Homeಕರ್ನಾಟಕರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

ರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

- Advertisement -
- Advertisement -

ಕಳೆದ ಕೆಲವು ವರ್ಷಗಳಿಂದ ನನ್ನ ಭಾಗದ ಜಮೀನಿನಲ್ಲಿ ಸುಮಾರು ನೂರೈವತ್ತು ಹಣ್ಣಿನ ಸಸಿ ಮತ್ತು ನೂರು ತೆಂಗಿನ ಸಸಿ ನೆಟ್ಟು, ಡ್ರಿಪ್ ನೀರಾವರಿ ಸಹಾಯದಿಂದ ಬದುಕಿನ ಅಂತ್ಯ ಅರ್ಥಪೂರ್ಣವಾಗುವಂತೆ ಮಾಡತೊಡಗಿದೆ. ಕಳೆದ ಮುಂಗಾರಿನಲ್ಲಿ ರಾಗಿಯನ್ನು ಬಿತ್ತಿದೆ. ರಾಗಿ ಚೆನ್ನಾಗಿ ಬಂದು ಇನ್ನೇನು ಕುಯ್ಯುವ ಸಮಯಕ್ಕೆ ನಿರಂತರವಾಗಿ ಮಳೆ ಹಿಡಿದುಕೊಂಡಿತು. ಇದರಿಂದ ಜವುಗಿಗೆ ಸಿಕ್ಕ ರಾಗಿ ಪೈರು ತೆನೆ ಹೊರಲಾರದೆ ಹೊಲದಲ್ಲಿ ಮಗ್ಗ ಮಲಗಿಬಿಟ್ಟಿತು. ಹೊಲಕ್ಕೆ ಕಾಲಿಟ್ಟರೆ ಬೆರಳ ಸಂದಿ ಕೆಸರು ಮೇಲೆ ಬರುತ್ತಿತ್ತು. ಆದ್ದರಿಂದ ದಡದಲ್ಲಿ ನಿಂತು ಅಸಹಾಯಕನಾಗಿ ಕೈಗೆ ಬಂದ ತುತ್ತು ಮಣ್ಣಾಗುವುದನ್ನು ನೋಡುತ್ತ ನಿಲ್ಲುವಂತಾಯ್ತು. ಮಲಗಿದ್ದ ರಾಗಿ ಪೈರಿನಿಂದ ತೆನೆ ಕಟಾವು ಮಾಡಿಕೊಂಡ ಇಲಿಗಳು ಮತ್ತು ತ್ಲಾಡಗಳು ಹೊಲದ ತುಂಬ ಬಿಲ ತೋಡಿಕೊಂಡು ರಾಗಿ ಸಂಗ್ರಹಿಸತೊಡಗಿದವು. ಇಷ್ಟೊಂದು ಇಲಿ ಬಿಲಗಳನ್ನು ನಾನು ಈವರೆಗೆ ಕಂಡಿರಲಿಲ್ಲ. ಮೊದಲಾಗಿದ್ದರೆ ಮಣ್ಣು ವಡ್ಡರು ಮತ್ತು ಕಲ್ಲು ವಡ್ಡರ ಜೊತೆ ನಾವು ಸೇರಿಕೊಂಡು ಇಲಿ ಬಿಲ ಅಗೆದು ಈಚಲು ದೊಣ್ಣೆಯಿಂದ ಬೀಸಿ ಹೊಡೆದು ಕೊಲ್ಲುತ್ತಿದ್ದೆವು ಮತ್ತು ಅಲ್ಲೇ ಸುಟ್ಟುಕೊಂಡು ತಿನ್ನುತ್ತಿದ್ದೆವು, ಮನೆಗೆ ತಂದು ಸಾರು ಮಾಡುವುದೂ ಇತ್ತು. ಆದರೆ ಈಗ ಅದು ಸಾಧ್ಯವಾಗುತ್ತಿಲ್ಲ. ಇನ್ನ ರಾತ್ರಿವೇಳೆ ಬಂದು ಕಾದು ಕೂತು ಬೇಟೆಯಾಡುವ ಗೂಬೆಗಳಿಂದಲೂ ಇಲಿ ಸಂತತಿಯನ್ನು ನಿಯಂತ್ರಿಸಲಾಗಿಲ್ಲ. ಸಾಮಾನ್ಯವಾಗಿ ಹೊಲದ ಇಲಿಗಳು ದಾಸ್ತಾನು ಸಂಗ್ರಹಿಸುವುದು ರಾತ್ರಿವೇಳೆ. ಅವುಗಳ ಈ ಕೆಲಸಕ್ಕೆ ಅವೇ ಮಾಡಿಕೊಂಡ ರೋಡುಗಳು ಇವೆ. ಈ ಚಟುವಟಿಕೆ ಗಮನಿಸುತ್ತ ಕುಳಿತ ಗೂಬೆ ಸದ್ದಿಲ್ಲದೆ ಬಂದು ಇಲಿಗಳನ್ನು ಅಪಹರಿಸುತ್ತಿದ್ದವು. ಇಲಿಯ ಹತ್ತಿರ ಬಂದರೂ ಈ ಗೂಬೆಗಳ ರಕ್ಕೆ ಸದ್ದು ಮಾಡುವುದಿಲ್ಲವಂತೆ.

ಇದೆಲ್ಲಕ್ಕಿಂತ ಮುಖ್ಯವಾದ ಘಟನೆಯೊಂದನ್ನು ಇಲ್ಲಿ ದಾಖಲಿಸಬೇಕಿದೆ. ಅಂಗರು ಗಿಡ ಅಗೆದು ತೆಗೆಯುತ್ತಿರುವಾಗ ಹೆಬ್ಬಾವಿನ ಗಾತ್ರದ ಮಂಡಲದ ಹಾವು ನಮ್ಮ ಹುಡುಗನ ಗುದ್ದಲಿಗೆ ಸಿಕ್ಕಿತ್ತು. ಸೀಳಿಹೋದ ಅದರೆ ಹೊಟ್ಟೆಯಿಂದ ಮೂರ್ನಾಲ್ಕು ಮರಿಗಳು ದೂರಕ್ಕೆ ಸಿಡಿದವು. ಆಶ್ಚರ್ಯವೆಂದರೆ ಐದೇ ನಿಮಿಷಕ್ಕೆ ಎರಡು ಹದ್ದುಗಳು ಪ್ರತ್ಯಕ್ಷವಾಗಿ ವಿಮಾನ ಇಳಿದಂತೆ ಬಂದು ಮಂಡಲದ ಹಾವಿನ ಮರಿಗಳನ್ನ ಎಗರಿಸಿಕೊಂಡು ಹೋದವು. ನಾನು ದಂಗು ಬಡಿದು ನಿಂತೆ. ಮಂಡಲದ ಹಾವಿನ ಹತ್ಯೆ ಈ ಹದ್ದುಗಳಿಗೆ ತಿಳಿದಿದ್ದು ಹೇಗೆ? ಆಹಾರ ಸರಪಳಿಯ ಜಾಲ ಇನ್ನೆಷ್ಟು ಸೂಕ್ಷ್ಮವಾಗಿರಬೇಕೆಂದು ಆಶ್ಚರ್ಯವಾಯ್ತು. ಈ ಭೂಮಿ ಸಂಬಂಧ ಕೊಡುವ ನೆಮ್ಮದಿ ಅಸಾಧಾರಣವಾದದ್ದು.

ಭೂಮಿಯ ಒಡನಾಟದಲ್ಲಿದ್ದರೆ ಹೊರ ಜಗತ್ತಿನ ಯಾವುದೂ ಬೇಕಾಗುವುದಿಲ್ಲ. ಟಿವಿ ಪತ್ರಿಕೆಗಳೂ ಕೂಡ ನಮ್ಮನ್ನ ಸೆಳೆಯಲಾರವು. ಇಂತಹದ್ದೊಂದು ಜೀವನ ಕ್ರಮಕ್ಕೆ ಮತ್ತೆ ಒಗ್ಗಿಕೊಂಡು ಇರಬೇಕಾದರೆ ತೆಂಗು ಮತ್ತು ಹಣ್ಣಿನ ತೋಟ ನಳನಳಿಸುತ್ತಿತ್ತು. ಇದರೊಳಗೆ ಮಲಗಿದ್ದ ರಾಗಿ ಮುಂದೆ ಗೊಬ್ಬರವಾಗುವದರಲ್ಲಿ ಯಾವ ಸಂಶಯವೂ ಇಲ್ಲ ಎಂದುಸಮಾಧಾನದಿಂದಿರಬೇಕಾದರೆ, ಇದ್ದಕ್ಕಿದ್ದಂತೆ ಜಮೀನಿಗೆ ಬೆಂಕಿ ಬಿದ್ದಿತು. ಅದೆಷ್ಟು ವೇಗವಾಗಿ ಉರಿದು ಬೂದಿಯಾಯ್ತೆಂದರೆ, ನಾಗಮಂಗಲದಿಂದ ಅಗ್ನಿಶಾಮಕ ದಳದವರು ಬರುವಷ್ಟರಲ್ಲಿ ಎಲ್ಲವೂ ಸರ್ವನಾಶವಾಗಿತ್ತು. ಹೊಲದಲ್ಲಿ ಒಣಗಿ ಮಲಗಿದ್ದ ರಾಗಿಹುಲ್ಲಿಗೆ ಬಿದ್ದ ಬೆಂಕಿ, ಪೆಟ್ರೋಲ್ ಎರಚಿದೆಯೇನೋ ಎಂಬಂತೆ ವೇಗವಾಗಿ ಹಬ್ಬಿ ಓಡತೊಡಗಿತು. ಹತ್ತಾರು ಮಾರು ದೂರದಲ್ಲಿದ್ದ ಬದುಗಳು ಕೂಡ ಬೆಂಕಿ ರವೆಗೆ ದಿಗ್ಗನೆ ಹತ್ತಿಕೊಳ್ಳುತ್ತಿದ್ದವು. ಕೆಲವು ವಾರಗಳ ಹಿಂದೆ ನಿರಂತರವಾಗಿ ಹೊಡೆದಿದ್ದ ಮಳೆ ದೆಸೆಯಿಂದ, ಹುಲ್ಲು ಚೆನ್ನಾಗಿ ಬೆಳೆದು ಒಣಗಿಕೊಂಡಿತ್ತು.

ಅಗ್ನಿಶಾಮಕ ದಳದವರು ಯಾವ ಆತಂಕವೂ ಇಲ್ಲದೆ ಮಹಜರು ರಿಪೋರ್ಟು ತಯಾರಿಸಿ ಸಹಿ ಪಡೆದರು. ಸಮಾಧಾನದಿಂದ ಎಳನೀರು ಕುಡಿದು ಮುಂದಿನ ಕೃಷಿಯ ಬಗ್ಗೆ ಮುಫತ್ತಾದ ಸಲಹೆಕೊಟ್ಟು ಹೊರಟರು. ಆಗ ಅವರು ಮಾಡಿದ ಮಹಜರಿನ ಕಾಪಿ ಕೇಳಿದೆ. ಮಂಡ್ಯಕ್ಕೆ ಹೋಗಿ ಪಡೆದುಕೊಳ್ಳಿ, ಇನ್ನೆರಡು ದಿನ ಬಿಟ್ಟು ಅಲ್ಲಿಗೆ ಕಳಿಸುತ್ತೇವೆ ಎಂದರು. ಹೀಗಂದು ಅಗ್ನಿಶಾಮಕ ವಾಹನ ಹತ್ತುವ ಮುನ್ನ ಕೈಬಾಯಿ ನೋಡಿದರು, ನಾನು ನಮಸ್ಕಾರ ಹಾಕಿದೆ.

ಮೂರ್ನಾಲ್ಕು ದಿನ ಬಿಟ್ಟು ಮಂಡ್ಯದ ಅಗ್ನಿಶಾಮಕ ಕಚೇರಿಗೆ ಹೋದರೆ ಎಸ್‌ಬಿಐನಲ್ಲಿ ಇನ್ನೂರು ರೂಪಾಯಿ ತುಂಬಿ ಬನ್ನಿ, ಆ ನಂತರ ವರದಿ ಕೊಡುತ್ತೇವೆ ಎಂದರು. ಅಲ್ಲಿ ನನ್ನಂತೆ ಬೆಂಕಿಗೆ ಭೂಮಿಯೊದಗಿಸಿದ್ದ ಇನ್ನಿಬ್ಬರಿದ್ದರು. ಅವರಲ್ಲೊಬ್ಬ ಮೆದೆಗೆ ಬಿದ್ದ ಬೆಂಕಿ ಆರಿಸಲು ಹೋರಾಡಿ ಮುಖ ಕೈಕಾಲನ್ನ ಸುಟ್ಟುಕೊಂಡು ಬಂದಿದ್ದ; ನಡೆಯಲಾರದೆ ಕುಂಟುತ್ತಿದ್ದ. ಅವನನ್ನ ಹತ್ತಿಸಿಕೊಂಡು ಎಸ್‌ಬಿಐ ಶಾಖೆ ಹುಡುಕುತ್ತ ಹೊರಟೆ. ಆಟೊದವನು ನಮ್ಮ ಜೊತೆಯೇ ಹುಡುಕಲು ಸಹಕರಿಸಿ, ಕೊನೆಗೆ ಕಚೇರಿಯ ಬಳಿ ಬಿಟ್ಟು ಹೊರಟುಹೋದ. ಬಸ್‌ಸ್ಟಾಂಡಿನಿಂದ ಅಗ್ನಿಶಾಮಕದಳದ ಆಫೀಸಿಗೆ ಬಿಡಲು ನೂರಿಪ್ಪತ್ತುರೂ ಆಟೋ ಖರ್ಚಾಗಿತ್ತು. ಅಷ್ಟೇ ದುಡ್ಡು ಎಸ್‌ಬಿಐ ಹುಡುಕಲು ಕೊಟ್ಟೆ. ಈಗ ಚಲನ್ ತುಂಬಿದ ನಂತರ, ಅದರ ರಸೀದಿ ಹಿಡಿದು ಅಗ್ನಿಶಾಮಕ ಕಚೇರಿಗೆ ಹೋಗಬೇಕು, ಆನಂತರ ವರದಿ ತೆಗೆದುಕೊಂಡು ಊರಿಗೆ ಹೋಗಬೇಕು. ಇದರ ಬದಲು ನಾಗಮಂಗಲದಲ್ಲಿ ಅಥವಾ ಬೆಂಕಿಬಿದ್ದ ಜಾಗದಲ್ಲೇ ಮಹಜರು ವರದಿಯ ನಕಲನ್ನು ವಿತರಿಸಲು ಇವರಿಗ್ಯಾವ ತೊಂದರೆ ಎಂದು ಯೋಚಿಸುತ್ತ ಆಫೀಸ್ ಒಳಗೇ ನಿಂತೆ. “ಹೊರಗೋಗಿ ಕುತಗಳಿ ಸುಮಾರೊತ್ತಾಗತ್ತೆ” ಎಂದ ಸಿಬ್ಬಂದಿಗೆ ಗದರುವ ಸ್ಥಿತಿಯಲ್ಲಿರಲಿಲ್ಲ. ಆದರೂ ಸಂಯಮದಿಂದ, “ನಾನೂ ಕೂಡ ಡಿಸ್ಟ್ರಿಕ್ಟ್ ಆಫೀಸರಾಗಿದ್ದೆ, ಬಂದವರಿಗೆ ಸಮಾಧಾನವಾಗಿ ಕೂತಗಳಿ ಅಂತ ಹೇಳತಿದ್ದೆ” ಎಂದೆ. ನನ್ನ ಮಾತನ್ನೇನು ಆತ ಕಿವಿಯ ಮೇಲೆ ಹಾಕಿಕೊಳ್ಳದೆ, “ನಮ್ಮ ಈ ವರದಿಯಿಂದ ಪರಿಹಾರ ಸಿಗಲ್ಲ, ನಾವು ಹೋಗಿ ಬಂದಿರೊ ರಿಪೋರ್ಟು ಅಷ್ಟೇ” ಎಂದ. “ಇರ್ಲಿ ವಿಲೇಜ್ ಅಕೌಂಟೆಂಟರಿಗೆ ವರದಿ ಬೇಕಂತೆ ಕೊಡಿ” ಎಂದೆ. ತಾಲೂಕಿನಲ್ಲಿರುವ ಅಗ್ನಿಶಾಮಕದಳ ಬರುವಷ್ಟರಲ್ಲಿ ಎಲ್ಲ ಸುಟ್ಟುಹೋಗಿತ್ತು. ಆ ಬಗೆಗಿನ ವರದಿ ಪಡೆಯಲು ಜಿಲ್ಲೆಗೆ ಅಲೆದಾಡಬೇಕಾದಾಗ ರೈತನಾಗಿ ಬದುಕುವುದು ಎಷ್ಟು ಕಷ್ಟ ಎಂಬುದರ ಜೊತೆಗೆ, ರೈತನ ಬೆಂಗಾವಲಿಗೆ ನಿಂತುಬಿಟ್ಟಿದ್ದ ಪ್ರೊ ನಂಜುಂಡಸ್ವಾಮಿ, ಸುಂದರೇಶ್, ಶಾಮಣ್ಣ ಬಾಬಾಗೌಡ ಪಾಟೀಲರೆಲ್ಲಾ ನೆನಪಿಗೆ ಬಂದು, ಅಯ್ಯೋ ಈಗ ರೈತನ ಪರ ಯಾರೂ ಇಲ್ಲವಲ್ಲ ಅನ್ನಿಸಿತು!


ಇದನ್ನೂ ಓದಿ: ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...