Homeಮುಖಪುಟಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಮಂದಿ ರೋಗಿಗಳು ಸಾವು, ಹಲವರಿಗೆ ಗಾಯ

ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 8 ಮಂದಿ ರೋಗಿಗಳು ಸಾವು, ಹಲವರಿಗೆ ಗಾಯ

- Advertisement -
- Advertisement -

ಜೈಪುರದ ಸವಾಯಿ ಮಾನ್ ಸಿಂಗ್ (ಎಸ್‌ಎಂಎಸ್) ಆಸ್ಪತ್ರೆಯ ಟ್ರಾಮಾ ಸೆಂಟರ್‌ನ ಐಸಿಯುನಲ್ಲಿ ಭಾನುವಾರ (ಅ.5) ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಎಂಟು ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ.

ಎಸ್‌ಎಂಎಸ್‌ ನಗರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾಗಿದ್ದು, ರಾತ್ರಿ 11.20ರ ಸುಮಾರಿಗೆ ಬೆಂಕಿ ದುರಂತ ನಡೆದಿದೆ. ಮೂವರು ಮಹಿಳೆಯರು ಸೇರಿದಂತೆ ಎಂಟು ಮಂದಿ ರೋಗಿಗಳು ಸಾವಿಗೀಡಾಗಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ಹೇಳಿವೆ.

ಐಸಿಯು ವಾರ್ಡ್‌ನ ಸ್ಟೋರ್‌ ರೂಮ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಅಲ್ಲಿ ಕಾಗದಗಳು, ವೈದ್ಯಕೀಯ ಉಪಕರಣಗಳು ಮತ್ತು ರಕ್ತದ ಮಾದರಿ ಕೊಳವೆಗಳನ್ನು ಇರಿಸಲಾಗಿತ್ತು.

ಬೆಂಕಿ ಹತ್ತಿಕೊಂಡ ತಕ್ಷಣ ಸಂಪೂರ್ಣ ವಾರ್ಡ್‌ಗೆ ಆವರಿಸಿದೆ ಮತ್ತು ಹೊಗೆ ತುಂಬಿಕೊಂಡಿದೆ. ಹಾಗಾಗಿ, ಐಸಿಯುನಲ್ಲಿದ್ದ ರೋಗಿಗಳನ್ನು ರಕ್ಷಿಸಲು ಸಾಧ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಆಸ್ಪತ್ರೆಯ ಆಡಳಿತ ಮಂಡಳಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಸಂಭವಿಸಿದಾಗ ಒಟ್ಟು 18 ರೋಗಿಗಳು ಐಸಿಯು ಮತ್ತು ಸೆಮಿ-ಐಸಿಯುನಲ್ಲಿ ದಾಖಲಾಗಿದ್ದರು. ಅವರಲ್ಲಿ 11 ರೋಗಿಗಳು ಬೆಂಕಿ ಕಾಣಿಸಿಕೊಂಡ ವಾರ್ಡ್‌ನಲ್ಲೇ ಇದ್ದರು.

ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದಿತ್ತು. ಆದರೆ, ಬೆಂಕಿ ಮತ್ತು ವಿಷಕಾರಿ ಹೊಗೆ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು. ಕುಟುಂಬ ಸದಸ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಯ ಸಹಾಯದಿಂದ ಕಿಟಕಿಗಳು ಮತ್ತು ಬಾಗಿಲುಗಳನ್ನು ಒಡೆದು ಅನೇಕ ರೋಗಿಗಳನ್ನು ರಕ್ಷಿಸಲಾಯಿತು. ರೋಗಿಗಳನ್ನು ತಕ್ಷಣ ಬೀದಿಯಲ್ಲಿ ಹಾಸಿಗೆಗಳ ಮೇಲೆ ಇರಿಸಿ ಆಮ್ಲಜನಕ ಮತ್ತು ಪ್ರಥಮ ಚಿಕಿತ್ಸೆ ನೀಡಲಾಯಿತು ಎಂದು ವರದಿಗಳು ವಿವರಿಸಿವೆ.

ಬೆಂಕಿ ಹತ್ತಿಕೊಂಡ ನಂತರ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಉಂಟಾಯಿತು. ಐಸಿಯುಗೆ ದಾಖಲಾಗಿದ್ದ ಗಂಭೀರ ರೋಗಿಗಳನ್ನು ಸ್ಥಳಾಂತರಿಸಲು ಸಿಬ್ಬಂದಿ ಹೆಣಗಾಡಿದರು. ಬೆಂಕಿ ನಿಯಂತ್ರಿಸಲು ಒಂದರಿಂದ ಒಂದೂವರೆ ಗಂಟೆ ಬೇಕಾಯಿತು. ಎಲ್ಲಾ ರೋಗಿಗಳನ್ನು ಅವರ ಹಾಸಿಗೆಗಳ ಜೊತೆಗೆ ಹೊರಗಿನ ಬೀದಿಗೆ ಸ್ಥಳಾಂತರಿಸಲಾಯಿತು ಎಂದು ವರದಿಗಳು ಹೇಳಿವೆ.

“ಒಂದು ಐಸಿಯುನಲ್ಲಿ 11 ರೋಗಿಗಳಿದ್ದರು. ಅವರಲ್ಲಿ ಕೆಲವರನ್ನು ತಕ್ಷಣವೇ ಸ್ಥಳಾಂತರಿಸಲಾಯಿತು. ಪಕ್ಕದ ಐಸಿಯುನಲ್ಲಿ 13 ರೋಗಿಗಳಿದ್ದರು. ಬೆಂಕಿ ಹರಡುತ್ತಿದ್ದಂತೆ ಆರು ರೋಗಿಗಳು ಒಳಗೆ ಸಿಲುಕಿಕೊಂಡರು” ಎಂದು
ಟ್ರಾಮಾ ಸೆಂಟರ್‌ನ ನೋಡಲ್ ಅಧಿಕಾರಿ ಡಾ. ಅನುರಾಗ್ ಧಕಾಡ್ ತಿಳಿಸಿದ್ದಾರೆ.

ಘಟನೆಯ ನಂತರ ಆಸ್ಪತ್ರೆಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಬೆಂಕಿ ಹತ್ತಿಕೊಂಡ ಆರಂಭಿಕ ನಿಮಿಷಗಳಲ್ಲಿ ಅಗ್ನಿಶಾಮಕ ಎಚ್ಚರಿಕೆ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಮತ್ತು ಆಮ್ಲಜನಕ ಮಾರ್ಗವನ್ನು ಸ್ಥಗಿತಗೊಳಿಸುವಲ್ಲಿ ವಿಳಂಬವಾಯಿತು ಎಂದು ಜನರು ಆರೋಪಿಸಿದ್ದಾರೆ. ಸಿಬ್ಬಂದಿಗೆ ಸಾಕಷ್ಟು ಅಗ್ನಿಶಾಮಕ ಸುರಕ್ಷತಾ ಸಾಧನಗಳ ಕೊರತೆಯಿತ್ತು, ಇದು ಬೆಂಕಿಯ ಹರಡುವಿಕೆಯನ್ನು ಮತ್ತಷ್ಟು ವೇಗಗೊಳಿಸಿತು ಎಂದಿದ್ದಾರೆ.

ಮೃತರ ಕುಟುಂಬಸ್ಥರು ಎಸ್‌ಎಂಎಸ್ ಟ್ರಾಮಾ ಸೆಂಟರ್ ಹೊರಗೆ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಕುಟುಂಬಸ್ಥರು, ಆಸ್ಪತ್ರೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯ ಬಗ್ಗೆ ಆರೋಪ ಮಾಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆಗಳನ್ನು ತಕ್ಷಣ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

“ಇದು ತುಂಬಾ ದುಃಖಕರ ಮತ್ತು ಆತಂಕಕಾರಿ ಘಟನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿ ಅಂಬರೀಶ್ ಕುಮಾರ್, ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್, ಜೈಪುರ ಕಲೆಕ್ಟರ್ ಜಿತೇಂದ್ರ ಸೋನಿ ಮತ್ತು ಎಸ್‌ಎಂಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ದೀಪಕ್ ಮಹೇಶ್ವರಿ ಅವರಿಂದ ಘಟನೆಯ ಕುರಿತು ವಿವರವಾದ ವರದಿಯನ್ನು ಸಿಎಂ ಕೋರಿದ್ದಾರೆ.

ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಮುಖ್ಯಮಂತ್ರಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲು ನಿರ್ದೇಶನ ನೀಡಿದ್ದಾರೆ. ದುರಂತಕ್ಕೆ ಯಾರ ನಿರ್ಲಕ್ಷ್ಯ ಕಾರಣ ಮತ್ತು ಆಸ್ಪತ್ರೆಯ ಅಗ್ನಿಶಾಮಕ ಉಪಕರಣಗಳು ಮತ್ತು ಸುರಕ್ಷತಾ ಕ್ರಮಗಳು ಸಮರ್ಪಕವಾಗಿವೆಯೇ ಎಂಬುದನ್ನು ಸಮಿತಿ ತನಿಖೆ ಮಾಡಲಿದೆ.

ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಗ್ರಹಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೋಮು ಉದ್ವಿಗ್ನತೆ: ಒಡಿಶಾದ ಕಟಕ್‌ನಲ್ಲಿ 36 ಗಂಟೆಗಳ ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...