Homeಮುಖಪುಟಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ಕರ್ನಾಟಕದಲ್ಲಿ ಹಸಿರು ಪಟಾಕಿಗೆ ಅವಕಾಶವಿದ್ದರೆ, ಹರಿಯಾಣದಲ್ಲಿ ದಿನದಲ್ಲಿ 2 ಗಂಟೆಗಳ ಸಮಯ ಪಟಾಕಿ ಸಿಡಿಸಬಹುದಾಗಿದೆ.

- Advertisement -
- Advertisement -

ಕೊರೊನಾ ರೋಗಿಗಳ ಶ್ವಾಸಕೋಶ ಮತ್ತು ಉಸಿರಾಟದ ಮೇಲೆ ತೀವ್ರ ಪ್ರಭಾವ ಬೀರುತ್ತದೆ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಕೆಲವು ರಾಜ್ಯಗಳು ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ ಮಾಡಿರುವುದು ಸರಿಯಷ್ಟೇ. ಆದರೆ ಸಂಪೂರ್ಣ ಪಟಾಕಿ ನಿಷೇಧ ಘೋಷಿಸಿದ್ದ ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ತಮ್ಮ ನಿರ್ಧಾರಕ್ಕೆ ಉಲ್ಟಾ ಹೊಡೆಯುತ್ತಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ನವೆಂಬರ್ 02 ರಂದೇ ರಾಜಸ್ಥಾನದ ಕಾಂಗ್ರೆಸ್ ಸರ್ಕಾರವು ಪಟಾಕಿ ನಿಷೇಧ ಮಾಡಿತ್ತು. ನಂತರ ವಾಯುಮಾಲಿನ್ಯದಲ್ಲಿ ಕುಖ್ಯಾತಿ ಪಡೆದು ಬಹಳ ಚರ್ಚೆಯಲ್ಲಿರುವ ದೆಹಲಿ ರಾಜ್ಯದ ಆಪ್ ಸರ್ಕಾರವು ಪಟಾಕಿ ನಿಷೇಧಿಸಿತ್ತು. ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ, ಬಿಜೆಡಿ ನೇತೃತ್ವದ ಓರಿಸ್ಸಾ, ಎಸ್‌ಕೆಎಂ ನೇತೃತ್ವದ ಸಿಕ್ಕಿಂ ಮತ್ತು ಚಂಢಿಗಡ ಸರ್ಕಾರಗಳು ಪಟಾಕಿ ನಿಷೇಧ ನಿರ್ಧಾರ ತೆಗೆದುಕೊಂಡು ಜನಮನ್ನಣೆ ಗಳಸಿದ್ದವು.

ಬಿಜೆಪಿ ನೇತೃತ್ವದ ಕರ್ನಾಟಕ ಮತ್ತು ಹರಿಯಾಣ ಸರ್ಕಾರಗಳು ಸಹ ಸಂಪೂರ್ಣ ಪಟಾಕಿ ನಿಷೇಧ ಮಾಡುವುದಾಗಿ ಘೋಷಿಸಿದ್ದವು. ಈ ನಿರ್ಧಾರವನ್ನು ಪರಿಸರ ಪ್ರೇಮಿಗಳು, ಪ್ರಜ್ಞಾವಂತರು ಬೆಂಬಲಿಸಿದ್ದರು. ನವೆಂಬರ್ 06 ರಂದು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸಂಪೂರ್ಣ ಪಟಾಕಿ ನಿಷೇಧ ಎಂದು ಮಧ್ಯಾಹ್ನ ಘೋಷಿಸಿದರೆ ಸಂಜೆ ವೇಳೆಗೆ ಹಸಿರು ಪಟಾಕಿಗಳನ್ನು ಸಿಡಿಸಬಹುದು ಎಂದು ಯೂಟರ್ನ್ ಹೊಡೆದಿದ್ದರು.

ಅದೇ ರೀತಿಯಲ್ಲಿ ನವೆಂಬರ್ 07 ರಂದು ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಸಹ ಪಟಾಕಿ ನಿಷೇಧ ಮಾಡುವುದಾಗಿ ಘೋಷಿಸಿದ್ದರು. ಒಂದು ದಿನದ ನಂತರ ಇಂದು ದಿನಕ್ಕೆ 2 ಗಂಟೆಗಳ ಸಮಯ ಪಟಾಕಿ ಸಿಡಿಸಬಹುದು ಎಂದು ಹರಿಯಾಣ ಸಿಎಂ ಹೇಳಿರುವುದಾಗಿ ಟೈಮ್ಸ್ ನೌ ವರದಿ ಮಾಡಿದೆ.

ಕಡಿಮೆ ರಾಸಾಯನಿಕಗಳನ್ನು ಹೊಂದಿರುವ ಮತ್ತು ಹಾನಿಕಾರಕವಲ್ಲದ ಪಟಾಕಿಗಳನ್ನು ಹಸಿರು ಪಟಾಕಿಗಳು ಎಂದು ಕರೆಯಲಾಗುತ್ತದೆ. ಇವು ನೈಟ್ರೇಟ್ ಮತ್ತು ಬೇರಿಯಂ ರಾಸಯನಿಕ ಮುಕ್ತ ಪಟಾಕಿಗಳಾಗಿದ್ದು, ಅಲ್ಯೂಮಿಲಿಯಂ ಮತ್ತು ಥರ್ಮೈಟ್‌ ಒಳಗೊಂಡಿವೆ. ಈ ಪಟಾಕಿ ಸಿಡಿದಾಗ ಹೆಚ್ಚು ಹೊಗೆ ಬರುವುದಿಲ್ಲ ಎನ್ನಲಾಗುತ್ತಿದೆ. ಆದರೆ ದೀಪಾವಳಿಗೆ ಇನ್ನು ಕೇವಲ ಒಂದು ವಾರವಿರುವಾಗ ಸಾಮಾನ್ಯ ಪಟಾಕಿಗಳು ಎಲ್ಲಾ ಚಿಲ್ಲರೆ ಅಂಗಡಿಗಳಿಗೆ ತಲುಪಿರುವಾಗ ಯಡಿಯೂರಪ್ಪನವರ ಈ ತೀರ್ಮಾನದಿಂದ ಯಾವುದೇ ಪ್ರಯೋಜನವಿಲ್ಲ. ಜನ ಪಟಾಕಿ ಸಿಡಿಸಿಯೇ ಸಿಡಿಸುತ್ತಾರೆ ಎಂದು ಹಲವರು ದೂರಿದ್ದಾರೆ.

ಇನ್ನು ಹರಿಯಾಣ ಸರ್ಕಾರ ನೀಡಿರುವ 2 ಗಂಟೆಗಳ ಕಾಲ ಪಟಾಕಿ ಸಿಡಿಸಲು ಅವಕಾಶವು ಪಟಾಕಿ ನಿಷೇಧ ನಿಲುವಿಗೆ ವಿರುದ್ಧವಾಗಿದೆ. ಒಂದೇ ಸಮಯದಲ್ಲಿ ಬಹುತೇಕ ಜನರು ಪಟಾಕಿ ಸಿಡಿಸಿದರೆ ವಾಯುಮಾಲಿನ್ಯ ಹೆಚ್ಚಾಗುತ್ತದೆ. ಈ ನಿರ್ಧಾರ ಸರಿಯಲ್ಲ ಎಂಬ ಅಭಿಪ್ರಾಯವು ವ್ಯಕ್ತವಾಗಿದೆ.

ಈ ಎರಡು ಬಿಜೆಪಿ ಸರ್ಕಾರಗಳು ಯೂ ಟರ್ನ್ ಹೊಡೆಯಲು ತಮ್ಮ ಹಿಂದೂತ್ವವಾದಿ ನಿಲುವುಗಳೇ ಕಾರಣ ಎನ್ನಲಾಗುತ್ತಿದೆ. ಮುಖ್ಯವಾಗಿ ಹಿಂದೂಗಳ ಹಬ್ಬ ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧಿಸಿದರೆ ಬಹಳಷ್ಟು ಹಿಂದೂಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಒಂದು ವೇಳೆ ನಿಷೇಧ ಮಾಡದಿದ್ದರೆ ಹಸಿರು ನ್ಯಾಯಮಂಡಳಿ ಕ್ರಮ ತೆಗೆದುಕೊಳ್ಳುತ್ತದೆ. ಹಾಗಾಗಿ ‘ಹಾವು ಸಾಯಬಾರದು, ಕೋಲು ಮುರಿಯಬಾರದು’ ಎಂಬ ಗಾದೆ ಮಾತಿನಂತೆ ಪಟಾಕಿ ನಿಷೇಧ ಮಾಡಿದಂತೆ ಘೋಷಿಸಿ ಸ್ವಲ್ಪ ಸಮಯದಲ್ಲಿ ಉಲ್ಟಾ ಹೊಡೆದಿದ್ದಾರೆ.

ಹಾಗಾಗಿ ಇದು ಎನ್‌ಜಿಟಿಯ ಕಣ್ಣೊರೆಸುವ ತಂತ್ರವಾಗಿ ಈ ಎರೆಡೂ ಸರ್ಕಾರಗಳು ಪಟಾಕಿ ನಿಷೇಧ ಘೋಷಿಸಿದ್ದವು. ಸ್ವಲ್ಪ ಸಮಯದಲ್ಲಿಯೇ ಅವುಗಳಲ್ಲಿ ಬದಲಾವಣೆ ತರುವ ಮೂಲಕ ನಾವು ಹಿಂದೂಗಳ ಪರ ಇದ್ದೇವೆ ಎಂದು ತೋರಿಸಿಕೊಳ್ಳುತ್ತಿವೆ. ಹಾಗಾಗಿ ಈ ಎರಡೂ ರಾಜ್ಯಗಳಲ್ಲಿ ಸಂಪೂರ್ಣ ಪಟಾಕಿ ನಿಷೇಧ ಎನ್ನುವುದು ಹಾಸ್ಯಾಸ್ಪದವಾಗಿ ಕಾಣುತ್ತಿದೆ.

ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ನವೆಂಬರ್ 7 ರಿಂದ 30 ರವರೆಗೆ ಪಟಾಕಿ ಬಳಕೆಯನ್ನು ನಿಷೇಧಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನವೆಂಬರ್ 2 ರಂದು ಪರಿಸರ ಮತ್ತು ಅರಣ್ಯ ಸಚಿವಾಲಯ (ಎಂಒಇಎಫ್) ಮತ್ತು ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿ ನಾಲ್ಕು ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿತ್ತು.

ಪರಿಸರದ ಮೇಲೆ ಕಾಳಜಿ ಇರುವ ಎಲ್ಲಾ ರಾಜ್ಯಗಳು ಸಹ ಸಂಪೂರ್ಣ ಪಟಾಕಿ ನಿಷೇಧ ಮಾಡಬೇಕಿದೆ. ದೀಪಾವಳಿ ಮಾತ್ರವಲ್ಲದೇ ಎಲ್ಲಾ ಸಮಯದಲ್ಲಿಯೂ ಪಟಾಕಿಯ ಉತ್ಪಾದನೆ, ಮಾರಾಟ ಮತ್ತು ಸಿಡಿಸಿವಿಕೆಯನ್ನು ತಡೆಗಟ್ಟಬೇಕು ಎಂಬುದು ಪ್ರಜ್ಞಾವಂತರ ಒತ್ತಾಯ.


ಇದನ್ನೂ ಓದಿ: ವಾಯುಮಾಲಿನ್ಯ: ಪಟಾಕಿ ನಿಷೇಧ ಸಂಬಂಧ 18 ರಾಜ್ಯಗಳಿಗೆ ಎನ್‌ಜಿಟಿ ನೋಟಿಸ್!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...