Homeಮುಖಪುಟಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ಪಟಾಕಿ ನಿಷೇಧ: ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ಉಲ್ಟಾ ಹೊಡೆಯುತ್ತಿರುವುದೇಕೆ?

ಕರ್ನಾಟಕದಲ್ಲಿ ಹಸಿರು ಪಟಾಕಿಗೆ ಅವಕಾಶವಿದ್ದರೆ, ಹರಿಯಾಣದಲ್ಲಿ ದಿನದಲ್ಲಿ 2 ಗಂಟೆಗಳ ಸಮಯ ಪಟಾಕಿ ಸಿಡಿಸಬಹುದಾಗಿದೆ.

- Advertisement -
- Advertisement -

ಕೊರೊನಾ ರೋಗಿಗಳ ಶ್ವಾಸಕೋಶ ಮತ್ತು ಉಸಿರಾಟದ ಮೇಲೆ ತೀವ್ರ ಪ್ರಭಾವ ಬೀರುತ್ತದೆ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಕೆಲವು ರಾಜ್ಯಗಳು ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ ಮಾಡಿರುವುದು ಸರಿಯಷ್ಟೇ. ಆದರೆ ಸಂಪೂರ್ಣ ಪಟಾಕಿ ನಿಷೇಧ ಘೋಷಿಸಿದ್ದ ಬಿಜೆಪಿ ಆಳ್ವಿಕೆಯ ಹರಿಯಾಣ, ಕರ್ನಾಟಕ ರಾಜ್ಯಗಳು ತಮ್ಮ ನಿರ್ಧಾರಕ್ಕೆ ಉಲ್ಟಾ ಹೊಡೆಯುತ್ತಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ನವೆಂಬರ್ 02 ರಂದೇ ರಾಜಸ್ಥಾನದ ಕಾಂಗ್ರೆಸ್ ಸರ್ಕಾರವು ಪಟಾಕಿ ನಿಷೇಧ ಮಾಡಿತ್ತು. ನಂತರ ವಾಯುಮಾಲಿನ್ಯದಲ್ಲಿ ಕುಖ್ಯಾತಿ ಪಡೆದು ಬಹಳ ಚರ್ಚೆಯಲ್ಲಿರುವ ದೆಹಲಿ ರಾಜ್ಯದ ಆಪ್ ಸರ್ಕಾರವು ಪಟಾಕಿ ನಿಷೇಧಿಸಿತ್ತು. ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ, ಬಿಜೆಡಿ ನೇತೃತ್ವದ ಓರಿಸ್ಸಾ, ಎಸ್‌ಕೆಎಂ ನೇತೃತ್ವದ ಸಿಕ್ಕಿಂ ಮತ್ತು ಚಂಢಿಗಡ ಸರ್ಕಾರಗಳು ಪಟಾಕಿ ನಿಷೇಧ ನಿರ್ಧಾರ ತೆಗೆದುಕೊಂಡು ಜನಮನ್ನಣೆ ಗಳಸಿದ್ದವು.

ಬಿಜೆಪಿ ನೇತೃತ್ವದ ಕರ್ನಾಟಕ ಮತ್ತು ಹರಿಯಾಣ ಸರ್ಕಾರಗಳು ಸಹ ಸಂಪೂರ್ಣ ಪಟಾಕಿ ನಿಷೇಧ ಮಾಡುವುದಾಗಿ ಘೋಷಿಸಿದ್ದವು. ಈ ನಿರ್ಧಾರವನ್ನು ಪರಿಸರ ಪ್ರೇಮಿಗಳು, ಪ್ರಜ್ಞಾವಂತರು ಬೆಂಬಲಿಸಿದ್ದರು. ನವೆಂಬರ್ 06 ರಂದು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸಂಪೂರ್ಣ ಪಟಾಕಿ ನಿಷೇಧ ಎಂದು ಮಧ್ಯಾಹ್ನ ಘೋಷಿಸಿದರೆ ಸಂಜೆ ವೇಳೆಗೆ ಹಸಿರು ಪಟಾಕಿಗಳನ್ನು ಸಿಡಿಸಬಹುದು ಎಂದು ಯೂಟರ್ನ್ ಹೊಡೆದಿದ್ದರು.

ಅದೇ ರೀತಿಯಲ್ಲಿ ನವೆಂಬರ್ 07 ರಂದು ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಸಹ ಪಟಾಕಿ ನಿಷೇಧ ಮಾಡುವುದಾಗಿ ಘೋಷಿಸಿದ್ದರು. ಒಂದು ದಿನದ ನಂತರ ಇಂದು ದಿನಕ್ಕೆ 2 ಗಂಟೆಗಳ ಸಮಯ ಪಟಾಕಿ ಸಿಡಿಸಬಹುದು ಎಂದು ಹರಿಯಾಣ ಸಿಎಂ ಹೇಳಿರುವುದಾಗಿ ಟೈಮ್ಸ್ ನೌ ವರದಿ ಮಾಡಿದೆ.

ಕಡಿಮೆ ರಾಸಾಯನಿಕಗಳನ್ನು ಹೊಂದಿರುವ ಮತ್ತು ಹಾನಿಕಾರಕವಲ್ಲದ ಪಟಾಕಿಗಳನ್ನು ಹಸಿರು ಪಟಾಕಿಗಳು ಎಂದು ಕರೆಯಲಾಗುತ್ತದೆ. ಇವು ನೈಟ್ರೇಟ್ ಮತ್ತು ಬೇರಿಯಂ ರಾಸಯನಿಕ ಮುಕ್ತ ಪಟಾಕಿಗಳಾಗಿದ್ದು, ಅಲ್ಯೂಮಿಲಿಯಂ ಮತ್ತು ಥರ್ಮೈಟ್‌ ಒಳಗೊಂಡಿವೆ. ಈ ಪಟಾಕಿ ಸಿಡಿದಾಗ ಹೆಚ್ಚು ಹೊಗೆ ಬರುವುದಿಲ್ಲ ಎನ್ನಲಾಗುತ್ತಿದೆ. ಆದರೆ ದೀಪಾವಳಿಗೆ ಇನ್ನು ಕೇವಲ ಒಂದು ವಾರವಿರುವಾಗ ಸಾಮಾನ್ಯ ಪಟಾಕಿಗಳು ಎಲ್ಲಾ ಚಿಲ್ಲರೆ ಅಂಗಡಿಗಳಿಗೆ ತಲುಪಿರುವಾಗ ಯಡಿಯೂರಪ್ಪನವರ ಈ ತೀರ್ಮಾನದಿಂದ ಯಾವುದೇ ಪ್ರಯೋಜನವಿಲ್ಲ. ಜನ ಪಟಾಕಿ ಸಿಡಿಸಿಯೇ ಸಿಡಿಸುತ್ತಾರೆ ಎಂದು ಹಲವರು ದೂರಿದ್ದಾರೆ.

ಇನ್ನು ಹರಿಯಾಣ ಸರ್ಕಾರ ನೀಡಿರುವ 2 ಗಂಟೆಗಳ ಕಾಲ ಪಟಾಕಿ ಸಿಡಿಸಲು ಅವಕಾಶವು ಪಟಾಕಿ ನಿಷೇಧ ನಿಲುವಿಗೆ ವಿರುದ್ಧವಾಗಿದೆ. ಒಂದೇ ಸಮಯದಲ್ಲಿ ಬಹುತೇಕ ಜನರು ಪಟಾಕಿ ಸಿಡಿಸಿದರೆ ವಾಯುಮಾಲಿನ್ಯ ಹೆಚ್ಚಾಗುತ್ತದೆ. ಈ ನಿರ್ಧಾರ ಸರಿಯಲ್ಲ ಎಂಬ ಅಭಿಪ್ರಾಯವು ವ್ಯಕ್ತವಾಗಿದೆ.

ಈ ಎರಡು ಬಿಜೆಪಿ ಸರ್ಕಾರಗಳು ಯೂ ಟರ್ನ್ ಹೊಡೆಯಲು ತಮ್ಮ ಹಿಂದೂತ್ವವಾದಿ ನಿಲುವುಗಳೇ ಕಾರಣ ಎನ್ನಲಾಗುತ್ತಿದೆ. ಮುಖ್ಯವಾಗಿ ಹಿಂದೂಗಳ ಹಬ್ಬ ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧಿಸಿದರೆ ಬಹಳಷ್ಟು ಹಿಂದೂಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಒಂದು ವೇಳೆ ನಿಷೇಧ ಮಾಡದಿದ್ದರೆ ಹಸಿರು ನ್ಯಾಯಮಂಡಳಿ ಕ್ರಮ ತೆಗೆದುಕೊಳ್ಳುತ್ತದೆ. ಹಾಗಾಗಿ ‘ಹಾವು ಸಾಯಬಾರದು, ಕೋಲು ಮುರಿಯಬಾರದು’ ಎಂಬ ಗಾದೆ ಮಾತಿನಂತೆ ಪಟಾಕಿ ನಿಷೇಧ ಮಾಡಿದಂತೆ ಘೋಷಿಸಿ ಸ್ವಲ್ಪ ಸಮಯದಲ್ಲಿ ಉಲ್ಟಾ ಹೊಡೆದಿದ್ದಾರೆ.

ಹಾಗಾಗಿ ಇದು ಎನ್‌ಜಿಟಿಯ ಕಣ್ಣೊರೆಸುವ ತಂತ್ರವಾಗಿ ಈ ಎರೆಡೂ ಸರ್ಕಾರಗಳು ಪಟಾಕಿ ನಿಷೇಧ ಘೋಷಿಸಿದ್ದವು. ಸ್ವಲ್ಪ ಸಮಯದಲ್ಲಿಯೇ ಅವುಗಳಲ್ಲಿ ಬದಲಾವಣೆ ತರುವ ಮೂಲಕ ನಾವು ಹಿಂದೂಗಳ ಪರ ಇದ್ದೇವೆ ಎಂದು ತೋರಿಸಿಕೊಳ್ಳುತ್ತಿವೆ. ಹಾಗಾಗಿ ಈ ಎರಡೂ ರಾಜ್ಯಗಳಲ್ಲಿ ಸಂಪೂರ್ಣ ಪಟಾಕಿ ನಿಷೇಧ ಎನ್ನುವುದು ಹಾಸ್ಯಾಸ್ಪದವಾಗಿ ಕಾಣುತ್ತಿದೆ.

ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ನವೆಂಬರ್ 7 ರಿಂದ 30 ರವರೆಗೆ ಪಟಾಕಿ ಬಳಕೆಯನ್ನು ನಿಷೇಧಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನವೆಂಬರ್ 2 ರಂದು ಪರಿಸರ ಮತ್ತು ಅರಣ್ಯ ಸಚಿವಾಲಯ (ಎಂಒಇಎಫ್) ಮತ್ತು ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿ ನಾಲ್ಕು ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿತ್ತು.

ಪರಿಸರದ ಮೇಲೆ ಕಾಳಜಿ ಇರುವ ಎಲ್ಲಾ ರಾಜ್ಯಗಳು ಸಹ ಸಂಪೂರ್ಣ ಪಟಾಕಿ ನಿಷೇಧ ಮಾಡಬೇಕಿದೆ. ದೀಪಾವಳಿ ಮಾತ್ರವಲ್ಲದೇ ಎಲ್ಲಾ ಸಮಯದಲ್ಲಿಯೂ ಪಟಾಕಿಯ ಉತ್ಪಾದನೆ, ಮಾರಾಟ ಮತ್ತು ಸಿಡಿಸಿವಿಕೆಯನ್ನು ತಡೆಗಟ್ಟಬೇಕು ಎಂಬುದು ಪ್ರಜ್ಞಾವಂತರ ಒತ್ತಾಯ.


ಇದನ್ನೂ ಓದಿ: ವಾಯುಮಾಲಿನ್ಯ: ಪಟಾಕಿ ನಿಷೇಧ ಸಂಬಂಧ 18 ರಾಜ್ಯಗಳಿಗೆ ಎನ್‌ಜಿಟಿ ನೋಟಿಸ್!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...