Homeಮುಖಪುಟತಿರುಪ್ಪೂರ್‌ನ ಮನೆಯಲ್ಲಿ ಪಟಾಕಿ ಸ್ಫೋಟ: ಮಗು ಸೇರಿ ಮೂವರು ಸಾವು, 15 ಮಂದಿಗೆ ಗಾಯ

ತಿರುಪ್ಪೂರ್‌ನ ಮನೆಯಲ್ಲಿ ಪಟಾಕಿ ಸ್ಫೋಟ: ಮಗು ಸೇರಿ ಮೂವರು ಸಾವು, 15 ಮಂದಿಗೆ ಗಾಯ

- Advertisement -
- Advertisement -

ತಿರುಪ್ಪೂರ್ ಪಟ್ಟಣದ ಪಾಂಡಿಯನ್ ನಗರದಲ್ಲಿನ ಮನೆಯೊಂದರಲ್ಲಿ ದೇವಾಲಯದ ಉತ್ಸವಗಳಲ್ಲಿ ಬಳಸಲು ಅಕ್ರಮವಾಗಿ ತಯಾರಿಸಲಾಗಿದ್ದ ಪಟಾಕಿಗಳು ಮಂಗಳವಾರ ಸ್ಫೋಟಗೊಂಡ ಪರಿಣಾಮ 10 ತಿಂಗಳ ಹೆಣ್ಣು ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ.

ಅನಧಿಕೃತ ಪಟಾಕಿ ಘಟಕದ ಹಿಂದೆ ಇದ್ದ ಮನೆ ಮಾಲೀಕ ಕಾರ್ತಿಕ್ ಮತ್ತು ಅವರ ಸೋದರ ಮಾವ ವಿ ಸರವಣಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೃತರಲ್ಲಿ ಇಬ್ಬರನ್ನು ಗುರುತಿಸಲಾಗಿದ್ದು, ಈರೋಡ್ ಜಿಲ್ಲೆಯ ನಂಬಿಯೂರಿನ ಎಲುಮತ್ತೂರಿನ ಕುಮಾರ್ (39) ಮತ್ತು ಪಾಂಡಿಯನ್ ನಗರದ 10 ತಿಂಗಳ ಮಗು ಎ ಅಲಿಯಾ ಶಿರಿನ್. ಮೃತ ಓರ್ವ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಆಕೆ ಕುಮಾರ್‌ನ ಪತ್ನಿ ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

ಪೊಲೀಸರ ಪ್ರಕಾರ, ಸ್ಫೋಟ ಸಂಭವಿಸಿದ ಎರಡು ಅಂತಸ್ತಿನ ಮನೆ ಪಾಂಡಿಯನ್ ನಗರದ ಪೊನ್ನಮ್ಮಾಳ್ ನಗರದ ಕಾರ್ತಿಕ್ ಅವರ ಒಡೆತನದಲ್ಲಿದೆ. ಬಿಹಾರ ಮತ್ತು ಒಡಿಶಾದ ನಿಟ್ವೇರ್ ಕಾರ್ಮಿಕರಿಗೆ ಮೊದಲ ಮಹಡಿಯಲ್ಲಿ ಮೂರು ಕೊಠಡಿಗಳನ್ನು ಬಾಡಿಗೆಗೆ ನೀಡಲಾಗಿತ್ತು. ಕಾರ್ತಿಕ್ ತನ್ನ ಪತ್ನಿ ಸತ್ಯಪ್ರಿಯಾ ಮತ್ತು ಅವರ ಇಬ್ಬರು ಕಾಲೇಜಿಗೆ ಹೋಗುವ ಪುತ್ರರೊಂದಿಗೆ ನೆಲ ಮಹಡಿಯಲ್ಲಿ ವಾಸಿಸುತ್ತಿದ್ದರು.

ಈರೋಡ್ ಜಿಲ್ಲೆಯ ನಂಬಿಯೂರಿನ ಇರುಂಗಲೂರಿನ ಕಾರ್ತಿಕ್ ಅವರ ಸೋದರ ಮಾವ ಸರವಣಕುಮಾರ್ ಅದೇ ಪ್ರದೇಶದಲ್ಲಿ ಪಟಾಕಿ ತಯಾರಿಕಾ ಘಟಕವನ್ನು ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಧಿಕಾರಿಗಳ ಪ್ರಕಾರ, ಘಟಕದ ಪರವಾನಗಿ ಕಳೆದ ಡಿಸೆಂಬರ್‌ನಲ್ಲಿ ಮುಗಿದಿದೆ ಮತ್ತು ಜುಲೈನಲ್ಲಿ ನವೀಕರಣಕ್ಕಾಗಿ ಶರವಣಕುಮಾರ್ ಅರ್ಜಿ ಸಲ್ಲಿಸಿದರು. ಆದಾಗ್ಯೂ, ಅವರು ಅಕ್ರಮವಾಗಿ ಪಟಾಕಿಗಳನ್ನು ತಯಾರಿಸುವುದನ್ನು ಮುಂದುವರೆಸಿದರು. ಅವುಗಳನ್ನು ಹತ್ತಿರದ ಹಳ್ಳಿಗಳಲ್ಲಿ ದೇವಸ್ಥಾನದ ಉತ್ಸವಗಳಲ್ಲಿ ಬಳಸಲು ಮಾರಾಟ ಮಾಡುತ್ತಾರೆ ಎಂದು ಮೂಲಗಳು ತಿಳಿಸಿವೆ. ಕಾರ್ತಿಕ್ ಅವರ ಮನೆಯನ್ನು ಪಟಾಕಿ ತಯಾರಿಕಾ ಉದ್ದೇಶಕ್ಕಾಗಿ ಬಳಸಿಕೊಂಡರು. ಪ್ರತಿದಿನ ಅಲ್ಲಿಗೆ ಕೆಲಸಗಾರರನ್ನು ಕಳುಹಿಸುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ ಕಾರ್ತಿಕ್, ಅವರ ಪುತ್ರರು ಮತ್ತು ನಿಟ್‌ವೇರ್ ಕಾರ್ಮಿಕರು ದಿನಕ್ಕಾಗಿ ಹೊರಗೆ ಹೋಗಿದ್ದರು. ಸತ್ಯಪ್ರಿಯಾ ಮನೆಯಲ್ಲಿದ್ದರು. ಕುಮಾರ್ ಅವರು ಮನೆಯ ನೆಲ ಮಹಡಿಯಲ್ಲಿ ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದಾಗ ಬೆಳಗ್ಗೆ 11.55ರ ಸುಮಾರಿಗೆ ಪಟಾಕಿ ಸಿಡಿದಿದೆ.

ಸ್ಫೋಟದ ರಭಸಕ್ಕೆ ಮನೆಯ ಮುಂಭಾಗದಲ್ಲಿದ್ದ ದಿನಸಿ ಅಂಗಡಿ ಸಂಪೂರ್ಣ ಧ್ವಂಸಗೊಂಡಿದ್ದು, ಸ್ಫೋಟದಿಂದ 100 ಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲ ಮನೆಗಳಿಗೆ ಹಾನಿಯಾಗಿದೆ. ತಿರುಮುರುಗನಪೂಂಡಿ ಪೊಲೀಸರು ಮತ್ತು ತಿರುಪ್ಪೂರ್ ಉತ್ತರ ಮತ್ತು ದಕ್ಷಿಣ ಠಾಣೆಗಳ ಅಗ್ನಿಶಾಮಕ ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡರು.

ಎರಡು ಗಂಟೆಗಳ ಪ್ರಯತ್ನದ ನಂತರ ಸಿಕ್ಕಿಬಿದ್ದಿದ್ದ ಕುಮಾರ್ ಮತ್ತು ಸತ್ಯಪ್ರಿಯಾ ಅವರನ್ನು ರಕ್ಷಿಸಲಾಯಿತು. ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ಈ ವೇಳೆ ಅಲ್ಲೇ ಆಟವಾಡುತ್ತಿದ್ದ ಆಲಿಯಾ ಶಿರಿನ್ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ರಕ್ಷಣಾ ಸಿಬ್ಬಂದಿ ಮಹಿಳೆಯ ಸುಟ್ಟ ಅವಶೇಷಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಆದರೆ, ಇನ್ನೂ ಆಕೆಯ ಗುರುತು ಪತ್ತೆಯಾಗಿಲ್ಲ. ನಂತರ ಕುಮಾರ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು, ಸತ್ಯಪ್ರಿಯಾ ಇತರ ಗಾಯಾಳುಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರಲ್ಲಿ ಹಲವರು ದಾರಿಹೋಕರಾಗಿದ್ದು, ಮನೆಯ ಬಳಿ ಆಟವಾಡುತ್ತಿರುವ ಮಕ್ಕಳು ಸೇರಿದ್ದಾರೆ.

ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (ಬಿಡಿಡಿಎಸ್) ಮತ್ತು ವಿಧಿವಿಜ್ಞಾನ ತಜ್ಞರು ಶೋಧ ನಡೆಸಿ ಕೆಲವು ಕಿಲೋಗ್ರಾಂಗಳಷ್ಟು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾರ್ತಿಕ್ ಅವರ ನೆರೆಹೊರೆಯವರು ಮನೆಯಲ್ಲಿ ಪಟಾಕಿ ತಯಾರಿಸಿದ ಬಗ್ಗೆ ನಮಗೆ ಏನೂ ತಿಳಿದಿಲ್ಲ ಎಂದು ಹೇಳಿದರು. ಮಹಡಿಯ ಬಾಡಿಗೆದಾರ ಸರವಣನ್ ಮಾತನಾಡಿ, “ನಾನು ಮನೆಯಲ್ಲಿ ಪಟಾಕಿಗಳಿಗೆ ಸಂಬಂಧಿಸಿದ ಯಾವುದನ್ನೂ ನೋಡಿಲ್ಲ” ಎಂದು ಹೇಳಿದರು. ಸ್ಥಳೀಯ ಪೊಲೀಸರು ಮತ್ತು ಗುಪ್ತಚರ ವಿಭಾಗವು ಅಕ್ರಮ ಕಾರ್ಯಾಚರಣೆಯನ್ನು ಗಮನಿಸಲು ವಿಫಲವಾಗಿದೆ ಎಂದು ಪ್ರದೇಶದ ನಿವಾಸಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ; ಭಾರೀ GST ವಂಚನೆ | ದೇಶದಾದ್ಯಂತ 200 ಕ್ಕೂ ಹೆಚ್ಚು ನಕಲಿ ಸಂಸ್ಥೆಗಳು ಭಾಗಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...