Homeಮುಖಪುಟತಿರುಪ್ಪೂರ್‌ನ ಮನೆಯಲ್ಲಿ ಪಟಾಕಿ ಸ್ಫೋಟ: ಮಗು ಸೇರಿ ಮೂವರು ಸಾವು, 15 ಮಂದಿಗೆ ಗಾಯ

ತಿರುಪ್ಪೂರ್‌ನ ಮನೆಯಲ್ಲಿ ಪಟಾಕಿ ಸ್ಫೋಟ: ಮಗು ಸೇರಿ ಮೂವರು ಸಾವು, 15 ಮಂದಿಗೆ ಗಾಯ

- Advertisement -
- Advertisement -

ತಿರುಪ್ಪೂರ್ ಪಟ್ಟಣದ ಪಾಂಡಿಯನ್ ನಗರದಲ್ಲಿನ ಮನೆಯೊಂದರಲ್ಲಿ ದೇವಾಲಯದ ಉತ್ಸವಗಳಲ್ಲಿ ಬಳಸಲು ಅಕ್ರಮವಾಗಿ ತಯಾರಿಸಲಾಗಿದ್ದ ಪಟಾಕಿಗಳು ಮಂಗಳವಾರ ಸ್ಫೋಟಗೊಂಡ ಪರಿಣಾಮ 10 ತಿಂಗಳ ಹೆಣ್ಣು ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ.

ಅನಧಿಕೃತ ಪಟಾಕಿ ಘಟಕದ ಹಿಂದೆ ಇದ್ದ ಮನೆ ಮಾಲೀಕ ಕಾರ್ತಿಕ್ ಮತ್ತು ಅವರ ಸೋದರ ಮಾವ ವಿ ಸರವಣಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೃತರಲ್ಲಿ ಇಬ್ಬರನ್ನು ಗುರುತಿಸಲಾಗಿದ್ದು, ಈರೋಡ್ ಜಿಲ್ಲೆಯ ನಂಬಿಯೂರಿನ ಎಲುಮತ್ತೂರಿನ ಕುಮಾರ್ (39) ಮತ್ತು ಪಾಂಡಿಯನ್ ನಗರದ 10 ತಿಂಗಳ ಮಗು ಎ ಅಲಿಯಾ ಶಿರಿನ್. ಮೃತ ಓರ್ವ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಆಕೆ ಕುಮಾರ್‌ನ ಪತ್ನಿ ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

ಪೊಲೀಸರ ಪ್ರಕಾರ, ಸ್ಫೋಟ ಸಂಭವಿಸಿದ ಎರಡು ಅಂತಸ್ತಿನ ಮನೆ ಪಾಂಡಿಯನ್ ನಗರದ ಪೊನ್ನಮ್ಮಾಳ್ ನಗರದ ಕಾರ್ತಿಕ್ ಅವರ ಒಡೆತನದಲ್ಲಿದೆ. ಬಿಹಾರ ಮತ್ತು ಒಡಿಶಾದ ನಿಟ್ವೇರ್ ಕಾರ್ಮಿಕರಿಗೆ ಮೊದಲ ಮಹಡಿಯಲ್ಲಿ ಮೂರು ಕೊಠಡಿಗಳನ್ನು ಬಾಡಿಗೆಗೆ ನೀಡಲಾಗಿತ್ತು. ಕಾರ್ತಿಕ್ ತನ್ನ ಪತ್ನಿ ಸತ್ಯಪ್ರಿಯಾ ಮತ್ತು ಅವರ ಇಬ್ಬರು ಕಾಲೇಜಿಗೆ ಹೋಗುವ ಪುತ್ರರೊಂದಿಗೆ ನೆಲ ಮಹಡಿಯಲ್ಲಿ ವಾಸಿಸುತ್ತಿದ್ದರು.

ಈರೋಡ್ ಜಿಲ್ಲೆಯ ನಂಬಿಯೂರಿನ ಇರುಂಗಲೂರಿನ ಕಾರ್ತಿಕ್ ಅವರ ಸೋದರ ಮಾವ ಸರವಣಕುಮಾರ್ ಅದೇ ಪ್ರದೇಶದಲ್ಲಿ ಪಟಾಕಿ ತಯಾರಿಕಾ ಘಟಕವನ್ನು ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಧಿಕಾರಿಗಳ ಪ್ರಕಾರ, ಘಟಕದ ಪರವಾನಗಿ ಕಳೆದ ಡಿಸೆಂಬರ್‌ನಲ್ಲಿ ಮುಗಿದಿದೆ ಮತ್ತು ಜುಲೈನಲ್ಲಿ ನವೀಕರಣಕ್ಕಾಗಿ ಶರವಣಕುಮಾರ್ ಅರ್ಜಿ ಸಲ್ಲಿಸಿದರು. ಆದಾಗ್ಯೂ, ಅವರು ಅಕ್ರಮವಾಗಿ ಪಟಾಕಿಗಳನ್ನು ತಯಾರಿಸುವುದನ್ನು ಮುಂದುವರೆಸಿದರು. ಅವುಗಳನ್ನು ಹತ್ತಿರದ ಹಳ್ಳಿಗಳಲ್ಲಿ ದೇವಸ್ಥಾನದ ಉತ್ಸವಗಳಲ್ಲಿ ಬಳಸಲು ಮಾರಾಟ ಮಾಡುತ್ತಾರೆ ಎಂದು ಮೂಲಗಳು ತಿಳಿಸಿವೆ. ಕಾರ್ತಿಕ್ ಅವರ ಮನೆಯನ್ನು ಪಟಾಕಿ ತಯಾರಿಕಾ ಉದ್ದೇಶಕ್ಕಾಗಿ ಬಳಸಿಕೊಂಡರು. ಪ್ರತಿದಿನ ಅಲ್ಲಿಗೆ ಕೆಲಸಗಾರರನ್ನು ಕಳುಹಿಸುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ ಕಾರ್ತಿಕ್, ಅವರ ಪುತ್ರರು ಮತ್ತು ನಿಟ್‌ವೇರ್ ಕಾರ್ಮಿಕರು ದಿನಕ್ಕಾಗಿ ಹೊರಗೆ ಹೋಗಿದ್ದರು. ಸತ್ಯಪ್ರಿಯಾ ಮನೆಯಲ್ಲಿದ್ದರು. ಕುಮಾರ್ ಅವರು ಮನೆಯ ನೆಲ ಮಹಡಿಯಲ್ಲಿ ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದಾಗ ಬೆಳಗ್ಗೆ 11.55ರ ಸುಮಾರಿಗೆ ಪಟಾಕಿ ಸಿಡಿದಿದೆ.

ಸ್ಫೋಟದ ರಭಸಕ್ಕೆ ಮನೆಯ ಮುಂಭಾಗದಲ್ಲಿದ್ದ ದಿನಸಿ ಅಂಗಡಿ ಸಂಪೂರ್ಣ ಧ್ವಂಸಗೊಂಡಿದ್ದು, ಸ್ಫೋಟದಿಂದ 100 ಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲ ಮನೆಗಳಿಗೆ ಹಾನಿಯಾಗಿದೆ. ತಿರುಮುರುಗನಪೂಂಡಿ ಪೊಲೀಸರು ಮತ್ತು ತಿರುಪ್ಪೂರ್ ಉತ್ತರ ಮತ್ತು ದಕ್ಷಿಣ ಠಾಣೆಗಳ ಅಗ್ನಿಶಾಮಕ ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡರು.

ಎರಡು ಗಂಟೆಗಳ ಪ್ರಯತ್ನದ ನಂತರ ಸಿಕ್ಕಿಬಿದ್ದಿದ್ದ ಕುಮಾರ್ ಮತ್ತು ಸತ್ಯಪ್ರಿಯಾ ಅವರನ್ನು ರಕ್ಷಿಸಲಾಯಿತು. ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ಈ ವೇಳೆ ಅಲ್ಲೇ ಆಟವಾಡುತ್ತಿದ್ದ ಆಲಿಯಾ ಶಿರಿನ್ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ರಕ್ಷಣಾ ಸಿಬ್ಬಂದಿ ಮಹಿಳೆಯ ಸುಟ್ಟ ಅವಶೇಷಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಆದರೆ, ಇನ್ನೂ ಆಕೆಯ ಗುರುತು ಪತ್ತೆಯಾಗಿಲ್ಲ. ನಂತರ ಕುಮಾರ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು, ಸತ್ಯಪ್ರಿಯಾ ಇತರ ಗಾಯಾಳುಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರಲ್ಲಿ ಹಲವರು ದಾರಿಹೋಕರಾಗಿದ್ದು, ಮನೆಯ ಬಳಿ ಆಟವಾಡುತ್ತಿರುವ ಮಕ್ಕಳು ಸೇರಿದ್ದಾರೆ.

ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (ಬಿಡಿಡಿಎಸ್) ಮತ್ತು ವಿಧಿವಿಜ್ಞಾನ ತಜ್ಞರು ಶೋಧ ನಡೆಸಿ ಕೆಲವು ಕಿಲೋಗ್ರಾಂಗಳಷ್ಟು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾರ್ತಿಕ್ ಅವರ ನೆರೆಹೊರೆಯವರು ಮನೆಯಲ್ಲಿ ಪಟಾಕಿ ತಯಾರಿಸಿದ ಬಗ್ಗೆ ನಮಗೆ ಏನೂ ತಿಳಿದಿಲ್ಲ ಎಂದು ಹೇಳಿದರು. ಮಹಡಿಯ ಬಾಡಿಗೆದಾರ ಸರವಣನ್ ಮಾತನಾಡಿ, “ನಾನು ಮನೆಯಲ್ಲಿ ಪಟಾಕಿಗಳಿಗೆ ಸಂಬಂಧಿಸಿದ ಯಾವುದನ್ನೂ ನೋಡಿಲ್ಲ” ಎಂದು ಹೇಳಿದರು. ಸ್ಥಳೀಯ ಪೊಲೀಸರು ಮತ್ತು ಗುಪ್ತಚರ ವಿಭಾಗವು ಅಕ್ರಮ ಕಾರ್ಯಾಚರಣೆಯನ್ನು ಗಮನಿಸಲು ವಿಫಲವಾಗಿದೆ ಎಂದು ಪ್ರದೇಶದ ನಿವಾಸಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ; ಭಾರೀ GST ವಂಚನೆ | ದೇಶದಾದ್ಯಂತ 200 ಕ್ಕೂ ಹೆಚ್ಚು ನಕಲಿ ಸಂಸ್ಥೆಗಳು ಭಾಗಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...