Homeಕರ್ನಾಟಕಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ - ಆರೋಪ

ಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ – ಆರೋಪ

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.

- Advertisement -
- Advertisement -

ತುಮಕೂರು ನಗರದ ಬನಶಂಕರಿ ಎರಡನೇ ಹಂತದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ಎಳವ ಜೋಗರ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿದೆ. ಕನಿಷ್ಠ ನಾಗರಿಕ ಸೌಲಭ್ಯಗಳೂ ಇಲ್ಲದ ಇಲ್ಲಿನ ಗುಡಿಸಲುಗಳಿಗೆ ಬೆಂಕಿ ಹಚ್ಚುವ ಪ್ರಕರಣಗಳು ನಡೆಯುತ್ತಲೇ ಇವೆ. ಕಿಡಿಗೇಡಿಗಳ ಇಂತಹ ಕ್ರಮಗಳಿಂದ ಎಳವ ಜೋಗರ ಕುಟುಂಬಗಳು ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುವಂತಹ ಪರಿಸ್ಥಿತಿ ಇದೆ.

ಇಸ್ಮಾಯಿಲ್ ನಗರ ಸಮೀಪವೇ ಪೊದೆಯ ನಡುವೆ 40 ಕುಟುಂಬಗಳು ವಾಸಿಸುತ್ತಿವೆ. ಎಳವ ಜೋಗರು, ರಂಗೋಲಿ ಪುಡಿ ಮಾಡಿ ಮಾರುವ ಲಂಬಾಣಿಗಳ ಕುಟುಂಬಗಳು ಇಲ್ಲಿವೆ. ಬೆಳಕಿನ ಸೌಕರ್ಯ ಇಲ್ಲ. ಕುಡಿವ ನೀರಿನ ಸೌಲಭ್ಯ ಇಲ್ಲ. ಇಂತಹ ಸಂಕಷ್ಟದಲ್ಲಿ ಬದುಕು ಕಟ್ಟಿಕೊಳ್ಳುತ್ತಿರುವ ಈ ಕುಟುಂಬಗಳ ಗುಡಿಸಲುಗಳಿಗೆ ಪದೇಪದೇ ಬೆಂಕಿ ಹಚ್ಚಿ ಅವರನ್ನು ಅಲ್ಲಿಂದ ಓಡಿಸುವ ತಂತ್ರಗಳು ನಡೆಯುತ್ತಲೇ ಬರುತ್ತಿವೆ.

ಆಗಸ್ಟ್ 11ರ ಮುಂಜಾನೆ ಸುಮಾರು 1.30 ರ ಸಮಯದಲ್ಲಿ ಗುರುಸ್ವಾಮಿ ಮತ್ತು ಗಂಗಮ್ಮ ಅವರಿಗೆ ಸೇರಿದ ಗುಡಿಸಲಿಗೆ ಬೆಂಕಿ ಹಚ್ಚಲಾಗಿದೆ. ಪರಿಣಾಮ ಗುಡಿಸಲಿನಲ್ಲಿ ಮಲಗಿದ್ದ ಎಂಟು ಮಂದಿ ನೂಲೆಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ತಂದೆತಾಯಿಗಳು ಸೇರಿ ಆರು ಮಂದಿ ಮಕ್ಕಳ ಬಟ್ಟೆಗಳು ಸುಟ್ಟು ಭಸ್ಮವಾಗಿವೆ. ದವಸ ಧಾನ್ಯಗಳು ಬೆಂಕಿಯಲ್ಲಿ ಬೂದಿಯಾಗಿವೆ. ಇದು ಅಲ್ಲಿನ ನಿವಾಸಿಗಳನ್ನು ಆತಂಕಗೊಳ್ಳುವಂತೆ ಮಾಡಿದೆ.

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಬೆಂಕಿ ಹಚ್ಚುವುದನ್ನು ಯಾರು ಮಾಡುತ್ತಿದ್ದಾರೆ ಎಂಬ ಮಾಹಿತಿ ಇದುವರೆಗೂ ಗೊತ್ತಾಗಿಲ್ಲ. ಈ ಕುಟುಂಬಗಳು ನೀಡುವ ದೂರನ್ನು ದಾಖಲಿಸಿಕೊಳ್ಳುವ ಪೊಲೀಸರು ಮತ್ತೆ ಅದರ ಬಗ್ಗೆ ಕ್ರಮ ವಹಿಸುವ ಗೋಜಿಗೇ ಹೋಗುತ್ತಿಲ್ಲ ಎಂದು ದೂರಲಾಗಿದೆ.

ನಾನು ಗೌರಿ.ಕಾಂ ಜೊತೆ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಮಾತನಾಡಿದರು. ಬೆಂಕಿ ಹಚ್ಚುವ ಪ್ರಕರಣಗಳಿಂದ ಎಳವ ಜೋಗರು ಮತ್ತು ಲಂಬಾಣಿ ಕುಟುಂಬಗಳು ಜೀವಭಯದಿಂದ ಬದುಕು ನಡೆಸುವಂತಾಗಿದೆ. ಇಲ್ಲಿ ವಾಸವಾಗಿರುವ ಕುಟುಂಬಗಳಿಗೆ ಪುನರ್ ವಸತಿಯನ್ನು ಕಲ್ಪಿಸುವ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ತುಮಕೂರು ಹೊರವಲಯದ ಅಣ್ಣೇನಹಳ್ಳಿ ಬಳಿ ಇವರ ವಾಸಕ್ಕೆ ಜಾಗ ಗುರಿತಿಸಿದರು. ಆದರೆ ಸ್ಥಳೀಯರಿಂದ ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಅಲ್ಲಿಗೆ ಕೈಬಿಡಲಾಯಿತು.

ಅಜ್ಜಗೊಂಡನಹಳ್ಳಿಯ ಘನತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಮತ್ತೆ ಸ್ಥಳ ಗುರುತಿಸಲಾಯಿತು. ಘಟಕದ ನಿರ್ವಹಣೆಯಿಲ್ಲದೆ ದುರ್ನಾತ ಬೀರುತ್ತಿರುವ ಕಾರಣದಿಂದ ಎಳವ ಜೋಗಿ ಕುಟುಂಬಗಳು ಅಲ್ಲಿಗೆ ಹೋಗಲು ನಿರಾಕರಿಸಿದವು. ಅವರಿಗೆ ಪುನರ್ ವಸತಿ ಕಲ್ಪಿಸಲು ಯಾರೂ ಜಾಗ ನೀಡಲು ಮುಂದೆ ಬರುತ್ತಿಲ್ಲ. ಇದು ದೊಡ್ಡ ಸಮಸ್ಯೆಯಾಗಿದೆ. ಪಾಲಿಕೆಯೂ ಸಮರ್ಪಕ ಜಾಗ ಗುರುತಿಸಿಲ್ಲ. ಕೂಡಲೇ ಅವರಿಗೆ ಪರ್ಯಾಯ ಜಾಗ ಗುರುತಿಸಿ ಪುನರ್ ವಸತಿ ಕಲ್ಪಿಸಬೇಕು. ಇಲ್ಲದಿದ್ದರೆ ಅವರ ಗೋಳು ತಪ್ಪಿದ್ದಲ್ಲ ಎಂದು ಹೇಳಿದರು.

ಗುಡಿಸಲಿಗೆ ಬೆಂಕಿ ಬಿದ್ದು ಬಟ್ಟೆಗಳು ಮತ್ತು ದವಸ ಧಾನ್ಯಗಳನ್ನು ಕಳೆದುಕೊಂಡಿರುವ ಗುರುಸ್ವಾಮಿ ಕುಟುಂಬ ಇದೀಗ ಜೀವನ ನಿರ್ವಹಣೆಗೆ ತೊಂದರೆಪಡುತ್ತಿದೆ. ಗುಡಿಸಲಿಗೆ ಹಾಕಿದ್ದ ಟಾರ್ಪಲ್ ಕೂಡ ಅರ್ಧ ಸುಟ್ಟು ಹೋಗಿದೆ. ಹಾಗಾಗಿ ಕೋವಿಡ್-19ರ ಸಮಯದಲ್ಲಿ ಸಮಸ್ಯೆ ಎದುರಿಸುತ್ತಿರುವ ಈ ಕುಟುಂಬಗಳ ನೆರವಿಗೆ ಜಿಲ್ಲಾಡಳಿತ ಮತ್ತು ಪಾಲಿಕೆ ಬರಬೇಕಾಗಿದೆ.

ನಗರದ ನಡುವೆಯೂ ಗುಡಿಸಲುಗಳಲ್ಲಿ ಬದುಕುತ್ತಿರುವ 40 ಕ್ಕೂ ಹೆಚ್ಚು ಕುಟುಂಬಗಳು ಮಳೆಗಾಲದಲ್ಲಿ ಇಡೀ ವಾಸಸ್ಥಳ ಜಲಾವೃತವಾಗುತ್ತದೆ. ಸುತ್ತಲೂ ಪೋದೆ ಇರುವುದರಿಂದ ಹಾವು, ಚೇಳು, ಸೊಳ್ಳೆಗಳು ಸೇರಿ ವಿಷಜಂತುಗಳ ಹಾವಳಿ ಇದೆ. ಇಂತಹ ಅಮಾನವೀಯ ಪರಿಸ್ಥಿತಿಯಲ್ಲಿ ಬದುಕುತ್ತಿರುವ ಈ ಕುಟುಂಬಗಳಿಗೆ ಮಾನವೀಯ ನೆರವಿನ ಹಸ್ತ ನೀಡಬೇಕಾಗಿದೆ. ನಾಗರಿಕರೆಂದು ಕರೆಸಿಕೊಳ್ಳುವವರು ಬಡಕುಟುಂಬಗಳ ಸಂಕಷ್ಟಕ್ಕೆ ಮನ ಮಿಡಿಯಬೇಕಾಗಿದೆ.


ಓದಿ: ವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...