Homeಕರ್ನಾಟಕರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

ರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

- Advertisement -
- Advertisement -

ಕಳೆದ ಕೆಲವು ವರ್ಷಗಳಿಂದ ನನ್ನ ಭಾಗದ ಜಮೀನಿನಲ್ಲಿ ಸುಮಾರು ನೂರೈವತ್ತು ಹಣ್ಣಿನ ಸಸಿ ಮತ್ತು ನೂರು ತೆಂಗಿನ ಸಸಿ ನೆಟ್ಟು, ಡ್ರಿಪ್ ನೀರಾವರಿ ಸಹಾಯದಿಂದ ಬದುಕಿನ ಅಂತ್ಯ ಅರ್ಥಪೂರ್ಣವಾಗುವಂತೆ ಮಾಡತೊಡಗಿದೆ. ಕಳೆದ ಮುಂಗಾರಿನಲ್ಲಿ ರಾಗಿಯನ್ನು ಬಿತ್ತಿದೆ. ರಾಗಿ ಚೆನ್ನಾಗಿ ಬಂದು ಇನ್ನೇನು ಕುಯ್ಯುವ ಸಮಯಕ್ಕೆ ನಿರಂತರವಾಗಿ ಮಳೆ ಹಿಡಿದುಕೊಂಡಿತು. ಇದರಿಂದ ಜವುಗಿಗೆ ಸಿಕ್ಕ ರಾಗಿ ಪೈರು ತೆನೆ ಹೊರಲಾರದೆ ಹೊಲದಲ್ಲಿ ಮಗ್ಗ ಮಲಗಿಬಿಟ್ಟಿತು. ಹೊಲಕ್ಕೆ ಕಾಲಿಟ್ಟರೆ ಬೆರಳ ಸಂದಿ ಕೆಸರು ಮೇಲೆ ಬರುತ್ತಿತ್ತು. ಆದ್ದರಿಂದ ದಡದಲ್ಲಿ ನಿಂತು ಅಸಹಾಯಕನಾಗಿ ಕೈಗೆ ಬಂದ ತುತ್ತು ಮಣ್ಣಾಗುವುದನ್ನು ನೋಡುತ್ತ ನಿಲ್ಲುವಂತಾಯ್ತು. ಮಲಗಿದ್ದ ರಾಗಿ ಪೈರಿನಿಂದ ತೆನೆ ಕಟಾವು ಮಾಡಿಕೊಂಡ ಇಲಿಗಳು ಮತ್ತು ತ್ಲಾಡಗಳು ಹೊಲದ ತುಂಬ ಬಿಲ ತೋಡಿಕೊಂಡು ರಾಗಿ ಸಂಗ್ರಹಿಸತೊಡಗಿದವು. ಇಷ್ಟೊಂದು ಇಲಿ ಬಿಲಗಳನ್ನು ನಾನು ಈವರೆಗೆ ಕಂಡಿರಲಿಲ್ಲ. ಮೊದಲಾಗಿದ್ದರೆ ಮಣ್ಣು ವಡ್ಡರು ಮತ್ತು ಕಲ್ಲು ವಡ್ಡರ ಜೊತೆ ನಾವು ಸೇರಿಕೊಂಡು ಇಲಿ ಬಿಲ ಅಗೆದು ಈಚಲು ದೊಣ್ಣೆಯಿಂದ ಬೀಸಿ ಹೊಡೆದು ಕೊಲ್ಲುತ್ತಿದ್ದೆವು ಮತ್ತು ಅಲ್ಲೇ ಸುಟ್ಟುಕೊಂಡು ತಿನ್ನುತ್ತಿದ್ದೆವು, ಮನೆಗೆ ತಂದು ಸಾರು ಮಾಡುವುದೂ ಇತ್ತು. ಆದರೆ ಈಗ ಅದು ಸಾಧ್ಯವಾಗುತ್ತಿಲ್ಲ. ಇನ್ನ ರಾತ್ರಿವೇಳೆ ಬಂದು ಕಾದು ಕೂತು ಬೇಟೆಯಾಡುವ ಗೂಬೆಗಳಿಂದಲೂ ಇಲಿ ಸಂತತಿಯನ್ನು ನಿಯಂತ್ರಿಸಲಾಗಿಲ್ಲ. ಸಾಮಾನ್ಯವಾಗಿ ಹೊಲದ ಇಲಿಗಳು ದಾಸ್ತಾನು ಸಂಗ್ರಹಿಸುವುದು ರಾತ್ರಿವೇಳೆ. ಅವುಗಳ ಈ ಕೆಲಸಕ್ಕೆ ಅವೇ ಮಾಡಿಕೊಂಡ ರೋಡುಗಳು ಇವೆ. ಈ ಚಟುವಟಿಕೆ ಗಮನಿಸುತ್ತ ಕುಳಿತ ಗೂಬೆ ಸದ್ದಿಲ್ಲದೆ ಬಂದು ಇಲಿಗಳನ್ನು ಅಪಹರಿಸುತ್ತಿದ್ದವು. ಇಲಿಯ ಹತ್ತಿರ ಬಂದರೂ ಈ ಗೂಬೆಗಳ ರಕ್ಕೆ ಸದ್ದು ಮಾಡುವುದಿಲ್ಲವಂತೆ.

ಇದೆಲ್ಲಕ್ಕಿಂತ ಮುಖ್ಯವಾದ ಘಟನೆಯೊಂದನ್ನು ಇಲ್ಲಿ ದಾಖಲಿಸಬೇಕಿದೆ. ಅಂಗರು ಗಿಡ ಅಗೆದು ತೆಗೆಯುತ್ತಿರುವಾಗ ಹೆಬ್ಬಾವಿನ ಗಾತ್ರದ ಮಂಡಲದ ಹಾವು ನಮ್ಮ ಹುಡುಗನ ಗುದ್ದಲಿಗೆ ಸಿಕ್ಕಿತ್ತು. ಸೀಳಿಹೋದ ಅದರೆ ಹೊಟ್ಟೆಯಿಂದ ಮೂರ್ನಾಲ್ಕು ಮರಿಗಳು ದೂರಕ್ಕೆ ಸಿಡಿದವು. ಆಶ್ಚರ್ಯವೆಂದರೆ ಐದೇ ನಿಮಿಷಕ್ಕೆ ಎರಡು ಹದ್ದುಗಳು ಪ್ರತ್ಯಕ್ಷವಾಗಿ ವಿಮಾನ ಇಳಿದಂತೆ ಬಂದು ಮಂಡಲದ ಹಾವಿನ ಮರಿಗಳನ್ನ ಎಗರಿಸಿಕೊಂಡು ಹೋದವು. ನಾನು ದಂಗು ಬಡಿದು ನಿಂತೆ. ಮಂಡಲದ ಹಾವಿನ ಹತ್ಯೆ ಈ ಹದ್ದುಗಳಿಗೆ ತಿಳಿದಿದ್ದು ಹೇಗೆ? ಆಹಾರ ಸರಪಳಿಯ ಜಾಲ ಇನ್ನೆಷ್ಟು ಸೂಕ್ಷ್ಮವಾಗಿರಬೇಕೆಂದು ಆಶ್ಚರ್ಯವಾಯ್ತು. ಈ ಭೂಮಿ ಸಂಬಂಧ ಕೊಡುವ ನೆಮ್ಮದಿ ಅಸಾಧಾರಣವಾದದ್ದು.

ಭೂಮಿಯ ಒಡನಾಟದಲ್ಲಿದ್ದರೆ ಹೊರ ಜಗತ್ತಿನ ಯಾವುದೂ ಬೇಕಾಗುವುದಿಲ್ಲ. ಟಿವಿ ಪತ್ರಿಕೆಗಳೂ ಕೂಡ ನಮ್ಮನ್ನ ಸೆಳೆಯಲಾರವು. ಇಂತಹದ್ದೊಂದು ಜೀವನ ಕ್ರಮಕ್ಕೆ ಮತ್ತೆ ಒಗ್ಗಿಕೊಂಡು ಇರಬೇಕಾದರೆ ತೆಂಗು ಮತ್ತು ಹಣ್ಣಿನ ತೋಟ ನಳನಳಿಸುತ್ತಿತ್ತು. ಇದರೊಳಗೆ ಮಲಗಿದ್ದ ರಾಗಿ ಮುಂದೆ ಗೊಬ್ಬರವಾಗುವದರಲ್ಲಿ ಯಾವ ಸಂಶಯವೂ ಇಲ್ಲ ಎಂದುಸಮಾಧಾನದಿಂದಿರಬೇಕಾದರೆ, ಇದ್ದಕ್ಕಿದ್ದಂತೆ ಜಮೀನಿಗೆ ಬೆಂಕಿ ಬಿದ್ದಿತು. ಅದೆಷ್ಟು ವೇಗವಾಗಿ ಉರಿದು ಬೂದಿಯಾಯ್ತೆಂದರೆ, ನಾಗಮಂಗಲದಿಂದ ಅಗ್ನಿಶಾಮಕ ದಳದವರು ಬರುವಷ್ಟರಲ್ಲಿ ಎಲ್ಲವೂ ಸರ್ವನಾಶವಾಗಿತ್ತು. ಹೊಲದಲ್ಲಿ ಒಣಗಿ ಮಲಗಿದ್ದ ರಾಗಿಹುಲ್ಲಿಗೆ ಬಿದ್ದ ಬೆಂಕಿ, ಪೆಟ್ರೋಲ್ ಎರಚಿದೆಯೇನೋ ಎಂಬಂತೆ ವೇಗವಾಗಿ ಹಬ್ಬಿ ಓಡತೊಡಗಿತು. ಹತ್ತಾರು ಮಾರು ದೂರದಲ್ಲಿದ್ದ ಬದುಗಳು ಕೂಡ ಬೆಂಕಿ ರವೆಗೆ ದಿಗ್ಗನೆ ಹತ್ತಿಕೊಳ್ಳುತ್ತಿದ್ದವು. ಕೆಲವು ವಾರಗಳ ಹಿಂದೆ ನಿರಂತರವಾಗಿ ಹೊಡೆದಿದ್ದ ಮಳೆ ದೆಸೆಯಿಂದ, ಹುಲ್ಲು ಚೆನ್ನಾಗಿ ಬೆಳೆದು ಒಣಗಿಕೊಂಡಿತ್ತು.

ಅಗ್ನಿಶಾಮಕ ದಳದವರು ಯಾವ ಆತಂಕವೂ ಇಲ್ಲದೆ ಮಹಜರು ರಿಪೋರ್ಟು ತಯಾರಿಸಿ ಸಹಿ ಪಡೆದರು. ಸಮಾಧಾನದಿಂದ ಎಳನೀರು ಕುಡಿದು ಮುಂದಿನ ಕೃಷಿಯ ಬಗ್ಗೆ ಮುಫತ್ತಾದ ಸಲಹೆಕೊಟ್ಟು ಹೊರಟರು. ಆಗ ಅವರು ಮಾಡಿದ ಮಹಜರಿನ ಕಾಪಿ ಕೇಳಿದೆ. ಮಂಡ್ಯಕ್ಕೆ ಹೋಗಿ ಪಡೆದುಕೊಳ್ಳಿ, ಇನ್ನೆರಡು ದಿನ ಬಿಟ್ಟು ಅಲ್ಲಿಗೆ ಕಳಿಸುತ್ತೇವೆ ಎಂದರು. ಹೀಗಂದು ಅಗ್ನಿಶಾಮಕ ವಾಹನ ಹತ್ತುವ ಮುನ್ನ ಕೈಬಾಯಿ ನೋಡಿದರು, ನಾನು ನಮಸ್ಕಾರ ಹಾಕಿದೆ.

ಮೂರ್ನಾಲ್ಕು ದಿನ ಬಿಟ್ಟು ಮಂಡ್ಯದ ಅಗ್ನಿಶಾಮಕ ಕಚೇರಿಗೆ ಹೋದರೆ ಎಸ್‌ಬಿಐನಲ್ಲಿ ಇನ್ನೂರು ರೂಪಾಯಿ ತುಂಬಿ ಬನ್ನಿ, ಆ ನಂತರ ವರದಿ ಕೊಡುತ್ತೇವೆ ಎಂದರು. ಅಲ್ಲಿ ನನ್ನಂತೆ ಬೆಂಕಿಗೆ ಭೂಮಿಯೊದಗಿಸಿದ್ದ ಇನ್ನಿಬ್ಬರಿದ್ದರು. ಅವರಲ್ಲೊಬ್ಬ ಮೆದೆಗೆ ಬಿದ್ದ ಬೆಂಕಿ ಆರಿಸಲು ಹೋರಾಡಿ ಮುಖ ಕೈಕಾಲನ್ನ ಸುಟ್ಟುಕೊಂಡು ಬಂದಿದ್ದ; ನಡೆಯಲಾರದೆ ಕುಂಟುತ್ತಿದ್ದ. ಅವನನ್ನ ಹತ್ತಿಸಿಕೊಂಡು ಎಸ್‌ಬಿಐ ಶಾಖೆ ಹುಡುಕುತ್ತ ಹೊರಟೆ. ಆಟೊದವನು ನಮ್ಮ ಜೊತೆಯೇ ಹುಡುಕಲು ಸಹಕರಿಸಿ, ಕೊನೆಗೆ ಕಚೇರಿಯ ಬಳಿ ಬಿಟ್ಟು ಹೊರಟುಹೋದ. ಬಸ್‌ಸ್ಟಾಂಡಿನಿಂದ ಅಗ್ನಿಶಾಮಕದಳದ ಆಫೀಸಿಗೆ ಬಿಡಲು ನೂರಿಪ್ಪತ್ತುರೂ ಆಟೋ ಖರ್ಚಾಗಿತ್ತು. ಅಷ್ಟೇ ದುಡ್ಡು ಎಸ್‌ಬಿಐ ಹುಡುಕಲು ಕೊಟ್ಟೆ. ಈಗ ಚಲನ್ ತುಂಬಿದ ನಂತರ, ಅದರ ರಸೀದಿ ಹಿಡಿದು ಅಗ್ನಿಶಾಮಕ ಕಚೇರಿಗೆ ಹೋಗಬೇಕು, ಆನಂತರ ವರದಿ ತೆಗೆದುಕೊಂಡು ಊರಿಗೆ ಹೋಗಬೇಕು. ಇದರ ಬದಲು ನಾಗಮಂಗಲದಲ್ಲಿ ಅಥವಾ ಬೆಂಕಿಬಿದ್ದ ಜಾಗದಲ್ಲೇ ಮಹಜರು ವರದಿಯ ನಕಲನ್ನು ವಿತರಿಸಲು ಇವರಿಗ್ಯಾವ ತೊಂದರೆ ಎಂದು ಯೋಚಿಸುತ್ತ ಆಫೀಸ್ ಒಳಗೇ ನಿಂತೆ. “ಹೊರಗೋಗಿ ಕುತಗಳಿ ಸುಮಾರೊತ್ತಾಗತ್ತೆ” ಎಂದ ಸಿಬ್ಬಂದಿಗೆ ಗದರುವ ಸ್ಥಿತಿಯಲ್ಲಿರಲಿಲ್ಲ. ಆದರೂ ಸಂಯಮದಿಂದ, “ನಾನೂ ಕೂಡ ಡಿಸ್ಟ್ರಿಕ್ಟ್ ಆಫೀಸರಾಗಿದ್ದೆ, ಬಂದವರಿಗೆ ಸಮಾಧಾನವಾಗಿ ಕೂತಗಳಿ ಅಂತ ಹೇಳತಿದ್ದೆ” ಎಂದೆ. ನನ್ನ ಮಾತನ್ನೇನು ಆತ ಕಿವಿಯ ಮೇಲೆ ಹಾಕಿಕೊಳ್ಳದೆ, “ನಮ್ಮ ಈ ವರದಿಯಿಂದ ಪರಿಹಾರ ಸಿಗಲ್ಲ, ನಾವು ಹೋಗಿ ಬಂದಿರೊ ರಿಪೋರ್ಟು ಅಷ್ಟೇ” ಎಂದ. “ಇರ್ಲಿ ವಿಲೇಜ್ ಅಕೌಂಟೆಂಟರಿಗೆ ವರದಿ ಬೇಕಂತೆ ಕೊಡಿ” ಎಂದೆ. ತಾಲೂಕಿನಲ್ಲಿರುವ ಅಗ್ನಿಶಾಮಕದಳ ಬರುವಷ್ಟರಲ್ಲಿ ಎಲ್ಲ ಸುಟ್ಟುಹೋಗಿತ್ತು. ಆ ಬಗೆಗಿನ ವರದಿ ಪಡೆಯಲು ಜಿಲ್ಲೆಗೆ ಅಲೆದಾಡಬೇಕಾದಾಗ ರೈತನಾಗಿ ಬದುಕುವುದು ಎಷ್ಟು ಕಷ್ಟ ಎಂಬುದರ ಜೊತೆಗೆ, ರೈತನ ಬೆಂಗಾವಲಿಗೆ ನಿಂತುಬಿಟ್ಟಿದ್ದ ಪ್ರೊ ನಂಜುಂಡಸ್ವಾಮಿ, ಸುಂದರೇಶ್, ಶಾಮಣ್ಣ ಬಾಬಾಗೌಡ ಪಾಟೀಲರೆಲ್ಲಾ ನೆನಪಿಗೆ ಬಂದು, ಅಯ್ಯೋ ಈಗ ರೈತನ ಪರ ಯಾರೂ ಇಲ್ಲವಲ್ಲ ಅನ್ನಿಸಿತು!


ಇದನ್ನೂ ಓದಿ: ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...