Homeಮುಖಪುಟಪಟಾಕಿ ಪರಿಣಾಮ : ದೆಹಲಿಯಲ್ಲಿ ತೀವ್ರ ಕಳಪೆಗಿಳಿದ ವಾಯು ಗುಣಮಟ್ಟ

ಪಟಾಕಿ ಪರಿಣಾಮ : ದೆಹಲಿಯಲ್ಲಿ ತೀವ್ರ ಕಳಪೆಗಿಳಿದ ವಾಯು ಗುಣಮಟ್ಟ

- Advertisement -
- Advertisement -

ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಸಮಯದ ನಿಯಮಗಳನ್ನು ಉಲ್ಲಂಘಿಸಿ ದೀಪಾವಳಿ ಪ್ರಯುಕ್ತ ಜನರು ಪಟಾಕಿ ಸಿಡಿಸಿದ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯ ಗಾಳಿಯ ಗುಣಮಟ್ಟ ತೀವ್ರವಾಗಿ ಹದೆಗೆಟ್ಟಿದೆ.

ಸೋಮವಾರ (ನಿನ್ನೆ) ರಾತ್ರಿಯಿಡೀ ಜನರು ಪಟಾಕಿಗಳನ್ನು ಸಿಡಿಸಿದ ಪರಿಣಾಮ, ಮಂಗಳವಾರ (ಇಂದು) ಬೆಳಿಗ್ಗೆ ರಾಜಧಾನಿ ನಗರದಾದ್ಯಂತ ಮೋಡ ಮುಸುಕಿದ ವಾತಾವರಣ ಸೃಷ್ಟಿಯಾಗಿದೆ. ಗಾಳಿಯ ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಬೆಳಿಗ್ಗೆ 7 ಗಂಟೆಯ ಸುಮಾರಿಗೆ 451 ತಲುಪಿತ್ತು. ಇದು ರಾಷ್ಟ್ರೀಯ ಸರಾಸರಿಗಿಂತ 1.8 ಪಟ್ಟು ಹೆಚ್ಚು ಮತ್ತು ತೀವ್ರ ವಾಯಮಾಲಿನ್ಯವನ್ನು ಸೂಚಿಸುತ್ತದೆ.

ದೀಪಾವಳಿ ರಾತ್ರಿ (ಸೋಮವಾರ ರಾತ್ರಿ) ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ‘ತೀವ್ರ ಕಳಪೆ’ ಮಟ್ಟಕ್ಕೆ ಇಳಿದಿತ್ತು. ದೆಹಲಿಯ ಸ್ಯಾಟ್‌ಲೈಟ್ ನಗರಗಳಾದ ನೋಯ್ಡಾ ಮತ್ತು ಗುರ್‌ಗಾಂವ್‌ನಲ್ಲೂ ಪರಿಸ್ಥಿತಿ ತೀವ್ರವಾಗಿ ಹದೆಗೆಟ್ಟಿದೆ. ಮಂಗಳವಾರ ಬೆಳಿಗ್ಗೆ ಈ ನಗರಗಳಲ್ಲಿ ಕ್ರಮವಾಗಿ 407 ಮತ್ತು 402 ಎಕ್ಯೂಐ ದಾಖಲಾಗಿದೆ.

ದೆಹಲಿಯ ಬಹುತೇಕ ವಾಯು ಗುಣಮಟ್ಟ ಮಾಪನ ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ‘ರೆಡ್‌ಝೋನ್‌’ ತಲುಪಿರುವುದಾಗಿ ದಾಖಲಾಗಿದೆ. ವಝೀರ್‌ಪುರ (435), ದ್ವಾರಕಾ (422), ಅಶೋಕ್ ವಿಹಾರ್ (445), ಮತ್ತು ಆನಂದ್ ವಿಹಾರ್‌ (440)ಗಳಲ್ಲಿ ಗಾಳಿಯು ತೀವ್ರ ಕಳಪೆ ಮಟ್ಟಕ್ಕೆ ಇಳಿದಿದೆ. ಇದು ವಾಯು ಮಾಲಿನ್ಯದ ಗಂಭೀರ ಸ್ಥಿತಿಯನ್ನು ಸೂಚಿಸುತ್ತದೆ ಎಂದು ವರದಿಗಳು ವಿವರಿಸಿವೆ.

0 ಯಿಂದ 50ರ ನಡುವಿನ ವಾಯುಗುಟ್ಟವನ್ನು ‘ಉತ್ತಮ’, 51 ರಿಂದ 100 ‘ತೃಪ್ತಿದಾಯಕ’, 101 ರಿಂದ 200 ‘ಮಧ್ಯಮ’, 201 ರಿಂದ 300 ‘ಕಳಪೆ’, 301 ರಿಂದ 400 ‘ಅತೀ ಕಳಪೆ’ ಮತ್ತು 401 ರಿಂದ 500 ‘ತೀವ್ರ ಕಳಪೆ’ ಅಥವಾ ಗಂಭೀರ ಪರಿಸ್ಥಿತಿ ಎಂದು ಪರಿಗಣಿಸಲಾಗುತ್ತದೆ.

2020ರಿಂದ ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ.

ಈ ವರ್ಷ ಸುಪ್ರೀಂ ಕೋರ್ಟ್ ಅಕ್ಟೋಬರ್ 18 ರಿಂದ 20 ರವರೆಗೆ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಹಸಿರು ಪಟಾಕಿಗಳನ್ನು ಸಿಡಿಸಲು ಅನುಮತಿ ನೀಡಿತ್ತು. ಬೆಳಿಗ್ಗೆ 6 ರಿಂದ ಬೆಳಿಗ್ಗೆ 7 ರವರೆಗೆ ಮತ್ತು ರಾತ್ರಿ 8 ರಿಂದ ರಾತ್ರಿ 10 ರವರೆಗೆ ಎರಡು ಸಮಯಗಳಲ್ಲಿ ಮಾತ್ರ ಪಟಾಕಿ ಸಿಡಿಸಲು ಅನುಮತಿಸಿತ್ತು. ಆದರೆ, ಜನರು ನಿಯಮ ಮೀರಿ ನಿಗದಿ ಸಮಯಕ್ಕಿಂತ ಮೊದಲು ಮತ್ತು ನಂತರ ಪಟಾಕಿಗಳು ಸಿಡಿಸಿದ್ದಾರೆ ಎನ್ನಲಾಗಿದೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿ ಇರುವಾಗ ಹಸಿರು ಪಟಾಕಿಗಳನ್ನು ಸಿಡಿಸುವುದು ಕೂಡ ಸಮಂಜಸವಲ್ಲ. ಏಕೆಂದರೆ, ಅದೇನು ಕಡಿಮೆ ವಿಷಕಾರಿಯಲ್ಲ ಎಂದು ತಜ್ಞರು ಎಚ್ಚರಿಸಿದ್ದರು.

ದೀಪಾವಳಿ ರಾತ್ರಿ ದೆಹಲಿ ಅಗ್ನಿಶಾಮಕ ಸೇವೆಗಳಿಗೆ 269 ತುರ್ತು ಕರೆಗಳು ಬಂದಿವೆ ಎಂದು ಪಿಟಿಐ ವರದಿ ಮಾಡಿದೆ. ಆದಾಗ್ಯೂ, ಜೀವಹಾನಿ ಅಥವಾ ದೊಡ್ಡ ಮಟ್ಟದ ಗಾಯಗಳು ಸೇರಿದಂತೆ ಯಾವುದೇ ಪ್ರಮುಖ ಅವಘಡಗಳು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಕಳೆದ ವಾರ ಗಾಳಿಯ ಗುಣಮಟ್ಟ ಕ್ಷೀಣಿಸುತ್ತಿದ್ದಾಗ ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ) ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (ಜಿಆರ್‌ಎಪಿ) ನ ಎರಡನೇ ಹಂತವನ್ನು ಜಾರಿಗೊಳಿಸಿತ್ತು. ಧೂಳು ನಿಯಂತ್ರಣವನ್ನು ತೀವ್ರಗೊಳಿಸುವುದು. ಸಾರ್ವಜನಿಕ ಸಾರಿಗೆ ಸೇವೆಗಳ ವಿಸ್ತರಣೆ ಮತ್ತು ಡೀಸೆಲ್ ಜನರೇಟರ್ ಸೆಟ್‌ಗಳ ಮೇಲಿನ ನಿರ್ಬಂಧಗಳು ಜಿಆರ್‌ಪಿಎ ಎರಡನೇ ಹಂತದಲ್ಲಿ ಸೇರಿವೆ.

ದೆಹಲಿ-ಎನ್‌ಸಿಆರ್‌ನ ಸ್ಥಳೀಯಾಡಳಿತ ಈಗಾಗಲೇ ಪ್ರತಿದಿನ ಯಂತ್ರಗಳ ಮೂಲಕ ಗುಡಿಸುವುದು ಮತ್ತು ರಸ್ತೆಗಳ ಮೇಲೆ ನೀರು ಚಿಮುಕಿಸುವುದನ್ನ ಪ್ರಾರಂಭಿಸಿವೆ.

ಬಲವಾದ ಗಾಳಿ ಬೀಸದ ಕಾರಣ ನಗರದಲ್ಲಿ ಹೊಗೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31–33 ಡಿಗ್ರಿ ಮತ್ತು 20–22 ಡಿಗ್ರಿಗಳ ನಡುವೆ ಉಳಿಯುವ ಸಾಧ್ಯತೆಯಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1–3 ಡಿಗ್ರಿಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಆದರೆ ಗರಿಷ್ಠ ತಾಪಮಾನವು ಋತುಮಾನದ ಸರಾಸರಿಗೆ ಹತ್ತಿರದಲ್ಲಿದೆ.

ಬಿಹಾರ ಮಹಾಮೈತ್ರಿಯಲ್ಲಿ ಅಸಮಾಧಾನ : ಚುನಾವಣಾ ಕಣದಿಂದ ಹಿಂದೆ ಸರಿದ ಜೆಎಂಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...