Homeಮುಖಪುಟಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಮಂದಿ ರೋಗಿಗಳು ಸಾವು, ಹಲವರಿಗೆ ಗಾಯ

ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಮಂದಿ ರೋಗಿಗಳು ಸಾವು, ಹಲವರಿಗೆ ಗಾಯ

- Advertisement -
- Advertisement -

ಜೈಪುರದ ಸವಾಯಿ ಮಾನ್ ಸಿಂಗ್ (ಎಸ್‌ಎಂಎಸ್) ಆಸ್ಪತ್ರೆಯ ಟ್ರಾಮಾ ಸೆಂಟರ್‌ನ ಐಸಿಯುನಲ್ಲಿ ಭಾನುವಾರ (ಅ.5) ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಎಂಟು ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ.

ಎಸ್‌ಎಂಎಸ್‌ ನಗರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾಗಿದ್ದು, ರಾತ್ರಿ 11.20ರ ಸುಮಾರಿಗೆ ಬೆಂಕಿ ದುರಂತ ನಡೆದಿದೆ. ಮೂವರು ಮಹಿಳೆಯರು ಸೇರಿದಂತೆ ಎಂಟು ಮಂದಿ ರೋಗಿಗಳು ಸಾವಿಗೀಡಾಗಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ಹೇಳಿವೆ.

ಐಸಿಯು ವಾರ್ಡ್‌ನ ಸ್ಟೋರ್‌ ರೂಮ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಅಲ್ಲಿ ಕಾಗದಗಳು, ವೈದ್ಯಕೀಯ ಉಪಕರಣಗಳು ಮತ್ತು ರಕ್ತದ ಮಾದರಿ ಕೊಳವೆಗಳನ್ನು ಇರಿಸಲಾಗಿತ್ತು.

ಬೆಂಕಿ ಹತ್ತಿಕೊಂಡ ತಕ್ಷಣ ಸಂಪೂರ್ಣ ವಾರ್ಡ್‌ಗೆ ಆವರಿಸಿದೆ ಮತ್ತು ಹೊಗೆ ತುಂಬಿಕೊಂಡಿದೆ. ಹಾಗಾಗಿ, ಐಸಿಯುನಲ್ಲಿದ್ದ ರೋಗಿಗಳನ್ನು ರಕ್ಷಿಸಲು ಸಾಧ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಆಸ್ಪತ್ರೆಯ ಆಡಳಿತ ಮಂಡಳಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಸಂಭವಿಸಿದಾಗ ಒಟ್ಟು 18 ರೋಗಿಗಳು ಐಸಿಯು ಮತ್ತು ಸೆಮಿ-ಐಸಿಯುನಲ್ಲಿ ದಾಖಲಾಗಿದ್ದರು. ಅವರಲ್ಲಿ 11 ರೋಗಿಗಳು ಬೆಂಕಿ ಕಾಣಿಸಿಕೊಂಡ ವಾರ್ಡ್‌ನಲ್ಲೇ ಇದ್ದರು.

ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದಿತ್ತು. ಆದರೆ, ಬೆಂಕಿ ಮತ್ತು ವಿಷಕಾರಿ ಹೊಗೆ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು. ಕುಟುಂಬ ಸದಸ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಯ ಸಹಾಯದಿಂದ ಕಿಟಕಿಗಳು ಮತ್ತು ಬಾಗಿಲುಗಳನ್ನು ಒಡೆದು ಅನೇಕ ರೋಗಿಗಳನ್ನು ರಕ್ಷಿಸಲಾಯಿತು. ರೋಗಿಗಳನ್ನು ತಕ್ಷಣ ಬೀದಿಯಲ್ಲಿ ಹಾಸಿಗೆಗಳ ಮೇಲೆ ಇರಿಸಿ ಆಮ್ಲಜನಕ ಮತ್ತು ಪ್ರಥಮ ಚಿಕಿತ್ಸೆ ನೀಡಲಾಯಿತು ಎಂದು ವರದಿಗಳು ವಿವರಿಸಿವೆ.

ಬೆಂಕಿ ಹತ್ತಿಕೊಂಡ ನಂತರ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಉಂಟಾಯಿತು. ಐಸಿಯುಗೆ ದಾಖಲಾಗಿದ್ದ ಗಂಭೀರ ರೋಗಿಗಳನ್ನು ಸ್ಥಳಾಂತರಿಸಲು ಸಿಬ್ಬಂದಿ ಹೆಣಗಾಡಿದರು. ಬೆಂಕಿ ನಿಯಂತ್ರಿಸಲು ಒಂದರಿಂದ ಒಂದೂವರೆ ಗಂಟೆ ಬೇಕಾಯಿತು. ಎಲ್ಲಾ ರೋಗಿಗಳನ್ನು ಅವರ ಹಾಸಿಗೆಗಳ ಜೊತೆಗೆ ಹೊರಗಿನ ಬೀದಿಗೆ ಸ್ಥಳಾಂತರಿಸಲಾಯಿತು ಎಂದು ವರದಿಗಳು ಹೇಳಿವೆ.

“ಒಂದು ಐಸಿಯುನಲ್ಲಿ 11 ರೋಗಿಗಳಿದ್ದರು. ಅವರಲ್ಲಿ ಕೆಲವರನ್ನು ತಕ್ಷಣವೇ ಸ್ಥಳಾಂತರಿಸಲಾಯಿತು. ಪಕ್ಕದ ಐಸಿಯುನಲ್ಲಿ 13 ರೋಗಿಗಳಿದ್ದರು. ಬೆಂಕಿ ಹರಡುತ್ತಿದ್ದಂತೆ ಆರು ರೋಗಿಗಳು ಒಳಗೆ ಸಿಲುಕಿಕೊಂಡರು” ಎಂದು
ಟ್ರಾಮಾ ಸೆಂಟರ್‌ನ ನೋಡಲ್ ಅಧಿಕಾರಿ ಡಾ. ಅನುರಾಗ್ ಧಕಾಡ್ ತಿಳಿಸಿದ್ದಾರೆ.

ಘಟನೆಯ ನಂತರ ಆಸ್ಪತ್ರೆಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಬೆಂಕಿ ಹತ್ತಿಕೊಂಡ ಆರಂಭಿಕ ನಿಮಿಷಗಳಲ್ಲಿ ಅಗ್ನಿಶಾಮಕ ಎಚ್ಚರಿಕೆ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಮತ್ತು ಆಮ್ಲಜನಕ ಮಾರ್ಗವನ್ನು ಸ್ಥಗಿತಗೊಳಿಸುವಲ್ಲಿ ವಿಳಂಬವಾಯಿತು ಎಂದು ಜನರು ಆರೋಪಿಸಿದ್ದಾರೆ. ಸಿಬ್ಬಂದಿಗೆ ಸಾಕಷ್ಟು ಅಗ್ನಿಶಾಮಕ ಸುರಕ್ಷತಾ ಸಾಧನಗಳ ಕೊರತೆಯಿತ್ತು, ಇದು ಬೆಂಕಿಯ ಹರಡುವಿಕೆಯನ್ನು ಮತ್ತಷ್ಟು ವೇಗಗೊಳಿಸಿತು ಎಂದಿದ್ದಾರೆ.

ಮೃತರ ಕುಟುಂಬಸ್ಥರು ಎಸ್‌ಎಂಎಸ್ ಟ್ರಾಮಾ ಸೆಂಟರ್ ಹೊರಗೆ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಕುಟುಂಬಸ್ಥರು, ಆಸ್ಪತ್ರೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯ ಬಗ್ಗೆ ಆರೋಪ ಮಾಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆಗಳನ್ನು ತಕ್ಷಣ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

“ಇದು ತುಂಬಾ ದುಃಖಕರ ಮತ್ತು ಆತಂಕಕಾರಿ ಘಟನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿ ಅಂಬರೀಶ್ ಕುಮಾರ್, ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್, ಜೈಪುರ ಕಲೆಕ್ಟರ್ ಜಿತೇಂದ್ರ ಸೋನಿ ಮತ್ತು ಎಸ್‌ಎಂಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ದೀಪಕ್ ಮಹೇಶ್ವರಿ ಅವರಿಂದ ಘಟನೆಯ ಕುರಿತು ವಿವರವಾದ ವರದಿಯನ್ನು ಸಿಎಂ ಕೋರಿದ್ದಾರೆ.

ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಮುಖ್ಯಮಂತ್ರಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲು ನಿರ್ದೇಶನ ನೀಡಿದ್ದಾರೆ. ದುರಂತಕ್ಕೆ ಯಾರ ನಿರ್ಲಕ್ಷ್ಯ ಕಾರಣ ಮತ್ತು ಆಸ್ಪತ್ರೆಯ ಅಗ್ನಿಶಾಮಕ ಉಪಕರಣಗಳು ಮತ್ತು ಸುರಕ್ಷತಾ ಕ್ರಮಗಳು ಸಮರ್ಪಕವಾಗಿವೆಯೇ ಎಂಬುದನ್ನು ಸಮಿತಿ ತನಿಖೆ ಮಾಡಲಿದೆ.

ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಗ್ರಹಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೋಮು ಉದ್ವಿಗ್ನತೆ: ಒಡಿಶಾದ ಕಟಕ್‌ನಲ್ಲಿ 36 ಗಂಟೆಗಳ ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...