ಭಾರತದಲ್ಲಿ ಕೊರೊನಾ ಸೋಂಕಿನ ವಿರುದ್ಧ ಬಳಸಲಾಗುತ್ತಿರುವ ಕೋವಿಶೀಲ್ಡ್ ಲಸಿಕೆ ತಯಾರಕ ಸಂಸ್ಥೆ, ಪುಣೆಯ ‘ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ’ದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಲಸಿಕೆ ಉತ್ಪಾದನಾ ಘಟಕಕ್ಕೆ ಯಾವುದೇ ತೊಂದರೆಯಾಗಿಲ್ಲ. ಆದರೆ ಕನಿಷ್ಟ 5 ಮಂದಿ ಸಾವನ್ನಪ್ಪಿದ್ದಾರೆ ಮತ್ತು 9 ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಪುಣೆ ಜಿಲ್ಲಾಧಿಕಾರಿ ರಾಜೇಶ್ ದೇಶ್ಮುಖ್ ಖಚಿತಪಡಿಸಿದ್ದಾರೆ.
ಭಾರತದ ಕೋವಿಡ್ -19 ಲಸಿಕೆ ಉತ್ಪಾದಕ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮೂಲಕ ಗುರುವಾರ ಹರಿದ ಬೆಂಕಿಯಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದಾರೆ. ಸಾವುಗಳನ್ನು ಪುಣೆ ಜಿಲ್ಲಾಧಿಕಾರಿ ರಾಜೇಶ್ ದೇಶ್ಮುಖ್ ಖಚಿತಪಡಿಸಿದ್ದಾರೆ. ಗುರುವಾರ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮಂಜಾರಿ ಆವರಣದಲ್ಲಿರುವ ಕಟ್ಟಡದಿಂದ ಒಂಬತ್ತು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕನಿಷ್ಠ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿವೆ ಎಂದು ಎಎನ್ಐ ವರದಿ ಮಾಡಿದೆ.
#UPDATE One team of NDRF (National Disaster Response Force) moved for Serum Institute of India in Pune where a fire broke out this afternoon. https://t.co/YNNn3Up4oK
— ANI (@ANI) January 21, 2021
ಮಹಾರಾಷ್ಟ್ರ ಮುಖ್ಯಮಂತ್ರಿ ಕಛೇರಿಯೂ ಇದನ್ನು ಸ್ಪಷ್ಟಪಡಿಸಿದ್ದು, “ಲಸಿಕೆಯ ಉತ್ಪಾದನಾ ಘಟಕವು ಸುರಕ್ಷತೆಯಿಂದಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪುಣೆ ಮುನ್ಸಿಪಲ್ ಕಮಿಷನರ್ ಅವರೊಂದಿಗೆ ಸಂಪರ್ಕದಲ್ಲಿದ್ದು, ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ” ಎಂದು ಹೇಳಿಕೆ ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಎಲ್ಲೆಲ್ಲಿ ಸಾಧ್ಯವೋ ಅಲ್ಲೇ ಪ್ರತಿಭಟಿಸಿ, ರೈತ ಚಳುವಳಿ ವಿಕೇಂದ್ರೀಕರಣಗೊಳ್ಳಲಿ- ಹರಿಪ್ರಸಾದ್ ಕೆ.ಆರ್
“ಸೆರಮ್ ಇನ್ಸ್ಟಿಟ್ಯೂಟ್ ಆವರಣದಲ್ಲಿರುವ SEZ-3 ಕಟ್ಟಡದ ನಾಲ್ಕನೇ ಮತ್ತು ಐದನೇ ಮಹಡಿಯಲ್ಲಿ ಮಧ್ಯಾಹ್ನ 2.45 ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹತ್ತಿಕೊಂಡಿದ್ದಕ್ಕೆ ಕಾರಣ ಏನೆಂದು ತಿಳಿದಿಲ್ಲ” ಎಂದು ಉಪ ಪೊಲೀಸ್ ಆಯುಕ್ತ ನಮ್ರತಾ ಪಾಟೀಲ್ ತಿಳಿಸಿದ್ದಾರೆ.
ಆಕ್ಸ್ಫರ್ಡ್ ವಿವಿಯ ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ತುರ್ತು ಪರಿಸ್ಥಿತಿಯಲ್ಲಿ ಬಳಸಬಹುದು ಎಂದು ಸರ್ಕಾರ ಅನುಮತಿ ನೀಡಿದೆ. ಇದರನ್ವಯ ಜನವರಿ 16 ರಿಂದ ದೇಶದಾದ್ಯಂತ ಲಸಿಕೆ ಅಭಿಯಾನ ಆರಂಭವಾಗಿದೆ.
ಇದನ್ನೂ ಓದಿ: ರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!