Homeಮುಖಪುಟರಾಮ ಮಂದಿರಕ್ಕೆ ದೇಣಿಗೆ ನೀಡಲು ನಿರಾಕರಣೆ: ಶಿಕ್ಷಕನನ್ನೇ ಶಾಲೆಯಿಂದ ಹೊರಹಾಕಿದ ಆಡಳಿತ!

ರಾಮ ಮಂದಿರಕ್ಕೆ ದೇಣಿಗೆ ನೀಡಲು ನಿರಾಕರಣೆ: ಶಿಕ್ಷಕನನ್ನೇ ಶಾಲೆಯಿಂದ ಹೊರಹಾಕಿದ ಆಡಳಿತ!

ರಾಮ ಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸಲು ರಶೀದಿ ಪುಸ್ತಕವನ್ನು ನೀಡಲಾಗಿದೆ. ಇದಕ್ಕಾಗಿ ಸಂಗ್ರಹಿಸಿದ ಸುಮಾರು 80,000 ರೂಗಳನ್ನು ಜಮಾ ಮಾಡಿದ್ದೇನೆ ಎಂದು ಯಶ್ವಂತ್ ಪ್ರತಾಪ್ ಸಿಂಗ್ ಹೇಳಿದ್ದಾರೆ.

- Advertisement -
- Advertisement -

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ 1,000 ರೂಪಾಯಿ ದೇಣಿಗೆ ನೀಡಲು ನಿರಾಕರಿಸಿದ್ದರಿಂದ ಆರ್‌ಎಸ್‌ಎಸ್ ಸಂಸ್ಥೆ ನಡೆಸುವ ಶಾಲೆಯಿಂದ ನನ್ನನ್ನು ತೆಗೆದುಹಾಕಲಾಗಿದೆ ಎಂದು ಶಿಕ್ಷಕರೊಬ್ಬರು ಆರೋಪಿಸಿರುವ ಘಟನೆ ಉತ್ತರ ಪ್ರದೇಶದ ಬಲಿಯಾದಲ್ಲಿ ನಡೆದಿದೆ.

ಜಗದೀಶ್‌ಪುರದ ಸ್ಥಳೀಯ ಪ್ರದೇಶಲ್ಲಿರುವ ಸರಸ್ವತಿ ಶಿಶು ಮಂದಿರದಲ್ಲಿ ಆಚಾರ್ಯ (ಶಿಕ್ಷಕ) ಆಗಿ ಕೆಲಸ ಮಾಡುತ್ತಿದ್ದ ಯಶ್ವಂತ್ ಪ್ರತಾಪ್ ಸಿಂಗ್ ಈ ಆರೋಪ ಮಾಡಿದ್ದಾರೆ. ಶಾಲೆಯು ತನ್ನ ಎಂಟು ತಿಂಗಳ ಸಂಬಳವನ್ನು ನೀಡದೆ ತಡೆಹಿಡಿದಿದೆ ಎಂದು ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸಲು ರಶೀದಿ ಪುಸ್ತಕವನ್ನು ನೀಡಲಾಗಿದೆ. ಇದಕ್ಕಾಗಿ ಸಂಗ್ರಹಿಸಿದ ಸುಮಾರು 80,000 ರೂಗಳನ್ನು ಜಮಾ ಮಾಡಿದ್ದೇನೆ ಎಂದು ಯಶ್ವಂತ್ ಪ್ರತಾಪ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಮತದಾನ ಮುಂದೂಡಲು, ರದ್ದುಗೊಳಿಸಲು, ಮರು ನಿಗದಿಗೊಳಿಸಲು ನಮಗೆ ಅಧಿಕಾರವಿದೆ: ಆಂಧ್ರ ಚುನಾವಣಾ ಆಯುಕ್ತ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಜಿಲ್ಲಾ ಪ್ರಚಾರಕ ಸತ್ಯೇಂದ್ರ ಅವರು ಶಾಲೆಗೆ ಬಂದಾಗ ದೇವಾಲಯಕ್ಕೆ 1,000 ರೂ. ದೇಣಿಗೆ ನೀಡುವಂತೆ ನನ್ನ ಮೇಲೆ ಒತ್ತಡ ಹೇರಲಾಗಿತ್ತು ಎಂದು ಸಿಂಗ್ ಆರೋಪಿಸಿದ್ದಾರೆ.

ದೇಣಿಗೆ ನೀಡಲು ನಿರಾಕರಿಸಿದಾಗ, ಶಾಲೆಯ ಅಧಿಕಾರಿಗಳು ನನ್ನ ಬಳಿ ಕೆಟ್ಟದಾಗಿ ವರ್ತಿಸಿದ್ದಾರೆ ಮತ್ತು ನನ್ನನ್ನು ಶಾಲೆಯಿಂದ ತೆಗೆದುಹಾಕಿದ್ದಾರೆ. ಈ ಘಟನೆಯ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿ ಲಿಖಿತ ದೂರು ನೀಡಿದ್ದೇನೆ. ನನಗೆ ನ್ಯಾಯ ಸಿಗದಿದ್ದರೆ ನ್ಯಾಯಾಲಯಕ್ಕೆ ಹೋಗುವುದಾಗಿ ಯಶ್ವಂತ್ ಪ್ರತಾಪ್ ಸಿಂಗ್ ಹೇಳಿದ್ದಾರೆ.

ಎಲ್ಲಾ ಉದ್ಯೋಗಿಗಳಿಗೆ ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಹಣ ಸಂಗ್ರಹಿಸಲು ರಶೀದಿ ಪುಸ್ತಕಗಳನ್ನು ನೀಡಲಾಗಿದೆ ಎಂದು ಶಾಲೆಯ ಪ್ರಾಂಶುಪಾಲ ಧೀರೇಂದ್ರ ಹೇಳಿದ್ದಾರೆ.

“ಸಿಂಗ್ ಮೂರು ಸ್ವೀಕೃತಿ ಪುಸ್ತಕಗಳನ್ನು ಸ್ವಇಚ್ಛೆಯಿಂದ ತೆಗೆದುಕೊಂಡರು. ಆದರೆ ನಂತರ ಅವುಗಳನ್ನು ಠೇವಣಿ ಮಾಡಲಿಲ್ಲ. ಅವರೇ ಸ್ವತಃ ರಾಜೀನಾಮೆ ನೀಡಿದ್ದಾರೆ” ಎಂದು ಶಾಲಾ ಪ್ರಾಂಶುಪಾಲರು ಶಿಕ್ಷಕ ಮಾಡಿರುವ ಆರೋಪಗಳನ್ನು ನಿರಾಕರಿಸಿದ್ದಾರೆ.

ಆರ್‌ಎಸ್‌ಎಸ್ ಜಿಲ್ಲಾ ಪ್ರಚಾರಕ ಸತ್ಯೇಂದ್ರ ಕೂಡ ಹಣ ಸಂಗ್ರಹಿಸಲು ಯಾರ ಮೇಲೂ ಒತ್ತಡ ಹೇರುತ್ತಿಲ್ಲ ಎಂದರು. ಸಿಂಗ್ ಹೆಚ್ಚು ಅಶಿಸ್ತಿನಿಂದ ಇದ್ದಾರೆ. ಅವರು ಪಾಠ ಮಾಡುವ ಆಸಕ್ತಿ ಹೊಂದಿಲ್ಲ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಅಂತರಾಷ್ಟ್ರೀಯ ಪುರುಷರ ದಿನ ಆಚರಿಸಬೇಕು: ಹೇಳಿಕೆ ನೀಡಿ ಟೀಕೆಗೊಳಗಾದ ಬಿಜೆಪಿ ಸಂಸದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...