Homeಕರ್ನಾಟಕರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

ರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

- Advertisement -
- Advertisement -

ಕಳೆದ ಕೆಲವು ವರ್ಷಗಳಿಂದ ನನ್ನ ಭಾಗದ ಜಮೀನಿನಲ್ಲಿ ಸುಮಾರು ನೂರೈವತ್ತು ಹಣ್ಣಿನ ಸಸಿ ಮತ್ತು ನೂರು ತೆಂಗಿನ ಸಸಿ ನೆಟ್ಟು, ಡ್ರಿಪ್ ನೀರಾವರಿ ಸಹಾಯದಿಂದ ಬದುಕಿನ ಅಂತ್ಯ ಅರ್ಥಪೂರ್ಣವಾಗುವಂತೆ ಮಾಡತೊಡಗಿದೆ. ಕಳೆದ ಮುಂಗಾರಿನಲ್ಲಿ ರಾಗಿಯನ್ನು ಬಿತ್ತಿದೆ. ರಾಗಿ ಚೆನ್ನಾಗಿ ಬಂದು ಇನ್ನೇನು ಕುಯ್ಯುವ ಸಮಯಕ್ಕೆ ನಿರಂತರವಾಗಿ ಮಳೆ ಹಿಡಿದುಕೊಂಡಿತು. ಇದರಿಂದ ಜವುಗಿಗೆ ಸಿಕ್ಕ ರಾಗಿ ಪೈರು ತೆನೆ ಹೊರಲಾರದೆ ಹೊಲದಲ್ಲಿ ಮಗ್ಗ ಮಲಗಿಬಿಟ್ಟಿತು. ಹೊಲಕ್ಕೆ ಕಾಲಿಟ್ಟರೆ ಬೆರಳ ಸಂದಿ ಕೆಸರು ಮೇಲೆ ಬರುತ್ತಿತ್ತು. ಆದ್ದರಿಂದ ದಡದಲ್ಲಿ ನಿಂತು ಅಸಹಾಯಕನಾಗಿ ಕೈಗೆ ಬಂದ ತುತ್ತು ಮಣ್ಣಾಗುವುದನ್ನು ನೋಡುತ್ತ ನಿಲ್ಲುವಂತಾಯ್ತು. ಮಲಗಿದ್ದ ರಾಗಿ ಪೈರಿನಿಂದ ತೆನೆ ಕಟಾವು ಮಾಡಿಕೊಂಡ ಇಲಿಗಳು ಮತ್ತು ತ್ಲಾಡಗಳು ಹೊಲದ ತುಂಬ ಬಿಲ ತೋಡಿಕೊಂಡು ರಾಗಿ ಸಂಗ್ರಹಿಸತೊಡಗಿದವು. ಇಷ್ಟೊಂದು ಇಲಿ ಬಿಲಗಳನ್ನು ನಾನು ಈವರೆಗೆ ಕಂಡಿರಲಿಲ್ಲ. ಮೊದಲಾಗಿದ್ದರೆ ಮಣ್ಣು ವಡ್ಡರು ಮತ್ತು ಕಲ್ಲು ವಡ್ಡರ ಜೊತೆ ನಾವು ಸೇರಿಕೊಂಡು ಇಲಿ ಬಿಲ ಅಗೆದು ಈಚಲು ದೊಣ್ಣೆಯಿಂದ ಬೀಸಿ ಹೊಡೆದು ಕೊಲ್ಲುತ್ತಿದ್ದೆವು ಮತ್ತು ಅಲ್ಲೇ ಸುಟ್ಟುಕೊಂಡು ತಿನ್ನುತ್ತಿದ್ದೆವು, ಮನೆಗೆ ತಂದು ಸಾರು ಮಾಡುವುದೂ ಇತ್ತು. ಆದರೆ ಈಗ ಅದು ಸಾಧ್ಯವಾಗುತ್ತಿಲ್ಲ. ಇನ್ನ ರಾತ್ರಿವೇಳೆ ಬಂದು ಕಾದು ಕೂತು ಬೇಟೆಯಾಡುವ ಗೂಬೆಗಳಿಂದಲೂ ಇಲಿ ಸಂತತಿಯನ್ನು ನಿಯಂತ್ರಿಸಲಾಗಿಲ್ಲ. ಸಾಮಾನ್ಯವಾಗಿ ಹೊಲದ ಇಲಿಗಳು ದಾಸ್ತಾನು ಸಂಗ್ರಹಿಸುವುದು ರಾತ್ರಿವೇಳೆ. ಅವುಗಳ ಈ ಕೆಲಸಕ್ಕೆ ಅವೇ ಮಾಡಿಕೊಂಡ ರೋಡುಗಳು ಇವೆ. ಈ ಚಟುವಟಿಕೆ ಗಮನಿಸುತ್ತ ಕುಳಿತ ಗೂಬೆ ಸದ್ದಿಲ್ಲದೆ ಬಂದು ಇಲಿಗಳನ್ನು ಅಪಹರಿಸುತ್ತಿದ್ದವು. ಇಲಿಯ ಹತ್ತಿರ ಬಂದರೂ ಈ ಗೂಬೆಗಳ ರಕ್ಕೆ ಸದ್ದು ಮಾಡುವುದಿಲ್ಲವಂತೆ.

ಇದೆಲ್ಲಕ್ಕಿಂತ ಮುಖ್ಯವಾದ ಘಟನೆಯೊಂದನ್ನು ಇಲ್ಲಿ ದಾಖಲಿಸಬೇಕಿದೆ. ಅಂಗರು ಗಿಡ ಅಗೆದು ತೆಗೆಯುತ್ತಿರುವಾಗ ಹೆಬ್ಬಾವಿನ ಗಾತ್ರದ ಮಂಡಲದ ಹಾವು ನಮ್ಮ ಹುಡುಗನ ಗುದ್ದಲಿಗೆ ಸಿಕ್ಕಿತ್ತು. ಸೀಳಿಹೋದ ಅದರೆ ಹೊಟ್ಟೆಯಿಂದ ಮೂರ್ನಾಲ್ಕು ಮರಿಗಳು ದೂರಕ್ಕೆ ಸಿಡಿದವು. ಆಶ್ಚರ್ಯವೆಂದರೆ ಐದೇ ನಿಮಿಷಕ್ಕೆ ಎರಡು ಹದ್ದುಗಳು ಪ್ರತ್ಯಕ್ಷವಾಗಿ ವಿಮಾನ ಇಳಿದಂತೆ ಬಂದು ಮಂಡಲದ ಹಾವಿನ ಮರಿಗಳನ್ನ ಎಗರಿಸಿಕೊಂಡು ಹೋದವು. ನಾನು ದಂಗು ಬಡಿದು ನಿಂತೆ. ಮಂಡಲದ ಹಾವಿನ ಹತ್ಯೆ ಈ ಹದ್ದುಗಳಿಗೆ ತಿಳಿದಿದ್ದು ಹೇಗೆ? ಆಹಾರ ಸರಪಳಿಯ ಜಾಲ ಇನ್ನೆಷ್ಟು ಸೂಕ್ಷ್ಮವಾಗಿರಬೇಕೆಂದು ಆಶ್ಚರ್ಯವಾಯ್ತು. ಈ ಭೂಮಿ ಸಂಬಂಧ ಕೊಡುವ ನೆಮ್ಮದಿ ಅಸಾಧಾರಣವಾದದ್ದು.

ಭೂಮಿಯ ಒಡನಾಟದಲ್ಲಿದ್ದರೆ ಹೊರ ಜಗತ್ತಿನ ಯಾವುದೂ ಬೇಕಾಗುವುದಿಲ್ಲ. ಟಿವಿ ಪತ್ರಿಕೆಗಳೂ ಕೂಡ ನಮ್ಮನ್ನ ಸೆಳೆಯಲಾರವು. ಇಂತಹದ್ದೊಂದು ಜೀವನ ಕ್ರಮಕ್ಕೆ ಮತ್ತೆ ಒಗ್ಗಿಕೊಂಡು ಇರಬೇಕಾದರೆ ತೆಂಗು ಮತ್ತು ಹಣ್ಣಿನ ತೋಟ ನಳನಳಿಸುತ್ತಿತ್ತು. ಇದರೊಳಗೆ ಮಲಗಿದ್ದ ರಾಗಿ ಮುಂದೆ ಗೊಬ್ಬರವಾಗುವದರಲ್ಲಿ ಯಾವ ಸಂಶಯವೂ ಇಲ್ಲ ಎಂದುಸಮಾಧಾನದಿಂದಿರಬೇಕಾದರೆ, ಇದ್ದಕ್ಕಿದ್ದಂತೆ ಜಮೀನಿಗೆ ಬೆಂಕಿ ಬಿದ್ದಿತು. ಅದೆಷ್ಟು ವೇಗವಾಗಿ ಉರಿದು ಬೂದಿಯಾಯ್ತೆಂದರೆ, ನಾಗಮಂಗಲದಿಂದ ಅಗ್ನಿಶಾಮಕ ದಳದವರು ಬರುವಷ್ಟರಲ್ಲಿ ಎಲ್ಲವೂ ಸರ್ವನಾಶವಾಗಿತ್ತು. ಹೊಲದಲ್ಲಿ ಒಣಗಿ ಮಲಗಿದ್ದ ರಾಗಿಹುಲ್ಲಿಗೆ ಬಿದ್ದ ಬೆಂಕಿ, ಪೆಟ್ರೋಲ್ ಎರಚಿದೆಯೇನೋ ಎಂಬಂತೆ ವೇಗವಾಗಿ ಹಬ್ಬಿ ಓಡತೊಡಗಿತು. ಹತ್ತಾರು ಮಾರು ದೂರದಲ್ಲಿದ್ದ ಬದುಗಳು ಕೂಡ ಬೆಂಕಿ ರವೆಗೆ ದಿಗ್ಗನೆ ಹತ್ತಿಕೊಳ್ಳುತ್ತಿದ್ದವು. ಕೆಲವು ವಾರಗಳ ಹಿಂದೆ ನಿರಂತರವಾಗಿ ಹೊಡೆದಿದ್ದ ಮಳೆ ದೆಸೆಯಿಂದ, ಹುಲ್ಲು ಚೆನ್ನಾಗಿ ಬೆಳೆದು ಒಣಗಿಕೊಂಡಿತ್ತು.

ಅಗ್ನಿಶಾಮಕ ದಳದವರು ಯಾವ ಆತಂಕವೂ ಇಲ್ಲದೆ ಮಹಜರು ರಿಪೋರ್ಟು ತಯಾರಿಸಿ ಸಹಿ ಪಡೆದರು. ಸಮಾಧಾನದಿಂದ ಎಳನೀರು ಕುಡಿದು ಮುಂದಿನ ಕೃಷಿಯ ಬಗ್ಗೆ ಮುಫತ್ತಾದ ಸಲಹೆಕೊಟ್ಟು ಹೊರಟರು. ಆಗ ಅವರು ಮಾಡಿದ ಮಹಜರಿನ ಕಾಪಿ ಕೇಳಿದೆ. ಮಂಡ್ಯಕ್ಕೆ ಹೋಗಿ ಪಡೆದುಕೊಳ್ಳಿ, ಇನ್ನೆರಡು ದಿನ ಬಿಟ್ಟು ಅಲ್ಲಿಗೆ ಕಳಿಸುತ್ತೇವೆ ಎಂದರು. ಹೀಗಂದು ಅಗ್ನಿಶಾಮಕ ವಾಹನ ಹತ್ತುವ ಮುನ್ನ ಕೈಬಾಯಿ ನೋಡಿದರು, ನಾನು ನಮಸ್ಕಾರ ಹಾಕಿದೆ.

ಮೂರ್ನಾಲ್ಕು ದಿನ ಬಿಟ್ಟು ಮಂಡ್ಯದ ಅಗ್ನಿಶಾಮಕ ಕಚೇರಿಗೆ ಹೋದರೆ ಎಸ್‌ಬಿಐನಲ್ಲಿ ಇನ್ನೂರು ರೂಪಾಯಿ ತುಂಬಿ ಬನ್ನಿ, ಆ ನಂತರ ವರದಿ ಕೊಡುತ್ತೇವೆ ಎಂದರು. ಅಲ್ಲಿ ನನ್ನಂತೆ ಬೆಂಕಿಗೆ ಭೂಮಿಯೊದಗಿಸಿದ್ದ ಇನ್ನಿಬ್ಬರಿದ್ದರು. ಅವರಲ್ಲೊಬ್ಬ ಮೆದೆಗೆ ಬಿದ್ದ ಬೆಂಕಿ ಆರಿಸಲು ಹೋರಾಡಿ ಮುಖ ಕೈಕಾಲನ್ನ ಸುಟ್ಟುಕೊಂಡು ಬಂದಿದ್ದ; ನಡೆಯಲಾರದೆ ಕುಂಟುತ್ತಿದ್ದ. ಅವನನ್ನ ಹತ್ತಿಸಿಕೊಂಡು ಎಸ್‌ಬಿಐ ಶಾಖೆ ಹುಡುಕುತ್ತ ಹೊರಟೆ. ಆಟೊದವನು ನಮ್ಮ ಜೊತೆಯೇ ಹುಡುಕಲು ಸಹಕರಿಸಿ, ಕೊನೆಗೆ ಕಚೇರಿಯ ಬಳಿ ಬಿಟ್ಟು ಹೊರಟುಹೋದ. ಬಸ್‌ಸ್ಟಾಂಡಿನಿಂದ ಅಗ್ನಿಶಾಮಕದಳದ ಆಫೀಸಿಗೆ ಬಿಡಲು ನೂರಿಪ್ಪತ್ತುರೂ ಆಟೋ ಖರ್ಚಾಗಿತ್ತು. ಅಷ್ಟೇ ದುಡ್ಡು ಎಸ್‌ಬಿಐ ಹುಡುಕಲು ಕೊಟ್ಟೆ. ಈಗ ಚಲನ್ ತುಂಬಿದ ನಂತರ, ಅದರ ರಸೀದಿ ಹಿಡಿದು ಅಗ್ನಿಶಾಮಕ ಕಚೇರಿಗೆ ಹೋಗಬೇಕು, ಆನಂತರ ವರದಿ ತೆಗೆದುಕೊಂಡು ಊರಿಗೆ ಹೋಗಬೇಕು. ಇದರ ಬದಲು ನಾಗಮಂಗಲದಲ್ಲಿ ಅಥವಾ ಬೆಂಕಿಬಿದ್ದ ಜಾಗದಲ್ಲೇ ಮಹಜರು ವರದಿಯ ನಕಲನ್ನು ವಿತರಿಸಲು ಇವರಿಗ್ಯಾವ ತೊಂದರೆ ಎಂದು ಯೋಚಿಸುತ್ತ ಆಫೀಸ್ ಒಳಗೇ ನಿಂತೆ. “ಹೊರಗೋಗಿ ಕುತಗಳಿ ಸುಮಾರೊತ್ತಾಗತ್ತೆ” ಎಂದ ಸಿಬ್ಬಂದಿಗೆ ಗದರುವ ಸ್ಥಿತಿಯಲ್ಲಿರಲಿಲ್ಲ. ಆದರೂ ಸಂಯಮದಿಂದ, “ನಾನೂ ಕೂಡ ಡಿಸ್ಟ್ರಿಕ್ಟ್ ಆಫೀಸರಾಗಿದ್ದೆ, ಬಂದವರಿಗೆ ಸಮಾಧಾನವಾಗಿ ಕೂತಗಳಿ ಅಂತ ಹೇಳತಿದ್ದೆ” ಎಂದೆ. ನನ್ನ ಮಾತನ್ನೇನು ಆತ ಕಿವಿಯ ಮೇಲೆ ಹಾಕಿಕೊಳ್ಳದೆ, “ನಮ್ಮ ಈ ವರದಿಯಿಂದ ಪರಿಹಾರ ಸಿಗಲ್ಲ, ನಾವು ಹೋಗಿ ಬಂದಿರೊ ರಿಪೋರ್ಟು ಅಷ್ಟೇ” ಎಂದ. “ಇರ್ಲಿ ವಿಲೇಜ್ ಅಕೌಂಟೆಂಟರಿಗೆ ವರದಿ ಬೇಕಂತೆ ಕೊಡಿ” ಎಂದೆ. ತಾಲೂಕಿನಲ್ಲಿರುವ ಅಗ್ನಿಶಾಮಕದಳ ಬರುವಷ್ಟರಲ್ಲಿ ಎಲ್ಲ ಸುಟ್ಟುಹೋಗಿತ್ತು. ಆ ಬಗೆಗಿನ ವರದಿ ಪಡೆಯಲು ಜಿಲ್ಲೆಗೆ ಅಲೆದಾಡಬೇಕಾದಾಗ ರೈತನಾಗಿ ಬದುಕುವುದು ಎಷ್ಟು ಕಷ್ಟ ಎಂಬುದರ ಜೊತೆಗೆ, ರೈತನ ಬೆಂಗಾವಲಿಗೆ ನಿಂತುಬಿಟ್ಟಿದ್ದ ಪ್ರೊ ನಂಜುಂಡಸ್ವಾಮಿ, ಸುಂದರೇಶ್, ಶಾಮಣ್ಣ ಬಾಬಾಗೌಡ ಪಾಟೀಲರೆಲ್ಲಾ ನೆನಪಿಗೆ ಬಂದು, ಅಯ್ಯೋ ಈಗ ರೈತನ ಪರ ಯಾರೂ ಇಲ್ಲವಲ್ಲ ಅನ್ನಿಸಿತು!


ಇದನ್ನೂ ಓದಿ: ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...