Homeರಾಷ್ಟ್ರೀಯದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ‘ಇಂಡಿಗೋ’ ವಿಮಾನದಲ್ಲಿ ಬೆಂಕಿ!

ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ‘ಇಂಡಿಗೋ’ ವಿಮಾನದಲ್ಲಿ ಬೆಂಕಿ!

ಅಘಾತಕಾರಿ ಘಟನೆಯ ಬಗ್ಗೆ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದೆ

- Advertisement -
- Advertisement -

ಟೇಕ್ ಆಫ್ ಸಮಯದಲ್ಲಿ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನದ ರೆಕ್ಕೆಗಳಿಂದ ಬೆಂಕಿ ಕಿಡಿಗಳು ಕಾಣಿಸಿಕೊಂಡ ನಂತರ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ (IGI) ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿರುವ ಘಟನೆ ಶುಕ್ರವಾರ ನಡೆದಿದೆ.

ಇಂಡಿಗೋ ವಿಮಾನ 6E-2131 ರ ವಿಮಾನದ ರೆಕ್ಕೆಯಲ್ಲಿ ಬೆಂಕಿ ಕಿಡಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಮತ್ತು ಎಲ್ಲಾ 177 ಪ್ರಯಾಣಿಕರು ಮತ್ತು ಏಳು ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಗಳು ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ವಿಡಿಯೋವನ್ನು ಪ್ರಿಯಾಂಕಾ ಕುಮಾರ್ ಎಂಬ ಪ್ರಯಾಣಿಕ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ದೆಹಲಿ ರನ್‌ವೇಯಲ್ಲಿ ಭಯಾನಕ ಅನುಭವ! ಇದು ಟೇಕ್-ಆಫ್ ವೀಡಿಯೊ ಆಗಿರಬೇಕು ಆದರೆ ಇದು ಸಂಭವಿಸಿದೆ” ಎಂದು ಅವರು ತಮ್ಮ ಟ್ವಿಟರ್ ವೀಡಿಯೊದಲ್ಲಿ ಹೇಳಿದ್ದಾರೆ. ವಿಡಿಯೊದಲ್ಲಿ ವಿಮಾನದ ರೆಕ್ಕೆಗಳ ಕೆಳಗೆ ಕಿಡಿಗಳು ಬರುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಕೃತಿಚೌರ್ಯ ಆರೋಪ: ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿಗೆ ಕೇರಳ ನ್ಯಾಯಾಲಯ ತಡೆಯಾಜ್ಞೆ

“22.08 ಗಂಟೆಗೆ ವಿಮಾನ ನಿಲ್ದಾಣದ ನಿಯಂತ್ರಣ ಕೊಠಡಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ನಿಯಂತ್ರಣ ಕೊಠಡಿಯಿಂದ, ದೆಹಲಿ-ಬೆಂಗಳೂರು ಪ್ರಯಾಣಿಸುತ್ತಿದ್ದ 6E 2131 ವಿಮಾನದ ಇಂಜಿನ್‌ನಲ್ಲಿ ಬೆಂಕಿಯ ಸಮಸ್ಯೆಯ ಕುರಿತು ಕರೆ ಬಂದಿದೆ” ಎಂದು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ಹೇಳಿವೆ. ವಿಮಾನದಲ್ಲಿ 177 ಪ್ರಯಾಣಿಕರು ಮತ್ತು ಏಳು ಸಿಬ್ಬಂದಿ ಇದ್ದರು ಎಂದು ಅವರು ಹೇಳಿದ್ದು, ವಿಮಾನವು ರನ್‌ವೇಯಲ್ಲಿ ಟೇಕ್-ಆಫ್‌ ಮಾಡುತ್ತಿತ್ತು ಎಂದು ತಿಳಿಸಿದ್ದಾರೆ.

ಘಟನೆ ಬಗ್ಗೆ ತನಿಖೆ ನಡೆಸುವಂತೆ ಒಕ್ಕೂಟ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯ ಆದೇಶಿಸಿದೆ.

ಘಟನೆ ನಡೆದ ತಕ್ಷಣ, ಇಂಡಿಗೋ ಏರ್‌ಲೈನ್ಸ್ ಪ್ರೆಸ್ಸರ್ ಹೊರಡಿಸಿದ್ದು,“ದೆಹಲಿಯಿಂದ ಬೆಂಗಳೂರಿಗೆ ಹಾರಾಟ ನಡೆಸುತ್ತಿರುವ ವಿಮಾನ 6E2131 ಟೇಕ್-ಆಫ್ ಮಾಡುತ್ತಿದ್ದಾಗ ತಾಂತ್ರಿಕ ದೋಷ ಉಂಟಾಗಿದೆ. ತಕ್ಷಣವೆ ಪೈಲಟ್ ಟೇಕ್-ಆಫ್ ಅನ್ನು ಸ್ಥಗಿತಗೊಳಿಸಿದರು ಮತ್ತು ವಿಮಾನವು ಹಿಂತಿರುಗಿತು” ಎಂದು ಹೇಳಿದೆ.

“ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಪ್ರಯಾಣಿಕರಿಗೆ ಪರ್ಯಾಯ ವಿಮಾನವನ್ನು ವ್ಯವಸ್ಥೆಗೊಳಿಸಲಾಗುತ್ತಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಜುಲೈನಲ್ಲಿ, ಮುಂಬೈನಿಂದ ಲೇಹ್‌ಗೆ ತೆರಳುತ್ತಿದ್ದ ಗೋ ಫಸ್ಟ್ (ಗೋಏರ್) ವಿಮಾನದ ಎಂಜಿನ್‌ನಲ್ಲಿ ಉಂಟಾದ ದೋಷದಿಂದಾಗಿ ದೆಹಲಿಗೆ ವಾಪಾಸಾಗಿತ್ತು. ಮತ್ತೊಂದು ಘಟನೆ ಕೂಡಾ ಅದೇ ಏರ್‌ಲೈನ್‌ನಲ್ಲಿ ನಡೆದಿದ್ದು, ಶ್ರೀನಗರರಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದ ಎಂಜಿನ್‌ನಲ್ಲಿ ತೊಂದರೆ ಉಂಟಾದ ನಂತರ ವಾಪಾಸಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...