Homeಕರ್ನಾಟಕರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

ರೈತನಿಗೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಹೆಣಗುವುದು, ಬೆಂಕಿಯೊಡನೆ ಸೆಣಸಿದಂತೆಯೇ!

- Advertisement -
- Advertisement -

ಕಳೆದ ಕೆಲವು ವರ್ಷಗಳಿಂದ ನನ್ನ ಭಾಗದ ಜಮೀನಿನಲ್ಲಿ ಸುಮಾರು ನೂರೈವತ್ತು ಹಣ್ಣಿನ ಸಸಿ ಮತ್ತು ನೂರು ತೆಂಗಿನ ಸಸಿ ನೆಟ್ಟು, ಡ್ರಿಪ್ ನೀರಾವರಿ ಸಹಾಯದಿಂದ ಬದುಕಿನ ಅಂತ್ಯ ಅರ್ಥಪೂರ್ಣವಾಗುವಂತೆ ಮಾಡತೊಡಗಿದೆ. ಕಳೆದ ಮುಂಗಾರಿನಲ್ಲಿ ರಾಗಿಯನ್ನು ಬಿತ್ತಿದೆ. ರಾಗಿ ಚೆನ್ನಾಗಿ ಬಂದು ಇನ್ನೇನು ಕುಯ್ಯುವ ಸಮಯಕ್ಕೆ ನಿರಂತರವಾಗಿ ಮಳೆ ಹಿಡಿದುಕೊಂಡಿತು. ಇದರಿಂದ ಜವುಗಿಗೆ ಸಿಕ್ಕ ರಾಗಿ ಪೈರು ತೆನೆ ಹೊರಲಾರದೆ ಹೊಲದಲ್ಲಿ ಮಗ್ಗ ಮಲಗಿಬಿಟ್ಟಿತು. ಹೊಲಕ್ಕೆ ಕಾಲಿಟ್ಟರೆ ಬೆರಳ ಸಂದಿ ಕೆಸರು ಮೇಲೆ ಬರುತ್ತಿತ್ತು. ಆದ್ದರಿಂದ ದಡದಲ್ಲಿ ನಿಂತು ಅಸಹಾಯಕನಾಗಿ ಕೈಗೆ ಬಂದ ತುತ್ತು ಮಣ್ಣಾಗುವುದನ್ನು ನೋಡುತ್ತ ನಿಲ್ಲುವಂತಾಯ್ತು. ಮಲಗಿದ್ದ ರಾಗಿ ಪೈರಿನಿಂದ ತೆನೆ ಕಟಾವು ಮಾಡಿಕೊಂಡ ಇಲಿಗಳು ಮತ್ತು ತ್ಲಾಡಗಳು ಹೊಲದ ತುಂಬ ಬಿಲ ತೋಡಿಕೊಂಡು ರಾಗಿ ಸಂಗ್ರಹಿಸತೊಡಗಿದವು. ಇಷ್ಟೊಂದು ಇಲಿ ಬಿಲಗಳನ್ನು ನಾನು ಈವರೆಗೆ ಕಂಡಿರಲಿಲ್ಲ. ಮೊದಲಾಗಿದ್ದರೆ ಮಣ್ಣು ವಡ್ಡರು ಮತ್ತು ಕಲ್ಲು ವಡ್ಡರ ಜೊತೆ ನಾವು ಸೇರಿಕೊಂಡು ಇಲಿ ಬಿಲ ಅಗೆದು ಈಚಲು ದೊಣ್ಣೆಯಿಂದ ಬೀಸಿ ಹೊಡೆದು ಕೊಲ್ಲುತ್ತಿದ್ದೆವು ಮತ್ತು ಅಲ್ಲೇ ಸುಟ್ಟುಕೊಂಡು ತಿನ್ನುತ್ತಿದ್ದೆವು, ಮನೆಗೆ ತಂದು ಸಾರು ಮಾಡುವುದೂ ಇತ್ತು. ಆದರೆ ಈಗ ಅದು ಸಾಧ್ಯವಾಗುತ್ತಿಲ್ಲ. ಇನ್ನ ರಾತ್ರಿವೇಳೆ ಬಂದು ಕಾದು ಕೂತು ಬೇಟೆಯಾಡುವ ಗೂಬೆಗಳಿಂದಲೂ ಇಲಿ ಸಂತತಿಯನ್ನು ನಿಯಂತ್ರಿಸಲಾಗಿಲ್ಲ. ಸಾಮಾನ್ಯವಾಗಿ ಹೊಲದ ಇಲಿಗಳು ದಾಸ್ತಾನು ಸಂಗ್ರಹಿಸುವುದು ರಾತ್ರಿವೇಳೆ. ಅವುಗಳ ಈ ಕೆಲಸಕ್ಕೆ ಅವೇ ಮಾಡಿಕೊಂಡ ರೋಡುಗಳು ಇವೆ. ಈ ಚಟುವಟಿಕೆ ಗಮನಿಸುತ್ತ ಕುಳಿತ ಗೂಬೆ ಸದ್ದಿಲ್ಲದೆ ಬಂದು ಇಲಿಗಳನ್ನು ಅಪಹರಿಸುತ್ತಿದ್ದವು. ಇಲಿಯ ಹತ್ತಿರ ಬಂದರೂ ಈ ಗೂಬೆಗಳ ರಕ್ಕೆ ಸದ್ದು ಮಾಡುವುದಿಲ್ಲವಂತೆ.

ಇದೆಲ್ಲಕ್ಕಿಂತ ಮುಖ್ಯವಾದ ಘಟನೆಯೊಂದನ್ನು ಇಲ್ಲಿ ದಾಖಲಿಸಬೇಕಿದೆ. ಅಂಗರು ಗಿಡ ಅಗೆದು ತೆಗೆಯುತ್ತಿರುವಾಗ ಹೆಬ್ಬಾವಿನ ಗಾತ್ರದ ಮಂಡಲದ ಹಾವು ನಮ್ಮ ಹುಡುಗನ ಗುದ್ದಲಿಗೆ ಸಿಕ್ಕಿತ್ತು. ಸೀಳಿಹೋದ ಅದರೆ ಹೊಟ್ಟೆಯಿಂದ ಮೂರ್ನಾಲ್ಕು ಮರಿಗಳು ದೂರಕ್ಕೆ ಸಿಡಿದವು. ಆಶ್ಚರ್ಯವೆಂದರೆ ಐದೇ ನಿಮಿಷಕ್ಕೆ ಎರಡು ಹದ್ದುಗಳು ಪ್ರತ್ಯಕ್ಷವಾಗಿ ವಿಮಾನ ಇಳಿದಂತೆ ಬಂದು ಮಂಡಲದ ಹಾವಿನ ಮರಿಗಳನ್ನ ಎಗರಿಸಿಕೊಂಡು ಹೋದವು. ನಾನು ದಂಗು ಬಡಿದು ನಿಂತೆ. ಮಂಡಲದ ಹಾವಿನ ಹತ್ಯೆ ಈ ಹದ್ದುಗಳಿಗೆ ತಿಳಿದಿದ್ದು ಹೇಗೆ? ಆಹಾರ ಸರಪಳಿಯ ಜಾಲ ಇನ್ನೆಷ್ಟು ಸೂಕ್ಷ್ಮವಾಗಿರಬೇಕೆಂದು ಆಶ್ಚರ್ಯವಾಯ್ತು. ಈ ಭೂಮಿ ಸಂಬಂಧ ಕೊಡುವ ನೆಮ್ಮದಿ ಅಸಾಧಾರಣವಾದದ್ದು.

ಭೂಮಿಯ ಒಡನಾಟದಲ್ಲಿದ್ದರೆ ಹೊರ ಜಗತ್ತಿನ ಯಾವುದೂ ಬೇಕಾಗುವುದಿಲ್ಲ. ಟಿವಿ ಪತ್ರಿಕೆಗಳೂ ಕೂಡ ನಮ್ಮನ್ನ ಸೆಳೆಯಲಾರವು. ಇಂತಹದ್ದೊಂದು ಜೀವನ ಕ್ರಮಕ್ಕೆ ಮತ್ತೆ ಒಗ್ಗಿಕೊಂಡು ಇರಬೇಕಾದರೆ ತೆಂಗು ಮತ್ತು ಹಣ್ಣಿನ ತೋಟ ನಳನಳಿಸುತ್ತಿತ್ತು. ಇದರೊಳಗೆ ಮಲಗಿದ್ದ ರಾಗಿ ಮುಂದೆ ಗೊಬ್ಬರವಾಗುವದರಲ್ಲಿ ಯಾವ ಸಂಶಯವೂ ಇಲ್ಲ ಎಂದುಸಮಾಧಾನದಿಂದಿರಬೇಕಾದರೆ, ಇದ್ದಕ್ಕಿದ್ದಂತೆ ಜಮೀನಿಗೆ ಬೆಂಕಿ ಬಿದ್ದಿತು. ಅದೆಷ್ಟು ವೇಗವಾಗಿ ಉರಿದು ಬೂದಿಯಾಯ್ತೆಂದರೆ, ನಾಗಮಂಗಲದಿಂದ ಅಗ್ನಿಶಾಮಕ ದಳದವರು ಬರುವಷ್ಟರಲ್ಲಿ ಎಲ್ಲವೂ ಸರ್ವನಾಶವಾಗಿತ್ತು. ಹೊಲದಲ್ಲಿ ಒಣಗಿ ಮಲಗಿದ್ದ ರಾಗಿಹುಲ್ಲಿಗೆ ಬಿದ್ದ ಬೆಂಕಿ, ಪೆಟ್ರೋಲ್ ಎರಚಿದೆಯೇನೋ ಎಂಬಂತೆ ವೇಗವಾಗಿ ಹಬ್ಬಿ ಓಡತೊಡಗಿತು. ಹತ್ತಾರು ಮಾರು ದೂರದಲ್ಲಿದ್ದ ಬದುಗಳು ಕೂಡ ಬೆಂಕಿ ರವೆಗೆ ದಿಗ್ಗನೆ ಹತ್ತಿಕೊಳ್ಳುತ್ತಿದ್ದವು. ಕೆಲವು ವಾರಗಳ ಹಿಂದೆ ನಿರಂತರವಾಗಿ ಹೊಡೆದಿದ್ದ ಮಳೆ ದೆಸೆಯಿಂದ, ಹುಲ್ಲು ಚೆನ್ನಾಗಿ ಬೆಳೆದು ಒಣಗಿಕೊಂಡಿತ್ತು.

ಅಗ್ನಿಶಾಮಕ ದಳದವರು ಯಾವ ಆತಂಕವೂ ಇಲ್ಲದೆ ಮಹಜರು ರಿಪೋರ್ಟು ತಯಾರಿಸಿ ಸಹಿ ಪಡೆದರು. ಸಮಾಧಾನದಿಂದ ಎಳನೀರು ಕುಡಿದು ಮುಂದಿನ ಕೃಷಿಯ ಬಗ್ಗೆ ಮುಫತ್ತಾದ ಸಲಹೆಕೊಟ್ಟು ಹೊರಟರು. ಆಗ ಅವರು ಮಾಡಿದ ಮಹಜರಿನ ಕಾಪಿ ಕೇಳಿದೆ. ಮಂಡ್ಯಕ್ಕೆ ಹೋಗಿ ಪಡೆದುಕೊಳ್ಳಿ, ಇನ್ನೆರಡು ದಿನ ಬಿಟ್ಟು ಅಲ್ಲಿಗೆ ಕಳಿಸುತ್ತೇವೆ ಎಂದರು. ಹೀಗಂದು ಅಗ್ನಿಶಾಮಕ ವಾಹನ ಹತ್ತುವ ಮುನ್ನ ಕೈಬಾಯಿ ನೋಡಿದರು, ನಾನು ನಮಸ್ಕಾರ ಹಾಕಿದೆ.

ಮೂರ್ನಾಲ್ಕು ದಿನ ಬಿಟ್ಟು ಮಂಡ್ಯದ ಅಗ್ನಿಶಾಮಕ ಕಚೇರಿಗೆ ಹೋದರೆ ಎಸ್‌ಬಿಐನಲ್ಲಿ ಇನ್ನೂರು ರೂಪಾಯಿ ತುಂಬಿ ಬನ್ನಿ, ಆ ನಂತರ ವರದಿ ಕೊಡುತ್ತೇವೆ ಎಂದರು. ಅಲ್ಲಿ ನನ್ನಂತೆ ಬೆಂಕಿಗೆ ಭೂಮಿಯೊದಗಿಸಿದ್ದ ಇನ್ನಿಬ್ಬರಿದ್ದರು. ಅವರಲ್ಲೊಬ್ಬ ಮೆದೆಗೆ ಬಿದ್ದ ಬೆಂಕಿ ಆರಿಸಲು ಹೋರಾಡಿ ಮುಖ ಕೈಕಾಲನ್ನ ಸುಟ್ಟುಕೊಂಡು ಬಂದಿದ್ದ; ನಡೆಯಲಾರದೆ ಕುಂಟುತ್ತಿದ್ದ. ಅವನನ್ನ ಹತ್ತಿಸಿಕೊಂಡು ಎಸ್‌ಬಿಐ ಶಾಖೆ ಹುಡುಕುತ್ತ ಹೊರಟೆ. ಆಟೊದವನು ನಮ್ಮ ಜೊತೆಯೇ ಹುಡುಕಲು ಸಹಕರಿಸಿ, ಕೊನೆಗೆ ಕಚೇರಿಯ ಬಳಿ ಬಿಟ್ಟು ಹೊರಟುಹೋದ. ಬಸ್‌ಸ್ಟಾಂಡಿನಿಂದ ಅಗ್ನಿಶಾಮಕದಳದ ಆಫೀಸಿಗೆ ಬಿಡಲು ನೂರಿಪ್ಪತ್ತುರೂ ಆಟೋ ಖರ್ಚಾಗಿತ್ತು. ಅಷ್ಟೇ ದುಡ್ಡು ಎಸ್‌ಬಿಐ ಹುಡುಕಲು ಕೊಟ್ಟೆ. ಈಗ ಚಲನ್ ತುಂಬಿದ ನಂತರ, ಅದರ ರಸೀದಿ ಹಿಡಿದು ಅಗ್ನಿಶಾಮಕ ಕಚೇರಿಗೆ ಹೋಗಬೇಕು, ಆನಂತರ ವರದಿ ತೆಗೆದುಕೊಂಡು ಊರಿಗೆ ಹೋಗಬೇಕು. ಇದರ ಬದಲು ನಾಗಮಂಗಲದಲ್ಲಿ ಅಥವಾ ಬೆಂಕಿಬಿದ್ದ ಜಾಗದಲ್ಲೇ ಮಹಜರು ವರದಿಯ ನಕಲನ್ನು ವಿತರಿಸಲು ಇವರಿಗ್ಯಾವ ತೊಂದರೆ ಎಂದು ಯೋಚಿಸುತ್ತ ಆಫೀಸ್ ಒಳಗೇ ನಿಂತೆ. “ಹೊರಗೋಗಿ ಕುತಗಳಿ ಸುಮಾರೊತ್ತಾಗತ್ತೆ” ಎಂದ ಸಿಬ್ಬಂದಿಗೆ ಗದರುವ ಸ್ಥಿತಿಯಲ್ಲಿರಲಿಲ್ಲ. ಆದರೂ ಸಂಯಮದಿಂದ, “ನಾನೂ ಕೂಡ ಡಿಸ್ಟ್ರಿಕ್ಟ್ ಆಫೀಸರಾಗಿದ್ದೆ, ಬಂದವರಿಗೆ ಸಮಾಧಾನವಾಗಿ ಕೂತಗಳಿ ಅಂತ ಹೇಳತಿದ್ದೆ” ಎಂದೆ. ನನ್ನ ಮಾತನ್ನೇನು ಆತ ಕಿವಿಯ ಮೇಲೆ ಹಾಕಿಕೊಳ್ಳದೆ, “ನಮ್ಮ ಈ ವರದಿಯಿಂದ ಪರಿಹಾರ ಸಿಗಲ್ಲ, ನಾವು ಹೋಗಿ ಬಂದಿರೊ ರಿಪೋರ್ಟು ಅಷ್ಟೇ” ಎಂದ. “ಇರ್ಲಿ ವಿಲೇಜ್ ಅಕೌಂಟೆಂಟರಿಗೆ ವರದಿ ಬೇಕಂತೆ ಕೊಡಿ” ಎಂದೆ. ತಾಲೂಕಿನಲ್ಲಿರುವ ಅಗ್ನಿಶಾಮಕದಳ ಬರುವಷ್ಟರಲ್ಲಿ ಎಲ್ಲ ಸುಟ್ಟುಹೋಗಿತ್ತು. ಆ ಬಗೆಗಿನ ವರದಿ ಪಡೆಯಲು ಜಿಲ್ಲೆಗೆ ಅಲೆದಾಡಬೇಕಾದಾಗ ರೈತನಾಗಿ ಬದುಕುವುದು ಎಷ್ಟು ಕಷ್ಟ ಎಂಬುದರ ಜೊತೆಗೆ, ರೈತನ ಬೆಂಗಾವಲಿಗೆ ನಿಂತುಬಿಟ್ಟಿದ್ದ ಪ್ರೊ ನಂಜುಂಡಸ್ವಾಮಿ, ಸುಂದರೇಶ್, ಶಾಮಣ್ಣ ಬಾಬಾಗೌಡ ಪಾಟೀಲರೆಲ್ಲಾ ನೆನಪಿಗೆ ಬಂದು, ಅಯ್ಯೋ ಈಗ ರೈತನ ಪರ ಯಾರೂ ಇಲ್ಲವಲ್ಲ ಅನ್ನಿಸಿತು!


ಇದನ್ನೂ ಓದಿ: ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...