿತ್ತು. ಆದರೆ, ಬೆಂಕಿ ಮತ್ತು ವಿಷಕಾರಿ ಹೊಗೆ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು. ಕುಟುಂಬ ಸದಸ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಯ ಸಹಾಯದಿಂದ ಕಿಟಕಿಗಳು ಮತ್ತು ಬಾಗಿಲುಗಳನ್ನು ಒಡೆದು ಅನೇಕ ರೋಗಿಗಳನ್ನು ರಕ್ಷಿಸಲಾಯಿತು. ರೋಗಿಗಳನ್ನು ತಕ್ಷಣ ಬೀದಿಯಲ್ಲಿ ಹಾಸಿಗೆಗಳ ಮೇಲೆ ಇರಿಸಿ ಆಮ್ಲಜನಕ ಮತ್ತು ಪ್ರಥಮ ಚಿಕಿತ್ಸೆ ನೀಡಲಾಯಿತು ಎಂದು ವರದಿಗಳು ವಿವರಿಸಿವೆ.

ಬೆಂಕಿ ಹತ್ತಿಕೊಂಡ ನಂತರ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಉಂಟಾಯಿತು. ಐಸಿಯುಗೆ ದಾಖಲಾಗಿದ್ದ ಗಂಭೀರ ರೋಗಿಗಳನ್ನು ಸ್ಥಳಾಂತರಿಸಲು ಸಿಬ್ಬಂದಿ ಹೆಣಗಾಡಿದರು. ಬೆಂಕಿ ನಿಯಂತ್ರಿಸಲು ಒಂದರಿಂದ ಒಂದೂವರೆ ಗಂಟೆ ಬೇಕಾಯಿತು. ಎಲ್ಲಾ ರೋಗಿಗಳನ್ನು ಅವರ ಹಾಸಿಗೆಗಳ ಜೊತೆಗೆ ಹೊರಗಿನ ಬೀದಿಗೆ ಸ್ಥಳಾಂತರಿಸಲಾಯಿತು ಎಂದು ವರದಿಗಳು ಹೇಳಿವೆ.

“ಒಂದು ಐಸಿಯುನಲ್ಲಿ 11 ರೋಗಿಗಳಿದ್ದರು. ಅವರಲ್ಲಿ ಕೆಲವರನ್ನು ತಕ್ಷಣವೇ ಸ್ಥಳಾಂತರಿಸಲಾಯಿತು. ಪಕ್ಕದ ಐಸಿಯುನಲ್ಲಿ 13 ರೋಗಿಗಳಿದ್ದರು. ಬೆಂಕಿ ಹರಡುತ್ತಿದ್ದಂತೆ ಆರು ರೋಗಿಗಳು ಒಳಗೆ ಸಿಲುಕಿಕೊಂಡರು” ಎಂದು
ಟ್ರಾಮಾ ಸೆಂಟರ್‌ನ ನೋಡಲ್ ಅಧಿಕಾರಿ ಡಾ. ಅನುರಾಗ್ ಧಕಾಡ್ ತಿಳಿಸಿದ್ದಾರೆ.

ಘಟನೆಯ ನಂತರ ಆಸ್ಪತ್ರೆಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಬೆಂಕಿ ಹತ್ತಿಕೊಂಡ ಆರಂಭಿಕ ನಿಮಿಷಗಳಲ್ಲಿ ಅಗ್ನಿಶಾಮಕ ಎಚ್ಚರಿಕೆ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಮತ್ತು ಆಮ್ಲಜನಕ ಮಾರ್ಗವನ್ನು ಸ್ಥಗಿತಗೊಳಿಸುವಲ್ಲಿ ವಿಳಂಬವಾಯಿತು ಎಂದು ಜನರು ಆರೋಪಿಸಿದ್ದಾರೆ. ಸಿಬ್ಬಂದಿಗೆ ಸಾಕಷ್ಟು ಅಗ್ನಿಶಾಮಕ ಸುರಕ್ಷತಾ ಸಾಧನಗಳ ಕೊರತೆಯಿತ್ತು, ಇದು ಬೆಂಕಿಯ ಹರಡುವಿಕೆಯನ್ನು ಮತ್ತಷ್ಟು ವೇಗಗೊಳಿಸಿತು ಎಂದಿದ್ದಾರೆ.

ಮೃತರ ಕುಟುಂಬಸ್ಥರು ಎಸ್‌ಎಂಎಸ್ ಟ್ರಾಮಾ ಸೆಂಟರ್ ಹೊರಗೆ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಕುಟುಂಬಸ್ಥರು, ಆಸ್ಪತ್ರೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯ ಬಗ್ಗೆ ಆರೋಪ ಮಾಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆಗಳನ್ನು ತಕ್ಷಣ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

“ಇದು ತುಂಬಾ ದುಃಖಕರ ಮತ್ತು ಆತಂಕಕಾರಿ ಘಟನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿ ಅಂಬರೀಶ್ ಕುಮಾರ್, ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್, ಜೈಪುರ ಕಲೆಕ್ಟರ್ ಜಿತೇಂದ್ರ ಸೋನಿ ಮತ್ತು ಎಸ್‌ಎಂಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ದೀಪಕ್ ಮಹೇಶ್ವರಿ ಅವರಿಂದ ಘಟನೆಯ ಕುರಿತು ವಿವರವಾದ ವರದಿಯನ್ನು ಸಿಎಂ ಕೋರಿದ್ದಾರೆ.

ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಮುಖ್ಯಮಂತ್ರಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲು ನಿರ್ದೇಶನ ನೀಡಿದ್ದಾರೆ. ದುರಂತಕ್ಕೆ ಯಾರ ನಿರ್ಲಕ್ಷ್ಯ ಕಾರಣ ಮತ್ತು ಆಸ್ಪತ್ರೆಯ ಅಗ್ನಿಶಾಮಕ ಉಪಕರಣಗಳು ಮತ್ತು ಸುರಕ್ಷತಾ ಕ್ರಮಗಳು ಸಮರ್ಪಕವಾಗಿವೆಯೇ ಎಂಬುದನ್ನು ಸಮಿತಿ ತನಿಖೆ ಮಾಡಲಿದೆ.

ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಗ್ರಹಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೋಮು ಉದ್ವಿಗ್ನತೆ: ಒಡಿಶಾದ ಕಟಕ್‌ನಲ್ಲಿ 36 ಗಂಟೆಗಳ ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....