Homeಮುಖಪುಟಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

- Advertisement -
- Advertisement -

ಆಂಧ್ರಪ್ರದೇಶದ ನೆಲ್ಲೂರಿನ ನಾರಾಯಣ ಶಾಲೆಯಲ್ಲಿ 15 ವರ್ಷಗಳಿಂದ ತೆಲುಗು ಭಾಷಾ ಬೋಧನೆ ಮಾಡುತ್ತಿರುವ ಶಿಕ್ಷಕ ವೆಂಕಟಸುಬ್ಬಯ್ಯ ಅವರು ಈಗ ಕೆಲಸ ಕಳೆದುಕೊಂಡಿದ್ದಾರೆ. ಏಕೆಂದರೆ ಇಂತಿಷ್ಟು ವಿದ್ಯಾರ್ಥಿಗಳನ್ನು ನೀವು ಈ ವರ್ಷ ದಾಖಲಾತಿ ಮಾಡಲೇಬೇಕೆಂಬ ಟಾರ್ಗೆಟ್‌ ಅನ್ನು ಅವರು ಪೂರೈಸಲು ವಿಫಲರಾಗಿದ್ದಾರೆ. ಅದಕ್ಕೆ ಮತ್ತೂ ಕಾರಣ ಜನರ ಆರ್ಥಿಕ ಪರಿಸ್ಥಿತಿ ದಿನೇ ದಿನೇ ಕುಸಿಯುತ್ತಿರುವುದು. ಇದಕ್ಕೆ ಕಾರಣರಾರು?

ವೆಂಕಟಸುಬ್ಬಯ್ಯ ಸುಮಾರು 15 ವರ್ಷಗಳಿಂದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ತೆಲುಗು ಕಲಿಸಿದ್ದಾರೆ. ಲಾಕ್‌ಡೌನ್ ಪ್ರಾರಂಭವಾದಾಗಲೂ ಸಹ ಅವರು ಆನ್‌ಲೈನ್ ತರಗತಿಗಳ ಮೂಲಕ ನೆಲ್ಲೂರಿನ ನಾರಾಯಣ ಶಾಲೆಯಲ್ಲಿ ತಮ್ಮ ವಿದ್ಯಾರ್ಥಿಗಳಿಗೆ ಬೋಧನೆ ಮುಂದುವರೆಸಿದ್ದರು. ಆದರೆ ಯಾವಾಗ ದಾಖಲಾಗಿತ ಕಡಿಮೆಯಾಯಿತೊ ಅವರನ್ನು ಮನೆಗೆ ಕಳಿಸಲಾಯಿತು. ತಮ್ಮ ಮಗನ ವೈದ್ಯಕೀಯ ವೆಚ್ಚಕ್ಕಾಗಿ ಸಾಲ ಮಾಡಿಕೊಂಡಿದ್ದ ಅವರು ಕೆಲಸ ಕಳೆದುಕೊಂದು ಅಕ್ಷರಶಃ ಬೀದಿಗೆ ಬಿದ್ದರು. ಬದುಕಿನ ಬಂಡಿ ಸಾಗಿಸಲು ಅವರು ಈಗ ಬಾಳೆಹಣ್ಣು ಮಾರಾಟವನ್ನು ಆರಂಭಿಸಿದ್ದಾರೆ.

ಆಸರೆಗೆ ಬಂದ ಹಳೇ ವಿದ್ಯಾರ್ಥಿಗಳು

ವೆಂಕಟಸುಬ್ಬಯ್ಯನವರ ಪರಿಸ್ಥಿತಿ ನೋಡಿದ ಅವರ ಮಾಜಿ ವಿದ್ಯಾರ್ಥಿಗಳು ಕರಗಿದ್ದಾರೆ. ಎಷ್ಟೇ ಬಾಳೆಹಣ್ಣು ಮಾರಿದರೂ ಸಹ ಸದ್ಯದ ಅವರ ಸಾಲ ತೀರಿ, ಅವರ ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳುವುದು ಕಷ್ಟವಿದೆ. ಇದನ್ನು ಅರಿತ ಅವರ 150 ಹಳೆಯ ವಿದ್ಯಾರ್ಥಿಗಳು ಸೇರಿ 86,300 ರೂಗಳನ್ನು ಒಟ್ಟುಗೂಡಿಸಿ ಕೊಟ್ಟಿದ್ದಾರೆ. ಆದರೆ ವೆಂಕಟಸುಬ್ಬಯ್ಯನವರು ಅದನ್ನು ಪಡೆಯಲು ನಿರಾಕರಿಸಿ, ಪರಿಸ್ಥಿತಿ ಭೀಕರವಾಗಿದೆ ಇದು ನಿಮಗೆ ಉಪಯೋಗಕ್ಕೆ ಬರುತ್ತದೆ ಇಟ್ಟುಕೊಳ್ಳಿ ಎಂದರೆ ಒಪ್ಪದ ವಿದ್ಯಾರ್ಥಿಗಳು ಬಲವಂತವಾಗಿ ತಮ್ಮ ಶಿಕ್ಷಕರಿಗೆ ನೀಡಿದ್ದಾರೆ.

“ಬಾಳೆಹಣ್ಣುಗಳನ್ನು ಮಾರಾಟ ಮಾಡುವುದು ತಾತ್ಕಾಲಿಕ ಕೆಲಸ. ವರ್ಷಗಳ ಹಿಂದಿನ ಅನೇಕ ಮಾಜಿ ವಿದ್ಯಾರ್ಥಿಗಳು ನನಗೆ ಸಹಾಯ ಮಾಡಲು ಬಯಸಿದರೆ, ನಾನು ಶಿಕ್ಷಕನಾಗಿ ಅವರ ಮೇಲೆ ಪ್ರಭಾವ ಬೀರಿರಬೇಕು. ಕಡಿಮೆ ಸಂಬಳ ಸಿಕ್ಕರೂ ಸರಿಯೇ ನಾನು ಅಂತಿಮವಾಗಿ ಬೋಧನೆಗೆ ಹಿಂತಿರುಗಲು ಬಯಸುತ್ತೇನೆ ”ಎಂದು ವೆಂಕಟಸುಬ್ಬಯ್ಯ ಹೇಳುತ್ತಾರೆ.

ಲಾಕ್‌ಡೌನ್‌ ತಂದಿಟ್ಟ ಸಂಕಷ್ಟ

COVID-19 ಲಾಕ್‌ಡೌನ್ ಪ್ರಾರಂಭವಾದಾಗ, ಮಾರ್ಚ್ 29 ರಿಂದ ನಾರಾಯಣ ಶಾಲೆಯಲ್ಲಿ ಆನ್‌ಲೈನ್ ತರಗತಿಗಳು ಪ್ರಾರಂಭವಾದವು ಎಂದು ವೆಂಕಟಸುಬ್ಬಯ್ಯ ಹೇಳುತ್ತಾರೆ. ತರಗತಿಗಳು ಮುಗಿಯುವ ಕೆಲವು ದಿನಗಳ ಮೊದಲು ಮೇ 14 ರಂದು ಶಾಲಾ ಆಡಳಿತ ಮಂಡಳಿ ವೆಂಕಟಸುಬ್ಬಯ್ಯ ಮತ್ತು ಅವರ ಐದು ಸಹೋದ್ಯೋಗಿಗಳೊಂದಿಗೆ ಆನ್‌ಲೈನ್‌ನಲ್ಲಿ ಸಭೆ ನಡೆಸಿತು. ಅವರ “ಕಾರ್ಯಕ್ಷಮತೆ ಅತೃಪ್ತಿಕರವಾಗಿರುವುದರಿಂದ” ಅವರು ಇನ್ನು ಮುಂದೆ ಕೆಲಸ ಮಾಡುವುದನ್ನು ಮುಂದುವರಿಸಬೇಕಾಗಿಲ್ಲ ಎಂದು ಅವರಿಗೆ ತಿಳಿಸಲಾಯಿತು.

ಅಂದರೆ ಇಲ್ಲಿ ಶಾಲೆಯ ಆಡಳಿತ ಮಂಡಳಿ ಇವರ ಬೋಧನಾ ಸಾಮರ್ಥ್ಯಗಳನ್ನು ಉಲ್ಲೇಖಿಸಿಲ್ಲ. ಬದಲಾಗಿ ಶಾಲೆಗೆ ಹೊಸ ದಾಖಲಾತಿ ಮಾಡಿಸುವಲ್ಲಿ ಇವರು ತಮ್ಮ ಟಾರ್ಗೆಟ್‌ ಮುಟ್ಟಿಲ್ಲ ಎಂಬುದು ಆಡಳಿತ ಮಂಡಳಿಯ ಆಕ್ಷೇಪಣೆ. ಲಾಕ್‌ಡೌನ್‌ ಸಮಯದಲ್ಲಿ ನಾವು ಮನೆ ಮನೆಗೆ ಹೋಗಿ ಪೋಷಕರ ಮನವೊಲಿಸಲು ಸಾಧ್ಯವಾಗುತ್ತಿಲ್ಲ, ಹೊಸ ದಾಖಲಾತಿ ಮಾಡಿಸಲು ಹೇಗೆ ಸಾಧ್ಯ, ಹಾಗಾದರೆ ನಾವು ಅಸಮರ್ಥರೆ? ಎಂಬುದು ವೆಂಕಟಸುಬ್ಬಯ್ಯನವರ ಪ್ರಶ್ನೆಯಾಗಿದೆ.

“2007 ರಲ್ಲಿ ನಾನು ಕಲಿಸಿದ್ದ ಹಳೆಯ ವಿದ್ಯಾರ್ಥಿಯ ತಂದೆ ತನ್ನ ಬಾಳೆಹಣ್ಣಗಳನ್ನು ಮಾರಾಟ ಮಾಡಲು ನನಗೆ ಅವಕಾಶ ಮಾಡಿಕೊಡುವ ಮೂಲಕ ನನಗೆ ಸಹಾಯ ಮಾಡಿದರು” ಎಂದು ತೆಲುಗು ಮತ್ತು ಸಾರ್ವಜನಿಕ ಆಡಳಿತದಲ್ಲಿ ಎರಡು ಸ್ನಾತಕೋತ್ತರ ಪದವಿಗಳನ್ನು ಪಡೆದಿರುವ ವೆಂಕಟಸುಬ್ಬಯ್ಯ ಹೇಳುತ್ತಾರೆ. ಅವರೊಂದಿಗೆ ಕೆಲಸ ಕಳೆದುಕೊಂಡ ಅವರ ಕೆಲವು ಸಹೋದ್ಯೋಗಿಗಳು ತಮ್ಮ ಗ್ರಾಮಗಳಿಗೆ ಮರಳಿದ್ದಾರೆ ಎಂದು ಅವರು ಹೇಳುತ್ತಾರೆ.

ಖಾಸಗಿ ಶಾಲೆಗಳ ಧನದಾಹಿತನ

ಶ್ರೀ ಚೈತನ್ಯ, ನಾರಾಯಣ ಮತ್ತು ಭಾಷ್ಯಾಮ್ ಶಾಲೆಗಳು ಎಂಬ ಹೆಸರಿನ ಕೆಲವೇ ಮಾಲೀಕರು ಸಾವಿರಾರು ಶಾಳೆಗಳು ಆಂಧ್ರ ತೆಲಂಗಾಣದಲ್ಲಿ ತಲೆಎತ್ತಿವೆ. ಹೆಚ್ಚಿನ ಲಾಭ ಮಾಡುವುದೇ ಈ ಶಾಲೆಗಳ ಏಕೈಕ ಗುರಿಯಾಗಿದೆ. ಹಾಗಾಗಿ ಹೆಚ್ಚಿನ ಮಕ್ಕಳ ದಾಖಲಾತಿ ಮಾಡಿಸುವಂತೆ ಶಿಕ್ಷಕರ ಮೇಲೆ ಒತ್ತಡ ಹೇರಲಾಗುತ್ತದೆ. ಟಾರ್ಗೆಟ್‌ ಮುಟ್ಟದ ಶಿಕ್ಷಕರನ್ನು ಕೆಲಸದಿಂದ ವಜಾ ಮಾಡಲಾಗುತ್ತದೆ ಎಂದು ಎಂದು ಆಂಧ್ರಪ್ರದೇಶದ ಖಾಸಗಿ ಶಾಲಾ ಶಿಕ್ಷಕರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳಿಂದ ಅತಿ ಹೆಚ್ಚು ಶುಲ್ಕ ವಸೂಲಿ ಮಾಡುವ ಈ ಶಾಲೆಗಳು ಶಿಕ್ಷಕರಿಗೆ ಪೂರ್ಣ ವೇತನ ನೀಡದೇ ಸತಾಯಿಸುತ್ತಿದ್ದಾರೆ. ಶಿಕ್ಷಕ ರು ಶಾಲೆಯಲ್ಲಿ ಪಾಠ ಮಾಡುವುದಲ್ಲದೇ ಮನೆ ಮನೆಗೆ ತೆರಳಿ ದಾಖಲಾತಿ ಮಾಡಿಸುವುದೇ ಪ್ರಧಾನ ಕೆಲಸವಾಗಿದೆ ಎಂಬ ದೊಡ್ಡ ಆರೋಪ ಈ ಶಾಲೆಗಳ ಮೇಲಿದೆ. ಲಾಕ್‌ಡೌನ್‌ನಂತಹ ಸಂಕಷ್ಟದ ಕಾಲದಲ್ಲಿಯೂ ಸಹ ಈ ಶಾಲೆಗಳು ಧನದಾಹಿತನಕ್ಕೆ ಬಿದ್ದು ಶಿಕ್ಷಕರನ್ನು ನಿರುದ್ಯೋಗಿಗಳನ್ನಾಗಿ ಮಾಡುತ್ತಿವೆ.

ಇಂತಹ ಸಂಕಷ್ಟದ ಸಮಯದಲ್ಲಿ ಖಾಸಗಿ ಶಿಕ್ಷಕ ಸಂಘಗಳು ರಾಜ್ಯ ಸರ್ಕಾರದ ಸಹಾಯವನ್ನು ಕೋರಿವೆ. ಈ ಸಮಯದಲ್ಲಿ ಹೆಚ್ಚಿನ ಬೋಧನಾ ಉದ್ಯೋಗಗಳು ಲಭ್ಯವಿಲ್ಲದ ಕಾರಣ ಸರ್ಕಾರವು ಕೆಲವು ಜೀವನೋಪಾಯ ಆಯ್ಕೆಗಳನ್ನು ನೀಡುವ ಮೂಲಕ ನಮಗೆ ಬೆಂಬಲ ನೀಡಬೇಕೆಂದು ನಾನು ಬಯಸುತ್ತೇನೆ ”ಎಂದು ವೆಂಕಟಸುಬ್ಬಯ್ಯ ಒತ್ತಾಯಿಸುತ್ತಾರೆ.


ಮತ್ತಷ್ಟು ಸುದ್ದಿಗಳು

JNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

ಮೋಡಿಯ ಮಾಡಿದವರ ಪರಸಂಗ: ಡಿಜಿಟಲ್ ಕಾಲದಲ್ಲೊಂದು ತಾರತಮ್ಯದ ತಕರಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....