Homeಕರ್ನಾಟಕಬೆಂಗಳೂರು; ಅಗ್ನಿ ದುರಂತ; ಪ್ರಾಣ ರಕ್ಷಣೆಗೆ ನಾಲ್ಕನೇ ಮಹಡಿಯಿಂದ ಜಿಗಿದ ವ್ಯಕ್ತಿ

ಬೆಂಗಳೂರು; ಅಗ್ನಿ ದುರಂತ; ಪ್ರಾಣ ರಕ್ಷಣೆಗೆ ನಾಲ್ಕನೇ ಮಹಡಿಯಿಂದ ಜಿಗಿದ ವ್ಯಕ್ತಿ

- Advertisement -
- Advertisement -

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ನಗರದ ಕೋರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಮಾರುತಿ ಕಾರು ಶೋರೂಂನ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಾಣ ಉಳಿಸಲು ವ್ಯಕ್ತಿಯೋರ್ವ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಗಾಯಗೊಂಡಿದ್ದಾರೆ.

ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ನೆಲ ಮತ್ತು ಮೊದಲ ಮಹಡಿಯಲ್ಲಿ ಕಾರ್ ಶೋ ರೂಂ ಇತ್ತು. ಎರಡನೇ ಮತ್ತು ಮೂರನೇ ಮಹಡಿಯಲ್ಲಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು.

ನಾಲ್ಕನೇ ಮಹಡಿಯಲ್ಲಿರುವ ಮಡ್ ಪೈಪ್ ಹುಕ್ಕಾ ಕೆಫೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಅದೇ ಮಹಡಿಯಲ್ಲಿದ್ದ ಪ್ರೇಮ್ ಎಂಬವರು ಪ್ರಾಣ ಉಳಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿದ್ದಾರೆ.    ಈ ವೇಳೆ ಅವರಿಗೆ ಗಾಯಗಳಾಗಿದ್ದು, ಕೋರಮಂಗಲದ ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾರ್ಟ್‌ ಸರ್ಕ್ಯೂಟ್‌ನಿಂದ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆ ಬಳಿಕ ಸಿಲಿಂಡರ್‌ ಸ್ಪೋಟಗೊಂಡಿದೆ. ಎರಡು ಬಿಲ್ಡಿಂಗ್‌ಗಳಲ್ಲಿ ಹಲವಾರು ಕಂಪೆನಿಗಳು ಇದ್ದವು. ಬೆಂಕಿ ಅವಘಡದ ನಂತರ ಕಟ್ಟಡದಲ್ಲಿ ಸ್ಫೋಟ ಸಂಭವಿಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ವೀಡಿಯೊಗಳು ತೋರಿಸಿವೆ. ಬೆಂಕಿ ಅವಘಡದ ನಂತರ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ನೌಕರರು ಸ್ಥಳಾಂತರಗೊಂಡಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಮಡ್‌ ಪೈಪ್‌ ಕೆಫೆ ಸಂಜೆಯಿಂದ ಆರಂಭವಾಗುವ ಹಿನ್ನೆಲೆ ಮಧ್ಯಾಹ್ನದ ವೇಳೆ ಹೆಚ್ಚಿನ ಸಿಬ್ಬಂದಿಗಳೂ ಇರಲಿಲ್ಲ, ಗ್ರಾಹಕರೂ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ.

ಕಟ್ಟಡದ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿದ ಕೆಲ ಹೊತ್ತಲ್ಲಿ ಭಾರೀ ಪ್ರಮಾಣದ ಸದ್ದಿನೊಂದಿಗೆ ಅಡುಗೆ ಅನಿಲದ 8 ಸಿಲಿಂಡರ್‌ಗಳು ಸ್ಫೋಟಗೊಂಡಿದೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಹುಕ್ಕಾ ಬಾರ್ ಸಂಜೆ ನಂತರ ಪ್ರಾರಂಭದ ಹಿನ್ನೆಲೆ ಸಿಬ್ಬಂದಿಗಳು ಮಾತ್ರ ಇದ್ದು ಯಾವುದೇ ಗ್ರಾಹಕರು ಇರಲಿಲ್ಲ. ಶೋರೂಂ ಹಾಗೂ ಅಕಾಡೆಮಿಯಲ್ಲಿದ್ದ ಸಿಬ್ಬಂದಿಗಳು ಹೊರಗೆ ಓಡಿ ಬಂದಿದ್ದಾರೆ. ಜನರಿಗೆ ಹೆಚ್ಚಿನ ಅಪಾಯ ಆಗಿಲ್ಲ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...