Homeಮುಖಪುಟಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ಕರ್ನಾಟಕದಲ್ಲಿ ಹಸಿರು ಪಟಾಕಿಗೆ ಅವಕಾಶವಿದ್ದರೆ, ಹರಿಯಾಣದಲ್ಲಿ ದಿನದಲ್ಲಿ 2 ಗಂಟೆಗಳ ಸಮಯ ಪಟಾಕಿ ಸಿಡಿಸಬಹುದಾಗಿದೆ.

- Advertisement -
- Advertisement -

ಕೊರೊನಾ ರೋಗಿಗಳ ಶ್ವಾಸಕೋಶ ಮತ್ತು ಉಸಿರಾಟದ ಮೇಲೆ ತೀವ್ರ ಪ್ರಭಾವ ಬೀರುತ್ತದೆ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಕೆಲವು ರಾಜ್ಯಗಳು ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ ಮಾಡಿರುವುದು ಸರಿಯಷ್ಟೇ. ಆದರೆ ಸಂಪೂರ್ಣ ಪಟಾಕಿ ನಿಷೇಧ ಘೋಷಿಸಿದ್ದ ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ತಮ್ಮ ನಿರ್ಧಾರಕ್ಕೆ ಉಲ್ಟಾ ಹೊಡೆಯುತ್ತಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ನವೆಂಬರ್ 02 ರಂದೇ ರಾಜಸ್ಥಾನದ ಕಾಂಗ್ರೆಸ್ ಸರ್ಕಾರವು ಪಟಾಕಿ ನಿಷೇಧ ಮಾಡಿತ್ತು. ನಂತರ ವಾಯುಮಾಲಿನ್ಯದಲ್ಲಿ ಕುಖ್ಯಾತಿ ಪಡೆದು ಬಹಳ ಚರ್ಚೆಯಲ್ಲಿರುವ ದೆಹಲಿ ರಾಜ್ಯದ ಆಪ್ ಸರ್ಕಾರವು ಪಟಾಕಿ ನಿಷೇಧಿಸಿತ್ತು. ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ, ಬಿಜೆಡಿ ನೇತೃತ್ವದ ಓರಿಸ್ಸಾ, ಎಸ್‌ಕೆಎಂ ನೇತೃತ್ವದ ಸಿಕ್ಕಿಂ ಮತ್ತು ಚಂಢಿಗಡ ಸರ್ಕಾರಗಳು ಪಟಾಕಿ ನಿಷೇಧ ನಿರ್ಧಾರ ತೆಗೆದುಕೊಂಡು ಜನಮನ್ನಣೆ ಗಳಸಿದ್ದವು.

ಬಿಜೆಪಿ ನೇತೃತ್ವದ ಕರ್ನಾಟಕ ಮತ್ತು ಹರಿಯಾಣ ಸರ್ಕಾರಗಳು ಸಹ ಸಂಪೂರ್ಣ ಪಟಾಕಿ ನಿಷೇಧ ಮಾಡುವುದಾಗಿ ಘೋಷಿಸಿದ್ದವು. ಈ ನಿರ್ಧಾರವನ್ನು ಪರಿಸರ ಪ್ರೇಮಿಗಳು, ಪ್ರಜ್ಞಾವಂತರು ಬೆಂಬಲಿಸಿದ್ದರು. ನವೆಂಬರ್ 06 ರಂದು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸಂಪೂರ್ಣ ಪಟಾಕಿ ನಿಷೇಧ ಎಂದು ಮಧ್ಯಾಹ್ನ ಘೋಷಿಸಿದರೆ ಸಂಜೆ ವೇಳೆಗೆ ಹಸಿರು ಪಟಾಕಿಗಳನ್ನು ಸಿಡಿಸಬಹುದು ಎಂದು ಯೂಟರ್ನ್ ಹೊಡೆದಿದ್ದರು.

ಅದೇ ರೀತಿಯಲ್ಲಿ ನವೆಂಬರ್ 07 ರಂದು ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಸಹ ಪಟಾಕಿ ನಿಷೇಧ ಮಾಡುವುದಾಗಿ ಘೋಷಿಸಿದ್ದರು. ಒಂದು ದಿನದ ನಂತರ ಇಂದು ದಿನಕ್ಕೆ 2 ಗಂಟೆಗಳ ಸಮಯ ಪಟಾಕಿ ಸಿಡಿಸಬಹುದು ಎಂದು ಹರಿಯಾಣ ಸಿಎಂ ಹೇಳಿರುವುದಾಗಿ ಟೈಮ್ಸ್ ನೌ ವರದಿ ಮಾಡಿದೆ.

ಕಡಿಮೆ ರಾಸಾಯನಿಕಗಳನ್ನು ಹೊಂದಿರುವ ಮತ್ತು ಹಾನಿಕಾರಕವಲ್ಲದ ಪಟಾಕಿಗಳನ್ನು ಹಸಿರು ಪಟಾಕಿಗಳು ಎಂದು ಕರೆಯಲಾಗುತ್ತದೆ. ಇವು ನೈಟ್ರೇಟ್ ಮತ್ತು ಬೇರಿಯಂ ರಾಸಯನಿಕ ಮುಕ್ತ ಪಟಾಕಿಗಳಾಗಿದ್ದು, ಅಲ್ಯೂಮಿಲಿಯಂ ಮತ್ತು ಥರ್ಮೈಟ್‌ ಒಳಗೊಂಡಿವೆ. ಈ ಪಟಾಕಿ ಸಿಡಿದಾಗ ಹೆಚ್ಚು ಹೊಗೆ ಬರುವುದಿಲ್ಲ ಎನ್ನಲಾಗುತ್ತಿದೆ. ಆದರೆ ದೀಪಾವಳಿಗೆ ಇನ್ನು ಕೇವಲ ಒಂದು ವಾರವಿರುವಾಗ ಸಾಮಾನ್ಯ ಪಟಾಕಿಗಳು ಎಲ್ಲಾ ಚಿಲ್ಲರೆ ಅಂಗಡಿಗಳಿಗೆ ತಲುಪಿರುವಾಗ ಯಡಿಯೂರಪ್ಪನವರ ಈ ತೀರ್ಮಾನದಿಂದ ಯಾವುದೇ ಪ್ರಯೋಜನವಿಲ್ಲ. ಜನ ಪಟಾಕಿ ಸಿಡಿಸಿಯೇ ಸಿಡಿಸುತ್ತಾರೆ ಎಂದು ಹಲವರು ದೂರಿದ್ದಾರೆ.

ಇನ್ನು ಹರಿಯಾಣ ಸರ್ಕಾರ ನೀಡಿರುವ 2 ಗಂಟೆಗಳ ಕಾಲ ಪಟಾಕಿ ಸಿಡಿಸಲು ಅವಕಾಶವು ಪಟಾಕಿ ನಿಷೇಧ ನಿಲುವಿಗೆ ವಿರುದ್ಧವಾಗಿದೆ. ಒಂದೇ ಸಮಯದಲ್ಲಿ ಬಹುತೇಕ ಜನರು ಪಟಾಕಿ ಸಿಡಿಸಿದರೆ ವಾಯುಮಾಲಿನ್ಯ ಹೆಚ್ಚಾಗುತ್ತದೆ. ಈ ನಿರ್ಧಾರ ಸರಿಯಲ್ಲ ಎಂಬ ಅಭಿಪ್ರಾಯವು ವ್ಯಕ್ತವಾಗಿದೆ.

ಈ ಎರಡು ಬಿಜೆಪಿ ಸರ್ಕಾರಗಳು ಯೂ ಟರ್ನ್ ಹೊಡೆಯಲು ತಮ್ಮ ಹಿಂದೂತ್ವವಾದಿ ನಿಲುವುಗಳೇ ಕಾರಣ ಎನ್ನಲಾಗುತ್ತಿದೆ. ಮುಖ್ಯವಾಗಿ ಹಿಂದೂಗಳ ಹಬ್ಬ ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧಿಸಿದರೆ ಬಹಳಷ್ಟು ಹಿಂದೂಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಒಂದು ವೇಳೆ ನಿಷೇಧ ಮಾಡದಿದ್ದರೆ ಹಸಿರು ನ್ಯಾಯಮಂಡಳಿ ಕ್ರಮ ತೆಗೆದುಕೊಳ್ಳುತ್ತದೆ. ಹಾಗಾಗಿ ‘ಹಾವು ಸಾಯಬಾರದು, ಕೋಲು ಮುರಿಯಬಾರದು’ ಎಂಬ ಗಾದೆ ಮಾತಿನಂತೆ ಪಟಾಕಿ ನಿಷೇಧ ಮಾಡಿದಂತೆ ಘೋಷಿಸಿ ಸ್ವಲ್ಪ ಸಮಯದಲ್ಲಿ ಉಲ್ಟಾ ಹೊಡೆದಿದ್ದಾರೆ.

ಹಾಗಾಗಿ ಇದು ಎನ್‌ಜಿಟಿಯ ಕಣ್ಣೊರೆಸುವ ತಂತ್ರವಾಗಿ ಈ ಎರೆಡೂ ಸರ್ಕಾರಗಳು ಪಟಾಕಿ ನಿಷೇಧ ಘೋಷಿಸಿದ್ದವು. ಸ್ವಲ್ಪ ಸಮಯದಲ್ಲಿಯೇ ಅವುಗಳಲ್ಲಿ ಬದಲಾವಣೆ ತರುವ ಮೂಲಕ ನಾವು ಹಿಂದೂಗಳ ಪರ ಇದ್ದೇವೆ ಎಂದು ತೋರಿಸಿಕೊಳ್ಳುತ್ತಿವೆ. ಹಾಗಾಗಿ ಈ ಎರಡೂ ರಾಜ್ಯಗಳಲ್ಲಿ ಸಂಪೂರ್ಣ ಪಟಾಕಿ ನಿಷೇಧ ಎನ್ನುವುದು ಹಾಸ್ಯಾಸ್ಪದವಾಗಿ ಕಾಣುತ್ತಿದೆ.

ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ನವೆಂಬರ್ 7 ರಿಂದ 30 ರವರೆಗೆ ಪಟಾಕಿ ಬಳಕೆಯನ್ನು ನಿಷೇಧಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನವೆಂಬರ್ 2 ರಂದು ಪರಿಸರ ಮತ್ತು ಅರಣ್ಯ ಸಚಿವಾಲಯ (ಎಂಒಇಎಫ್) ಮತ್ತು ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿ ನಾಲ್ಕು ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿತ್ತು.

ಪರಿಸರದ ಮೇಲೆ ಕಾಳಜಿ ಇರುವ ಎಲ್ಲಾ ರಾಜ್ಯಗಳು ಸಹ ಸಂಪೂರ್ಣ ಪಟಾಕಿ ನಿಷೇಧ ಮಾಡಬೇಕಿದೆ. ದೀಪಾವಳಿ ಮಾತ್ರವಲ್ಲದೇ ಎಲ್ಲಾ ಸಮಯದಲ್ಲಿಯೂ ಪಟಾಕಿಯ ಉತ್ಪಾದನೆ, ಮಾರಾಟ ಮತ್ತು ಸಿಡಿಸಿವಿಕೆಯನ್ನು ತಡೆಗಟ್ಟಬೇಕು ಎಂಬುದು ಪ್ರಜ್ಞಾವಂತರ ಒತ್ತಾಯ.


ಇದನ್ನೂ ಓದಿ: ವಾಯುಮಾಲಿನ್ಯ: ಪಟಾಕಿ ನಿಷೇಧ ಸಂಬಂಧ 18 ರಾಜ್ಯಗಳಿಗೆ ಎನ್‌ಜಿಟಿ ನೋಟಿಸ್!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...