Homeಮುಖಪುಟಪಟಾಕಿ ಪರಿಣಾಮ : ದೆಹಲಿಯಲ್ಲಿ ತೀವ್ರ ಕಳಪೆಗಿಳಿದ ವಾಯು ಗುಣಮಟ್ಟ

ಪಟಾಕಿ ಪರಿಣಾಮ : ದೆಹಲಿಯಲ್ಲಿ ತೀವ್ರ ಕಳಪೆಗಿಳಿದ ವಾಯು ಗುಣಮಟ್ಟ

- Advertisement -
- Advertisement -

ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಸಮಯದ ನಿಯಮಗಳನ್ನು ಉಲ್ಲಂಘಿಸಿ ದೀಪಾವಳಿ ಪ್ರಯುಕ್ತ ಜನರು ಪಟಾಕಿ ಸಿಡಿಸಿದ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯ ಗಾಳಿಯ ಗುಣಮಟ್ಟ ತೀವ್ರವಾಗಿ ಹದೆಗೆಟ್ಟಿದೆ.

ಸೋಮವಾರ (ನಿನ್ನೆ) ರಾತ್ರಿಯಿಡೀ ಜನರು ಪಟಾಕಿಗಳನ್ನು ಸಿಡಿಸಿದ ಪರಿಣಾಮ, ಮಂಗಳವಾರ (ಇಂದು) ಬೆಳಿಗ್ಗೆ ರಾಜಧಾನಿ ನಗರದಾದ್ಯಂತ ಮೋಡ ಮುಸುಕಿದ ವಾತಾವರಣ ಸೃಷ್ಟಿಯಾಗಿದೆ. ಗಾಳಿಯ ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಬೆಳಿಗ್ಗೆ 7 ಗಂಟೆಯ ಸುಮಾರಿಗೆ 451 ತಲುಪಿತ್ತು. ಇದು ರಾಷ್ಟ್ರೀಯ ಸರಾಸರಿಗಿಂತ 1.8 ಪಟ್ಟು ಹೆಚ್ಚು ಮತ್ತು ತೀವ್ರ ವಾಯಮಾಲಿನ್ಯವನ್ನು ಸೂಚಿಸುತ್ತದೆ.

ದೀಪಾವಳಿ ರಾತ್ರಿ (ಸೋಮವಾರ ರಾತ್ರಿ) ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ‘ತೀವ್ರ ಕಳಪೆ’ ಮಟ್ಟಕ್ಕೆ ಇಳಿದಿತ್ತು. ದೆಹಲಿಯ ಸ್ಯಾಟ್‌ಲೈಟ್ ನಗರಗಳಾದ ನೋಯ್ಡಾ ಮತ್ತು ಗುರ್‌ಗಾಂವ್‌ನಲ್ಲೂ ಪರಿಸ್ಥಿತಿ ತೀವ್ರವಾಗಿ ಹದೆಗೆಟ್ಟಿದೆ. ಮಂಗಳವಾರ ಬೆಳಿಗ್ಗೆ ಈ ನಗರಗಳಲ್ಲಿ ಕ್ರಮವಾಗಿ 407 ಮತ್ತು 402 ಎಕ್ಯೂಐ ದಾಖಲಾಗಿದೆ.

ದೆಹಲಿಯ ಬಹುತೇಕ ವಾಯು ಗುಣಮಟ್ಟ ಮಾಪನ ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ‘ರೆಡ್‌ಝೋನ್‌’ ತಲುಪಿರುವುದಾಗಿ ದಾಖಲಾಗಿದೆ. ವಝೀರ್‌ಪುರ (435), ದ್ವಾರಕಾ (422), ಅಶೋಕ್ ವಿಹಾರ್ (445), ಮತ್ತು ಆನಂದ್ ವಿಹಾರ್‌ (440)ಗಳಲ್ಲಿ ಗಾಳಿಯು ತೀವ್ರ ಕಳಪೆ ಮಟ್ಟಕ್ಕೆ ಇಳಿದಿದೆ. ಇದು ವಾಯು ಮಾಲಿನ್ಯದ ಗಂಭೀರ ಸ್ಥಿತಿಯನ್ನು ಸೂಚಿಸುತ್ತದೆ ಎಂದು ವರದಿಗಳು ವಿವರಿಸಿವೆ.

0 ಯಿಂದ 50ರ ನಡುವಿನ ವಾಯುಗುಟ್ಟವನ್ನು ‘ಉತ್ತಮ’, 51 ರಿಂದ 100 ‘ತೃಪ್ತಿದಾಯಕ’, 101 ರಿಂದ 200 ‘ಮಧ್ಯಮ’, 201 ರಿಂದ 300 ‘ಕಳಪೆ’, 301 ರಿಂದ 400 ‘ಅತೀ ಕಳಪೆ’ ಮತ್ತು 401 ರಿಂದ 500 ‘ತೀವ್ರ ಕಳಪೆ’ ಅಥವಾ ಗಂಭೀರ ಪರಿಸ್ಥಿತಿ ಎಂದು ಪರಿಗಣಿಸಲಾಗುತ್ತದೆ.

2020ರಿಂದ ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ.

ಈ ವರ್ಷ ಸುಪ್ರೀಂ ಕೋರ್ಟ್ ಅಕ್ಟೋಬರ್ 18 ರಿಂದ 20 ರವರೆಗೆ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಹಸಿರು ಪಟಾಕಿಗಳನ್ನು ಸಿಡಿಸಲು ಅನುಮತಿ ನೀಡಿತ್ತು. ಬೆಳಿಗ್ಗೆ 6 ರಿಂದ ಬೆಳಿಗ್ಗೆ 7 ರವರೆಗೆ ಮತ್ತು ರಾತ್ರಿ 8 ರಿಂದ ರಾತ್ರಿ 10 ರವರೆಗೆ ಎರಡು ಸಮಯಗಳಲ್ಲಿ ಮಾತ್ರ ಪಟಾಕಿ ಸಿಡಿಸಲು ಅನುಮತಿಸಿತ್ತು. ಆದರೆ, ಜನರು ನಿಯಮ ಮೀರಿ ನಿಗದಿ ಸಮಯಕ್ಕಿಂತ ಮೊದಲು ಮತ್ತು ನಂತರ ಪಟಾಕಿಗಳು ಸಿಡಿಸಿದ್ದಾರೆ ಎನ್ನಲಾಗಿದೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿ ಇರುವಾಗ ಹಸಿರು ಪಟಾಕಿಗಳನ್ನು ಸಿಡಿಸುವುದು ಕೂಡ ಸಮಂಜಸವಲ್ಲ. ಏಕೆಂದರೆ, ಅದೇನು ಕಡಿಮೆ ವಿಷಕಾರಿಯಲ್ಲ ಎಂದು ತಜ್ಞರು ಎಚ್ಚರಿಸಿದ್ದರು.

ದೀಪಾವಳಿ ರಾತ್ರಿ ದೆಹಲಿ ಅಗ್ನಿಶಾಮಕ ಸೇವೆಗಳಿಗೆ 269 ತುರ್ತು ಕರೆಗಳು ಬಂದಿವೆ ಎಂದು ಪಿಟಿಐ ವರದಿ ಮಾಡಿದೆ. ಆದಾಗ್ಯೂ, ಜೀವಹಾನಿ ಅಥವಾ ದೊಡ್ಡ ಮಟ್ಟದ ಗಾಯಗಳು ಸೇರಿದಂತೆ ಯಾವುದೇ ಪ್ರಮುಖ ಅವಘಡಗಳು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಕಳೆದ ವಾರ ಗಾಳಿಯ ಗುಣಮಟ್ಟ ಕ್ಷೀಣಿಸುತ್ತಿದ್ದಾಗ ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ) ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (ಜಿಆರ್‌ಎಪಿ) ನ ಎರಡನೇ ಹಂತವನ್ನು ಜಾರಿಗೊಳಿಸಿತ್ತು. ಧೂಳು ನಿಯಂತ್ರಣವನ್ನು ತೀವ್ರಗೊಳಿಸುವುದು. ಸಾರ್ವಜನಿಕ ಸಾರಿಗೆ ಸೇವೆಗಳ ವಿಸ್ತರಣೆ ಮತ್ತು ಡೀಸೆಲ್ ಜನರೇಟರ್ ಸೆಟ್‌ಗಳ ಮೇಲಿನ ನಿರ್ಬಂಧಗಳು ಜಿಆರ್‌ಪಿಎ ಎರಡನೇ ಹಂತದಲ್ಲಿ ಸೇರಿವೆ.

ದೆಹಲಿ-ಎನ್‌ಸಿಆರ್‌ನ ಸ್ಥಳೀಯಾಡಳಿತ ಈಗಾಗಲೇ ಪ್ರತಿದಿನ ಯಂತ್ರಗಳ ಮೂಲಕ ಗುಡಿಸುವುದು ಮತ್ತು ರಸ್ತೆಗಳ ಮೇಲೆ ನೀರು ಚಿಮುಕಿಸುವುದನ್ನ ಪ್ರಾರಂಭಿಸಿವೆ.

ಬಲವಾದ ಗಾಳಿ ಬೀಸದ ಕಾರಣ ನಗರದಲ್ಲಿ ಹೊಗೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31–33 ಡಿಗ್ರಿ ಮತ್ತು 20–22 ಡಿಗ್ರಿಗಳ ನಡುವೆ ಉಳಿಯುವ ಸಾಧ್ಯತೆಯಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1–3 ಡಿಗ್ರಿಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಆದರೆ ಗರಿಷ್ಠ ತಾಪಮಾನವು ಋತುಮಾನದ ಸರಾಸರಿಗೆ ಹತ್ತಿರದಲ್ಲಿದೆ.

ಬಿಹಾರ ಮಹಾಮೈತ್ರಿಯಲ್ಲಿ ಅಸಮಾಧಾನ : ಚುನಾವಣಾ ಕಣದಿಂದ ಹಿಂದೆ ಸರಿದ ಜೆಎಂಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...