Homeಕರ್ನಾಟಕಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ - ಆರೋಪ

ಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ – ಆರೋಪ

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.

- Advertisement -
- Advertisement -

ತುಮಕೂರು ನಗರದ ಬನಶಂಕರಿ ಎರಡನೇ ಹಂತದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ಎಳವ ಜೋಗರ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿದೆ. ಕನಿಷ್ಠ ನಾಗರಿಕ ಸೌಲಭ್ಯಗಳೂ ಇಲ್ಲದ ಇಲ್ಲಿನ ಗುಡಿಸಲುಗಳಿಗೆ ಬೆಂಕಿ ಹಚ್ಚುವ ಪ್ರಕರಣಗಳು ನಡೆಯುತ್ತಲೇ ಇವೆ. ಕಿಡಿಗೇಡಿಗಳ ಇಂತಹ ಕ್ರಮಗಳಿಂದ ಎಳವ ಜೋಗರ ಕುಟುಂಬಗಳು ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುವಂತಹ ಪರಿಸ್ಥಿತಿ ಇದೆ.

ಇಸ್ಮಾಯಿಲ್ ನಗರ ಸಮೀಪವೇ ಪೊದೆಯ ನಡುವೆ 40 ಕುಟುಂಬಗಳು ವಾಸಿಸುತ್ತಿವೆ. ಎಳವ ಜೋಗರು, ರಂಗೋಲಿ ಪುಡಿ ಮಾಡಿ ಮಾರುವ ಲಂಬಾಣಿಗಳ ಕುಟುಂಬಗಳು ಇಲ್ಲಿವೆ. ಬೆಳಕಿನ ಸೌಕರ್ಯ ಇಲ್ಲ. ಕುಡಿವ ನೀರಿನ ಸೌಲಭ್ಯ ಇಲ್ಲ. ಇಂತಹ ಸಂಕಷ್ಟದಲ್ಲಿ ಬದುಕು ಕಟ್ಟಿಕೊಳ್ಳುತ್ತಿರುವ ಈ ಕುಟುಂಬಗಳ ಗುಡಿಸಲುಗಳಿಗೆ ಪದೇಪದೇ ಬೆಂಕಿ ಹಚ್ಚಿ ಅವರನ್ನು ಅಲ್ಲಿಂದ ಓಡಿಸುವ ತಂತ್ರಗಳು ನಡೆಯುತ್ತಲೇ ಬರುತ್ತಿವೆ.

ಆಗಸ್ಟ್ 11ರ ಮುಂಜಾನೆ ಸುಮಾರು 1.30 ರ ಸಮಯದಲ್ಲಿ ಗುರುಸ್ವಾಮಿ ಮತ್ತು ಗಂಗಮ್ಮ ಅವರಿಗೆ ಸೇರಿದ ಗುಡಿಸಲಿಗೆ ಬೆಂಕಿ ಹಚ್ಚಲಾಗಿದೆ. ಪರಿಣಾಮ ಗುಡಿಸಲಿನಲ್ಲಿ ಮಲಗಿದ್ದ ಎಂಟು ಮಂದಿ ನೂಲೆಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ತಂದೆತಾಯಿಗಳು ಸೇರಿ ಆರು ಮಂದಿ ಮಕ್ಕಳ ಬಟ್ಟೆಗಳು ಸುಟ್ಟು ಭಸ್ಮವಾಗಿವೆ. ದವಸ ಧಾನ್ಯಗಳು ಬೆಂಕಿಯಲ್ಲಿ ಬೂದಿಯಾಗಿವೆ. ಇದು ಅಲ್ಲಿನ ನಿವಾಸಿಗಳನ್ನು ಆತಂಕಗೊಳ್ಳುವಂತೆ ಮಾಡಿದೆ.

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಬೆಂಕಿ ಹಚ್ಚುವುದನ್ನು ಯಾರು ಮಾಡುತ್ತಿದ್ದಾರೆ ಎಂಬ ಮಾಹಿತಿ ಇದುವರೆಗೂ ಗೊತ್ತಾಗಿಲ್ಲ. ಈ ಕುಟುಂಬಗಳು ನೀಡುವ ದೂರನ್ನು ದಾಖಲಿಸಿಕೊಳ್ಳುವ ಪೊಲೀಸರು ಮತ್ತೆ ಅದರ ಬಗ್ಗೆ ಕ್ರಮ ವಹಿಸುವ ಗೋಜಿಗೇ ಹೋಗುತ್ತಿಲ್ಲ ಎಂದು ದೂರಲಾಗಿದೆ.

ನಾನು ಗೌರಿ.ಕಾಂ ಜೊತೆ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಮಾತನಾಡಿದರು. ಬೆಂಕಿ ಹಚ್ಚುವ ಪ್ರಕರಣಗಳಿಂದ ಎಳವ ಜೋಗರು ಮತ್ತು ಲಂಬಾಣಿ ಕುಟುಂಬಗಳು ಜೀವಭಯದಿಂದ ಬದುಕು ನಡೆಸುವಂತಾಗಿದೆ. ಇಲ್ಲಿ ವಾಸವಾಗಿರುವ ಕುಟುಂಬಗಳಿಗೆ ಪುನರ್ ವಸತಿಯನ್ನು ಕಲ್ಪಿಸುವ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ತುಮಕೂರು ಹೊರವಲಯದ ಅಣ್ಣೇನಹಳ್ಳಿ ಬಳಿ ಇವರ ವಾಸಕ್ಕೆ ಜಾಗ ಗುರಿತಿಸಿದರು. ಆದರೆ ಸ್ಥಳೀಯರಿಂದ ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಅಲ್ಲಿಗೆ ಕೈಬಿಡಲಾಯಿತು.

ಅಜ್ಜಗೊಂಡನಹಳ್ಳಿಯ ಘನತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಮತ್ತೆ ಸ್ಥಳ ಗುರುತಿಸಲಾಯಿತು. ಘಟಕದ ನಿರ್ವಹಣೆಯಿಲ್ಲದೆ ದುರ್ನಾತ ಬೀರುತ್ತಿರುವ ಕಾರಣದಿಂದ ಎಳವ ಜೋಗಿ ಕುಟುಂಬಗಳು ಅಲ್ಲಿಗೆ ಹೋಗಲು ನಿರಾಕರಿಸಿದವು. ಅವರಿಗೆ ಪುನರ್ ವಸತಿ ಕಲ್ಪಿಸಲು ಯಾರೂ ಜಾಗ ನೀಡಲು ಮುಂದೆ ಬರುತ್ತಿಲ್ಲ. ಇದು ದೊಡ್ಡ ಸಮಸ್ಯೆಯಾಗಿದೆ. ಪಾಲಿಕೆಯೂ ಸಮರ್ಪಕ ಜಾಗ ಗುರುತಿಸಿಲ್ಲ. ಕೂಡಲೇ ಅವರಿಗೆ ಪರ್ಯಾಯ ಜಾಗ ಗುರುತಿಸಿ ಪುನರ್ ವಸತಿ ಕಲ್ಪಿಸಬೇಕು. ಇಲ್ಲದಿದ್ದರೆ ಅವರ ಗೋಳು ತಪ್ಪಿದ್ದಲ್ಲ ಎಂದು ಹೇಳಿದರು.

ಗುಡಿಸಲಿಗೆ ಬೆಂಕಿ ಬಿದ್ದು ಬಟ್ಟೆಗಳು ಮತ್ತು ದವಸ ಧಾನ್ಯಗಳನ್ನು ಕಳೆದುಕೊಂಡಿರುವ ಗುರುಸ್ವಾಮಿ ಕುಟುಂಬ ಇದೀಗ ಜೀವನ ನಿರ್ವಹಣೆಗೆ ತೊಂದರೆಪಡುತ್ತಿದೆ. ಗುಡಿಸಲಿಗೆ ಹಾಕಿದ್ದ ಟಾರ್ಪಲ್ ಕೂಡ ಅರ್ಧ ಸುಟ್ಟು ಹೋಗಿದೆ. ಹಾಗಾಗಿ ಕೋವಿಡ್-19ರ ಸಮಯದಲ್ಲಿ ಸಮಸ್ಯೆ ಎದುರಿಸುತ್ತಿರುವ ಈ ಕುಟುಂಬಗಳ ನೆರವಿಗೆ ಜಿಲ್ಲಾಡಳಿತ ಮತ್ತು ಪಾಲಿಕೆ ಬರಬೇಕಾಗಿದೆ.

ನಗರದ ನಡುವೆಯೂ ಗುಡಿಸಲುಗಳಲ್ಲಿ ಬದುಕುತ್ತಿರುವ 40 ಕ್ಕೂ ಹೆಚ್ಚು ಕುಟುಂಬಗಳು ಮಳೆಗಾಲದಲ್ಲಿ ಇಡೀ ವಾಸಸ್ಥಳ ಜಲಾವೃತವಾಗುತ್ತದೆ. ಸುತ್ತಲೂ ಪೋದೆ ಇರುವುದರಿಂದ ಹಾವು, ಚೇಳು, ಸೊಳ್ಳೆಗಳು ಸೇರಿ ವಿಷಜಂತುಗಳ ಹಾವಳಿ ಇದೆ. ಇಂತಹ ಅಮಾನವೀಯ ಪರಿಸ್ಥಿತಿಯಲ್ಲಿ ಬದುಕುತ್ತಿರುವ ಈ ಕುಟುಂಬಗಳಿಗೆ ಮಾನವೀಯ ನೆರವಿನ ಹಸ್ತ ನೀಡಬೇಕಾಗಿದೆ. ನಾಗರಿಕರೆಂದು ಕರೆಸಿಕೊಳ್ಳುವವರು ಬಡಕುಟುಂಬಗಳ ಸಂಕಷ್ಟಕ್ಕೆ ಮನ ಮಿಡಿಯಬೇಕಾಗಿದೆ.


ಓದಿ: ವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...