Homeಕರ್ನಾಟಕಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ - ಆರೋಪ

ಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ – ಆರೋಪ

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.

- Advertisement -
- Advertisement -

ತುಮಕೂರು ನಗರದ ಬನಶಂಕರಿ ಎರಡನೇ ಹಂತದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ಎಳವ ಜೋಗರ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿದೆ. ಕನಿಷ್ಠ ನಾಗರಿಕ ಸೌಲಭ್ಯಗಳೂ ಇಲ್ಲದ ಇಲ್ಲಿನ ಗುಡಿಸಲುಗಳಿಗೆ ಬೆಂಕಿ ಹಚ್ಚುವ ಪ್ರಕರಣಗಳು ನಡೆಯುತ್ತಲೇ ಇವೆ. ಕಿಡಿಗೇಡಿಗಳ ಇಂತಹ ಕ್ರಮಗಳಿಂದ ಎಳವ ಜೋಗರ ಕುಟುಂಬಗಳು ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುವಂತಹ ಪರಿಸ್ಥಿತಿ ಇದೆ.

ಇಸ್ಮಾಯಿಲ್ ನಗರ ಸಮೀಪವೇ ಪೊದೆಯ ನಡುವೆ 40 ಕುಟುಂಬಗಳು ವಾಸಿಸುತ್ತಿವೆ. ಎಳವ ಜೋಗರು, ರಂಗೋಲಿ ಪುಡಿ ಮಾಡಿ ಮಾರುವ ಲಂಬಾಣಿಗಳ ಕುಟುಂಬಗಳು ಇಲ್ಲಿವೆ. ಬೆಳಕಿನ ಸೌಕರ್ಯ ಇಲ್ಲ. ಕುಡಿವ ನೀರಿನ ಸೌಲಭ್ಯ ಇಲ್ಲ. ಇಂತಹ ಸಂಕಷ್ಟದಲ್ಲಿ ಬದುಕು ಕಟ್ಟಿಕೊಳ್ಳುತ್ತಿರುವ ಈ ಕುಟುಂಬಗಳ ಗುಡಿಸಲುಗಳಿಗೆ ಪದೇಪದೇ ಬೆಂಕಿ ಹಚ್ಚಿ ಅವರನ್ನು ಅಲ್ಲಿಂದ ಓಡಿಸುವ ತಂತ್ರಗಳು ನಡೆಯುತ್ತಲೇ ಬರುತ್ತಿವೆ.

ಆಗಸ್ಟ್ 11ರ ಮುಂಜಾನೆ ಸುಮಾರು 1.30 ರ ಸಮಯದಲ್ಲಿ ಗುರುಸ್ವಾಮಿ ಮತ್ತು ಗಂಗಮ್ಮ ಅವರಿಗೆ ಸೇರಿದ ಗುಡಿಸಲಿಗೆ ಬೆಂಕಿ ಹಚ್ಚಲಾಗಿದೆ. ಪರಿಣಾಮ ಗುಡಿಸಲಿನಲ್ಲಿ ಮಲಗಿದ್ದ ಎಂಟು ಮಂದಿ ನೂಲೆಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ತಂದೆತಾಯಿಗಳು ಸೇರಿ ಆರು ಮಂದಿ ಮಕ್ಕಳ ಬಟ್ಟೆಗಳು ಸುಟ್ಟು ಭಸ್ಮವಾಗಿವೆ. ದವಸ ಧಾನ್ಯಗಳು ಬೆಂಕಿಯಲ್ಲಿ ಬೂದಿಯಾಗಿವೆ. ಇದು ಅಲ್ಲಿನ ನಿವಾಸಿಗಳನ್ನು ಆತಂಕಗೊಳ್ಳುವಂತೆ ಮಾಡಿದೆ.

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಬೆಂಕಿ ಹಚ್ಚುವುದನ್ನು ಯಾರು ಮಾಡುತ್ತಿದ್ದಾರೆ ಎಂಬ ಮಾಹಿತಿ ಇದುವರೆಗೂ ಗೊತ್ತಾಗಿಲ್ಲ. ಈ ಕುಟುಂಬಗಳು ನೀಡುವ ದೂರನ್ನು ದಾಖಲಿಸಿಕೊಳ್ಳುವ ಪೊಲೀಸರು ಮತ್ತೆ ಅದರ ಬಗ್ಗೆ ಕ್ರಮ ವಹಿಸುವ ಗೋಜಿಗೇ ಹೋಗುತ್ತಿಲ್ಲ ಎಂದು ದೂರಲಾಗಿದೆ.

ನಾನು ಗೌರಿ.ಕಾಂ ಜೊತೆ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಮಾತನಾಡಿದರು. ಬೆಂಕಿ ಹಚ್ಚುವ ಪ್ರಕರಣಗಳಿಂದ ಎಳವ ಜೋಗರು ಮತ್ತು ಲಂಬಾಣಿ ಕುಟುಂಬಗಳು ಜೀವಭಯದಿಂದ ಬದುಕು ನಡೆಸುವಂತಾಗಿದೆ. ಇಲ್ಲಿ ವಾಸವಾಗಿರುವ ಕುಟುಂಬಗಳಿಗೆ ಪುನರ್ ವಸತಿಯನ್ನು ಕಲ್ಪಿಸುವ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ತುಮಕೂರು ಹೊರವಲಯದ ಅಣ್ಣೇನಹಳ್ಳಿ ಬಳಿ ಇವರ ವಾಸಕ್ಕೆ ಜಾಗ ಗುರಿತಿಸಿದರು. ಆದರೆ ಸ್ಥಳೀಯರಿಂದ ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಅಲ್ಲಿಗೆ ಕೈಬಿಡಲಾಯಿತು.

ಅಜ್ಜಗೊಂಡನಹಳ್ಳಿಯ ಘನತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಮತ್ತೆ ಸ್ಥಳ ಗುರುತಿಸಲಾಯಿತು. ಘಟಕದ ನಿರ್ವಹಣೆಯಿಲ್ಲದೆ ದುರ್ನಾತ ಬೀರುತ್ತಿರುವ ಕಾರಣದಿಂದ ಎಳವ ಜೋಗಿ ಕುಟುಂಬಗಳು ಅಲ್ಲಿಗೆ ಹೋಗಲು ನಿರಾಕರಿಸಿದವು. ಅವರಿಗೆ ಪುನರ್ ವಸತಿ ಕಲ್ಪಿಸಲು ಯಾರೂ ಜಾಗ ನೀಡಲು ಮುಂದೆ ಬರುತ್ತಿಲ್ಲ. ಇದು ದೊಡ್ಡ ಸಮಸ್ಯೆಯಾಗಿದೆ. ಪಾಲಿಕೆಯೂ ಸಮರ್ಪಕ ಜಾಗ ಗುರುತಿಸಿಲ್ಲ. ಕೂಡಲೇ ಅವರಿಗೆ ಪರ್ಯಾಯ ಜಾಗ ಗುರುತಿಸಿ ಪುನರ್ ವಸತಿ ಕಲ್ಪಿಸಬೇಕು. ಇಲ್ಲದಿದ್ದರೆ ಅವರ ಗೋಳು ತಪ್ಪಿದ್ದಲ್ಲ ಎಂದು ಹೇಳಿದರು.

ಗುಡಿಸಲಿಗೆ ಬೆಂಕಿ ಬಿದ್ದು ಬಟ್ಟೆಗಳು ಮತ್ತು ದವಸ ಧಾನ್ಯಗಳನ್ನು ಕಳೆದುಕೊಂಡಿರುವ ಗುರುಸ್ವಾಮಿ ಕುಟುಂಬ ಇದೀಗ ಜೀವನ ನಿರ್ವಹಣೆಗೆ ತೊಂದರೆಪಡುತ್ತಿದೆ. ಗುಡಿಸಲಿಗೆ ಹಾಕಿದ್ದ ಟಾರ್ಪಲ್ ಕೂಡ ಅರ್ಧ ಸುಟ್ಟು ಹೋಗಿದೆ. ಹಾಗಾಗಿ ಕೋವಿಡ್-19ರ ಸಮಯದಲ್ಲಿ ಸಮಸ್ಯೆ ಎದುರಿಸುತ್ತಿರುವ ಈ ಕುಟುಂಬಗಳ ನೆರವಿಗೆ ಜಿಲ್ಲಾಡಳಿತ ಮತ್ತು ಪಾಲಿಕೆ ಬರಬೇಕಾಗಿದೆ.

ನಗರದ ನಡುವೆಯೂ ಗುಡಿಸಲುಗಳಲ್ಲಿ ಬದುಕುತ್ತಿರುವ 40 ಕ್ಕೂ ಹೆಚ್ಚು ಕುಟುಂಬಗಳು ಮಳೆಗಾಲದಲ್ಲಿ ಇಡೀ ವಾಸಸ್ಥಳ ಜಲಾವೃತವಾಗುತ್ತದೆ. ಸುತ್ತಲೂ ಪೋದೆ ಇರುವುದರಿಂದ ಹಾವು, ಚೇಳು, ಸೊಳ್ಳೆಗಳು ಸೇರಿ ವಿಷಜಂತುಗಳ ಹಾವಳಿ ಇದೆ. ಇಂತಹ ಅಮಾನವೀಯ ಪರಿಸ್ಥಿತಿಯಲ್ಲಿ ಬದುಕುತ್ತಿರುವ ಈ ಕುಟುಂಬಗಳಿಗೆ ಮಾನವೀಯ ನೆರವಿನ ಹಸ್ತ ನೀಡಬೇಕಾಗಿದೆ. ನಾಗರಿಕರೆಂದು ಕರೆಸಿಕೊಳ್ಳುವವರು ಬಡಕುಟುಂಬಗಳ ಸಂಕಷ್ಟಕ್ಕೆ ಮನ ಮಿಡಿಯಬೇಕಾಗಿದೆ.


ಓದಿ: ವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...