Homeಮುಖಪುಟಪಟಾಕಿ ಪರಿಣಾಮ : ದೆಹಲಿಯಲ್ಲಿ ತೀವ್ರ ಕಳಪೆಗಿಳಿದ ವಾಯು ಗುಣಮಟ್ಟ

ಪಟಾಕಿ ಪರಿಣಾಮ : ದೆಹಲಿಯಲ್ಲಿ ತೀವ್ರ ಕಳಪೆಗಿಳಿದ ವಾಯು ಗುಣಮಟ್ಟ

- Advertisement -
- Advertisement -

ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಸಮಯದ ನಿಯಮಗಳನ್ನು ಉಲ್ಲಂಘಿಸಿ ದೀಪಾವಳಿ ಪ್ರಯುಕ್ತ ಜನರು ಪಟಾಕಿ ಸಿಡಿಸಿದ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯ ಗಾಳಿಯ ಗುಣಮಟ್ಟ ತೀವ್ರವಾಗಿ ಹದೆಗೆಟ್ಟಿದೆ.

ಸೋಮವಾರ (ನಿನ್ನೆ) ರಾತ್ರಿಯಿಡೀ ಜನರು ಪಟಾಕಿಗಳನ್ನು ಸಿಡಿಸಿದ ಪರಿಣಾಮ, ಮಂಗಳವಾರ (ಇಂದು) ಬೆಳಿಗ್ಗೆ ರಾಜಧಾನಿ ನಗರದಾದ್ಯಂತ ಮೋಡ ಮುಸುಕಿದ ವಾತಾವರಣ ಸೃಷ್ಟಿಯಾಗಿದೆ. ಗಾಳಿಯ ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಬೆಳಿಗ್ಗೆ 7 ಗಂಟೆಯ ಸುಮಾರಿಗೆ 451 ತಲುಪಿತ್ತು. ಇದು ರಾಷ್ಟ್ರೀಯ ಸರಾಸರಿಗಿಂತ 1.8 ಪಟ್ಟು ಹೆಚ್ಚು ಮತ್ತು ತೀವ್ರ ವಾಯಮಾಲಿನ್ಯವನ್ನು ಸೂಚಿಸುತ್ತದೆ.

ದೀಪಾವಳಿ ರಾತ್ರಿ (ಸೋಮವಾರ ರಾತ್ರಿ) ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ‘ತೀವ್ರ ಕಳಪೆ’ ಮಟ್ಟಕ್ಕೆ ಇಳಿದಿತ್ತು. ದೆಹಲಿಯ ಸ್ಯಾಟ್‌ಲೈಟ್ ನಗರಗಳಾದ ನೋಯ್ಡಾ ಮತ್ತು ಗುರ್‌ಗಾಂವ್‌ನಲ್ಲೂ ಪರಿಸ್ಥಿತಿ ತೀವ್ರವಾಗಿ ಹದೆಗೆಟ್ಟಿದೆ. ಮಂಗಳವಾರ ಬೆಳಿಗ್ಗೆ ಈ ನಗರಗಳಲ್ಲಿ ಕ್ರಮವಾಗಿ 407 ಮತ್ತು 402 ಎಕ್ಯೂಐ ದಾಖಲಾಗಿದೆ.

ದೆಹಲಿಯ ಬಹುತೇಕ ವಾಯು ಗುಣಮಟ್ಟ ಮಾಪನ ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ‘ರೆಡ್‌ಝೋನ್‌’ ತಲುಪಿರುವುದಾಗಿ ದಾಖಲಾಗಿದೆ. ವಝೀರ್‌ಪುರ (435), ದ್ವಾರಕಾ (422), ಅಶೋಕ್ ವಿಹಾರ್ (445), ಮತ್ತು ಆನಂದ್ ವಿಹಾರ್‌ (440)ಗಳಲ್ಲಿ ಗಾಳಿಯು ತೀವ್ರ ಕಳಪೆ ಮಟ್ಟಕ್ಕೆ ಇಳಿದಿದೆ. ಇದು ವಾಯು ಮಾಲಿನ್ಯದ ಗಂಭೀರ ಸ್ಥಿತಿಯನ್ನು ಸೂಚಿಸುತ್ತದೆ ಎಂದು ವರದಿಗಳು ವಿವರಿಸಿವೆ.

0 ಯಿಂದ 50ರ ನಡುವಿನ ವಾಯುಗುಟ್ಟವನ್ನು ‘ಉತ್ತಮ’, 51 ರಿಂದ 100 ‘ತೃಪ್ತಿದಾಯಕ’, 101 ರಿಂದ 200 ‘ಮಧ್ಯಮ’, 201 ರಿಂದ 300 ‘ಕಳಪೆ’, 301 ರಿಂದ 400 ‘ಅತೀ ಕಳಪೆ’ ಮತ್ತು 401 ರಿಂದ 500 ‘ತೀವ್ರ ಕಳಪೆ’ ಅಥವಾ ಗಂಭೀರ ಪರಿಸ್ಥಿತಿ ಎಂದು ಪರಿಗಣಿಸಲಾಗುತ್ತದೆ.

2020ರಿಂದ ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ.

ಈ ವರ್ಷ ಸುಪ್ರೀಂ ಕೋರ್ಟ್ ಅಕ್ಟೋಬರ್ 18 ರಿಂದ 20 ರವರೆಗೆ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಹಸಿರು ಪಟಾಕಿಗಳನ್ನು ಸಿಡಿಸಲು ಅನುಮತಿ ನೀಡಿತ್ತು. ಬೆಳಿಗ್ಗೆ 6 ರಿಂದ ಬೆಳಿಗ್ಗೆ 7 ರವರೆಗೆ ಮತ್ತು ರಾತ್ರಿ 8 ರಿಂದ ರಾತ್ರಿ 10 ರವರೆಗೆ ಎರಡು ಸಮಯಗಳಲ್ಲಿ ಮಾತ್ರ ಪಟಾಕಿ ಸಿಡಿಸಲು ಅನುಮತಿಸಿತ್ತು. ಆದರೆ, ಜನರು ನಿಯಮ ಮೀರಿ ನಿಗದಿ ಸಮಯಕ್ಕಿಂತ ಮೊದಲು ಮತ್ತು ನಂತರ ಪಟಾಕಿಗಳು ಸಿಡಿಸಿದ್ದಾರೆ ಎನ್ನಲಾಗಿದೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿ ಇರುವಾಗ ಹಸಿರು ಪಟಾಕಿಗಳನ್ನು ಸಿಡಿಸುವುದು ಕೂಡ ಸಮಂಜಸವಲ್ಲ. ಏಕೆಂದರೆ, ಅದೇನು ಕಡಿಮೆ ವಿಷಕಾರಿಯಲ್ಲ ಎಂದು ತಜ್ಞರು ಎಚ್ಚರಿಸಿದ್ದರು.

ದೀಪಾವಳಿ ರಾತ್ರಿ ದೆಹಲಿ ಅಗ್ನಿಶಾಮಕ ಸೇವೆಗಳಿಗೆ 269 ತುರ್ತು ಕರೆಗಳು ಬಂದಿವೆ ಎಂದು ಪಿಟಿಐ ವರದಿ ಮಾಡಿದೆ. ಆದಾಗ್ಯೂ, ಜೀವಹಾನಿ ಅಥವಾ ದೊಡ್ಡ ಮಟ್ಟದ ಗಾಯಗಳು ಸೇರಿದಂತೆ ಯಾವುದೇ ಪ್ರಮುಖ ಅವಘಡಗಳು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಕಳೆದ ವಾರ ಗಾಳಿಯ ಗುಣಮಟ್ಟ ಕ್ಷೀಣಿಸುತ್ತಿದ್ದಾಗ ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ) ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (ಜಿಆರ್‌ಎಪಿ) ನ ಎರಡನೇ ಹಂತವನ್ನು ಜಾರಿಗೊಳಿಸಿತ್ತು. ಧೂಳು ನಿಯಂತ್ರಣವನ್ನು ತೀವ್ರಗೊಳಿಸುವುದು. ಸಾರ್ವಜನಿಕ ಸಾರಿಗೆ ಸೇವೆಗಳ ವಿಸ್ತರಣೆ ಮತ್ತು ಡೀಸೆಲ್ ಜನರೇಟರ್ ಸೆಟ್‌ಗಳ ಮೇಲಿನ ನಿರ್ಬಂಧಗಳು ಜಿಆರ್‌ಪಿಎ ಎರಡನೇ ಹಂತದಲ್ಲಿ ಸೇರಿವೆ.

ದೆಹಲಿ-ಎನ್‌ಸಿಆರ್‌ನ ಸ್ಥಳೀಯಾಡಳಿತ ಈಗಾಗಲೇ ಪ್ರತಿದಿನ ಯಂತ್ರಗಳ ಮೂಲಕ ಗುಡಿಸುವುದು ಮತ್ತು ರಸ್ತೆಗಳ ಮೇಲೆ ನೀರು ಚಿಮುಕಿಸುವುದನ್ನ ಪ್ರಾರಂಭಿಸಿವೆ.

ಬಲವಾದ ಗಾಳಿ ಬೀಸದ ಕಾರಣ ನಗರದಲ್ಲಿ ಹೊಗೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31–33 ಡಿಗ್ರಿ ಮತ್ತು 20–22 ಡಿಗ್ರಿಗಳ ನಡುವೆ ಉಳಿಯುವ ಸಾಧ್ಯತೆಯಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1–3 ಡಿಗ್ರಿಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಆದರೆ ಗರಿಷ್ಠ ತಾಪಮಾನವು ಋತುಮಾನದ ಸರಾಸರಿಗೆ ಹತ್ತಿರದಲ್ಲಿದೆ.

ಬಿಹಾರ ಮಹಾಮೈತ್ರಿಯಲ್ಲಿ ಅಸಮಾಧಾನ : ಚುನಾವಣಾ ಕಣದಿಂದ ಹಿಂದೆ ಸರಿದ ಜೆಎಂಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...