Homeಮುಖಪುಟತಿರುಪ್ಪೂರ್‌ನ ಮನೆಯಲ್ಲಿ ಪಟಾಕಿ ಸ್ಫೋಟ: ಮಗು ಸೇರಿ ಮೂವರು ಸಾವು, 15 ಮಂದಿಗೆ ಗಾಯ

ತಿರುಪ್ಪೂರ್‌ನ ಮನೆಯಲ್ಲಿ ಪಟಾಕಿ ಸ್ಫೋಟ: ಮಗು ಸೇರಿ ಮೂವರು ಸಾವು, 15 ಮಂದಿಗೆ ಗಾಯ

- Advertisement -
- Advertisement -

ತಿರುಪ್ಪೂರ್ ಪಟ್ಟಣದ ಪಾಂಡಿಯನ್ ನಗರದಲ್ಲಿನ ಮನೆಯೊಂದರಲ್ಲಿ ದೇವಾಲಯದ ಉತ್ಸವಗಳಲ್ಲಿ ಬಳಸಲು ಅಕ್ರಮವಾಗಿ ತಯಾರಿಸಲಾಗಿದ್ದ ಪಟಾಕಿಗಳು ಮಂಗಳವಾರ ಸ್ಫೋಟಗೊಂಡ ಪರಿಣಾಮ 10 ತಿಂಗಳ ಹೆಣ್ಣು ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ.

ಅನಧಿಕೃತ ಪಟಾಕಿ ಘಟಕದ ಹಿಂದೆ ಇದ್ದ ಮನೆ ಮಾಲೀಕ ಕಾರ್ತಿಕ್ ಮತ್ತು ಅವರ ಸೋದರ ಮಾವ ವಿ ಸರವಣಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೃತರಲ್ಲಿ ಇಬ್ಬರನ್ನು ಗುರುತಿಸಲಾಗಿದ್ದು, ಈರೋಡ್ ಜಿಲ್ಲೆಯ ನಂಬಿಯೂರಿನ ಎಲುಮತ್ತೂರಿನ ಕುಮಾರ್ (39) ಮತ್ತು ಪಾಂಡಿಯನ್ ನಗರದ 10 ತಿಂಗಳ ಮಗು ಎ ಅಲಿಯಾ ಶಿರಿನ್. ಮೃತ ಓರ್ವ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಆಕೆ ಕುಮಾರ್‌ನ ಪತ್ನಿ ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

ಪೊಲೀಸರ ಪ್ರಕಾರ, ಸ್ಫೋಟ ಸಂಭವಿಸಿದ ಎರಡು ಅಂತಸ್ತಿನ ಮನೆ ಪಾಂಡಿಯನ್ ನಗರದ ಪೊನ್ನಮ್ಮಾಳ್ ನಗರದ ಕಾರ್ತಿಕ್ ಅವರ ಒಡೆತನದಲ್ಲಿದೆ. ಬಿಹಾರ ಮತ್ತು ಒಡಿಶಾದ ನಿಟ್ವೇರ್ ಕಾರ್ಮಿಕರಿಗೆ ಮೊದಲ ಮಹಡಿಯಲ್ಲಿ ಮೂರು ಕೊಠಡಿಗಳನ್ನು ಬಾಡಿಗೆಗೆ ನೀಡಲಾಗಿತ್ತು. ಕಾರ್ತಿಕ್ ತನ್ನ ಪತ್ನಿ ಸತ್ಯಪ್ರಿಯಾ ಮತ್ತು ಅವರ ಇಬ್ಬರು ಕಾಲೇಜಿಗೆ ಹೋಗುವ ಪುತ್ರರೊಂದಿಗೆ ನೆಲ ಮಹಡಿಯಲ್ಲಿ ವಾಸಿಸುತ್ತಿದ್ದರು.

ಈರೋಡ್ ಜಿಲ್ಲೆಯ ನಂಬಿಯೂರಿನ ಇರುಂಗಲೂರಿನ ಕಾರ್ತಿಕ್ ಅವರ ಸೋದರ ಮಾವ ಸರವಣಕುಮಾರ್ ಅದೇ ಪ್ರದೇಶದಲ್ಲಿ ಪಟಾಕಿ ತಯಾರಿಕಾ ಘಟಕವನ್ನು ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಧಿಕಾರಿಗಳ ಪ್ರಕಾರ, ಘಟಕದ ಪರವಾನಗಿ ಕಳೆದ ಡಿಸೆಂಬರ್‌ನಲ್ಲಿ ಮುಗಿದಿದೆ ಮತ್ತು ಜುಲೈನಲ್ಲಿ ನವೀಕರಣಕ್ಕಾಗಿ ಶರವಣಕುಮಾರ್ ಅರ್ಜಿ ಸಲ್ಲಿಸಿದರು. ಆದಾಗ್ಯೂ, ಅವರು ಅಕ್ರಮವಾಗಿ ಪಟಾಕಿಗಳನ್ನು ತಯಾರಿಸುವುದನ್ನು ಮುಂದುವರೆಸಿದರು. ಅವುಗಳನ್ನು ಹತ್ತಿರದ ಹಳ್ಳಿಗಳಲ್ಲಿ ದೇವಸ್ಥಾನದ ಉತ್ಸವಗಳಲ್ಲಿ ಬಳಸಲು ಮಾರಾಟ ಮಾಡುತ್ತಾರೆ ಎಂದು ಮೂಲಗಳು ತಿಳಿಸಿವೆ. ಕಾರ್ತಿಕ್ ಅವರ ಮನೆಯನ್ನು ಪಟಾಕಿ ತಯಾರಿಕಾ ಉದ್ದೇಶಕ್ಕಾಗಿ ಬಳಸಿಕೊಂಡರು. ಪ್ರತಿದಿನ ಅಲ್ಲಿಗೆ ಕೆಲಸಗಾರರನ್ನು ಕಳುಹಿಸುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ ಕಾರ್ತಿಕ್, ಅವರ ಪುತ್ರರು ಮತ್ತು ನಿಟ್‌ವೇರ್ ಕಾರ್ಮಿಕರು ದಿನಕ್ಕಾಗಿ ಹೊರಗೆ ಹೋಗಿದ್ದರು. ಸತ್ಯಪ್ರಿಯಾ ಮನೆಯಲ್ಲಿದ್ದರು. ಕುಮಾರ್ ಅವರು ಮನೆಯ ನೆಲ ಮಹಡಿಯಲ್ಲಿ ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದಾಗ ಬೆಳಗ್ಗೆ 11.55ರ ಸುಮಾರಿಗೆ ಪಟಾಕಿ ಸಿಡಿದಿದೆ.

ಸ್ಫೋಟದ ರಭಸಕ್ಕೆ ಮನೆಯ ಮುಂಭಾಗದಲ್ಲಿದ್ದ ದಿನಸಿ ಅಂಗಡಿ ಸಂಪೂರ್ಣ ಧ್ವಂಸಗೊಂಡಿದ್ದು, ಸ್ಫೋಟದಿಂದ 100 ಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲ ಮನೆಗಳಿಗೆ ಹಾನಿಯಾಗಿದೆ. ತಿರುಮುರುಗನಪೂಂಡಿ ಪೊಲೀಸರು ಮತ್ತು ತಿರುಪ್ಪೂರ್ ಉತ್ತರ ಮತ್ತು ದಕ್ಷಿಣ ಠಾಣೆಗಳ ಅಗ್ನಿಶಾಮಕ ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡರು.

ಎರಡು ಗಂಟೆಗಳ ಪ್ರಯತ್ನದ ನಂತರ ಸಿಕ್ಕಿಬಿದ್ದಿದ್ದ ಕುಮಾರ್ ಮತ್ತು ಸತ್ಯಪ್ರಿಯಾ ಅವರನ್ನು ರಕ್ಷಿಸಲಾಯಿತು. ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ಈ ವೇಳೆ ಅಲ್ಲೇ ಆಟವಾಡುತ್ತಿದ್ದ ಆಲಿಯಾ ಶಿರಿನ್ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ರಕ್ಷಣಾ ಸಿಬ್ಬಂದಿ ಮಹಿಳೆಯ ಸುಟ್ಟ ಅವಶೇಷಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಆದರೆ, ಇನ್ನೂ ಆಕೆಯ ಗುರುತು ಪತ್ತೆಯಾಗಿಲ್ಲ. ನಂತರ ಕುಮಾರ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು, ಸತ್ಯಪ್ರಿಯಾ ಇತರ ಗಾಯಾಳುಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರಲ್ಲಿ ಹಲವರು ದಾರಿಹೋಕರಾಗಿದ್ದು, ಮನೆಯ ಬಳಿ ಆಟವಾಡುತ್ತಿರುವ ಮಕ್ಕಳು ಸೇರಿದ್ದಾರೆ.

ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (ಬಿಡಿಡಿಎಸ್) ಮತ್ತು ವಿಧಿವಿಜ್ಞಾನ ತಜ್ಞರು ಶೋಧ ನಡೆಸಿ ಕೆಲವು ಕಿಲೋಗ್ರಾಂಗಳಷ್ಟು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾರ್ತಿಕ್ ಅವರ ನೆರೆಹೊರೆಯವರು ಮನೆಯಲ್ಲಿ ಪಟಾಕಿ ತಯಾರಿಸಿದ ಬಗ್ಗೆ ನಮಗೆ ಏನೂ ತಿಳಿದಿಲ್ಲ ಎಂದು ಹೇಳಿದರು. ಮಹಡಿಯ ಬಾಡಿಗೆದಾರ ಸರವಣನ್ ಮಾತನಾಡಿ, “ನಾನು ಮನೆಯಲ್ಲಿ ಪಟಾಕಿಗಳಿಗೆ ಸಂಬಂಧಿಸಿದ ಯಾವುದನ್ನೂ ನೋಡಿಲ್ಲ” ಎಂದು ಹೇಳಿದರು. ಸ್ಥಳೀಯ ಪೊಲೀಸರು ಮತ್ತು ಗುಪ್ತಚರ ವಿಭಾಗವು ಅಕ್ರಮ ಕಾರ್ಯಾಚರಣೆಯನ್ನು ಗಮನಿಸಲು ವಿಫಲವಾಗಿದೆ ಎಂದು ಪ್ರದೇಶದ ನಿವಾಸಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ; ಭಾರೀ GST ವಂಚನೆ | ದೇಶದಾದ್ಯಂತ 200 ಕ್ಕೂ ಹೆಚ್ಚು ನಕಲಿ ಸಂಸ್ಥೆಗಳು ಭಾಗಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...