Homeಕರ್ನಾಟಕಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ - ಆರೋಪ

ಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ – ಆರೋಪ

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.

- Advertisement -
- Advertisement -

ತುಮಕೂರು ನಗರದ ಬನಶಂಕರಿ ಎರಡನೇ ಹಂತದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ಎಳವ ಜೋಗರ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿದೆ. ಕನಿಷ್ಠ ನಾಗರಿಕ ಸೌಲಭ್ಯಗಳೂ ಇಲ್ಲದ ಇಲ್ಲಿನ ಗುಡಿಸಲುಗಳಿಗೆ ಬೆಂಕಿ ಹಚ್ಚುವ ಪ್ರಕರಣಗಳು ನಡೆಯುತ್ತಲೇ ಇವೆ. ಕಿಡಿಗೇಡಿಗಳ ಇಂತಹ ಕ್ರಮಗಳಿಂದ ಎಳವ ಜೋಗರ ಕುಟುಂಬಗಳು ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುವಂತಹ ಪರಿಸ್ಥಿತಿ ಇದೆ.

ಇಸ್ಮಾಯಿಲ್ ನಗರ ಸಮೀಪವೇ ಪೊದೆಯ ನಡುವೆ 40 ಕುಟುಂಬಗಳು ವಾಸಿಸುತ್ತಿವೆ. ಎಳವ ಜೋಗರು, ರಂಗೋಲಿ ಪುಡಿ ಮಾಡಿ ಮಾರುವ ಲಂಬಾಣಿಗಳ ಕುಟುಂಬಗಳು ಇಲ್ಲಿವೆ. ಬೆಳಕಿನ ಸೌಕರ್ಯ ಇಲ್ಲ. ಕುಡಿವ ನೀರಿನ ಸೌಲಭ್ಯ ಇಲ್ಲ. ಇಂತಹ ಸಂಕಷ್ಟದಲ್ಲಿ ಬದುಕು ಕಟ್ಟಿಕೊಳ್ಳುತ್ತಿರುವ ಈ ಕುಟುಂಬಗಳ ಗುಡಿಸಲುಗಳಿಗೆ ಪದೇಪದೇ ಬೆಂಕಿ ಹಚ್ಚಿ ಅವರನ್ನು ಅಲ್ಲಿಂದ ಓಡಿಸುವ ತಂತ್ರಗಳು ನಡೆಯುತ್ತಲೇ ಬರುತ್ತಿವೆ.

ಆಗಸ್ಟ್ 11ರ ಮುಂಜಾನೆ ಸುಮಾರು 1.30 ರ ಸಮಯದಲ್ಲಿ ಗುರುಸ್ವಾಮಿ ಮತ್ತು ಗಂಗಮ್ಮ ಅವರಿಗೆ ಸೇರಿದ ಗುಡಿಸಲಿಗೆ ಬೆಂಕಿ ಹಚ್ಚಲಾಗಿದೆ. ಪರಿಣಾಮ ಗುಡಿಸಲಿನಲ್ಲಿ ಮಲಗಿದ್ದ ಎಂಟು ಮಂದಿ ನೂಲೆಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ತಂದೆತಾಯಿಗಳು ಸೇರಿ ಆರು ಮಂದಿ ಮಕ್ಕಳ ಬಟ್ಟೆಗಳು ಸುಟ್ಟು ಭಸ್ಮವಾಗಿವೆ. ದವಸ ಧಾನ್ಯಗಳು ಬೆಂಕಿಯಲ್ಲಿ ಬೂದಿಯಾಗಿವೆ. ಇದು ಅಲ್ಲಿನ ನಿವಾಸಿಗಳನ್ನು ಆತಂಕಗೊಳ್ಳುವಂತೆ ಮಾಡಿದೆ.

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಬೆಂಕಿ ಹಚ್ಚುವುದನ್ನು ಯಾರು ಮಾಡುತ್ತಿದ್ದಾರೆ ಎಂಬ ಮಾಹಿತಿ ಇದುವರೆಗೂ ಗೊತ್ತಾಗಿಲ್ಲ. ಈ ಕುಟುಂಬಗಳು ನೀಡುವ ದೂರನ್ನು ದಾಖಲಿಸಿಕೊಳ್ಳುವ ಪೊಲೀಸರು ಮತ್ತೆ ಅದರ ಬಗ್ಗೆ ಕ್ರಮ ವಹಿಸುವ ಗೋಜಿಗೇ ಹೋಗುತ್ತಿಲ್ಲ ಎಂದು ದೂರಲಾಗಿದೆ.

ನಾನು ಗೌರಿ.ಕಾಂ ಜೊತೆ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಮಾತನಾಡಿದರು. ಬೆಂಕಿ ಹಚ್ಚುವ ಪ್ರಕರಣಗಳಿಂದ ಎಳವ ಜೋಗರು ಮತ್ತು ಲಂಬಾಣಿ ಕುಟುಂಬಗಳು ಜೀವಭಯದಿಂದ ಬದುಕು ನಡೆಸುವಂತಾಗಿದೆ. ಇಲ್ಲಿ ವಾಸವಾಗಿರುವ ಕುಟುಂಬಗಳಿಗೆ ಪುನರ್ ವಸತಿಯನ್ನು ಕಲ್ಪಿಸುವ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ತುಮಕೂರು ಹೊರವಲಯದ ಅಣ್ಣೇನಹಳ್ಳಿ ಬಳಿ ಇವರ ವಾಸಕ್ಕೆ ಜಾಗ ಗುರಿತಿಸಿದರು. ಆದರೆ ಸ್ಥಳೀಯರಿಂದ ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಅಲ್ಲಿಗೆ ಕೈಬಿಡಲಾಯಿತು.

ಅಜ್ಜಗೊಂಡನಹಳ್ಳಿಯ ಘನತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಮತ್ತೆ ಸ್ಥಳ ಗುರುತಿಸಲಾಯಿತು. ಘಟಕದ ನಿರ್ವಹಣೆಯಿಲ್ಲದೆ ದುರ್ನಾತ ಬೀರುತ್ತಿರುವ ಕಾರಣದಿಂದ ಎಳವ ಜೋಗಿ ಕುಟುಂಬಗಳು ಅಲ್ಲಿಗೆ ಹೋಗಲು ನಿರಾಕರಿಸಿದವು. ಅವರಿಗೆ ಪುನರ್ ವಸತಿ ಕಲ್ಪಿಸಲು ಯಾರೂ ಜಾಗ ನೀಡಲು ಮುಂದೆ ಬರುತ್ತಿಲ್ಲ. ಇದು ದೊಡ್ಡ ಸಮಸ್ಯೆಯಾಗಿದೆ. ಪಾಲಿಕೆಯೂ ಸಮರ್ಪಕ ಜಾಗ ಗುರುತಿಸಿಲ್ಲ. ಕೂಡಲೇ ಅವರಿಗೆ ಪರ್ಯಾಯ ಜಾಗ ಗುರುತಿಸಿ ಪುನರ್ ವಸತಿ ಕಲ್ಪಿಸಬೇಕು. ಇಲ್ಲದಿದ್ದರೆ ಅವರ ಗೋಳು ತಪ್ಪಿದ್ದಲ್ಲ ಎಂದು ಹೇಳಿದರು.

ಗುಡಿಸಲಿಗೆ ಬೆಂಕಿ ಬಿದ್ದು ಬಟ್ಟೆಗಳು ಮತ್ತು ದವಸ ಧಾನ್ಯಗಳನ್ನು ಕಳೆದುಕೊಂಡಿರುವ ಗುರುಸ್ವಾಮಿ ಕುಟುಂಬ ಇದೀಗ ಜೀವನ ನಿರ್ವಹಣೆಗೆ ತೊಂದರೆಪಡುತ್ತಿದೆ. ಗುಡಿಸಲಿಗೆ ಹಾಕಿದ್ದ ಟಾರ್ಪಲ್ ಕೂಡ ಅರ್ಧ ಸುಟ್ಟು ಹೋಗಿದೆ. ಹಾಗಾಗಿ ಕೋವಿಡ್-19ರ ಸಮಯದಲ್ಲಿ ಸಮಸ್ಯೆ ಎದುರಿಸುತ್ತಿರುವ ಈ ಕುಟುಂಬಗಳ ನೆರವಿಗೆ ಜಿಲ್ಲಾಡಳಿತ ಮತ್ತು ಪಾಲಿಕೆ ಬರಬೇಕಾಗಿದೆ.

ನಗರದ ನಡುವೆಯೂ ಗುಡಿಸಲುಗಳಲ್ಲಿ ಬದುಕುತ್ತಿರುವ 40 ಕ್ಕೂ ಹೆಚ್ಚು ಕುಟುಂಬಗಳು ಮಳೆಗಾಲದಲ್ಲಿ ಇಡೀ ವಾಸಸ್ಥಳ ಜಲಾವೃತವಾಗುತ್ತದೆ. ಸುತ್ತಲೂ ಪೋದೆ ಇರುವುದರಿಂದ ಹಾವು, ಚೇಳು, ಸೊಳ್ಳೆಗಳು ಸೇರಿ ವಿಷಜಂತುಗಳ ಹಾವಳಿ ಇದೆ. ಇಂತಹ ಅಮಾನವೀಯ ಪರಿಸ್ಥಿತಿಯಲ್ಲಿ ಬದುಕುತ್ತಿರುವ ಈ ಕುಟುಂಬಗಳಿಗೆ ಮಾನವೀಯ ನೆರವಿನ ಹಸ್ತ ನೀಡಬೇಕಾಗಿದೆ. ನಾಗರಿಕರೆಂದು ಕರೆಸಿಕೊಳ್ಳುವವರು ಬಡಕುಟುಂಬಗಳ ಸಂಕಷ್ಟಕ್ಕೆ ಮನ ಮಿಡಿಯಬೇಕಾಗಿದೆ.


ಓದಿ: ವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...