Homeಮುಖಪುಟಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಮಂದಿ ರೋಗಿಗಳು ಸಾವು, ಹಲವರಿಗೆ ಗಾಯ

ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಮಂದಿ ರೋಗಿಗಳು ಸಾವು, ಹಲವರಿಗೆ ಗಾಯ

- Advertisement -
- Advertisement -

ಜೈಪುರದ ಸವಾಯಿ ಮಾನ್ ಸಿಂಗ್ (ಎಸ್‌ಎಂಎಸ್) ಆಸ್ಪತ್ರೆಯ ಟ್ರಾಮಾ ಸೆಂಟರ್‌ನ ಐಸಿಯುನಲ್ಲಿ ಭಾನುವಾರ (ಅ.5) ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಎಂಟು ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ.

ಎಸ್‌ಎಂಎಸ್‌ ನಗರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾಗಿದ್ದು, ರಾತ್ರಿ 11.20ರ ಸುಮಾರಿಗೆ ಬೆಂಕಿ ದುರಂತ ನಡೆದಿದೆ. ಮೂವರು ಮಹಿಳೆಯರು ಸೇರಿದಂತೆ ಎಂಟು ಮಂದಿ ರೋಗಿಗಳು ಸಾವಿಗೀಡಾಗಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ಹೇಳಿವೆ.

ಐಸಿಯು ವಾರ್ಡ್‌ನ ಸ್ಟೋರ್‌ ರೂಮ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಅಲ್ಲಿ ಕಾಗದಗಳು, ವೈದ್ಯಕೀಯ ಉಪಕರಣಗಳು ಮತ್ತು ರಕ್ತದ ಮಾದರಿ ಕೊಳವೆಗಳನ್ನು ಇರಿಸಲಾಗಿತ್ತು.

ಬೆಂಕಿ ಹತ್ತಿಕೊಂಡ ತಕ್ಷಣ ಸಂಪೂರ್ಣ ವಾರ್ಡ್‌ಗೆ ಆವರಿಸಿದೆ ಮತ್ತು ಹೊಗೆ ತುಂಬಿಕೊಂಡಿದೆ. ಹಾಗಾಗಿ, ಐಸಿಯುನಲ್ಲಿದ್ದ ರೋಗಿಗಳನ್ನು ರಕ್ಷಿಸಲು ಸಾಧ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಆಸ್ಪತ್ರೆಯ ಆಡಳಿತ ಮಂಡಳಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಸಂಭವಿಸಿದಾಗ ಒಟ್ಟು 18 ರೋಗಿಗಳು ಐಸಿಯು ಮತ್ತು ಸೆಮಿ-ಐಸಿಯುನಲ್ಲಿ ದಾಖಲಾಗಿದ್ದರು. ಅವರಲ್ಲಿ 11 ರೋಗಿಗಳು ಬೆಂಕಿ ಕಾಣಿಸಿಕೊಂಡ ವಾರ್ಡ್‌ನಲ್ಲೇ ಇದ್ದರು.

ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದಿತ್ತು. ಆದರೆ, ಬೆಂಕಿ ಮತ್ತು ವಿಷಕಾರಿ ಹೊಗೆ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು. ಕುಟುಂಬ ಸದಸ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಯ ಸಹಾಯದಿಂದ ಕಿಟಕಿಗಳು ಮತ್ತು ಬಾಗಿಲುಗಳನ್ನು ಒಡೆದು ಅನೇಕ ರೋಗಿಗಳನ್ನು ರಕ್ಷಿಸಲಾಯಿತು. ರೋಗಿಗಳನ್ನು ತಕ್ಷಣ ಬೀದಿಯಲ್ಲಿ ಹಾಸಿಗೆಗಳ ಮೇಲೆ ಇರಿಸಿ ಆಮ್ಲಜನಕ ಮತ್ತು ಪ್ರಥಮ ಚಿಕಿತ್ಸೆ ನೀಡಲಾಯಿತು ಎಂದು ವರದಿಗಳು ವಿವರಿಸಿವೆ.

ಬೆಂಕಿ ಹತ್ತಿಕೊಂಡ ನಂತರ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಉಂಟಾಯಿತು. ಐಸಿಯುಗೆ ದಾಖಲಾಗಿದ್ದ ಗಂಭೀರ ರೋಗಿಗಳನ್ನು ಸ್ಥಳಾಂತರಿಸಲು ಸಿಬ್ಬಂದಿ ಹೆಣಗಾಡಿದರು. ಬೆಂಕಿ ನಿಯಂತ್ರಿಸಲು ಒಂದರಿಂದ ಒಂದೂವರೆ ಗಂಟೆ ಬೇಕಾಯಿತು. ಎಲ್ಲಾ ರೋಗಿಗಳನ್ನು ಅವರ ಹಾಸಿಗೆಗಳ ಜೊತೆಗೆ ಹೊರಗಿನ ಬೀದಿಗೆ ಸ್ಥಳಾಂತರಿಸಲಾಯಿತು ಎಂದು ವರದಿಗಳು ಹೇಳಿವೆ.

“ಒಂದು ಐಸಿಯುನಲ್ಲಿ 11 ರೋಗಿಗಳಿದ್ದರು. ಅವರಲ್ಲಿ ಕೆಲವರನ್ನು ತಕ್ಷಣವೇ ಸ್ಥಳಾಂತರಿಸಲಾಯಿತು. ಪಕ್ಕದ ಐಸಿಯುನಲ್ಲಿ 13 ರೋಗಿಗಳಿದ್ದರು. ಬೆಂಕಿ ಹರಡುತ್ತಿದ್ದಂತೆ ಆರು ರೋಗಿಗಳು ಒಳಗೆ ಸಿಲುಕಿಕೊಂಡರು” ಎಂದು
ಟ್ರಾಮಾ ಸೆಂಟರ್‌ನ ನೋಡಲ್ ಅಧಿಕಾರಿ ಡಾ. ಅನುರಾಗ್ ಧಕಾಡ್ ತಿಳಿಸಿದ್ದಾರೆ.

ಘಟನೆಯ ನಂತರ ಆಸ್ಪತ್ರೆಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಬೆಂಕಿ ಹತ್ತಿಕೊಂಡ ಆರಂಭಿಕ ನಿಮಿಷಗಳಲ್ಲಿ ಅಗ್ನಿಶಾಮಕ ಎಚ್ಚರಿಕೆ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಮತ್ತು ಆಮ್ಲಜನಕ ಮಾರ್ಗವನ್ನು ಸ್ಥಗಿತಗೊಳಿಸುವಲ್ಲಿ ವಿಳಂಬವಾಯಿತು ಎಂದು ಜನರು ಆರೋಪಿಸಿದ್ದಾರೆ. ಸಿಬ್ಬಂದಿಗೆ ಸಾಕಷ್ಟು ಅಗ್ನಿಶಾಮಕ ಸುರಕ್ಷತಾ ಸಾಧನಗಳ ಕೊರತೆಯಿತ್ತು, ಇದು ಬೆಂಕಿಯ ಹರಡುವಿಕೆಯನ್ನು ಮತ್ತಷ್ಟು ವೇಗಗೊಳಿಸಿತು ಎಂದಿದ್ದಾರೆ.

ಮೃತರ ಕುಟುಂಬಸ್ಥರು ಎಸ್‌ಎಂಎಸ್ ಟ್ರಾಮಾ ಸೆಂಟರ್ ಹೊರಗೆ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಕುಟುಂಬಸ್ಥರು, ಆಸ್ಪತ್ರೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯ ಬಗ್ಗೆ ಆರೋಪ ಮಾಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆಗಳನ್ನು ತಕ್ಷಣ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

“ಇದು ತುಂಬಾ ದುಃಖಕರ ಮತ್ತು ಆತಂಕಕಾರಿ ಘಟನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿ ಅಂಬರೀಶ್ ಕುಮಾರ್, ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್, ಜೈಪುರ ಕಲೆಕ್ಟರ್ ಜಿತೇಂದ್ರ ಸೋನಿ ಮತ್ತು ಎಸ್‌ಎಂಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ದೀಪಕ್ ಮಹೇಶ್ವರಿ ಅವರಿಂದ ಘಟನೆಯ ಕುರಿತು ವಿವರವಾದ ವರದಿಯನ್ನು ಸಿಎಂ ಕೋರಿದ್ದಾರೆ.

ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಮುಖ್ಯಮಂತ್ರಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲು ನಿರ್ದೇಶನ ನೀಡಿದ್ದಾರೆ. ದುರಂತಕ್ಕೆ ಯಾರ ನಿರ್ಲಕ್ಷ್ಯ ಕಾರಣ ಮತ್ತು ಆಸ್ಪತ್ರೆಯ ಅಗ್ನಿಶಾಮಕ ಉಪಕರಣಗಳು ಮತ್ತು ಸುರಕ್ಷತಾ ಕ್ರಮಗಳು ಸಮರ್ಪಕವಾಗಿವೆಯೇ ಎಂಬುದನ್ನು ಸಮಿತಿ ತನಿಖೆ ಮಾಡಲಿದೆ.

ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಗ್ರಹಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೋಮು ಉದ್ವಿಗ್ನತೆ: ಒಡಿಶಾದ ಕಟಕ್‌ನಲ್ಲಿ 36 ಗಂಟೆಗಳ ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...