Homeಕರ್ನಾಟಕರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

ರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

- Advertisement -
- Advertisement -

ಕಳೆದ ಕೆಲವು ವರ್ಷಗಳಿಂದ ನನ್ನ ಭಾಗದ ಜಮೀನಿನಲ್ಲಿ ಸುಮಾರು ನೂರೈವತ್ತು ಹಣ್ಣಿನ ಸಸಿ ಮತ್ತು ನೂರು ತೆಂಗಿನ ಸಸಿ ನೆಟ್ಟು, ಡ್ರಿಪ್ ನೀರಾವರಿ ಸಹಾಯದಿಂದ ಬದುಕಿನ ಅಂತ್ಯ ಅರ್ಥಪೂರ್ಣವಾಗುವಂತೆ ಮಾಡತೊಡಗಿದೆ. ಕಳೆದ ಮುಂಗಾರಿನಲ್ಲಿ ರಾಗಿಯನ್ನು ಬಿತ್ತಿದೆ. ರಾಗಿ ಚೆನ್ನಾಗಿ ಬಂದು ಇನ್ನೇನು ಕುಯ್ಯುವ ಸಮಯಕ್ಕೆ ನಿರಂತರವಾಗಿ ಮಳೆ ಹಿಡಿದುಕೊಂಡಿತು. ಇದರಿಂದ ಜವುಗಿಗೆ ಸಿಕ್ಕ ರಾಗಿ ಪೈರು ತೆನೆ ಹೊರಲಾರದೆ ಹೊಲದಲ್ಲಿ ಮಗ್ಗ ಮಲಗಿಬಿಟ್ಟಿತು. ಹೊಲಕ್ಕೆ ಕಾಲಿಟ್ಟರೆ ಬೆರಳ ಸಂದಿ ಕೆಸರು ಮೇಲೆ ಬರುತ್ತಿತ್ತು. ಆದ್ದರಿಂದ ದಡದಲ್ಲಿ ನಿಂತು ಅಸಹಾಯಕನಾಗಿ ಕೈಗೆ ಬಂದ ತುತ್ತು ಮಣ್ಣಾಗುವುದನ್ನು ನೋಡುತ್ತ ನಿಲ್ಲುವಂತಾಯ್ತು. ಮಲಗಿದ್ದ ರಾಗಿ ಪೈರಿನಿಂದ ತೆನೆ ಕಟಾವು ಮಾಡಿಕೊಂಡ ಇಲಿಗಳು ಮತ್ತು ತ್ಲಾಡಗಳು ಹೊಲದ ತುಂಬ ಬಿಲ ತೋಡಿಕೊಂಡು ರಾಗಿ ಸಂಗ್ರಹಿಸತೊಡಗಿದವು. ಇಷ್ಟೊಂದು ಇಲಿ ಬಿಲಗಳನ್ನು ನಾನು ಈವರೆಗೆ ಕಂಡಿರಲಿಲ್ಲ. ಮೊದಲಾಗಿದ್ದರೆ ಮಣ್ಣು ವಡ್ಡರು ಮತ್ತು ಕಲ್ಲು ವಡ್ಡರ ಜೊತೆ ನಾವು ಸೇರಿಕೊಂಡು ಇಲಿ ಬಿಲ ಅಗೆದು ಈಚಲು ದೊಣ್ಣೆಯಿಂದ ಬೀಸಿ ಹೊಡೆದು ಕೊಲ್ಲುತ್ತಿದ್ದೆವು ಮತ್ತು ಅಲ್ಲೇ ಸುಟ್ಟುಕೊಂಡು ತಿನ್ನುತ್ತಿದ್ದೆವು, ಮನೆಗೆ ತಂದು ಸಾರು ಮಾಡುವುದೂ ಇತ್ತು. ಆದರೆ ಈಗ ಅದು ಸಾಧ್ಯವಾಗುತ್ತಿಲ್ಲ. ಇನ್ನ ರಾತ್ರಿವೇಳೆ ಬಂದು ಕಾದು ಕೂತು ಬೇಟೆಯಾಡುವ ಗೂಬೆಗಳಿಂದಲೂ ಇಲಿ ಸಂತತಿಯನ್ನು ನಿಯಂತ್ರಿಸಲಾಗಿಲ್ಲ. ಸಾಮಾನ್ಯವಾಗಿ ಹೊಲದ ಇಲಿಗಳು ದಾಸ್ತಾನು ಸಂಗ್ರಹಿಸುವುದು ರಾತ್ರಿವೇಳೆ. ಅವುಗಳ ಈ ಕೆಲಸಕ್ಕೆ ಅವೇ ಮಾಡಿಕೊಂಡ ರೋಡುಗಳು ಇವೆ. ಈ ಚಟುವಟಿಕೆ ಗಮನಿಸುತ್ತ ಕುಳಿತ ಗೂಬೆ ಸದ್ದಿಲ್ಲದೆ ಬಂದು ಇಲಿಗಳನ್ನು ಅಪಹರಿಸುತ್ತಿದ್ದವು. ಇಲಿಯ ಹತ್ತಿರ ಬಂದರೂ ಈ ಗೂಬೆಗಳ ರಕ್ಕೆ ಸದ್ದು ಮಾಡುವುದಿಲ್ಲವಂತೆ.

ಇದೆಲ್ಲಕ್ಕಿಂತ ಮುಖ್ಯವಾದ ಘಟನೆಯೊಂದನ್ನು ಇಲ್ಲಿ ದಾಖಲಿಸಬೇಕಿದೆ. ಅಂಗರು ಗಿಡ ಅಗೆದು ತೆಗೆಯುತ್ತಿರುವಾಗ ಹೆಬ್ಬಾವಿನ ಗಾತ್ರದ ಮಂಡಲದ ಹಾವು ನಮ್ಮ ಹುಡುಗನ ಗುದ್ದಲಿಗೆ ಸಿಕ್ಕಿತ್ತು. ಸೀಳಿಹೋದ ಅದರೆ ಹೊಟ್ಟೆಯಿಂದ ಮೂರ್ನಾಲ್ಕು ಮರಿಗಳು ದೂರಕ್ಕೆ ಸಿಡಿದವು. ಆಶ್ಚರ್ಯವೆಂದರೆ ಐದೇ ನಿಮಿಷಕ್ಕೆ ಎರಡು ಹದ್ದುಗಳು ಪ್ರತ್ಯಕ್ಷವಾಗಿ ವಿಮಾನ ಇಳಿದಂತೆ ಬಂದು ಮಂಡಲದ ಹಾವಿನ ಮರಿಗಳನ್ನ ಎಗರಿಸಿಕೊಂಡು ಹೋದವು. ನಾನು ದಂಗು ಬಡಿದು ನಿಂತೆ. ಮಂಡಲದ ಹಾವಿನ ಹತ್ಯೆ ಈ ಹದ್ದುಗಳಿಗೆ ತಿಳಿದಿದ್ದು ಹೇಗೆ? ಆಹಾರ ಸರಪಳಿಯ ಜಾಲ ಇನ್ನೆಷ್ಟು ಸೂಕ್ಷ್ಮವಾಗಿರಬೇಕೆಂದು ಆಶ್ಚರ್ಯವಾಯ್ತು. ಈ ಭೂಮಿ ಸಂಬಂಧ ಕೊಡುವ ನೆಮ್ಮದಿ ಅಸಾಧಾರಣವಾದದ್ದು.

ಭೂಮಿಯ ಒಡನಾಟದಲ್ಲಿದ್ದರೆ ಹೊರ ಜಗತ್ತಿನ ಯಾವುದೂ ಬೇಕಾಗುವುದಿಲ್ಲ. ಟಿವಿ ಪತ್ರಿಕೆಗಳೂ ಕೂಡ ನಮ್ಮನ್ನ ಸೆಳೆಯಲಾರವು. ಇಂತಹದ್ದೊಂದು ಜೀವನ ಕ್ರಮಕ್ಕೆ ಮತ್ತೆ ಒಗ್ಗಿಕೊಂಡು ಇರಬೇಕಾದರೆ ತೆಂಗು ಮತ್ತು ಹಣ್ಣಿನ ತೋಟ ನಳನಳಿಸುತ್ತಿತ್ತು. ಇದರೊಳಗೆ ಮಲಗಿದ್ದ ರಾಗಿ ಮುಂದೆ ಗೊಬ್ಬರವಾಗುವದರಲ್ಲಿ ಯಾವ ಸಂಶಯವೂ ಇಲ್ಲ ಎಂದುಸಮಾಧಾನದಿಂದಿರಬೇಕಾದರೆ, ಇದ್ದಕ್ಕಿದ್ದಂತೆ ಜಮೀನಿಗೆ ಬೆಂಕಿ ಬಿದ್ದಿತು. ಅದೆಷ್ಟು ವೇಗವಾಗಿ ಉರಿದು ಬೂದಿಯಾಯ್ತೆಂದರೆ, ನಾಗಮಂಗಲದಿಂದ ಅಗ್ನಿಶಾಮಕ ದಳದವರು ಬರುವಷ್ಟರಲ್ಲಿ ಎಲ್ಲವೂ ಸರ್ವನಾಶವಾಗಿತ್ತು. ಹೊಲದಲ್ಲಿ ಒಣಗಿ ಮಲಗಿದ್ದ ರಾಗಿಹುಲ್ಲಿಗೆ ಬಿದ್ದ ಬೆಂಕಿ, ಪೆಟ್ರೋಲ್ ಎರಚಿದೆಯೇನೋ ಎಂಬಂತೆ ವೇಗವಾಗಿ ಹಬ್ಬಿ ಓಡತೊಡಗಿತು. ಹತ್ತಾರು ಮಾರು ದೂರದಲ್ಲಿದ್ದ ಬದುಗಳು ಕೂಡ ಬೆಂಕಿ ರವೆಗೆ ದಿಗ್ಗನೆ ಹತ್ತಿಕೊಳ್ಳುತ್ತಿದ್ದವು. ಕೆಲವು ವಾರಗಳ ಹಿಂದೆ ನಿರಂತರವಾಗಿ ಹೊಡೆದಿದ್ದ ಮಳೆ ದೆಸೆಯಿಂದ, ಹುಲ್ಲು ಚೆನ್ನಾಗಿ ಬೆಳೆದು ಒಣಗಿಕೊಂಡಿತ್ತು.

ಅಗ್ನಿಶಾಮಕ ದಳದವರು ಯಾವ ಆತಂಕವೂ ಇಲ್ಲದೆ ಮಹಜರು ರಿಪೋರ್ಟು ತಯಾರಿಸಿ ಸಹಿ ಪಡೆದರು. ಸಮಾಧಾನದಿಂದ ಎಳನೀರು ಕುಡಿದು ಮುಂದಿನ ಕೃಷಿಯ ಬಗ್ಗೆ ಮುಫತ್ತಾದ ಸಲಹೆಕೊಟ್ಟು ಹೊರಟರು. ಆಗ ಅವರು ಮಾಡಿದ ಮಹಜರಿನ ಕಾಪಿ ಕೇಳಿದೆ. ಮಂಡ್ಯಕ್ಕೆ ಹೋಗಿ ಪಡೆದುಕೊಳ್ಳಿ, ಇನ್ನೆರಡು ದಿನ ಬಿಟ್ಟು ಅಲ್ಲಿಗೆ ಕಳಿಸುತ್ತೇವೆ ಎಂದರು. ಹೀಗಂದು ಅಗ್ನಿಶಾಮಕ ವಾಹನ ಹತ್ತುವ ಮುನ್ನ ಕೈಬಾಯಿ ನೋಡಿದರು, ನಾನು ನಮಸ್ಕಾರ ಹಾಕಿದೆ.

ಮೂರ್ನಾಲ್ಕು ದಿನ ಬಿಟ್ಟು ಮಂಡ್ಯದ ಅಗ್ನಿಶಾಮಕ ಕಚೇರಿಗೆ ಹೋದರೆ ಎಸ್‌ಬಿಐನಲ್ಲಿ ಇನ್ನೂರು ರೂಪಾಯಿ ತುಂಬಿ ಬನ್ನಿ, ಆ ನಂತರ ವರದಿ ಕೊಡುತ್ತೇವೆ ಎಂದರು. ಅಲ್ಲಿ ನನ್ನಂತೆ ಬೆಂಕಿಗೆ ಭೂಮಿಯೊದಗಿಸಿದ್ದ ಇನ್ನಿಬ್ಬರಿದ್ದರು. ಅವರಲ್ಲೊಬ್ಬ ಮೆದೆಗೆ ಬಿದ್ದ ಬೆಂಕಿ ಆರಿಸಲು ಹೋರಾಡಿ ಮುಖ ಕೈಕಾಲನ್ನ ಸುಟ್ಟುಕೊಂಡು ಬಂದಿದ್ದ; ನಡೆಯಲಾರದೆ ಕುಂಟುತ್ತಿದ್ದ. ಅವನನ್ನ ಹತ್ತಿಸಿಕೊಂಡು ಎಸ್‌ಬಿಐ ಶಾಖೆ ಹುಡುಕುತ್ತ ಹೊರಟೆ. ಆಟೊದವನು ನಮ್ಮ ಜೊತೆಯೇ ಹುಡುಕಲು ಸಹಕರಿಸಿ, ಕೊನೆಗೆ ಕಚೇರಿಯ ಬಳಿ ಬಿಟ್ಟು ಹೊರಟುಹೋದ. ಬಸ್‌ಸ್ಟಾಂಡಿನಿಂದ ಅಗ್ನಿಶಾಮಕದಳದ ಆಫೀಸಿಗೆ ಬಿಡಲು ನೂರಿಪ್ಪತ್ತುರೂ ಆಟೋ ಖರ್ಚಾಗಿತ್ತು. ಅಷ್ಟೇ ದುಡ್ಡು ಎಸ್‌ಬಿಐ ಹುಡುಕಲು ಕೊಟ್ಟೆ. ಈಗ ಚಲನ್ ತುಂಬಿದ ನಂತರ, ಅದರ ರಸೀದಿ ಹಿಡಿದು ಅಗ್ನಿಶಾಮಕ ಕಚೇರಿಗೆ ಹೋಗಬೇಕು, ಆನಂತರ ವರದಿ ತೆಗೆದುಕೊಂಡು ಊರಿಗೆ ಹೋಗಬೇಕು. ಇದರ ಬದಲು ನಾಗಮಂಗಲದಲ್ಲಿ ಅಥವಾ ಬೆಂಕಿಬಿದ್ದ ಜಾಗದಲ್ಲೇ ಮಹಜರು ವರದಿಯ ನಕಲನ್ನು ವಿತರಿಸಲು ಇವರಿಗ್ಯಾವ ತೊಂದರೆ ಎಂದು ಯೋಚಿಸುತ್ತ ಆಫೀಸ್ ಒಳಗೇ ನಿಂತೆ. “ಹೊರಗೋಗಿ ಕುತಗಳಿ ಸುಮಾರೊತ್ತಾಗತ್ತೆ” ಎಂದ ಸಿಬ್ಬಂದಿಗೆ ಗದರುವ ಸ್ಥಿತಿಯಲ್ಲಿರಲಿಲ್ಲ. ಆದರೂ ಸಂಯಮದಿಂದ, “ನಾನೂ ಕೂಡ ಡಿಸ್ಟ್ರಿಕ್ಟ್ ಆಫೀಸರಾಗಿದ್ದೆ, ಬಂದವರಿಗೆ ಸಮಾಧಾನವಾಗಿ ಕೂತಗಳಿ ಅಂತ ಹೇಳತಿದ್ದೆ” ಎಂದೆ. ನನ್ನ ಮಾತನ್ನೇನು ಆತ ಕಿವಿಯ ಮೇಲೆ ಹಾಕಿಕೊಳ್ಳದೆ, “ನಮ್ಮ ಈ ವರದಿಯಿಂದ ಪರಿಹಾರ ಸಿಗಲ್ಲ, ನಾವು ಹೋಗಿ ಬಂದಿರೊ ರಿಪೋರ್ಟು ಅಷ್ಟೇ” ಎಂದ. “ಇರ್ಲಿ ವಿಲೇಜ್ ಅಕೌಂಟೆಂಟರಿಗೆ ವರದಿ ಬೇಕಂತೆ ಕೊಡಿ” ಎಂದೆ. ತಾಲೂಕಿನಲ್ಲಿರುವ ಅಗ್ನಿಶಾಮಕದಳ ಬರುವಷ್ಟರಲ್ಲಿ ಎಲ್ಲ ಸುಟ್ಟುಹೋಗಿತ್ತು. ಆ ಬಗೆಗಿನ ವರದಿ ಪಡೆಯಲು ಜಿಲ್ಲೆಗೆ ಅಲೆದಾಡಬೇಕಾದಾಗ ರೈತನಾಗಿ ಬದುಕುವುದು ಎಷ್ಟು ಕಷ್ಟ ಎಂಬುದರ ಜೊತೆಗೆ, ರೈತನ ಬೆಂಗಾವಲಿಗೆ ನಿಂತುಬಿಟ್ಟಿದ್ದ ಪ್ರೊ ನಂಜುಂಡಸ್ವಾಮಿ, ಸುಂದರೇಶ್, ಶಾಮಣ್ಣ ಬಾಬಾಗೌಡ ಪಾಟೀಲರೆಲ್ಲಾ ನೆನಪಿಗೆ ಬಂದು, ಅಯ್ಯೋ ಈಗ ರೈತನ ಪರ ಯಾರೂ ಇಲ್ಲವಲ್ಲ ಅನ್ನಿಸಿತು!


ಇದನ್ನೂ ಓದಿ: ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...