Homeಕರ್ನಾಟಕಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ - ಆರೋಪ

ಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ – ಆರೋಪ

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.

- Advertisement -
- Advertisement -

ತುಮಕೂರು ನಗರದ ಬನಶಂಕರಿ ಎರಡನೇ ಹಂತದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ಎಳವ ಜೋಗರ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿದೆ. ಕನಿಷ್ಠ ನಾಗರಿಕ ಸೌಲಭ್ಯಗಳೂ ಇಲ್ಲದ ಇಲ್ಲಿನ ಗುಡಿಸಲುಗಳಿಗೆ ಬೆಂಕಿ ಹಚ್ಚುವ ಪ್ರಕರಣಗಳು ನಡೆಯುತ್ತಲೇ ಇವೆ. ಕಿಡಿಗೇಡಿಗಳ ಇಂತಹ ಕ್ರಮಗಳಿಂದ ಎಳವ ಜೋಗರ ಕುಟುಂಬಗಳು ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುವಂತಹ ಪರಿಸ್ಥಿತಿ ಇದೆ.

ಇಸ್ಮಾಯಿಲ್ ನಗರ ಸಮೀಪವೇ ಪೊದೆಯ ನಡುವೆ 40 ಕುಟುಂಬಗಳು ವಾಸಿಸುತ್ತಿವೆ. ಎಳವ ಜೋಗರು, ರಂಗೋಲಿ ಪುಡಿ ಮಾಡಿ ಮಾರುವ ಲಂಬಾಣಿಗಳ ಕುಟುಂಬಗಳು ಇಲ್ಲಿವೆ. ಬೆಳಕಿನ ಸೌಕರ್ಯ ಇಲ್ಲ. ಕುಡಿವ ನೀರಿನ ಸೌಲಭ್ಯ ಇಲ್ಲ. ಇಂತಹ ಸಂಕಷ್ಟದಲ್ಲಿ ಬದುಕು ಕಟ್ಟಿಕೊಳ್ಳುತ್ತಿರುವ ಈ ಕುಟುಂಬಗಳ ಗುಡಿಸಲುಗಳಿಗೆ ಪದೇಪದೇ ಬೆಂಕಿ ಹಚ್ಚಿ ಅವರನ್ನು ಅಲ್ಲಿಂದ ಓಡಿಸುವ ತಂತ್ರಗಳು ನಡೆಯುತ್ತಲೇ ಬರುತ್ತಿವೆ.

ಆಗಸ್ಟ್ 11ರ ಮುಂಜಾನೆ ಸುಮಾರು 1.30 ರ ಸಮಯದಲ್ಲಿ ಗುರುಸ್ವಾಮಿ ಮತ್ತು ಗಂಗಮ್ಮ ಅವರಿಗೆ ಸೇರಿದ ಗುಡಿಸಲಿಗೆ ಬೆಂಕಿ ಹಚ್ಚಲಾಗಿದೆ. ಪರಿಣಾಮ ಗುಡಿಸಲಿನಲ್ಲಿ ಮಲಗಿದ್ದ ಎಂಟು ಮಂದಿ ನೂಲೆಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ತಂದೆತಾಯಿಗಳು ಸೇರಿ ಆರು ಮಂದಿ ಮಕ್ಕಳ ಬಟ್ಟೆಗಳು ಸುಟ್ಟು ಭಸ್ಮವಾಗಿವೆ. ದವಸ ಧಾನ್ಯಗಳು ಬೆಂಕಿಯಲ್ಲಿ ಬೂದಿಯಾಗಿವೆ. ಇದು ಅಲ್ಲಿನ ನಿವಾಸಿಗಳನ್ನು ಆತಂಕಗೊಳ್ಳುವಂತೆ ಮಾಡಿದೆ.

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಬೆಂಕಿ ಹಚ್ಚುವುದನ್ನು ಯಾರು ಮಾಡುತ್ತಿದ್ದಾರೆ ಎಂಬ ಮಾಹಿತಿ ಇದುವರೆಗೂ ಗೊತ್ತಾಗಿಲ್ಲ. ಈ ಕುಟುಂಬಗಳು ನೀಡುವ ದೂರನ್ನು ದಾಖಲಿಸಿಕೊಳ್ಳುವ ಪೊಲೀಸರು ಮತ್ತೆ ಅದರ ಬಗ್ಗೆ ಕ್ರಮ ವಹಿಸುವ ಗೋಜಿಗೇ ಹೋಗುತ್ತಿಲ್ಲ ಎಂದು ದೂರಲಾಗಿದೆ.

ನಾನು ಗೌರಿ.ಕಾಂ ಜೊತೆ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಮಾತನಾಡಿದರು. ಬೆಂಕಿ ಹಚ್ಚುವ ಪ್ರಕರಣಗಳಿಂದ ಎಳವ ಜೋಗರು ಮತ್ತು ಲಂಬಾಣಿ ಕುಟುಂಬಗಳು ಜೀವಭಯದಿಂದ ಬದುಕು ನಡೆಸುವಂತಾಗಿದೆ. ಇಲ್ಲಿ ವಾಸವಾಗಿರುವ ಕುಟುಂಬಗಳಿಗೆ ಪುನರ್ ವಸತಿಯನ್ನು ಕಲ್ಪಿಸುವ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ತುಮಕೂರು ಹೊರವಲಯದ ಅಣ್ಣೇನಹಳ್ಳಿ ಬಳಿ ಇವರ ವಾಸಕ್ಕೆ ಜಾಗ ಗುರಿತಿಸಿದರು. ಆದರೆ ಸ್ಥಳೀಯರಿಂದ ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಅಲ್ಲಿಗೆ ಕೈಬಿಡಲಾಯಿತು.

ಅಜ್ಜಗೊಂಡನಹಳ್ಳಿಯ ಘನತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಮತ್ತೆ ಸ್ಥಳ ಗುರುತಿಸಲಾಯಿತು. ಘಟಕದ ನಿರ್ವಹಣೆಯಿಲ್ಲದೆ ದುರ್ನಾತ ಬೀರುತ್ತಿರುವ ಕಾರಣದಿಂದ ಎಳವ ಜೋಗಿ ಕುಟುಂಬಗಳು ಅಲ್ಲಿಗೆ ಹೋಗಲು ನಿರಾಕರಿಸಿದವು. ಅವರಿಗೆ ಪುನರ್ ವಸತಿ ಕಲ್ಪಿಸಲು ಯಾರೂ ಜಾಗ ನೀಡಲು ಮುಂದೆ ಬರುತ್ತಿಲ್ಲ. ಇದು ದೊಡ್ಡ ಸಮಸ್ಯೆಯಾಗಿದೆ. ಪಾಲಿಕೆಯೂ ಸಮರ್ಪಕ ಜಾಗ ಗುರುತಿಸಿಲ್ಲ. ಕೂಡಲೇ ಅವರಿಗೆ ಪರ್ಯಾಯ ಜಾಗ ಗುರುತಿಸಿ ಪುನರ್ ವಸತಿ ಕಲ್ಪಿಸಬೇಕು. ಇಲ್ಲದಿದ್ದರೆ ಅವರ ಗೋಳು ತಪ್ಪಿದ್ದಲ್ಲ ಎಂದು ಹೇಳಿದರು.

ಗುಡಿಸಲಿಗೆ ಬೆಂಕಿ ಬಿದ್ದು ಬಟ್ಟೆಗಳು ಮತ್ತು ದವಸ ಧಾನ್ಯಗಳನ್ನು ಕಳೆದುಕೊಂಡಿರುವ ಗುರುಸ್ವಾಮಿ ಕುಟುಂಬ ಇದೀಗ ಜೀವನ ನಿರ್ವಹಣೆಗೆ ತೊಂದರೆಪಡುತ್ತಿದೆ. ಗುಡಿಸಲಿಗೆ ಹಾಕಿದ್ದ ಟಾರ್ಪಲ್ ಕೂಡ ಅರ್ಧ ಸುಟ್ಟು ಹೋಗಿದೆ. ಹಾಗಾಗಿ ಕೋವಿಡ್-19ರ ಸಮಯದಲ್ಲಿ ಸಮಸ್ಯೆ ಎದುರಿಸುತ್ತಿರುವ ಈ ಕುಟುಂಬಗಳ ನೆರವಿಗೆ ಜಿಲ್ಲಾಡಳಿತ ಮತ್ತು ಪಾಲಿಕೆ ಬರಬೇಕಾಗಿದೆ.

ನಗರದ ನಡುವೆಯೂ ಗುಡಿಸಲುಗಳಲ್ಲಿ ಬದುಕುತ್ತಿರುವ 40 ಕ್ಕೂ ಹೆಚ್ಚು ಕುಟುಂಬಗಳು ಮಳೆಗಾಲದಲ್ಲಿ ಇಡೀ ವಾಸಸ್ಥಳ ಜಲಾವೃತವಾಗುತ್ತದೆ. ಸುತ್ತಲೂ ಪೋದೆ ಇರುವುದರಿಂದ ಹಾವು, ಚೇಳು, ಸೊಳ್ಳೆಗಳು ಸೇರಿ ವಿಷಜಂತುಗಳ ಹಾವಳಿ ಇದೆ. ಇಂತಹ ಅಮಾನವೀಯ ಪರಿಸ್ಥಿತಿಯಲ್ಲಿ ಬದುಕುತ್ತಿರುವ ಈ ಕುಟುಂಬಗಳಿಗೆ ಮಾನವೀಯ ನೆರವಿನ ಹಸ್ತ ನೀಡಬೇಕಾಗಿದೆ. ನಾಗರಿಕರೆಂದು ಕರೆಸಿಕೊಳ್ಳುವವರು ಬಡಕುಟುಂಬಗಳ ಸಂಕಷ್ಟಕ್ಕೆ ಮನ ಮಿಡಿಯಬೇಕಾಗಿದೆ.


ಓದಿ: ವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...