Homeಮುಖಪುಟಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ಕರ್ನಾಟಕದಲ್ಲಿ ಹಸಿರು ಪಟಾಕಿಗೆ ಅವಕಾಶವಿದ್ದರೆ, ಹರಿಯಾಣದಲ್ಲಿ ದಿನದಲ್ಲಿ 2 ಗಂಟೆಗಳ ಸಮಯ ಪಟಾಕಿ ಸಿಡಿಸಬಹುದಾಗಿದೆ.

- Advertisement -
- Advertisement -

ಕೊರೊನಾ ರೋಗಿಗಳ ಶ್ವಾಸಕೋಶ ಮತ್ತು ಉಸಿರಾಟದ ಮೇಲೆ ತೀವ್ರ ಪ್ರಭಾವ ಬೀರುತ್ತದೆ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಕೆಲವು ರಾಜ್ಯಗಳು ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ ಮಾಡಿರುವುದು ಸರಿಯಷ್ಟೇ. ಆದರೆ ಸಂಪೂರ್ಣ ಪಟಾಕಿ ನಿಷೇಧ ಘೋಷಿಸಿದ್ದ ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ತಮ್ಮ ನಿರ್ಧಾರಕ್ಕೆ ಉಲ್ಟಾ ಹೊಡೆಯುತ್ತಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ನವೆಂಬರ್ 02 ರಂದೇ ರಾಜಸ್ಥಾನದ ಕಾಂಗ್ರೆಸ್ ಸರ್ಕಾರವು ಪಟಾಕಿ ನಿಷೇಧ ಮಾಡಿತ್ತು. ನಂತರ ವಾಯುಮಾಲಿನ್ಯದಲ್ಲಿ ಕುಖ್ಯಾತಿ ಪಡೆದು ಬಹಳ ಚರ್ಚೆಯಲ್ಲಿರುವ ದೆಹಲಿ ರಾಜ್ಯದ ಆಪ್ ಸರ್ಕಾರವು ಪಟಾಕಿ ನಿಷೇಧಿಸಿತ್ತು. ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ, ಬಿಜೆಡಿ ನೇತೃತ್ವದ ಓರಿಸ್ಸಾ, ಎಸ್‌ಕೆಎಂ ನೇತೃತ್ವದ ಸಿಕ್ಕಿಂ ಮತ್ತು ಚಂಢಿಗಡ ಸರ್ಕಾರಗಳು ಪಟಾಕಿ ನಿಷೇಧ ನಿರ್ಧಾರ ತೆಗೆದುಕೊಂಡು ಜನಮನ್ನಣೆ ಗಳಸಿದ್ದವು.

ಬಿಜೆಪಿ ನೇತೃತ್ವದ ಕರ್ನಾಟಕ ಮತ್ತು ಹರಿಯಾಣ ಸರ್ಕಾರಗಳು ಸಹ ಸಂಪೂರ್ಣ ಪಟಾಕಿ ನಿಷೇಧ ಮಾಡುವುದಾಗಿ ಘೋಷಿಸಿದ್ದವು. ಈ ನಿರ್ಧಾರವನ್ನು ಪರಿಸರ ಪ್ರೇಮಿಗಳು, ಪ್ರಜ್ಞಾವಂತರು ಬೆಂಬಲಿಸಿದ್ದರು. ನವೆಂಬರ್ 06 ರಂದು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸಂಪೂರ್ಣ ಪಟಾಕಿ ನಿಷೇಧ ಎಂದು ಮಧ್ಯಾಹ್ನ ಘೋಷಿಸಿದರೆ ಸಂಜೆ ವೇಳೆಗೆ ಹಸಿರು ಪಟಾಕಿಗಳನ್ನು ಸಿಡಿಸಬಹುದು ಎಂದು ಯೂಟರ್ನ್ ಹೊಡೆದಿದ್ದರು.

ಅದೇ ರೀತಿಯಲ್ಲಿ ನವೆಂಬರ್ 07 ರಂದು ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಸಹ ಪಟಾಕಿ ನಿಷೇಧ ಮಾಡುವುದಾಗಿ ಘೋಷಿಸಿದ್ದರು. ಒಂದು ದಿನದ ನಂತರ ಇಂದು ದಿನಕ್ಕೆ 2 ಗಂಟೆಗಳ ಸಮಯ ಪಟಾಕಿ ಸಿಡಿಸಬಹುದು ಎಂದು ಹರಿಯಾಣ ಸಿಎಂ ಹೇಳಿರುವುದಾಗಿ ಟೈಮ್ಸ್ ನೌ ವರದಿ ಮಾಡಿದೆ.

ಕಡಿಮೆ ರಾಸಾಯನಿಕಗಳನ್ನು ಹೊಂದಿರುವ ಮತ್ತು ಹಾನಿಕಾರಕವಲ್ಲದ ಪಟಾಕಿಗಳನ್ನು ಹಸಿರು ಪಟಾಕಿಗಳು ಎಂದು ಕರೆಯಲಾಗುತ್ತದೆ. ಇವು ನೈಟ್ರೇಟ್ ಮತ್ತು ಬೇರಿಯಂ ರಾಸಯನಿಕ ಮುಕ್ತ ಪಟಾಕಿಗಳಾಗಿದ್ದು, ಅಲ್ಯೂಮಿಲಿಯಂ ಮತ್ತು ಥರ್ಮೈಟ್‌ ಒಳಗೊಂಡಿವೆ. ಈ ಪಟಾಕಿ ಸಿಡಿದಾಗ ಹೆಚ್ಚು ಹೊಗೆ ಬರುವುದಿಲ್ಲ ಎನ್ನಲಾಗುತ್ತಿದೆ. ಆದರೆ ದೀಪಾವಳಿಗೆ ಇನ್ನು ಕೇವಲ ಒಂದು ವಾರವಿರುವಾಗ ಸಾಮಾನ್ಯ ಪಟಾಕಿಗಳು ಎಲ್ಲಾ ಚಿಲ್ಲರೆ ಅಂಗಡಿಗಳಿಗೆ ತಲುಪಿರುವಾಗ ಯಡಿಯೂರಪ್ಪನವರ ಈ ತೀರ್ಮಾನದಿಂದ ಯಾವುದೇ ಪ್ರಯೋಜನವಿಲ್ಲ. ಜನ ಪಟಾಕಿ ಸಿಡಿಸಿಯೇ ಸಿಡಿಸುತ್ತಾರೆ ಎಂದು ಹಲವರು ದೂರಿದ್ದಾರೆ.

ಇನ್ನು ಹರಿಯಾಣ ಸರ್ಕಾರ ನೀಡಿರುವ 2 ಗಂಟೆಗಳ ಕಾಲ ಪಟಾಕಿ ಸಿಡಿಸಲು ಅವಕಾಶವು ಪಟಾಕಿ ನಿಷೇಧ ನಿಲುವಿಗೆ ವಿರುದ್ಧವಾಗಿದೆ. ಒಂದೇ ಸಮಯದಲ್ಲಿ ಬಹುತೇಕ ಜನರು ಪಟಾಕಿ ಸಿಡಿಸಿದರೆ ವಾಯುಮಾಲಿನ್ಯ ಹೆಚ್ಚಾಗುತ್ತದೆ. ಈ ನಿರ್ಧಾರ ಸರಿಯಲ್ಲ ಎಂಬ ಅಭಿಪ್ರಾಯವು ವ್ಯಕ್ತವಾಗಿದೆ.

ಈ ಎರಡು ಬಿಜೆಪಿ ಸರ್ಕಾರಗಳು ಯೂ ಟರ್ನ್ ಹೊಡೆಯಲು ತಮ್ಮ ಹಿಂದೂತ್ವವಾದಿ ನಿಲುವುಗಳೇ ಕಾರಣ ಎನ್ನಲಾಗುತ್ತಿದೆ. ಮುಖ್ಯವಾಗಿ ಹಿಂದೂಗಳ ಹಬ್ಬ ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧಿಸಿದರೆ ಬಹಳಷ್ಟು ಹಿಂದೂಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಒಂದು ವೇಳೆ ನಿಷೇಧ ಮಾಡದಿದ್ದರೆ ಹಸಿರು ನ್ಯಾಯಮಂಡಳಿ ಕ್ರಮ ತೆಗೆದುಕೊಳ್ಳುತ್ತದೆ. ಹಾಗಾಗಿ ‘ಹಾವು ಸಾಯಬಾರದು, ಕೋಲು ಮುರಿಯಬಾರದು’ ಎಂಬ ಗಾದೆ ಮಾತಿನಂತೆ ಪಟಾಕಿ ನಿಷೇಧ ಮಾಡಿದಂತೆ ಘೋಷಿಸಿ ಸ್ವಲ್ಪ ಸಮಯದಲ್ಲಿ ಉಲ್ಟಾ ಹೊಡೆದಿದ್ದಾರೆ.

ಹಾಗಾಗಿ ಇದು ಎನ್‌ಜಿಟಿಯ ಕಣ್ಣೊರೆಸುವ ತಂತ್ರವಾಗಿ ಈ ಎರೆಡೂ ಸರ್ಕಾರಗಳು ಪಟಾಕಿ ನಿಷೇಧ ಘೋಷಿಸಿದ್ದವು. ಸ್ವಲ್ಪ ಸಮಯದಲ್ಲಿಯೇ ಅವುಗಳಲ್ಲಿ ಬದಲಾವಣೆ ತರುವ ಮೂಲಕ ನಾವು ಹಿಂದೂಗಳ ಪರ ಇದ್ದೇವೆ ಎಂದು ತೋರಿಸಿಕೊಳ್ಳುತ್ತಿವೆ. ಹಾಗಾಗಿ ಈ ಎರಡೂ ರಾಜ್ಯಗಳಲ್ಲಿ ಸಂಪೂರ್ಣ ಪಟಾಕಿ ನಿಷೇಧ ಎನ್ನುವುದು ಹಾಸ್ಯಾಸ್ಪದವಾಗಿ ಕಾಣುತ್ತಿದೆ.

ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ನವೆಂಬರ್ 7 ರಿಂದ 30 ರವರೆಗೆ ಪಟಾಕಿ ಬಳಕೆಯನ್ನು ನಿಷೇಧಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನವೆಂಬರ್ 2 ರಂದು ಪರಿಸರ ಮತ್ತು ಅರಣ್ಯ ಸಚಿವಾಲಯ (ಎಂಒಇಎಫ್) ಮತ್ತು ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿ ನಾಲ್ಕು ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿತ್ತು.

ಪರಿಸರದ ಮೇಲೆ ಕಾಳಜಿ ಇರುವ ಎಲ್ಲಾ ರಾಜ್ಯಗಳು ಸಹ ಸಂಪೂರ್ಣ ಪಟಾಕಿ ನಿಷೇಧ ಮಾಡಬೇಕಿದೆ. ದೀಪಾವಳಿ ಮಾತ್ರವಲ್ಲದೇ ಎಲ್ಲಾ ಸಮಯದಲ್ಲಿಯೂ ಪಟಾಕಿಯ ಉತ್ಪಾದನೆ, ಮಾರಾಟ ಮತ್ತು ಸಿಡಿಸಿವಿಕೆಯನ್ನು ತಡೆಗಟ್ಟಬೇಕು ಎಂಬುದು ಪ್ರಜ್ಞಾವಂತರ ಒತ್ತಾಯ.


ಇದನ್ನೂ ಓದಿ: ವಾಯುಮಾಲಿನ್ಯ: ಪಟಾಕಿ ನಿಷೇಧ ಸಂಬಂಧ 18 ರಾಜ್ಯಗಳಿಗೆ ಎನ್‌ಜಿಟಿ ನೋಟಿಸ್!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...