Homeಕರ್ನಾಟಕಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ - ಆರೋಪ

ಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ – ಆರೋಪ

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.

- Advertisement -
- Advertisement -

ತುಮಕೂರು ನಗರದ ಬನಶಂಕರಿ ಎರಡನೇ ಹಂತದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ಎಳವ ಜೋಗರ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿದೆ. ಕನಿಷ್ಠ ನಾಗರಿಕ ಸೌಲಭ್ಯಗಳೂ ಇಲ್ಲದ ಇಲ್ಲಿನ ಗುಡಿಸಲುಗಳಿಗೆ ಬೆಂಕಿ ಹಚ್ಚುವ ಪ್ರಕರಣಗಳು ನಡೆಯುತ್ತಲೇ ಇವೆ. ಕಿಡಿಗೇಡಿಗಳ ಇಂತಹ ಕ್ರಮಗಳಿಂದ ಎಳವ ಜೋಗರ ಕುಟುಂಬಗಳು ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುವಂತಹ ಪರಿಸ್ಥಿತಿ ಇದೆ.

ಇಸ್ಮಾಯಿಲ್ ನಗರ ಸಮೀಪವೇ ಪೊದೆಯ ನಡುವೆ 40 ಕುಟುಂಬಗಳು ವಾಸಿಸುತ್ತಿವೆ. ಎಳವ ಜೋಗರು, ರಂಗೋಲಿ ಪುಡಿ ಮಾಡಿ ಮಾರುವ ಲಂಬಾಣಿಗಳ ಕುಟುಂಬಗಳು ಇಲ್ಲಿವೆ. ಬೆಳಕಿನ ಸೌಕರ್ಯ ಇಲ್ಲ. ಕುಡಿವ ನೀರಿನ ಸೌಲಭ್ಯ ಇಲ್ಲ. ಇಂತಹ ಸಂಕಷ್ಟದಲ್ಲಿ ಬದುಕು ಕಟ್ಟಿಕೊಳ್ಳುತ್ತಿರುವ ಈ ಕುಟುಂಬಗಳ ಗುಡಿಸಲುಗಳಿಗೆ ಪದೇಪದೇ ಬೆಂಕಿ ಹಚ್ಚಿ ಅವರನ್ನು ಅಲ್ಲಿಂದ ಓಡಿಸುವ ತಂತ್ರಗಳು ನಡೆಯುತ್ತಲೇ ಬರುತ್ತಿವೆ.

ಆಗಸ್ಟ್ 11ರ ಮುಂಜಾನೆ ಸುಮಾರು 1.30 ರ ಸಮಯದಲ್ಲಿ ಗುರುಸ್ವಾಮಿ ಮತ್ತು ಗಂಗಮ್ಮ ಅವರಿಗೆ ಸೇರಿದ ಗುಡಿಸಲಿಗೆ ಬೆಂಕಿ ಹಚ್ಚಲಾಗಿದೆ. ಪರಿಣಾಮ ಗುಡಿಸಲಿನಲ್ಲಿ ಮಲಗಿದ್ದ ಎಂಟು ಮಂದಿ ನೂಲೆಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ತಂದೆತಾಯಿಗಳು ಸೇರಿ ಆರು ಮಂದಿ ಮಕ್ಕಳ ಬಟ್ಟೆಗಳು ಸುಟ್ಟು ಭಸ್ಮವಾಗಿವೆ. ದವಸ ಧಾನ್ಯಗಳು ಬೆಂಕಿಯಲ್ಲಿ ಬೂದಿಯಾಗಿವೆ. ಇದು ಅಲ್ಲಿನ ನಿವಾಸಿಗಳನ್ನು ಆತಂಕಗೊಳ್ಳುವಂತೆ ಮಾಡಿದೆ.

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಬೆಂಕಿ ಹಚ್ಚುವುದನ್ನು ಯಾರು ಮಾಡುತ್ತಿದ್ದಾರೆ ಎಂಬ ಮಾಹಿತಿ ಇದುವರೆಗೂ ಗೊತ್ತಾಗಿಲ್ಲ. ಈ ಕುಟುಂಬಗಳು ನೀಡುವ ದೂರನ್ನು ದಾಖಲಿಸಿಕೊಳ್ಳುವ ಪೊಲೀಸರು ಮತ್ತೆ ಅದರ ಬಗ್ಗೆ ಕ್ರಮ ವಹಿಸುವ ಗೋಜಿಗೇ ಹೋಗುತ್ತಿಲ್ಲ ಎಂದು ದೂರಲಾಗಿದೆ.

ನಾನು ಗೌರಿ.ಕಾಂ ಜೊತೆ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಮಾತನಾಡಿದರು. ಬೆಂಕಿ ಹಚ್ಚುವ ಪ್ರಕರಣಗಳಿಂದ ಎಳವ ಜೋಗರು ಮತ್ತು ಲಂಬಾಣಿ ಕುಟುಂಬಗಳು ಜೀವಭಯದಿಂದ ಬದುಕು ನಡೆಸುವಂತಾಗಿದೆ. ಇಲ್ಲಿ ವಾಸವಾಗಿರುವ ಕುಟುಂಬಗಳಿಗೆ ಪುನರ್ ವಸತಿಯನ್ನು ಕಲ್ಪಿಸುವ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ತುಮಕೂರು ಹೊರವಲಯದ ಅಣ್ಣೇನಹಳ್ಳಿ ಬಳಿ ಇವರ ವಾಸಕ್ಕೆ ಜಾಗ ಗುರಿತಿಸಿದರು. ಆದರೆ ಸ್ಥಳೀಯರಿಂದ ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಅಲ್ಲಿಗೆ ಕೈಬಿಡಲಾಯಿತು.

ಅಜ್ಜಗೊಂಡನಹಳ್ಳಿಯ ಘನತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಮತ್ತೆ ಸ್ಥಳ ಗುರುತಿಸಲಾಯಿತು. ಘಟಕದ ನಿರ್ವಹಣೆಯಿಲ್ಲದೆ ದುರ್ನಾತ ಬೀರುತ್ತಿರುವ ಕಾರಣದಿಂದ ಎಳವ ಜೋಗಿ ಕುಟುಂಬಗಳು ಅಲ್ಲಿಗೆ ಹೋಗಲು ನಿರಾಕರಿಸಿದವು. ಅವರಿಗೆ ಪುನರ್ ವಸತಿ ಕಲ್ಪಿಸಲು ಯಾರೂ ಜಾಗ ನೀಡಲು ಮುಂದೆ ಬರುತ್ತಿಲ್ಲ. ಇದು ದೊಡ್ಡ ಸಮಸ್ಯೆಯಾಗಿದೆ. ಪಾಲಿಕೆಯೂ ಸಮರ್ಪಕ ಜಾಗ ಗುರುತಿಸಿಲ್ಲ. ಕೂಡಲೇ ಅವರಿಗೆ ಪರ್ಯಾಯ ಜಾಗ ಗುರುತಿಸಿ ಪುನರ್ ವಸತಿ ಕಲ್ಪಿಸಬೇಕು. ಇಲ್ಲದಿದ್ದರೆ ಅವರ ಗೋಳು ತಪ್ಪಿದ್ದಲ್ಲ ಎಂದು ಹೇಳಿದರು.

ಗುಡಿಸಲಿಗೆ ಬೆಂಕಿ ಬಿದ್ದು ಬಟ್ಟೆಗಳು ಮತ್ತು ದವಸ ಧಾನ್ಯಗಳನ್ನು ಕಳೆದುಕೊಂಡಿರುವ ಗುರುಸ್ವಾಮಿ ಕುಟುಂಬ ಇದೀಗ ಜೀವನ ನಿರ್ವಹಣೆಗೆ ತೊಂದರೆಪಡುತ್ತಿದೆ. ಗುಡಿಸಲಿಗೆ ಹಾಕಿದ್ದ ಟಾರ್ಪಲ್ ಕೂಡ ಅರ್ಧ ಸುಟ್ಟು ಹೋಗಿದೆ. ಹಾಗಾಗಿ ಕೋವಿಡ್-19ರ ಸಮಯದಲ್ಲಿ ಸಮಸ್ಯೆ ಎದುರಿಸುತ್ತಿರುವ ಈ ಕುಟುಂಬಗಳ ನೆರವಿಗೆ ಜಿಲ್ಲಾಡಳಿತ ಮತ್ತು ಪಾಲಿಕೆ ಬರಬೇಕಾಗಿದೆ.

ನಗರದ ನಡುವೆಯೂ ಗುಡಿಸಲುಗಳಲ್ಲಿ ಬದುಕುತ್ತಿರುವ 40 ಕ್ಕೂ ಹೆಚ್ಚು ಕುಟುಂಬಗಳು ಮಳೆಗಾಲದಲ್ಲಿ ಇಡೀ ವಾಸಸ್ಥಳ ಜಲಾವೃತವಾಗುತ್ತದೆ. ಸುತ್ತಲೂ ಪೋದೆ ಇರುವುದರಿಂದ ಹಾವು, ಚೇಳು, ಸೊಳ್ಳೆಗಳು ಸೇರಿ ವಿಷಜಂತುಗಳ ಹಾವಳಿ ಇದೆ. ಇಂತಹ ಅಮಾನವೀಯ ಪರಿಸ್ಥಿತಿಯಲ್ಲಿ ಬದುಕುತ್ತಿರುವ ಈ ಕುಟುಂಬಗಳಿಗೆ ಮಾನವೀಯ ನೆರವಿನ ಹಸ್ತ ನೀಡಬೇಕಾಗಿದೆ. ನಾಗರಿಕರೆಂದು ಕರೆಸಿಕೊಳ್ಳುವವರು ಬಡಕುಟುಂಬಗಳ ಸಂಕಷ್ಟಕ್ಕೆ ಮನ ಮಿಡಿಯಬೇಕಾಗಿದೆ.


ಓದಿ: ವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...