Homeಮುಖಪುಟಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ಕರ್ನಾಟಕದಲ್ಲಿ ಹಸಿರು ಪಟಾಕಿಗೆ ಅವಕಾಶವಿದ್ದರೆ, ಹರಿಯಾಣದಲ್ಲಿ ದಿನದಲ್ಲಿ 2 ಗಂಟೆಗಳ ಸಮಯ ಪಟಾಕಿ ಸಿಡಿಸಬಹುದಾಗಿದೆ.

- Advertisement -
- Advertisement -

ಕೊರೊನಾ ರೋಗಿಗಳ ಶ್ವಾಸಕೋಶ ಮತ್ತು ಉಸಿರಾಟದ ಮೇಲೆ ತೀವ್ರ ಪ್ರಭಾವ ಬೀರುತ್ತದೆ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಕೆಲವು ರಾಜ್ಯಗಳು ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ ಮಾಡಿರುವುದು ಸರಿಯಷ್ಟೇ. ಆದರೆ ಸಂಪೂರ್ಣ ಪಟಾಕಿ ನಿಷೇಧ ಘೋಷಿಸಿದ್ದ ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ತಮ್ಮ ನಿರ್ಧಾರಕ್ಕೆ ಉಲ್ಟಾ ಹೊಡೆಯುತ್ತಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ನವೆಂಬರ್ 02 ರಂದೇ ರಾಜಸ್ಥಾನದ ಕಾಂಗ್ರೆಸ್ ಸರ್ಕಾರವು ಪಟಾಕಿ ನಿಷೇಧ ಮಾಡಿತ್ತು. ನಂತರ ವಾಯುಮಾಲಿನ್ಯದಲ್ಲಿ ಕುಖ್ಯಾತಿ ಪಡೆದು ಬಹಳ ಚರ್ಚೆಯಲ್ಲಿರುವ ದೆಹಲಿ ರಾಜ್ಯದ ಆಪ್ ಸರ್ಕಾರವು ಪಟಾಕಿ ನಿಷೇಧಿಸಿತ್ತು. ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ, ಬಿಜೆಡಿ ನೇತೃತ್ವದ ಓರಿಸ್ಸಾ, ಎಸ್‌ಕೆಎಂ ನೇತೃತ್ವದ ಸಿಕ್ಕಿಂ ಮತ್ತು ಚಂಢಿಗಡ ಸರ್ಕಾರಗಳು ಪಟಾಕಿ ನಿಷೇಧ ನಿರ್ಧಾರ ತೆಗೆದುಕೊಂಡು ಜನಮನ್ನಣೆ ಗಳಸಿದ್ದವು.

ಬಿಜೆಪಿ ನೇತೃತ್ವದ ಕರ್ನಾಟಕ ಮತ್ತು ಹರಿಯಾಣ ಸರ್ಕಾರಗಳು ಸಹ ಸಂಪೂರ್ಣ ಪಟಾಕಿ ನಿಷೇಧ ಮಾಡುವುದಾಗಿ ಘೋಷಿಸಿದ್ದವು. ಈ ನಿರ್ಧಾರವನ್ನು ಪರಿಸರ ಪ್ರೇಮಿಗಳು, ಪ್ರಜ್ಞಾವಂತರು ಬೆಂಬಲಿಸಿದ್ದರು. ನವೆಂಬರ್ 06 ರಂದು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸಂಪೂರ್ಣ ಪಟಾಕಿ ನಿಷೇಧ ಎಂದು ಮಧ್ಯಾಹ್ನ ಘೋಷಿಸಿದರೆ ಸಂಜೆ ವೇಳೆಗೆ ಹಸಿರು ಪಟಾಕಿಗಳನ್ನು ಸಿಡಿಸಬಹುದು ಎಂದು ಯೂಟರ್ನ್ ಹೊಡೆದಿದ್ದರು.

ಅದೇ ರೀತಿಯಲ್ಲಿ ನವೆಂಬರ್ 07 ರಂದು ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಸಹ ಪಟಾಕಿ ನಿಷೇಧ ಮಾಡುವುದಾಗಿ ಘೋಷಿಸಿದ್ದರು. ಒಂದು ದಿನದ ನಂತರ ಇಂದು ದಿನಕ್ಕೆ 2 ಗಂಟೆಗಳ ಸಮಯ ಪಟಾಕಿ ಸಿಡಿಸಬಹುದು ಎಂದು ಹರಿಯಾಣ ಸಿಎಂ ಹೇಳಿರುವುದಾಗಿ ಟೈಮ್ಸ್ ನೌ ವರದಿ ಮಾಡಿದೆ.

ಕಡಿಮೆ ರಾಸಾಯನಿಕಗಳನ್ನು ಹೊಂದಿರುವ ಮತ್ತು ಹಾನಿಕಾರಕವಲ್ಲದ ಪಟಾಕಿಗಳನ್ನು ಹಸಿರು ಪಟಾಕಿಗಳು ಎಂದು ಕರೆಯಲಾಗುತ್ತದೆ. ಇವು ನೈಟ್ರೇಟ್ ಮತ್ತು ಬೇರಿಯಂ ರಾಸಯನಿಕ ಮುಕ್ತ ಪಟಾಕಿಗಳಾಗಿದ್ದು, ಅಲ್ಯೂಮಿಲಿಯಂ ಮತ್ತು ಥರ್ಮೈಟ್‌ ಒಳಗೊಂಡಿವೆ. ಈ ಪಟಾಕಿ ಸಿಡಿದಾಗ ಹೆಚ್ಚು ಹೊಗೆ ಬರುವುದಿಲ್ಲ ಎನ್ನಲಾಗುತ್ತಿದೆ. ಆದರೆ ದೀಪಾವಳಿಗೆ ಇನ್ನು ಕೇವಲ ಒಂದು ವಾರವಿರುವಾಗ ಸಾಮಾನ್ಯ ಪಟಾಕಿಗಳು ಎಲ್ಲಾ ಚಿಲ್ಲರೆ ಅಂಗಡಿಗಳಿಗೆ ತಲುಪಿರುವಾಗ ಯಡಿಯೂರಪ್ಪನವರ ಈ ತೀರ್ಮಾನದಿಂದ ಯಾವುದೇ ಪ್ರಯೋಜನವಿಲ್ಲ. ಜನ ಪಟಾಕಿ ಸಿಡಿಸಿಯೇ ಸಿಡಿಸುತ್ತಾರೆ ಎಂದು ಹಲವರು ದೂರಿದ್ದಾರೆ.

ಇನ್ನು ಹರಿಯಾಣ ಸರ್ಕಾರ ನೀಡಿರುವ 2 ಗಂಟೆಗಳ ಕಾಲ ಪಟಾಕಿ ಸಿಡಿಸಲು ಅವಕಾಶವು ಪಟಾಕಿ ನಿಷೇಧ ನಿಲುವಿಗೆ ವಿರುದ್ಧವಾಗಿದೆ. ಒಂದೇ ಸಮಯದಲ್ಲಿ ಬಹುತೇಕ ಜನರು ಪಟಾಕಿ ಸಿಡಿಸಿದರೆ ವಾಯುಮಾಲಿನ್ಯ ಹೆಚ್ಚಾಗುತ್ತದೆ. ಈ ನಿರ್ಧಾರ ಸರಿಯಲ್ಲ ಎಂಬ ಅಭಿಪ್ರಾಯವು ವ್ಯಕ್ತವಾಗಿದೆ.

ಈ ಎರಡು ಬಿಜೆಪಿ ಸರ್ಕಾರಗಳು ಯೂ ಟರ್ನ್ ಹೊಡೆಯಲು ತಮ್ಮ ಹಿಂದೂತ್ವವಾದಿ ನಿಲುವುಗಳೇ ಕಾರಣ ಎನ್ನಲಾಗುತ್ತಿದೆ. ಮುಖ್ಯವಾಗಿ ಹಿಂದೂಗಳ ಹಬ್ಬ ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧಿಸಿದರೆ ಬಹಳಷ್ಟು ಹಿಂದೂಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಒಂದು ವೇಳೆ ನಿಷೇಧ ಮಾಡದಿದ್ದರೆ ಹಸಿರು ನ್ಯಾಯಮಂಡಳಿ ಕ್ರಮ ತೆಗೆದುಕೊಳ್ಳುತ್ತದೆ. ಹಾಗಾಗಿ ‘ಹಾವು ಸಾಯಬಾರದು, ಕೋಲು ಮುರಿಯಬಾರದು’ ಎಂಬ ಗಾದೆ ಮಾತಿನಂತೆ ಪಟಾಕಿ ನಿಷೇಧ ಮಾಡಿದಂತೆ ಘೋಷಿಸಿ ಸ್ವಲ್ಪ ಸಮಯದಲ್ಲಿ ಉಲ್ಟಾ ಹೊಡೆದಿದ್ದಾರೆ.

ಹಾಗಾಗಿ ಇದು ಎನ್‌ಜಿಟಿಯ ಕಣ್ಣೊರೆಸುವ ತಂತ್ರವಾಗಿ ಈ ಎರೆಡೂ ಸರ್ಕಾರಗಳು ಪಟಾಕಿ ನಿಷೇಧ ಘೋಷಿಸಿದ್ದವು. ಸ್ವಲ್ಪ ಸಮಯದಲ್ಲಿಯೇ ಅವುಗಳಲ್ಲಿ ಬದಲಾವಣೆ ತರುವ ಮೂಲಕ ನಾವು ಹಿಂದೂಗಳ ಪರ ಇದ್ದೇವೆ ಎಂದು ತೋರಿಸಿಕೊಳ್ಳುತ್ತಿವೆ. ಹಾಗಾಗಿ ಈ ಎರಡೂ ರಾಜ್ಯಗಳಲ್ಲಿ ಸಂಪೂರ್ಣ ಪಟಾಕಿ ನಿಷೇಧ ಎನ್ನುವುದು ಹಾಸ್ಯಾಸ್ಪದವಾಗಿ ಕಾಣುತ್ತಿದೆ.

ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ನವೆಂಬರ್ 7 ರಿಂದ 30 ರವರೆಗೆ ಪಟಾಕಿ ಬಳಕೆಯನ್ನು ನಿಷೇಧಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನವೆಂಬರ್ 2 ರಂದು ಪರಿಸರ ಮತ್ತು ಅರಣ್ಯ ಸಚಿವಾಲಯ (ಎಂಒಇಎಫ್) ಮತ್ತು ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿ ನಾಲ್ಕು ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿತ್ತು.

ಪರಿಸರದ ಮೇಲೆ ಕಾಳಜಿ ಇರುವ ಎಲ್ಲಾ ರಾಜ್ಯಗಳು ಸಹ ಸಂಪೂರ್ಣ ಪಟಾಕಿ ನಿಷೇಧ ಮಾಡಬೇಕಿದೆ. ದೀಪಾವಳಿ ಮಾತ್ರವಲ್ಲದೇ ಎಲ್ಲಾ ಸಮಯದಲ್ಲಿಯೂ ಪಟಾಕಿಯ ಉತ್ಪಾದನೆ, ಮಾರಾಟ ಮತ್ತು ಸಿಡಿಸಿವಿಕೆಯನ್ನು ತಡೆಗಟ್ಟಬೇಕು ಎಂಬುದು ಪ್ರಜ್ಞಾವಂತರ ಒತ್ತಾಯ.


ಇದನ್ನೂ ಓದಿ: ವಾಯುಮಾಲಿನ್ಯ: ಪಟಾಕಿ ನಿಷೇಧ ಸಂಬಂಧ 18 ರಾಜ್ಯಗಳಿಗೆ ಎನ್‌ಜಿಟಿ ನೋಟಿಸ್!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...