Homeಮುಖಪುಟರಾಮ ಮಂದಿರಕ್ಕೆ ದೇಣಿಗೆ ನೀಡಲು ನಿರಾಕರಣೆ: ಶಿಕ್ಷಕನನ್ನೇ ಶಾಲೆಯಿಂದ ಹೊರಹಾಕಿದ ಆಡಳಿತ!

ರಾಮ ಮಂದಿರಕ್ಕೆ ದೇಣಿಗೆ ನೀಡಲು ನಿರಾಕರಣೆ: ಶಿಕ್ಷಕನನ್ನೇ ಶಾಲೆಯಿಂದ ಹೊರಹಾಕಿದ ಆಡಳಿತ!

ರಾಮ ಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸಲು ರಶೀದಿ ಪುಸ್ತಕವನ್ನು ನೀಡಲಾಗಿದೆ. ಇದಕ್ಕಾಗಿ ಸಂಗ್ರಹಿಸಿದ ಸುಮಾರು 80,000 ರೂಗಳನ್ನು ಜಮಾ ಮಾಡಿದ್ದೇನೆ ಎಂದು ಯಶ್ವಂತ್ ಪ್ರತಾಪ್ ಸಿಂಗ್ ಹೇಳಿದ್ದಾರೆ.

- Advertisement -
- Advertisement -

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ 1,000 ರೂಪಾಯಿ ದೇಣಿಗೆ ನೀಡಲು ನಿರಾಕರಿಸಿದ್ದರಿಂದ ಆರ್‌ಎಸ್‌ಎಸ್ ಸಂಸ್ಥೆ ನಡೆಸುವ ಶಾಲೆಯಿಂದ ನನ್ನನ್ನು ತೆಗೆದುಹಾಕಲಾಗಿದೆ ಎಂದು ಶಿಕ್ಷಕರೊಬ್ಬರು ಆರೋಪಿಸಿರುವ ಘಟನೆ ಉತ್ತರ ಪ್ರದೇಶದ ಬಲಿಯಾದಲ್ಲಿ ನಡೆದಿದೆ.

ಜಗದೀಶ್‌ಪುರದ ಸ್ಥಳೀಯ ಪ್ರದೇಶಲ್ಲಿರುವ ಸರಸ್ವತಿ ಶಿಶು ಮಂದಿರದಲ್ಲಿ ಆಚಾರ್ಯ (ಶಿಕ್ಷಕ) ಆಗಿ ಕೆಲಸ ಮಾಡುತ್ತಿದ್ದ ಯಶ್ವಂತ್ ಪ್ರತಾಪ್ ಸಿಂಗ್ ಈ ಆರೋಪ ಮಾಡಿದ್ದಾರೆ. ಶಾಲೆಯು ತನ್ನ ಎಂಟು ತಿಂಗಳ ಸಂಬಳವನ್ನು ನೀಡದೆ ತಡೆಹಿಡಿದಿದೆ ಎಂದು ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸಲು ರಶೀದಿ ಪುಸ್ತಕವನ್ನು ನೀಡಲಾಗಿದೆ. ಇದಕ್ಕಾಗಿ ಸಂಗ್ರಹಿಸಿದ ಸುಮಾರು 80,000 ರೂಗಳನ್ನು ಜಮಾ ಮಾಡಿದ್ದೇನೆ ಎಂದು ಯಶ್ವಂತ್ ಪ್ರತಾಪ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಮತದಾನ ಮುಂದೂಡಲು, ರದ್ದುಗೊಳಿಸಲು, ಮರು ನಿಗದಿಗೊಳಿಸಲು ನಮಗೆ ಅಧಿಕಾರವಿದೆ: ಆಂಧ್ರ ಚುನಾವಣಾ ಆಯುಕ್ತ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಜಿಲ್ಲಾ ಪ್ರಚಾರಕ ಸತ್ಯೇಂದ್ರ ಅವರು ಶಾಲೆಗೆ ಬಂದಾಗ ದೇವಾಲಯಕ್ಕೆ 1,000 ರೂ. ದೇಣಿಗೆ ನೀಡುವಂತೆ ನನ್ನ ಮೇಲೆ ಒತ್ತಡ ಹೇರಲಾಗಿತ್ತು ಎಂದು ಸಿಂಗ್ ಆರೋಪಿಸಿದ್ದಾರೆ.

ದೇಣಿಗೆ ನೀಡಲು ನಿರಾಕರಿಸಿದಾಗ, ಶಾಲೆಯ ಅಧಿಕಾರಿಗಳು ನನ್ನ ಬಳಿ ಕೆಟ್ಟದಾಗಿ ವರ್ತಿಸಿದ್ದಾರೆ ಮತ್ತು ನನ್ನನ್ನು ಶಾಲೆಯಿಂದ ತೆಗೆದುಹಾಕಿದ್ದಾರೆ. ಈ ಘಟನೆಯ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿ ಲಿಖಿತ ದೂರು ನೀಡಿದ್ದೇನೆ. ನನಗೆ ನ್ಯಾಯ ಸಿಗದಿದ್ದರೆ ನ್ಯಾಯಾಲಯಕ್ಕೆ ಹೋಗುವುದಾಗಿ ಯಶ್ವಂತ್ ಪ್ರತಾಪ್ ಸಿಂಗ್ ಹೇಳಿದ್ದಾರೆ.

ಎಲ್ಲಾ ಉದ್ಯೋಗಿಗಳಿಗೆ ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಹಣ ಸಂಗ್ರಹಿಸಲು ರಶೀದಿ ಪುಸ್ತಕಗಳನ್ನು ನೀಡಲಾಗಿದೆ ಎಂದು ಶಾಲೆಯ ಪ್ರಾಂಶುಪಾಲ ಧೀರೇಂದ್ರ ಹೇಳಿದ್ದಾರೆ.

“ಸಿಂಗ್ ಮೂರು ಸ್ವೀಕೃತಿ ಪುಸ್ತಕಗಳನ್ನು ಸ್ವಇಚ್ಛೆಯಿಂದ ತೆಗೆದುಕೊಂಡರು. ಆದರೆ ನಂತರ ಅವುಗಳನ್ನು ಠೇವಣಿ ಮಾಡಲಿಲ್ಲ. ಅವರೇ ಸ್ವತಃ ರಾಜೀನಾಮೆ ನೀಡಿದ್ದಾರೆ” ಎಂದು ಶಾಲಾ ಪ್ರಾಂಶುಪಾಲರು ಶಿಕ್ಷಕ ಮಾಡಿರುವ ಆರೋಪಗಳನ್ನು ನಿರಾಕರಿಸಿದ್ದಾರೆ.

ಆರ್‌ಎಸ್‌ಎಸ್ ಜಿಲ್ಲಾ ಪ್ರಚಾರಕ ಸತ್ಯೇಂದ್ರ ಕೂಡ ಹಣ ಸಂಗ್ರಹಿಸಲು ಯಾರ ಮೇಲೂ ಒತ್ತಡ ಹೇರುತ್ತಿಲ್ಲ ಎಂದರು. ಸಿಂಗ್ ಹೆಚ್ಚು ಅಶಿಸ್ತಿನಿಂದ ಇದ್ದಾರೆ. ಅವರು ಪಾಠ ಮಾಡುವ ಆಸಕ್ತಿ ಹೊಂದಿಲ್ಲ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಅಂತರಾಷ್ಟ್ರೀಯ ಪುರುಷರ ದಿನ ಆಚರಿಸಬೇಕು: ಹೇಳಿಕೆ ನೀಡಿ ಟೀಕೆಗೊಳಗಾದ ಬಿಜೆಪಿ ಸಂಸದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...