Homeಕರ್ನಾಟಕಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ - ಆರೋಪ

ಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ – ಆರೋಪ

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.

- Advertisement -
- Advertisement -

ತುಮಕೂರು ನಗರದ ಬನಶಂಕರಿ ಎರಡನೇ ಹಂತದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ಎಳವ ಜೋಗರ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿದೆ. ಕನಿಷ್ಠ ನಾಗರಿಕ ಸೌಲಭ್ಯಗಳೂ ಇಲ್ಲದ ಇಲ್ಲಿನ ಗುಡಿಸಲುಗಳಿಗೆ ಬೆಂಕಿ ಹಚ್ಚುವ ಪ್ರಕರಣಗಳು ನಡೆಯುತ್ತಲೇ ಇವೆ. ಕಿಡಿಗೇಡಿಗಳ ಇಂತಹ ಕ್ರಮಗಳಿಂದ ಎಳವ ಜೋಗರ ಕುಟುಂಬಗಳು ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುವಂತಹ ಪರಿಸ್ಥಿತಿ ಇದೆ.

ಇಸ್ಮಾಯಿಲ್ ನಗರ ಸಮೀಪವೇ ಪೊದೆಯ ನಡುವೆ 40 ಕುಟುಂಬಗಳು ವಾಸಿಸುತ್ತಿವೆ. ಎಳವ ಜೋಗರು, ರಂಗೋಲಿ ಪುಡಿ ಮಾಡಿ ಮಾರುವ ಲಂಬಾಣಿಗಳ ಕುಟುಂಬಗಳು ಇಲ್ಲಿವೆ. ಬೆಳಕಿನ ಸೌಕರ್ಯ ಇಲ್ಲ. ಕುಡಿವ ನೀರಿನ ಸೌಲಭ್ಯ ಇಲ್ಲ. ಇಂತಹ ಸಂಕಷ್ಟದಲ್ಲಿ ಬದುಕು ಕಟ್ಟಿಕೊಳ್ಳುತ್ತಿರುವ ಈ ಕುಟುಂಬಗಳ ಗುಡಿಸಲುಗಳಿಗೆ ಪದೇಪದೇ ಬೆಂಕಿ ಹಚ್ಚಿ ಅವರನ್ನು ಅಲ್ಲಿಂದ ಓಡಿಸುವ ತಂತ್ರಗಳು ನಡೆಯುತ್ತಲೇ ಬರುತ್ತಿವೆ.

ಆಗಸ್ಟ್ 11ರ ಮುಂಜಾನೆ ಸುಮಾರು 1.30 ರ ಸಮಯದಲ್ಲಿ ಗುರುಸ್ವಾಮಿ ಮತ್ತು ಗಂಗಮ್ಮ ಅವರಿಗೆ ಸೇರಿದ ಗುಡಿಸಲಿಗೆ ಬೆಂಕಿ ಹಚ್ಚಲಾಗಿದೆ. ಪರಿಣಾಮ ಗುಡಿಸಲಿನಲ್ಲಿ ಮಲಗಿದ್ದ ಎಂಟು ಮಂದಿ ನೂಲೆಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ತಂದೆತಾಯಿಗಳು ಸೇರಿ ಆರು ಮಂದಿ ಮಕ್ಕಳ ಬಟ್ಟೆಗಳು ಸುಟ್ಟು ಭಸ್ಮವಾಗಿವೆ. ದವಸ ಧಾನ್ಯಗಳು ಬೆಂಕಿಯಲ್ಲಿ ಬೂದಿಯಾಗಿವೆ. ಇದು ಅಲ್ಲಿನ ನಿವಾಸಿಗಳನ್ನು ಆತಂಕಗೊಳ್ಳುವಂತೆ ಮಾಡಿದೆ.

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಬೆಂಕಿ ಹಚ್ಚುವುದನ್ನು ಯಾರು ಮಾಡುತ್ತಿದ್ದಾರೆ ಎಂಬ ಮಾಹಿತಿ ಇದುವರೆಗೂ ಗೊತ್ತಾಗಿಲ್ಲ. ಈ ಕುಟುಂಬಗಳು ನೀಡುವ ದೂರನ್ನು ದಾಖಲಿಸಿಕೊಳ್ಳುವ ಪೊಲೀಸರು ಮತ್ತೆ ಅದರ ಬಗ್ಗೆ ಕ್ರಮ ವಹಿಸುವ ಗೋಜಿಗೇ ಹೋಗುತ್ತಿಲ್ಲ ಎಂದು ದೂರಲಾಗಿದೆ.

ನಾನು ಗೌರಿ.ಕಾಂ ಜೊತೆ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಮಾತನಾಡಿದರು. ಬೆಂಕಿ ಹಚ್ಚುವ ಪ್ರಕರಣಗಳಿಂದ ಎಳವ ಜೋಗರು ಮತ್ತು ಲಂಬಾಣಿ ಕುಟುಂಬಗಳು ಜೀವಭಯದಿಂದ ಬದುಕು ನಡೆಸುವಂತಾಗಿದೆ. ಇಲ್ಲಿ ವಾಸವಾಗಿರುವ ಕುಟುಂಬಗಳಿಗೆ ಪುನರ್ ವಸತಿಯನ್ನು ಕಲ್ಪಿಸುವ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ತುಮಕೂರು ಹೊರವಲಯದ ಅಣ್ಣೇನಹಳ್ಳಿ ಬಳಿ ಇವರ ವಾಸಕ್ಕೆ ಜಾಗ ಗುರಿತಿಸಿದರು. ಆದರೆ ಸ್ಥಳೀಯರಿಂದ ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಅಲ್ಲಿಗೆ ಕೈಬಿಡಲಾಯಿತು.

ಅಜ್ಜಗೊಂಡನಹಳ್ಳಿಯ ಘನತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಮತ್ತೆ ಸ್ಥಳ ಗುರುತಿಸಲಾಯಿತು. ಘಟಕದ ನಿರ್ವಹಣೆಯಿಲ್ಲದೆ ದುರ್ನಾತ ಬೀರುತ್ತಿರುವ ಕಾರಣದಿಂದ ಎಳವ ಜೋಗಿ ಕುಟುಂಬಗಳು ಅಲ್ಲಿಗೆ ಹೋಗಲು ನಿರಾಕರಿಸಿದವು. ಅವರಿಗೆ ಪುನರ್ ವಸತಿ ಕಲ್ಪಿಸಲು ಯಾರೂ ಜಾಗ ನೀಡಲು ಮುಂದೆ ಬರುತ್ತಿಲ್ಲ. ಇದು ದೊಡ್ಡ ಸಮಸ್ಯೆಯಾಗಿದೆ. ಪಾಲಿಕೆಯೂ ಸಮರ್ಪಕ ಜಾಗ ಗುರುತಿಸಿಲ್ಲ. ಕೂಡಲೇ ಅವರಿಗೆ ಪರ್ಯಾಯ ಜಾಗ ಗುರುತಿಸಿ ಪುನರ್ ವಸತಿ ಕಲ್ಪಿಸಬೇಕು. ಇಲ್ಲದಿದ್ದರೆ ಅವರ ಗೋಳು ತಪ್ಪಿದ್ದಲ್ಲ ಎಂದು ಹೇಳಿದರು.

ಗುಡಿಸಲಿಗೆ ಬೆಂಕಿ ಬಿದ್ದು ಬಟ್ಟೆಗಳು ಮತ್ತು ದವಸ ಧಾನ್ಯಗಳನ್ನು ಕಳೆದುಕೊಂಡಿರುವ ಗುರುಸ್ವಾಮಿ ಕುಟುಂಬ ಇದೀಗ ಜೀವನ ನಿರ್ವಹಣೆಗೆ ತೊಂದರೆಪಡುತ್ತಿದೆ. ಗುಡಿಸಲಿಗೆ ಹಾಕಿದ್ದ ಟಾರ್ಪಲ್ ಕೂಡ ಅರ್ಧ ಸುಟ್ಟು ಹೋಗಿದೆ. ಹಾಗಾಗಿ ಕೋವಿಡ್-19ರ ಸಮಯದಲ್ಲಿ ಸಮಸ್ಯೆ ಎದುರಿಸುತ್ತಿರುವ ಈ ಕುಟುಂಬಗಳ ನೆರವಿಗೆ ಜಿಲ್ಲಾಡಳಿತ ಮತ್ತು ಪಾಲಿಕೆ ಬರಬೇಕಾಗಿದೆ.

ನಗರದ ನಡುವೆಯೂ ಗುಡಿಸಲುಗಳಲ್ಲಿ ಬದುಕುತ್ತಿರುವ 40 ಕ್ಕೂ ಹೆಚ್ಚು ಕುಟುಂಬಗಳು ಮಳೆಗಾಲದಲ್ಲಿ ಇಡೀ ವಾಸಸ್ಥಳ ಜಲಾವೃತವಾಗುತ್ತದೆ. ಸುತ್ತಲೂ ಪೋದೆ ಇರುವುದರಿಂದ ಹಾವು, ಚೇಳು, ಸೊಳ್ಳೆಗಳು ಸೇರಿ ವಿಷಜಂತುಗಳ ಹಾವಳಿ ಇದೆ. ಇಂತಹ ಅಮಾನವೀಯ ಪರಿಸ್ಥಿತಿಯಲ್ಲಿ ಬದುಕುತ್ತಿರುವ ಈ ಕುಟುಂಬಗಳಿಗೆ ಮಾನವೀಯ ನೆರವಿನ ಹಸ್ತ ನೀಡಬೇಕಾಗಿದೆ. ನಾಗರಿಕರೆಂದು ಕರೆಸಿಕೊಳ್ಳುವವರು ಬಡಕುಟುಂಬಗಳ ಸಂಕಷ್ಟಕ್ಕೆ ಮನ ಮಿಡಿಯಬೇಕಾಗಿದೆ.


ಓದಿ: ವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...