Homeಕರ್ನಾಟಕಬೆಂಗಳೂರು; ಅಗ್ನಿ ದುರಂತ; ಪ್ರಾಣ ರಕ್ಷಣೆಗೆ ನಾಲ್ಕನೇ ಮಹಡಿಯಿಂದ ಜಿಗಿದ ವ್ಯಕ್ತಿ

ಬೆಂಗಳೂರು; ಅಗ್ನಿ ದುರಂತ; ಪ್ರಾಣ ರಕ್ಷಣೆಗೆ ನಾಲ್ಕನೇ ಮಹಡಿಯಿಂದ ಜಿಗಿದ ವ್ಯಕ್ತಿ

- Advertisement -
- Advertisement -

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ನಗರದ ಕೋರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಮಾರುತಿ ಕಾರು ಶೋರೂಂನ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಾಣ ಉಳಿಸಲು ವ್ಯಕ್ತಿಯೋರ್ವ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಗಾಯಗೊಂಡಿದ್ದಾರೆ.

ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ನೆಲ ಮತ್ತು ಮೊದಲ ಮಹಡಿಯಲ್ಲಿ ಕಾರ್ ಶೋ ರೂಂ ಇತ್ತು. ಎರಡನೇ ಮತ್ತು ಮೂರನೇ ಮಹಡಿಯಲ್ಲಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು.

ನಾಲ್ಕನೇ ಮಹಡಿಯಲ್ಲಿರುವ ಮಡ್ ಪೈಪ್ ಹುಕ್ಕಾ ಕೆಫೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಅದೇ ಮಹಡಿಯಲ್ಲಿದ್ದ ಪ್ರೇಮ್ ಎಂಬವರು ಪ್ರಾಣ ಉಳಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿದ್ದಾರೆ.    ಈ ವೇಳೆ ಅವರಿಗೆ ಗಾಯಗಳಾಗಿದ್ದು, ಕೋರಮಂಗಲದ ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾರ್ಟ್‌ ಸರ್ಕ್ಯೂಟ್‌ನಿಂದ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆ ಬಳಿಕ ಸಿಲಿಂಡರ್‌ ಸ್ಪೋಟಗೊಂಡಿದೆ. ಎರಡು ಬಿಲ್ಡಿಂಗ್‌ಗಳಲ್ಲಿ ಹಲವಾರು ಕಂಪೆನಿಗಳು ಇದ್ದವು. ಬೆಂಕಿ ಅವಘಡದ ನಂತರ ಕಟ್ಟಡದಲ್ಲಿ ಸ್ಫೋಟ ಸಂಭವಿಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ವೀಡಿಯೊಗಳು ತೋರಿಸಿವೆ. ಬೆಂಕಿ ಅವಘಡದ ನಂತರ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ನೌಕರರು ಸ್ಥಳಾಂತರಗೊಂಡಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಮಡ್‌ ಪೈಪ್‌ ಕೆಫೆ ಸಂಜೆಯಿಂದ ಆರಂಭವಾಗುವ ಹಿನ್ನೆಲೆ ಮಧ್ಯಾಹ್ನದ ವೇಳೆ ಹೆಚ್ಚಿನ ಸಿಬ್ಬಂದಿಗಳೂ ಇರಲಿಲ್ಲ, ಗ್ರಾಹಕರೂ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ.

ಕಟ್ಟಡದ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿದ ಕೆಲ ಹೊತ್ತಲ್ಲಿ ಭಾರೀ ಪ್ರಮಾಣದ ಸದ್ದಿನೊಂದಿಗೆ ಅಡುಗೆ ಅನಿಲದ 8 ಸಿಲಿಂಡರ್‌ಗಳು ಸ್ಫೋಟಗೊಂಡಿದೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಹುಕ್ಕಾ ಬಾರ್ ಸಂಜೆ ನಂತರ ಪ್ರಾರಂಭದ ಹಿನ್ನೆಲೆ ಸಿಬ್ಬಂದಿಗಳು ಮಾತ್ರ ಇದ್ದು ಯಾವುದೇ ಗ್ರಾಹಕರು ಇರಲಿಲ್ಲ. ಶೋರೂಂ ಹಾಗೂ ಅಕಾಡೆಮಿಯಲ್ಲಿದ್ದ ಸಿಬ್ಬಂದಿಗಳು ಹೊರಗೆ ಓಡಿ ಬಂದಿದ್ದಾರೆ. ಜನರಿಗೆ ಹೆಚ್ಚಿನ ಅಪಾಯ ಆಗಿಲ್ಲ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...