ಇಂದು (ಜ.9) ನಸುಕಿನಲ್ಲಿ ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಜನರಲ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಿಗ್ಗೆ 2 ಗಂಟೆ ಸುಮಾರಿಗೆ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಇಡೀ ವಾರ್ಡ್ ಅನ್ನು ವ್ಯಾಪಿಸಿತು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಸುಮಾರು 10 ಮಕ್ಕಳು ಸಾವನ್ನಪ್ಪಿದ್ದು, 7 ಮಕ್ಕಳನ್ನು ರಕ್ಷಿಸಲಾಗಿದೆ.
“ಮೃತಪಟ್ಟ ಮಕ್ಕಳು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಈ ಕುರಿತು ತನಿಖೆ ನಡೆಸಲಾಗುವುದು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ
ಈ ಕುರಿತು ಎಎನ್ಐ ವರದಿ ಮಾಡಿದ್ದು, “ಇಂದು ಬೆಳಿಗ್ಗೆ 2 ಗಂಟೆಗೆ ಭಂಡಾರ ಜಿಲ್ಲಾ ಆಸ್ಪತ್ರೆಯ ಸಿಕ್ ನವಜಾತ ಆರೈಕೆ ಘಟಕದಲ್ಲಿ (ಎಸ್ಎನ್ಸಿಯು) ಸಂಭವಿಸಿದ ಬೆಂಕಿಯಲ್ಲಿ ಹತ್ತು ಮಕ್ಕಳು ಮೃತಪಟ್ಟಿದ್ದಾರೆ. ಏಳು ಮಕ್ಕಳನ್ನು ಘಟಕದಿಂದ ರಕ್ಷಿಸಲಾಗಿದೆ ಎಂದು ಸಿವಿಲ್ ಸರ್ಜನ್ ಪ್ರಮೋದ್ ಖಂಡಟೆ ಹೇಳಿದ್ದಾರೆ” ಎಂದು ಟ್ವೀಟ್ ಮಾಡಿದೆ.
Ten children died in a fire that broke out at Sick Newborn Care Unit (SNCU) of Bhandara District General Hospital at 2 am today. Seven children were rescued from the unit: Pramod Khandate, Civil Surgeon, Bhandara, Maharashtra pic.twitter.com/bTokrNQ28t
— ANI (@ANI) January 9, 2021
ಇದನ್ನೂ ಓದಿ: ಒಂದೋ ಗೆಲ್ಲುತ್ತೇವೆ ಇಲ್ಲ ಸಾಯುತ್ತೇವೆ: ರೈತರ ತೀರ್ಮಾನ
ಈ ಘಟನೆಯ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, “ಮಹಾರಾಷ್ಟ್ರದ ಭಂಡಾರಾದಲ್ಲಿ ನಾವು ಅಮೂಲ್ಯವಾದ ಎಳೆ ಜೀವಗಳನ್ನು ಕಳೆದುಕೊಂಡಿದ್ದೇವೆ. ಎಲ್ಲಾ ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳುತ್ತಾರೆಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
Heart-wrenching tragedy in Bhandara, Maharashtra, where we have lost precious young lives. My thoughts are with all the bereaved families. I hope the injured recover as early as possible.
— Narendra Modi (@narendramodi) January 9, 2021
ಈ ಘಟನೆಗೆ ಸಂಬಂಧಿಸಿದಂತೆ ಹಲವು ನಾಯಕರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಶೇ. 7.7 ಪ್ರಮಾಣದಲ್ಲಿ ಸಂಕುಚಿತಗೊಳ್ಳುವ ಅಂದಾಜು: ತೀವ್ರವಾಗಿ ಕುಸಿಯಲಿರುವ 2020-21ರ ಆರ್ಥಿಕತೆ