Homeಮುಖಪುಟಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

- Advertisement -
- Advertisement -

ಆಂಧ್ರಪ್ರದೇಶದ ನೆಲ್ಲೂರಿನ ನಾರಾಯಣ ಶಾಲೆಯಲ್ಲಿ 15 ವರ್ಷಗಳಿಂದ ತೆಲುಗು ಭಾಷಾ ಬೋಧನೆ ಮಾಡುತ್ತಿರುವ ಶಿಕ್ಷಕ ವೆಂಕಟಸುಬ್ಬಯ್ಯ ಅವರು ಈಗ ಕೆಲಸ ಕಳೆದುಕೊಂಡಿದ್ದಾರೆ. ಏಕೆಂದರೆ ಇಂತಿಷ್ಟು ವಿದ್ಯಾರ್ಥಿಗಳನ್ನು ನೀವು ಈ ವರ್ಷ ದಾಖಲಾತಿ ಮಾಡಲೇಬೇಕೆಂಬ ಟಾರ್ಗೆಟ್‌ ಅನ್ನು ಅವರು ಪೂರೈಸಲು ವಿಫಲರಾಗಿದ್ದಾರೆ. ಅದಕ್ಕೆ ಮತ್ತೂ ಕಾರಣ ಜನರ ಆರ್ಥಿಕ ಪರಿಸ್ಥಿತಿ ದಿನೇ ದಿನೇ ಕುಸಿಯುತ್ತಿರುವುದು. ಇದಕ್ಕೆ ಕಾರಣರಾರು?

ವೆಂಕಟಸುಬ್ಬಯ್ಯ ಸುಮಾರು 15 ವರ್ಷಗಳಿಂದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ತೆಲುಗು ಕಲಿಸಿದ್ದಾರೆ. ಲಾಕ್‌ಡೌನ್ ಪ್ರಾರಂಭವಾದಾಗಲೂ ಸಹ ಅವರು ಆನ್‌ಲೈನ್ ತರಗತಿಗಳ ಮೂಲಕ ನೆಲ್ಲೂರಿನ ನಾರಾಯಣ ಶಾಲೆಯಲ್ಲಿ ತಮ್ಮ ವಿದ್ಯಾರ್ಥಿಗಳಿಗೆ ಬೋಧನೆ ಮುಂದುವರೆಸಿದ್ದರು. ಆದರೆ ಯಾವಾಗ ದಾಖಲಾಗಿತ ಕಡಿಮೆಯಾಯಿತೊ ಅವರನ್ನು ಮನೆಗೆ ಕಳಿಸಲಾಯಿತು. ತಮ್ಮ ಮಗನ ವೈದ್ಯಕೀಯ ವೆಚ್ಚಕ್ಕಾಗಿ ಸಾಲ ಮಾಡಿಕೊಂಡಿದ್ದ ಅವರು ಕೆಲಸ ಕಳೆದುಕೊಂದು ಅಕ್ಷರಶಃ ಬೀದಿಗೆ ಬಿದ್ದರು. ಬದುಕಿನ ಬಂಡಿ ಸಾಗಿಸಲು ಅವರು ಈಗ ಬಾಳೆಹಣ್ಣು ಮಾರಾಟವನ್ನು ಆರಂಭಿಸಿದ್ದಾರೆ.

ಆಸರೆಗೆ ಬಂದ ಹಳೇ ವಿದ್ಯಾರ್ಥಿಗಳು

ವೆಂಕಟಸುಬ್ಬಯ್ಯನವರ ಪರಿಸ್ಥಿತಿ ನೋಡಿದ ಅವರ ಮಾಜಿ ವಿದ್ಯಾರ್ಥಿಗಳು ಕರಗಿದ್ದಾರೆ. ಎಷ್ಟೇ ಬಾಳೆಹಣ್ಣು ಮಾರಿದರೂ ಸಹ ಸದ್ಯದ ಅವರ ಸಾಲ ತೀರಿ, ಅವರ ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳುವುದು ಕಷ್ಟವಿದೆ. ಇದನ್ನು ಅರಿತ ಅವರ 150 ಹಳೆಯ ವಿದ್ಯಾರ್ಥಿಗಳು ಸೇರಿ 86,300 ರೂಗಳನ್ನು ಒಟ್ಟುಗೂಡಿಸಿ ಕೊಟ್ಟಿದ್ದಾರೆ. ಆದರೆ ವೆಂಕಟಸುಬ್ಬಯ್ಯನವರು ಅದನ್ನು ಪಡೆಯಲು ನಿರಾಕರಿಸಿ, ಪರಿಸ್ಥಿತಿ ಭೀಕರವಾಗಿದೆ ಇದು ನಿಮಗೆ ಉಪಯೋಗಕ್ಕೆ ಬರುತ್ತದೆ ಇಟ್ಟುಕೊಳ್ಳಿ ಎಂದರೆ ಒಪ್ಪದ ವಿದ್ಯಾರ್ಥಿಗಳು ಬಲವಂತವಾಗಿ ತಮ್ಮ ಶಿಕ್ಷಕರಿಗೆ ನೀಡಿದ್ದಾರೆ.

“ಬಾಳೆಹಣ್ಣುಗಳನ್ನು ಮಾರಾಟ ಮಾಡುವುದು ತಾತ್ಕಾಲಿಕ ಕೆಲಸ. ವರ್ಷಗಳ ಹಿಂದಿನ ಅನೇಕ ಮಾಜಿ ವಿದ್ಯಾರ್ಥಿಗಳು ನನಗೆ ಸಹಾಯ ಮಾಡಲು ಬಯಸಿದರೆ, ನಾನು ಶಿಕ್ಷಕನಾಗಿ ಅವರ ಮೇಲೆ ಪ್ರಭಾವ ಬೀರಿರಬೇಕು. ಕಡಿಮೆ ಸಂಬಳ ಸಿಕ್ಕರೂ ಸರಿಯೇ ನಾನು ಅಂತಿಮವಾಗಿ ಬೋಧನೆಗೆ ಹಿಂತಿರುಗಲು ಬಯಸುತ್ತೇನೆ ”ಎಂದು ವೆಂಕಟಸುಬ್ಬಯ್ಯ ಹೇಳುತ್ತಾರೆ.

ಲಾಕ್‌ಡೌನ್‌ ತಂದಿಟ್ಟ ಸಂಕಷ್ಟ

COVID-19 ಲಾಕ್‌ಡೌನ್ ಪ್ರಾರಂಭವಾದಾಗ, ಮಾರ್ಚ್ 29 ರಿಂದ ನಾರಾಯಣ ಶಾಲೆಯಲ್ಲಿ ಆನ್‌ಲೈನ್ ತರಗತಿಗಳು ಪ್ರಾರಂಭವಾದವು ಎಂದು ವೆಂಕಟಸುಬ್ಬಯ್ಯ ಹೇಳುತ್ತಾರೆ. ತರಗತಿಗಳು ಮುಗಿಯುವ ಕೆಲವು ದಿನಗಳ ಮೊದಲು ಮೇ 14 ರಂದು ಶಾಲಾ ಆಡಳಿತ ಮಂಡಳಿ ವೆಂಕಟಸುಬ್ಬಯ್ಯ ಮತ್ತು ಅವರ ಐದು ಸಹೋದ್ಯೋಗಿಗಳೊಂದಿಗೆ ಆನ್‌ಲೈನ್‌ನಲ್ಲಿ ಸಭೆ ನಡೆಸಿತು. ಅವರ “ಕಾರ್ಯಕ್ಷಮತೆ ಅತೃಪ್ತಿಕರವಾಗಿರುವುದರಿಂದ” ಅವರು ಇನ್ನು ಮುಂದೆ ಕೆಲಸ ಮಾಡುವುದನ್ನು ಮುಂದುವರಿಸಬೇಕಾಗಿಲ್ಲ ಎಂದು ಅವರಿಗೆ ತಿಳಿಸಲಾಯಿತು.

ಅಂದರೆ ಇಲ್ಲಿ ಶಾಲೆಯ ಆಡಳಿತ ಮಂಡಳಿ ಇವರ ಬೋಧನಾ ಸಾಮರ್ಥ್ಯಗಳನ್ನು ಉಲ್ಲೇಖಿಸಿಲ್ಲ. ಬದಲಾಗಿ ಶಾಲೆಗೆ ಹೊಸ ದಾಖಲಾತಿ ಮಾಡಿಸುವಲ್ಲಿ ಇವರು ತಮ್ಮ ಟಾರ್ಗೆಟ್‌ ಮುಟ್ಟಿಲ್ಲ ಎಂಬುದು ಆಡಳಿತ ಮಂಡಳಿಯ ಆಕ್ಷೇಪಣೆ. ಲಾಕ್‌ಡೌನ್‌ ಸಮಯದಲ್ಲಿ ನಾವು ಮನೆ ಮನೆಗೆ ಹೋಗಿ ಪೋಷಕರ ಮನವೊಲಿಸಲು ಸಾಧ್ಯವಾಗುತ್ತಿಲ್ಲ, ಹೊಸ ದಾಖಲಾತಿ ಮಾಡಿಸಲು ಹೇಗೆ ಸಾಧ್ಯ, ಹಾಗಾದರೆ ನಾವು ಅಸಮರ್ಥರೆ? ಎಂಬುದು ವೆಂಕಟಸುಬ್ಬಯ್ಯನವರ ಪ್ರಶ್ನೆಯಾಗಿದೆ.

“2007 ರಲ್ಲಿ ನಾನು ಕಲಿಸಿದ್ದ ಹಳೆಯ ವಿದ್ಯಾರ್ಥಿಯ ತಂದೆ ತನ್ನ ಬಾಳೆಹಣ್ಣಗಳನ್ನು ಮಾರಾಟ ಮಾಡಲು ನನಗೆ ಅವಕಾಶ ಮಾಡಿಕೊಡುವ ಮೂಲಕ ನನಗೆ ಸಹಾಯ ಮಾಡಿದರು” ಎಂದು ತೆಲುಗು ಮತ್ತು ಸಾರ್ವಜನಿಕ ಆಡಳಿತದಲ್ಲಿ ಎರಡು ಸ್ನಾತಕೋತ್ತರ ಪದವಿಗಳನ್ನು ಪಡೆದಿರುವ ವೆಂಕಟಸುಬ್ಬಯ್ಯ ಹೇಳುತ್ತಾರೆ. ಅವರೊಂದಿಗೆ ಕೆಲಸ ಕಳೆದುಕೊಂಡ ಅವರ ಕೆಲವು ಸಹೋದ್ಯೋಗಿಗಳು ತಮ್ಮ ಗ್ರಾಮಗಳಿಗೆ ಮರಳಿದ್ದಾರೆ ಎಂದು ಅವರು ಹೇಳುತ್ತಾರೆ.

ಖಾಸಗಿ ಶಾಲೆಗಳ ಧನದಾಹಿತನ

ಶ್ರೀ ಚೈತನ್ಯ, ನಾರಾಯಣ ಮತ್ತು ಭಾಷ್ಯಾಮ್ ಶಾಲೆಗಳು ಎಂಬ ಹೆಸರಿನ ಕೆಲವೇ ಮಾಲೀಕರು ಸಾವಿರಾರು ಶಾಳೆಗಳು ಆಂಧ್ರ ತೆಲಂಗಾಣದಲ್ಲಿ ತಲೆಎತ್ತಿವೆ. ಹೆಚ್ಚಿನ ಲಾಭ ಮಾಡುವುದೇ ಈ ಶಾಲೆಗಳ ಏಕೈಕ ಗುರಿಯಾಗಿದೆ. ಹಾಗಾಗಿ ಹೆಚ್ಚಿನ ಮಕ್ಕಳ ದಾಖಲಾತಿ ಮಾಡಿಸುವಂತೆ ಶಿಕ್ಷಕರ ಮೇಲೆ ಒತ್ತಡ ಹೇರಲಾಗುತ್ತದೆ. ಟಾರ್ಗೆಟ್‌ ಮುಟ್ಟದ ಶಿಕ್ಷಕರನ್ನು ಕೆಲಸದಿಂದ ವಜಾ ಮಾಡಲಾಗುತ್ತದೆ ಎಂದು ಎಂದು ಆಂಧ್ರಪ್ರದೇಶದ ಖಾಸಗಿ ಶಾಲಾ ಶಿಕ್ಷಕರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳಿಂದ ಅತಿ ಹೆಚ್ಚು ಶುಲ್ಕ ವಸೂಲಿ ಮಾಡುವ ಈ ಶಾಲೆಗಳು ಶಿಕ್ಷಕರಿಗೆ ಪೂರ್ಣ ವೇತನ ನೀಡದೇ ಸತಾಯಿಸುತ್ತಿದ್ದಾರೆ. ಶಿಕ್ಷಕ ರು ಶಾಲೆಯಲ್ಲಿ ಪಾಠ ಮಾಡುವುದಲ್ಲದೇ ಮನೆ ಮನೆಗೆ ತೆರಳಿ ದಾಖಲಾತಿ ಮಾಡಿಸುವುದೇ ಪ್ರಧಾನ ಕೆಲಸವಾಗಿದೆ ಎಂಬ ದೊಡ್ಡ ಆರೋಪ ಈ ಶಾಲೆಗಳ ಮೇಲಿದೆ. ಲಾಕ್‌ಡೌನ್‌ನಂತಹ ಸಂಕಷ್ಟದ ಕಾಲದಲ್ಲಿಯೂ ಸಹ ಈ ಶಾಲೆಗಳು ಧನದಾಹಿತನಕ್ಕೆ ಬಿದ್ದು ಶಿಕ್ಷಕರನ್ನು ನಿರುದ್ಯೋಗಿಗಳನ್ನಾಗಿ ಮಾಡುತ್ತಿವೆ.

ಇಂತಹ ಸಂಕಷ್ಟದ ಸಮಯದಲ್ಲಿ ಖಾಸಗಿ ಶಿಕ್ಷಕ ಸಂಘಗಳು ರಾಜ್ಯ ಸರ್ಕಾರದ ಸಹಾಯವನ್ನು ಕೋರಿವೆ. ಈ ಸಮಯದಲ್ಲಿ ಹೆಚ್ಚಿನ ಬೋಧನಾ ಉದ್ಯೋಗಗಳು ಲಭ್ಯವಿಲ್ಲದ ಕಾರಣ ಸರ್ಕಾರವು ಕೆಲವು ಜೀವನೋಪಾಯ ಆಯ್ಕೆಗಳನ್ನು ನೀಡುವ ಮೂಲಕ ನಮಗೆ ಬೆಂಬಲ ನೀಡಬೇಕೆಂದು ನಾನು ಬಯಸುತ್ತೇನೆ ”ಎಂದು ವೆಂಕಟಸುಬ್ಬಯ್ಯ ಒತ್ತಾಯಿಸುತ್ತಾರೆ.


ಮತ್ತಷ್ಟು ಸುದ್ದಿಗಳು

JNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

ಮೋಡಿಯ ಮಾಡಿದವರ ಪರಸಂಗ: ಡಿಜಿಟಲ್ ಕಾಲದಲ್ಲೊಂದು ತಾರತಮ್ಯದ ತಕರಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...