Homeಮುಖಪುಟಭಾರತದಲ್ಲಿ ಬೆಂಕಿ ದುರಂತ 'ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು' NCRB ವರದಿ

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

- Advertisement -
- Advertisement -

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು ವಸತಿ ಕಟ್ಟಡಗಳ ಸುರಕ್ಷತೆಯ ಕುರಿತು ದೊಡ್ಡ ಮಟ್ಟದ ಚರ್ಚೆ ಆರಂಭವಾಗಿದೆ.

2024ರ ಒಂದೇ ವರ್ಷದಲ್ಲಿ ಭಾರತದಲ್ಲಿ ಸುಮಾರು 6,000 ಬೆಂಕಿ ಅವಘಡಗಳು ಸಂಭವಿಸಿದ್ದು, 5,888 ಜನರು ಜೀವ ಕಳೆದುಕೊಂಡಿದ್ದಾರೆ ಮತ್ತು 330 ಜನರು ಗಾಯಗೊಂಡಿದ್ದಾರೆ. ಇದರರ್ಥ, ದೇಶದಲ್ಲಿ ಸರಾಸರಿ ಪ್ರತಿ ದಿನ 16 ಜನರು ಬೆಂಕಿಗೆ ಆಹುತಿಯಾಗುತ್ತಿದ್ದಾರೆ. ವಸತಿ ಕಟ್ಟಡಗಳು (ಮನೆಗಳು) ಇಂದಿಗೂ ಇಂತಹ ಅಪಘಾತಗಳ ಪ್ರಮುಖ ತಾಣಗಳಾಗಿದ್ದು, ಅಡುಗೆ ಅನಿಲ (LPG) ಸಿಲಿಂಡರ್ ಸ್ಫೋಟ ಮತ್ತು ಶಾರ್ಟ್ ಸರ್ಕ್ಯೂಟ್‌ಗಳೇ ಇದಕ್ಕೆ ಪ್ರಮುಖ ಕಾರಣಗಳಾಗಿವೆ.

ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (National Crime Records Bureau – NCRB) ತನ್ನ ವಾರ್ಷಿಕ ‘ಅಪಘಾತದ ಮರಣಗಳು ಮತ್ತು ಆತ್ಮಹತ್ಯೆಗಳ’ (ADSI) ವರದಿಯ ಮೂಲಕ ಈ ಅಂಕಿ-ಅಂಶಗಳನ್ನು ಪ್ರಕಟಿಸಿದೆ.

ಹತ್ತು ವರ್ಷಗಳಲ್ಲಿ ಬೆಂಕಿ ಅಪಘಾತಗಳ ಸಂಖ್ಯೆಯಲ್ಲಿ ಇಳಿಮುಖ

ಕಳೆದ ಒಂದು ದಶಕದಲ್ಲಿ ದೇಶದಲ್ಲಿ ಬೆಂಕಿ ಅವಗಡಗಳ ಸಂಖ್ಯೆ ಶೇ. 68 ರಷ್ಟು ಗಣನೀಯವಾಗಿ ಇಳಿಕೆಯಾಗಿದೆ. 2015 ರಲ್ಲಿ 18,450 ಇದ್ದ ಪ್ರಕರಣಗಳು 2024 ರ ವೇಳೆಗೆ 5,971 ಕ್ಕೆ ಇಳಿದಿವೆ. ಮರಣ ಹೊಂದಿದವರ ಸಂಖ್ಯೆಯೂ 17,700 ರಿಂದ 5,888 ಕ್ಕೆ ಕುಸಿದಿದೆ. ಆದರೆ, ಈ ಇಳಿಕೆಯು ಅಗ್ನಿಶಾಮಕ ವ್ಯವಸ್ಥೆಯ ಸುಧಾರಣೆಯಿಂದಾಗಿದೆಯೇ ಅಥವಾ ಪ್ರಕರಣಗಳನ್ನು ಸರಿಯಾಗಿ ದಾಖಲಿಸದೇ ಇರುವುದರಿಂದಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ಸಾಮಾನ್ಯವಾಗಿ ದೊಡ್ಡ ಫ್ಯಾಕ್ಟರಿಗಳು ಅಥವಾ ಹೋಟೆಲ್‌ಗಳಲ್ಲಿ ಬೆಂಕಿ ಬಿದ್ದಾಗ ಮಾತ್ರ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗುತ್ತದೆ. ಆದರೆ ವಾಸ್ತವ ಏನೆಂದರೆ, ಅತಿ ಹೆಚ್ಚು ಸಾವುಗಳು ಸಂಭವಿಸುವುದು ನಮ್ಮ ಮನೆಗಳ ಒಳಗಡೆ ಎನ್ನುತ್ತವೆ 2024 ರ ವರದಿಗಳು.

  • ವಸತಿ ಕಟ್ಟಡಗಳು (ಮನೆಗಳು): 3,585 ಪ್ರಕರಣಗಳು
  • ವಾಣಿಜ್ಯ ಸಂಕೀರ್ಣಗಳು (ಮಾಲ್/ಅಂಗಡಿ): 277 ಪ್ರಕರಣಗಳು
  • ಕಾರ್ಖಾನೆಗಳು (Factories): 149 ಪ್ರಕರಣಗಳು

2024 ರಲ್ಲಿ ಸಂಭವಿಸಿದ ಒಟ್ಟು ಸಾವುಗಳಲ್ಲಿ ಸುಮಾರು ಶೇ. 40 ರಷ್ಟು ಸಾವುಗಳು ಅಡುಗೆ ಮನೆ ಮತ್ತು ಕರೆಂಟ್ ಸಮಸ್ಯೆಯಿಂದಲೇ ಆಗಿವೆ.

  • ಸಿಲಿಂಡರ್/ಸ್ಟವ್ ಸ್ಫೋಟ: ಶೇ. 23.6 ಸಾವುಗಳು
  • ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಶೇ. 17.2 ಸಾವುಗಳು
  • ಪಟಾಕಿ ಅವಗಡಗಳು: ಶೇ. 2.3 ಸಾವುಗಳು

    ಇತರ ಕಾರಣಗಳು: ಶೇ. 57.0 ಸಾವುಗಳು (ಇದು ನಿಖರ ಕಾರಣ ಪತ್ತೆ ಹಚ್ಚುವಲ್ಲಿನ ಲೋಪವನ್ನು ತೋರಿಸುತ್ತದೆ).

ಅತಿ ಹೆಚ್ಚು ಸಾವುಗಳು ಸಂಭವಿಸಿದ ರಾಜ್ಯಗಳು: ಮಹಾರಾಷ್ಟ್ರ (639 ಸಾವು), ತಮಿಳುನಾಡು (537), ಉತ್ತರ ಪ್ರದೇಶ (489), ಮಧ್ಯಪ್ರದೇಶ (452), ಮತ್ತು ಒಡಿಶಾ (442).

ಜನಸಂಖ್ಯೆಗೆ ಹೋಲಿಸಿದರೆ ಅತಿ ಹೆಚ್ಚು ಮರಣ ದರ ಹೊಂದಿದ ರಾಜ್ಯಗಳು: ಮಿಜೋರಾಂ (ಪ್ರತಿ ಲಕ್ಷ ಜನಸಂಖ್ಯೆಗೆ 1.28 ಸಾವು), ಛತ್ತೀಸ್‌ಗಢ (1.14), ಮತ್ತು ಅಂಡಮಾನ್ ನಿಕೋಬಾರ್ (0.99). ಒಡಿಶಾ ರಾಜ್ಯವು ಒಟ್ಟು ಸಾವು ಮತ್ತು ಮರಣ ದರ ಎರಡರಲ್ಲೂ ಮುಂಚೂಣಿಯಲ್ಲಿದೆ.

ಇತ್ತೀಚೆಗೆ (ಜೂನ್ 2026) ದೆಹಲಿಯ ಮಾಳವೀಯ ನಗರದ ಹೋಟೆಲ್ ಒಂದರಲ್ಲಿ ನಡೆದ ಭೀಕರ ಬೆಂಕಿ ಅವಘಡವು ಭಾರತದ ನಗರ ಪ್ರದೇಶಗಳಲ್ಲಿರುವ ಅಗ್ನಿ ಸುರಕ್ಷತೆಯ ಬೇಜವಾಬ್ದಾರಿತನವನ್ನು ಮತ್ತೊಮ್ಮೆ ಜಗತ್ತಿನ ಮುಂದೆ ಬೆತ್ತಲೆಯಾಗಿಸಿದೆ. ಆ ಹೋಟೆಲ್ ತನ್ನ ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿಸಿಕೊಂಡಿತ್ತು, ಅದಕ್ಕೆ ಯಾವುದೇ ಅಧಿಕೃತ ಅಗ್ನಿಶಾಮಕ ಇಲಾಖೆಯ ಅನುಮತಿ (NOC) ಇರಲಿಲ್ಲ. ಇಡೀ ಕಟ್ಟಡಕ್ಕೆ ಇದ್ದದ್ದು ಒಂದೇ ಒಂದು ಪ್ರವೇಶ ಮತ್ತು ನಿರ್ಗಮನ ದ್ವಾರ, ಪರಿಣಾಮವಾಗಿ, ಬೆಂಕಿ ಬಿದ್ದಾಗ ಜನರು ಹೊರಗೆ ಓಡಲಾರದೆ ಅಲ್ಲೇ ಸಿಲುಕಿ ಜೀವ ಬಿಡಬೇಕಾಯಿತು.

ಇದು ಕೇವಲ ದೆಹಲಿಯ ಕಥೆಯಲ್ಲ; ಇತ್ತೀಚಿನ ವರ್ಷಗಳಲ್ಲಿ ದೇಶದ ವಿವಿಧೆಡೆ ನಡೆದ ಕೆಲವು ಭೀಕರ ಘಟನೆಗಳನ್ನು ಗಮನಿಸಿದರೆ ನಾವೆಷ್ಟು ಅಪಾಯಕಾರಿ ಸ್ಥಿತಿಯಲ್ಲಿದ್ದೇವೆ ಎಂಬುದು ಅರ್ಥವಾಗುತ್ತದೆ.

ಕಳೆದ ವರ್ಷ ಗುಜರಾತ್‌ನ ರಾಜ್‌ಕೋಟ್‌ನ ಗೇಮಿಂಗ್ ಜೋನ್ ಒಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಕ್ಕಳು ಸೇರಿದಂತೆ 27 ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದರು. ಆ ಕಟ್ಟಡವನ್ನು ಸಂಪೂರ್ಣವಾಗಿ ಹವಾನಿಯಂತ್ರಿತ (AC) ಮಾಡಲಾಗಿತ್ತು ಮತ್ತು ತುರ್ತು ನಿರ್ಗಮನದ ವ್ಯವಸ್ಥೆಯೇ ಇರಲಿಲ್ಲ. ಅದೇ ರೀತಿ, ದೆಹಲಿಯ ನವಜಾತ ಶಿಶುಗಳ ಆಸ್ಪತ್ರೆಯೊಂದರಲ್ಲಿ (Baby Care Centre) ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಅಮಾಯಕ ಕಂದಮ್ಮಗಳು ಪ್ರಾಣ ಬಿಟ್ಟಿದ್ದರು. ಈ ಎಲ್ಲಾ ಘಟನೆಗಳ ಹಿಂದೆ ಇದ್ದದ್ದು ಒಂದೇ ಕಾರಣ “ಭ್ರಷ್ಟಾಚಾರ ಮತ್ತು ನಿಯಮಗಳ ಉಲ್ಲಂಘನೆ.”

ನಮ್ಮ ಮನೆಗಳೇ ಸುರಕ್ಷಿತವಲ್ಲ!

NCRB ವರದಿ ಸ್ಪಷ್ಟಪಡಿಸುವಂತೆ, ಕೈಗಾರಿಕೆಗಳಿಗಿಂತ ಹೆಚ್ಚಾಗಿ ನಮ್ಮ ಮನೆಗಳೇ ಬೆಂಕಿ ಅಪಘಾತದ ಕೇಂದ್ರಗಳಾಗುತ್ತಿವೆ. ಮಧ್ಯಮ ಮತ್ತು ಬಡ ವರ್ಗದ ಜನ ವಾಸಿಸುವ ಪ್ರದೇಶಗಳಲ್ಲಿ ಗುಣಮಟ್ಟವಿಲ್ಲದ ವೈರಿಂಗ್ ಬಳಸುವುದು, ಒಂದೇ ಸಾಕೆಟ್‌ಗೆ ಅತಿಯಾದ ವಿದ್ಯುತ್ ಲೋಡ್ ನೀಡುವುದು (Overloading) ಮತ್ತು ಹಳೆಯದಾದ ಗ್ಯಾಸ್ ಪೈಪ್ ಹಾಗೂ ರೆಗ್ಯುಲೇಟರ್‌ಗಳನ್ನು ಬದಲಾಯಿಸದೆ ಇರುವುದು ಇಡೀ ಕುಟುಂಬವನ್ನೇ ನಾಮಾವಶೇಷ ಮಾಡುತ್ತಿದೆ. ಅಪಾರ್ಟ್‌ಮೆಂಟ್‌ಗಳಲ್ಲಿ ಕನಿಷ್ಠ ಪಕ್ಷ ಅಗ್ನಿಶಾಮಕ ಸಿಲಿಂಡರ್‌ಗಳನ್ನು (Fire Extinguishers) ಹೇಗೆ ಬಳಸಬೇಕು ಎಂಬ ಕನಿಷ್ಠ ಜ್ಞಾನವೂ ಸಾಮಾನ್ಯ ಜನರಿಗೆ ಇಲ್ಲದಿರುವುದು ದುರಂತ.

ಯಾವುದೇ ಒಂದು ವಾಣಿಜ್ಯ ಕಟ್ಟಡ, ಹೋಟೆಲ್ ಅಥವಾ ಮಲ್ಟಿಪ್ಲೆಕ್ಸ್ ತಲೆಯೆತ್ತಬೇಕಾದರೆ ಅಗ್ನಿಶಾಮಕ ಇಲಾಖೆಯ ಕ್ಲಿಯರೆನ್ಸ್ ಕಡ್ಡಾಯ. ಆದರೆ, ಭಾರತದಲ್ಲಿ ಹಣ ಕೊಟ್ಟರೆ ಸಾಕು, ಯಾವುದೇ ಸುರಕ್ಷತಾ ಕ್ರಮಗಳಿಲ್ಲದ ಕಟ್ಟಡಗಳಿಗೂ ಸುಲಭವಾಗಿ ಪರವಾನಗಿ ಸಿಗುತ್ತದೆ ಎಂಬುದು ಓಪನ್ ಸೀಕ್ರೇಟ್. ದುರಂತ ಸಂಭವಿಸಿದಾಗ ಮಾತ್ರ ಅಧಿಕಾರಿಗಳು ನಾಮಕಾವಸ್ತೆ ದಾಳಿ ನಡೆಸಿ ಸೀಲ್ ಮಾಡುತ್ತಾರೆ. ಕೆಲವು ದಿನಗಳ ನಂತರ ಮತ್ತೆ ಎಂದಿನಂತೆ ಭ್ರಷ್ಟಾಚಾರ ಮುಂದುವರಿಯುತ್ತದೆ.

ಈ ಬೆಂಕಿ ಅಪಘಾತಗಳನ್ನು ತಪ್ಪಿಸಲು ಆಡಳಿತ ವರ್ಗಕ್ಕೆ ಪ್ರಾಮಾಣಿಕ ಇಚ್ಚಾಶಕ್ತಿ ಅಗತ್ಯ. ಹಾಗಾಗಿ ಇದರ ಕುರಿತಾಗಿ ಗಂಭೀರ ಪ್ರಯತ್ನಗಳು ನಡೆಯಬೇಕಿದೆ. ಯಾವೆಲ್ಲ ಮಾರ್ಗಗಳನ್ನು ಅನುಸರಿಸಿದರೆ ಇದನ್ನು ಹತೋಟಿಯಲ್ಲಿಡಲು ಸಾಧ್ಯವಾಗುತ್ತದೆ ಎಂಬುದನ್ನು ನೋಡೋಣ.

  • ಕಡ್ಡಾಯ ಆಡಿಟ್: ಪ್ರತಿ ವರ್ಷ ಎಲ್ಲಾ ಶಾಲೆ, ಕಾಲೇಜು, ಹೋಟೆಲ್ ಮತ್ತು ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ‘ಫೈರ್ ಆಡಿಟ್’ ನಡೆಸಬೇಕು. ತಪ್ಪು ಕಂಡುಬಂದಲ್ಲಿ ಲೈಸೆನ್ಸ್ ರದ್ದುಪಡಿಸಬೇಕು.
  • ಶಾಲಾ ಮಟ್ಟದಲ್ಲಿ ಜಾಗೃತಿ: ಪ್ರತಿಯೊಬ್ಬ ನಾಗರಿಕನಿಗೂ ಬೆಂಕಿ ಬಿದ್ದಾಗ ಹೇಗೆ ತಪ್ಪಿಸಿಕೊಳ್ಳಬೇಕು, ಅಗ್ನಿಶಾಮಕ ಉಪಕರಣಗಳನ್ನು ಹೇಗೆ ಬಳಸಬೇಕು ಎಂಬ ‘ಮೋಕ್ ಡ್ರಿಲ್’ (Mock Drill) ತರಬೇತಿಯನ್ನು ಶಾಲೆ ಮತ್ತು ಕಚೇರಿಗಳಲ್ಲಿ ಕಡ್ಡಾಯಗೊಳಿಸಬೇಕು.
  • ಕಠಿಣ ಶಿಕ್ಷೆ: ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಬಿಲ್ಡರ್‌ಗಳು ಮತ್ತು ಅದಕ್ಕೆ ಸಾಥ್ ನೀಡುವ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣಕ್ಕೆ ಸಮನಾದ ಕ್ರಿಮಿನಲ್ ಮೊಕದ್ದಮೆ ಹೂಡಬೇಕು.

ವರ್ಷಕ್ಕೆ ಸುಮಾರು 6,000 ಸಾವುಗಳು ಎಂದರೆ ಅದು ಕೇವಲ ಸಂಖ್ಯೆಯಲ್ಲ, 6,000 ಕುಟುಂಬಗಳ ಆಧಾರಸ್ತಂಭಗಳು ಕುಸಿದು ಬಿದ್ದಿವೆ ಎಂದರ್ಥ. ಭಾರತವು ಬುಲೆಟ್ ಟ್ರೈನ್, ಸ್ಮಾರ್ಟ್ ಸಿಟಿಗಳತ್ತ ಮುನ್ನುಗ್ಗುತ್ತಿರುವಾಗ, ತನ್ನ ನಾಗರಿಕರಿಗೆ ಉಸಿರುಗಟ್ಟದೆ ಕಟ್ಟಡದಿಂದ ಹೊರಗೆ ಓಡಿ ಬರಲು ಒಂದು ‘ತುರ್ತು ನಿರ್ಗಮನ’ದ ದಾರಿಯನ್ನೂ ಕಲ್ಪಿಸಿಕೊಡದಿದ್ದರೆ ಆ ಅಭಿವೃದ್ಧಿಗೆ ಯಾವುದೇ ಅರ್ಥವಿರುವುದಿಲ್ಲ. ಭ್ರಷ್ಟಾಚಾರ ಮತ್ತು ನಿರ್ಲಕ್ಷ್ಯದ ಬೆಂಕಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?

ದೆಹಲಿ ಮಾಳವೀಯ ನಗರದ ಹೋಟೆಲ್‌ನಲ್ಲಿ ನಡೆದ ಬೆಂಕಿ ದುರಂತವು ಕರ್ನಾಟಕದ ಪಾಲಿಗೆ ಕಣ್ಣು ತೆರೆಸುವ ಘಟನೆಯಾಗಬೇಕು. ಅಗ್ನಿ ಸುರಕ್ಷತೆಯನ್ನು ಕೇವಲ ಒಂದು ‘ಸರ್ಟಿಫಿಕೇಟ್’ ಪಡೆದುಕೊಳ್ಳುವ ಪ್ರಕ್ರಿಯೆಯಾಗಿ ನೋಡದೆ, ಮಾನವ ಜೀವಗಳ ರಕ್ಷಣೆಯ ಹೊಣೆಯಾಗಿ ಸರ್ಕಾರ, ಉದ್ಯಮಿಗಳು ಮತ್ತು ಸಾರ್ವಜನಿಕರು ಒಟ್ಟಾಗಿ ಸ್ವೀಕರಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...