Homeಮುಖಪುಟಪಟಾಕಿ ಪರಿಣಾಮ : ದೆಹಲಿಯಲ್ಲಿ ತೀವ್ರ ಕಳಪೆಗಿಳಿದ ವಾಯು ಗುಣಮಟ್ಟ

ಪಟಾಕಿ ಪರಿಣಾಮ : ದೆಹಲಿಯಲ್ಲಿ ತೀವ್ರ ಕಳಪೆಗಿಳಿದ ವಾಯು ಗುಣಮಟ್ಟ

- Advertisement -
- Advertisement -

ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಸಮಯದ ನಿಯಮಗಳನ್ನು ಉಲ್ಲಂಘಿಸಿ ದೀಪಾವಳಿ ಪ್ರಯುಕ್ತ ಜನರು ಪಟಾಕಿ ಸಿಡಿಸಿದ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯ ಗಾಳಿಯ ಗುಣಮಟ್ಟ ತೀವ್ರವಾಗಿ ಹದೆಗೆಟ್ಟಿದೆ.

ಸೋಮವಾರ (ನಿನ್ನೆ) ರಾತ್ರಿಯಿಡೀ ಜನರು ಪಟಾಕಿಗಳನ್ನು ಸಿಡಿಸಿದ ಪರಿಣಾಮ, ಮಂಗಳವಾರ (ಇಂದು) ಬೆಳಿಗ್ಗೆ ರಾಜಧಾನಿ ನಗರದಾದ್ಯಂತ ಮೋಡ ಮುಸುಕಿದ ವಾತಾವರಣ ಸೃಷ್ಟಿಯಾಗಿದೆ. ಗಾಳಿಯ ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಬೆಳಿಗ್ಗೆ 7 ಗಂಟೆಯ ಸುಮಾರಿಗೆ 451 ತಲುಪಿತ್ತು. ಇದು ರಾಷ್ಟ್ರೀಯ ಸರಾಸರಿಗಿಂತ 1.8 ಪಟ್ಟು ಹೆಚ್ಚು ಮತ್ತು ತೀವ್ರ ವಾಯಮಾಲಿನ್ಯವನ್ನು ಸೂಚಿಸುತ್ತದೆ.

ದೀಪಾವಳಿ ರಾತ್ರಿ (ಸೋಮವಾರ ರಾತ್ರಿ) ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ‘ತೀವ್ರ ಕಳಪೆ’ ಮಟ್ಟಕ್ಕೆ ಇಳಿದಿತ್ತು. ದೆಹಲಿಯ ಸ್ಯಾಟ್‌ಲೈಟ್ ನಗರಗಳಾದ ನೋಯ್ಡಾ ಮತ್ತು ಗುರ್‌ಗಾಂವ್‌ನಲ್ಲೂ ಪರಿಸ್ಥಿತಿ ತೀವ್ರವಾಗಿ ಹದೆಗೆಟ್ಟಿದೆ. ಮಂಗಳವಾರ ಬೆಳಿಗ್ಗೆ ಈ ನಗರಗಳಲ್ಲಿ ಕ್ರಮವಾಗಿ 407 ಮತ್ತು 402 ಎಕ್ಯೂಐ ದಾಖಲಾಗಿದೆ.

ದೆಹಲಿಯ ಬಹುತೇಕ ವಾಯು ಗುಣಮಟ್ಟ ಮಾಪನ ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ‘ರೆಡ್‌ಝೋನ್‌’ ತಲುಪಿರುವುದಾಗಿ ದಾಖಲಾಗಿದೆ. ವಝೀರ್‌ಪುರ (435), ದ್ವಾರಕಾ (422), ಅಶೋಕ್ ವಿಹಾರ್ (445), ಮತ್ತು ಆನಂದ್ ವಿಹಾರ್‌ (440)ಗಳಲ್ಲಿ ಗಾಳಿಯು ತೀವ್ರ ಕಳಪೆ ಮಟ್ಟಕ್ಕೆ ಇಳಿದಿದೆ. ಇದು ವಾಯು ಮಾಲಿನ್ಯದ ಗಂಭೀರ ಸ್ಥಿತಿಯನ್ನು ಸೂಚಿಸುತ್ತದೆ ಎಂದು ವರದಿಗಳು ವಿವರಿಸಿವೆ.

0 ಯಿಂದ 50ರ ನಡುವಿನ ವಾಯುಗುಟ್ಟವನ್ನು ‘ಉತ್ತಮ’, 51 ರಿಂದ 100 ‘ತೃಪ್ತಿದಾಯಕ’, 101 ರಿಂದ 200 ‘ಮಧ್ಯಮ’, 201 ರಿಂದ 300 ‘ಕಳಪೆ’, 301 ರಿಂದ 400 ‘ಅತೀ ಕಳಪೆ’ ಮತ್ತು 401 ರಿಂದ 500 ‘ತೀವ್ರ ಕಳಪೆ’ ಅಥವಾ ಗಂಭೀರ ಪರಿಸ್ಥಿತಿ ಎಂದು ಪರಿಗಣಿಸಲಾಗುತ್ತದೆ.

2020ರಿಂದ ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ.

ಈ ವರ್ಷ ಸುಪ್ರೀಂ ಕೋರ್ಟ್ ಅಕ್ಟೋಬರ್ 18 ರಿಂದ 20 ರವರೆಗೆ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಹಸಿರು ಪಟಾಕಿಗಳನ್ನು ಸಿಡಿಸಲು ಅನುಮತಿ ನೀಡಿತ್ತು. ಬೆಳಿಗ್ಗೆ 6 ರಿಂದ ಬೆಳಿಗ್ಗೆ 7 ರವರೆಗೆ ಮತ್ತು ರಾತ್ರಿ 8 ರಿಂದ ರಾತ್ರಿ 10 ರವರೆಗೆ ಎರಡು ಸಮಯಗಳಲ್ಲಿ ಮಾತ್ರ ಪಟಾಕಿ ಸಿಡಿಸಲು ಅನುಮತಿಸಿತ್ತು. ಆದರೆ, ಜನರು ನಿಯಮ ಮೀರಿ ನಿಗದಿ ಸಮಯಕ್ಕಿಂತ ಮೊದಲು ಮತ್ತು ನಂತರ ಪಟಾಕಿಗಳು ಸಿಡಿಸಿದ್ದಾರೆ ಎನ್ನಲಾಗಿದೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿ ಇರುವಾಗ ಹಸಿರು ಪಟಾಕಿಗಳನ್ನು ಸಿಡಿಸುವುದು ಕೂಡ ಸಮಂಜಸವಲ್ಲ. ಏಕೆಂದರೆ, ಅದೇನು ಕಡಿಮೆ ವಿಷಕಾರಿಯಲ್ಲ ಎಂದು ತಜ್ಞರು ಎಚ್ಚರಿಸಿದ್ದರು.

ದೀಪಾವಳಿ ರಾತ್ರಿ ದೆಹಲಿ ಅಗ್ನಿಶಾಮಕ ಸೇವೆಗಳಿಗೆ 269 ತುರ್ತು ಕರೆಗಳು ಬಂದಿವೆ ಎಂದು ಪಿಟಿಐ ವರದಿ ಮಾಡಿದೆ. ಆದಾಗ್ಯೂ, ಜೀವಹಾನಿ ಅಥವಾ ದೊಡ್ಡ ಮಟ್ಟದ ಗಾಯಗಳು ಸೇರಿದಂತೆ ಯಾವುದೇ ಪ್ರಮುಖ ಅವಘಡಗಳು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಕಳೆದ ವಾರ ಗಾಳಿಯ ಗುಣಮಟ್ಟ ಕ್ಷೀಣಿಸುತ್ತಿದ್ದಾಗ ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ) ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (ಜಿಆರ್‌ಎಪಿ) ನ ಎರಡನೇ ಹಂತವನ್ನು ಜಾರಿಗೊಳಿಸಿತ್ತು. ಧೂಳು ನಿಯಂತ್ರಣವನ್ನು ತೀವ್ರಗೊಳಿಸುವುದು. ಸಾರ್ವಜನಿಕ ಸಾರಿಗೆ ಸೇವೆಗಳ ವಿಸ್ತರಣೆ ಮತ್ತು ಡೀಸೆಲ್ ಜನರೇಟರ್ ಸೆಟ್‌ಗಳ ಮೇಲಿನ ನಿರ್ಬಂಧಗಳು ಜಿಆರ್‌ಪಿಎ ಎರಡನೇ ಹಂತದಲ್ಲಿ ಸೇರಿವೆ.

ದೆಹಲಿ-ಎನ್‌ಸಿಆರ್‌ನ ಸ್ಥಳೀಯಾಡಳಿತ ಈಗಾಗಲೇ ಪ್ರತಿದಿನ ಯಂತ್ರಗಳ ಮೂಲಕ ಗುಡಿಸುವುದು ಮತ್ತು ರಸ್ತೆಗಳ ಮೇಲೆ ನೀರು ಚಿಮುಕಿಸುವುದನ್ನ ಪ್ರಾರಂಭಿಸಿವೆ.

ಬಲವಾದ ಗಾಳಿ ಬೀಸದ ಕಾರಣ ನಗರದಲ್ಲಿ ಹೊಗೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31–33 ಡಿಗ್ರಿ ಮತ್ತು 20–22 ಡಿಗ್ರಿಗಳ ನಡುವೆ ಉಳಿಯುವ ಸಾಧ್ಯತೆಯಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1–3 ಡಿಗ್ರಿಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಆದರೆ ಗರಿಷ್ಠ ತಾಪಮಾನವು ಋತುಮಾನದ ಸರಾಸರಿಗೆ ಹತ್ತಿರದಲ್ಲಿದೆ.

ಬಿಹಾರ ಮಹಾಮೈತ್ರಿಯಲ್ಲಿ ಅಸಮಾಧಾನ : ಚುನಾವಣಾ ಕಣದಿಂದ ಹಿಂದೆ ಸರಿದ ಜೆಎಂಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...