Homeಮುಖಪುಟಐಸಿಯುವಿನಲ್ಲಿ ಬೆಂಕಿ: 11 ಕೊರೊನಾ ರೋಗಿಗಳು ಮೃತ

ಐಸಿಯುವಿನಲ್ಲಿ ಬೆಂಕಿ: 11 ಕೊರೊನಾ ರೋಗಿಗಳು ಮೃತ

- Advertisement -
- Advertisement -

ಮಹಾರಾಷ್ಟ್ರದ ಅಹ್ಮದ್‌ನಗರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಭಾರಿ ದುರಂತ ಸಂಭವಿಸಿದ್ದು, ಐಸಿಯು ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೊರೊನಾ ಪೀಡಿತ 11 ರೋಗಿಗಳು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಬೇರೆ ವಾರ್ಡ್‌ನಲ್ಲಿ ಇದ್ದ ರೋಗಿಗಳು ಆಸ್ಪತ್ರೆಯಿಂದ ಸ್ಥಳಾಂತರಗೊಂಡಿದ್ದಾರೆ. ಐಸಿಯುನಲ್ಲಿದ್ದ 17 ರೋಗಿಗಳಲ್ಲಿ ಆರು ಮಂದಿ ಬದುಕುಳಿದಿದ್ದು, ಮೃತರಲ್ಲಿ ಹೆಚ್ಚಿನವರು 60-83 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ತಿಳಿದು ಬಂದಿದೆ.

“ಕೆಲವು ರೋಗಿಗಳು ಸುಟ್ಟಗಾಯಗಳಿಂದ ಮೃತಪಟ್ಟಿದ್ದು, ಇನ್ನು ಕೆಲವರು ಹೊಗೆಯಿಂದಾಗಿ ಮೃತಪಟ್ಟಿದ್ದಾರೆ. ನಾವು ವಿವರವಾದ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ತೋಪ್ಖಾನಾ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಜುಬೇರ್ ಮುಜಾವರ್ ಭಾನುವಾರ ತಿಳಿಸಿದ್ದಾರೆ.

ಇದನ್ನೂ ಓದಿ: ಬಿರಿಯಾನಿ ರೆಸ್ಟೋರೆಂಟ್‌ ಮುಚ್ಚದಿದ್ದರೆ ಬೆಂಕಿ ಹಚ್ಚುತ್ತೇನೆ: ದೆಹಲಿಯಲ್ಲಿ ಮತೀಯ ಗೂಂಡಾಗಿರಿ

“ಮಹಾರಾಷ್ಟ್ರದ ಅಹ್ಮದ್‌ನಗರದ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಪ್ರಾಣಹಾನಿಯಾಗಿರುವುದು ದುಃಖ ತಂದಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ” ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಸುಟ್ಟ ಐಸಿಯು ವಾರ್ಡ್ ಅನ್ನು ಪರಿಶೀಲಿಸಿದ ರಾಜ್ಯ ಅಧಿಕಾರಿಗಳಿಗೆ ಶಾರ್ಟ್ ಸರ್ಕ್ಯೂಟ್ ಸ್ಪಾರ್ಕ್‌ನಿಂದಾಗಿ ಬೆಂಕಿ ಭುಗಿಲೆದ್ದಿದೆ ಎಂದು ಆಸ್ಪತ್ರೆಯ ಆಡಳಿತವು ತಿಳಿಸಿದೆ. ಆದರೆ ಸ್ಥಳೀಯ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯು ಆಸ್ಪತ್ರೆ ಹಿಂದಿನ ಎರಡು ಲೆಕ್ಕಪರಿಶೋಧನೆಗಳಲ್ಲಿ ಕಟ್ಟಡದಲ್ಲಿ ಅಗ್ನಿ ಸುರಕ್ಷತೆಯನ್ನು ಸುಧಾರಿಸುವ ಶಿಫಾರಸುಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದೆ.

“ಸಾಕಷ್ಟು ಹಣದ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಅಗ್ನಿ ಸುರಕ್ಷತಾ ಸಾಧನಗಳನ್ನು ಅಳವಡಿಸಿಲ್ಲ” ಎಂದು ನಗರ ನಾಗರಿಕ ಸಂಸ್ಥೆಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಶಂಕರ್ ಮಿಸಾಲ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಬೆಂಕಿಯ ಕಾರಣವನ್ನು ನಿರ್ಣಯಿಸಲು ಸಮಿತಿಯನ್ನು ನೇಮಿಸಲಾಗಿದೆ, ನಂತರ ಆಸ್ಪತ್ರೆಯ ನಿರ್ಲಕ್ಷ್ಯ ದುರಂತಕ್ಕೆ ಕಾರಣವಾಗಿದೆಯೇ ಎಂದು ನಿರ್ಧರಿಸಲಾಗುವುದು ಎಂದು ಮಹಾರಾಷ್ಟ್ರ ರಾಜ್ಯ ಸಚಿವ ಜಯಂತ್ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ

“ಬೆಂಕಿ ಹೊತ್ತಿಕೊಂಡ ಕೆಲವೇ ನಿಮಿಷಗಳಲ್ಲಿ ವಾರ್ಡ್‌ನಲ್ಲಿ ಹೊಗೆ ಆವರಿಸಿದೆ. ನಮ್ಮಲ್ಲಿ ಕೆಲವರು ಅಗ್ನಿಶಾಮಕ ಸಾಧನಗಳನ್ನು ಬಳಸಲು ಪ್ರಯತ್ನಿಸಿದ್ದರಾದರೂ, ಅಷ್ಟರಲ್ಲಿ ಹೊಗೆ ವಾರ್ಡ್ ಪೂರ್ತಿ ಆವರಿಸಿದ್ದರಿಂದ ರೋಗಿಗಳನ್ನು ವಾರ್ಡ್‌ನಿಂದ ಹೊರತರುವುದು ಬಿಟ್ಟ ನಮಗೆ ಬೇರೆ ದಾರಿ ಇರಲಿಲ್ಲ. ನಾವು ಅವರನ್ನು ವಾರ್ಡ್‌ನಿಂದ ಹೊರಗೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದ್ದೆವು,

ಆದರೆ ಅಷ್ಟರಲ್ಲಾಗಲೇ ಕೆಲವರು ಸಾವನ್ನಪ್ಪಿದ್ದರು. ಸಿಸ್ಟಮ್ ಸ್ಥಗಿತಗೊಂಡಿದ್ದರಿಂದ ವೆಂಟಿಲೇಟರ್‌ಗಳಿಗೆ ಆಮ್ಲಜನಕ ಪೂರೈಕೆ ಸ್ಥಗಿತಗೊಂಡಿರಬಹುದು, ಹೀಗಾಗಿ ಅವರು ಮೃತಪಟ್ಟಿರಬಹುದು” ಎಂದು ಆಸ್ಪತ್ರೆಯ ನರ್ಸ್ ಸುರೇಖಾ ಆಂಧಳೆ ತಿಳಿಸಿದ್ದಾರೆ ಎಂದು ಸಂಡೇ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತಪ್ಪಿತಸ್ಥರ ವಿರುದ್ಧ ಸರ್ಕಾರ ಕೆಲವು ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಸನ್ ಮುಶ್ರೀಫ್ ಹೇಳಿದ್ದಾರೆ. ಆಸ್ಪತ್ರೆ ಆಡಳಿತದಿಂದ ಯಾವುದೇ ನಿರ್ಲಕ್ಷ್ಯ ಕಂಡುಬಂದಲ್ಲಿ ಸರಕಾರ ಖಂಡಿತಾ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಈ ವರ್ಷದ ಏಪ್ರಿಲ್‌ನಲ್ಲಿ, ರಾಜ್ಯದ ಪಾಲ್ಘರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡು 15 ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು.

ಇದನ್ನೂ ಓದಿ: ಬೆಂಕಿಪೊಟ್ಟಣಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ:14 ವರ್ಷಗಳ ಬಳಿಕ ಶೇ.100 ರಷ್ಟು ಬೆಲೆ ಏರಿಕೆ

ವಿಡಿಯೊ ನೋಡಿ, ನಮ್ಮ ಯೂಟ್ಯೂಬ್‌‌ ಚಾನೆಲ್ ಸಬ್‌ಸ್ಕ್ರೈಬ್‌ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...