Homeಮುಖಪುಟಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

- Advertisement -
- Advertisement -

ಆಂಧ್ರಪ್ರದೇಶದ ನೆಲ್ಲೂರಿನ ನಾರಾಯಣ ಶಾಲೆಯಲ್ಲಿ 15 ವರ್ಷಗಳಿಂದ ತೆಲುಗು ಭಾಷಾ ಬೋಧನೆ ಮಾಡುತ್ತಿರುವ ಶಿಕ್ಷಕ ವೆಂಕಟಸುಬ್ಬಯ್ಯ ಅವರು ಈಗ ಕೆಲಸ ಕಳೆದುಕೊಂಡಿದ್ದಾರೆ. ಏಕೆಂದರೆ ಇಂತಿಷ್ಟು ವಿದ್ಯಾರ್ಥಿಗಳನ್ನು ನೀವು ಈ ವರ್ಷ ದಾಖಲಾತಿ ಮಾಡಲೇಬೇಕೆಂಬ ಟಾರ್ಗೆಟ್‌ ಅನ್ನು ಅವರು ಪೂರೈಸಲು ವಿಫಲರಾಗಿದ್ದಾರೆ. ಅದಕ್ಕೆ ಮತ್ತೂ ಕಾರಣ ಜನರ ಆರ್ಥಿಕ ಪರಿಸ್ಥಿತಿ ದಿನೇ ದಿನೇ ಕುಸಿಯುತ್ತಿರುವುದು. ಇದಕ್ಕೆ ಕಾರಣರಾರು?

ವೆಂಕಟಸುಬ್ಬಯ್ಯ ಸುಮಾರು 15 ವರ್ಷಗಳಿಂದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ತೆಲುಗು ಕಲಿಸಿದ್ದಾರೆ. ಲಾಕ್‌ಡೌನ್ ಪ್ರಾರಂಭವಾದಾಗಲೂ ಸಹ ಅವರು ಆನ್‌ಲೈನ್ ತರಗತಿಗಳ ಮೂಲಕ ನೆಲ್ಲೂರಿನ ನಾರಾಯಣ ಶಾಲೆಯಲ್ಲಿ ತಮ್ಮ ವಿದ್ಯಾರ್ಥಿಗಳಿಗೆ ಬೋಧನೆ ಮುಂದುವರೆಸಿದ್ದರು. ಆದರೆ ಯಾವಾಗ ದಾಖಲಾಗಿತ ಕಡಿಮೆಯಾಯಿತೊ ಅವರನ್ನು ಮನೆಗೆ ಕಳಿಸಲಾಯಿತು. ತಮ್ಮ ಮಗನ ವೈದ್ಯಕೀಯ ವೆಚ್ಚಕ್ಕಾಗಿ ಸಾಲ ಮಾಡಿಕೊಂಡಿದ್ದ ಅವರು ಕೆಲಸ ಕಳೆದುಕೊಂದು ಅಕ್ಷರಶಃ ಬೀದಿಗೆ ಬಿದ್ದರು. ಬದುಕಿನ ಬಂಡಿ ಸಾಗಿಸಲು ಅವರು ಈಗ ಬಾಳೆಹಣ್ಣು ಮಾರಾಟವನ್ನು ಆರಂಭಿಸಿದ್ದಾರೆ.

ಆಸರೆಗೆ ಬಂದ ಹಳೇ ವಿದ್ಯಾರ್ಥಿಗಳು

ವೆಂಕಟಸುಬ್ಬಯ್ಯನವರ ಪರಿಸ್ಥಿತಿ ನೋಡಿದ ಅವರ ಮಾಜಿ ವಿದ್ಯಾರ್ಥಿಗಳು ಕರಗಿದ್ದಾರೆ. ಎಷ್ಟೇ ಬಾಳೆಹಣ್ಣು ಮಾರಿದರೂ ಸಹ ಸದ್ಯದ ಅವರ ಸಾಲ ತೀರಿ, ಅವರ ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳುವುದು ಕಷ್ಟವಿದೆ. ಇದನ್ನು ಅರಿತ ಅವರ 150 ಹಳೆಯ ವಿದ್ಯಾರ್ಥಿಗಳು ಸೇರಿ 86,300 ರೂಗಳನ್ನು ಒಟ್ಟುಗೂಡಿಸಿ ಕೊಟ್ಟಿದ್ದಾರೆ. ಆದರೆ ವೆಂಕಟಸುಬ್ಬಯ್ಯನವರು ಅದನ್ನು ಪಡೆಯಲು ನಿರಾಕರಿಸಿ, ಪರಿಸ್ಥಿತಿ ಭೀಕರವಾಗಿದೆ ಇದು ನಿಮಗೆ ಉಪಯೋಗಕ್ಕೆ ಬರುತ್ತದೆ ಇಟ್ಟುಕೊಳ್ಳಿ ಎಂದರೆ ಒಪ್ಪದ ವಿದ್ಯಾರ್ಥಿಗಳು ಬಲವಂತವಾಗಿ ತಮ್ಮ ಶಿಕ್ಷಕರಿಗೆ ನೀಡಿದ್ದಾರೆ.

“ಬಾಳೆಹಣ್ಣುಗಳನ್ನು ಮಾರಾಟ ಮಾಡುವುದು ತಾತ್ಕಾಲಿಕ ಕೆಲಸ. ವರ್ಷಗಳ ಹಿಂದಿನ ಅನೇಕ ಮಾಜಿ ವಿದ್ಯಾರ್ಥಿಗಳು ನನಗೆ ಸಹಾಯ ಮಾಡಲು ಬಯಸಿದರೆ, ನಾನು ಶಿಕ್ಷಕನಾಗಿ ಅವರ ಮೇಲೆ ಪ್ರಭಾವ ಬೀರಿರಬೇಕು. ಕಡಿಮೆ ಸಂಬಳ ಸಿಕ್ಕರೂ ಸರಿಯೇ ನಾನು ಅಂತಿಮವಾಗಿ ಬೋಧನೆಗೆ ಹಿಂತಿರುಗಲು ಬಯಸುತ್ತೇನೆ ”ಎಂದು ವೆಂಕಟಸುಬ್ಬಯ್ಯ ಹೇಳುತ್ತಾರೆ.

ಲಾಕ್‌ಡೌನ್‌ ತಂದಿಟ್ಟ ಸಂಕಷ್ಟ

COVID-19 ಲಾಕ್‌ಡೌನ್ ಪ್ರಾರಂಭವಾದಾಗ, ಮಾರ್ಚ್ 29 ರಿಂದ ನಾರಾಯಣ ಶಾಲೆಯಲ್ಲಿ ಆನ್‌ಲೈನ್ ತರಗತಿಗಳು ಪ್ರಾರಂಭವಾದವು ಎಂದು ವೆಂಕಟಸುಬ್ಬಯ್ಯ ಹೇಳುತ್ತಾರೆ. ತರಗತಿಗಳು ಮುಗಿಯುವ ಕೆಲವು ದಿನಗಳ ಮೊದಲು ಮೇ 14 ರಂದು ಶಾಲಾ ಆಡಳಿತ ಮಂಡಳಿ ವೆಂಕಟಸುಬ್ಬಯ್ಯ ಮತ್ತು ಅವರ ಐದು ಸಹೋದ್ಯೋಗಿಗಳೊಂದಿಗೆ ಆನ್‌ಲೈನ್‌ನಲ್ಲಿ ಸಭೆ ನಡೆಸಿತು. ಅವರ “ಕಾರ್ಯಕ್ಷಮತೆ ಅತೃಪ್ತಿಕರವಾಗಿರುವುದರಿಂದ” ಅವರು ಇನ್ನು ಮುಂದೆ ಕೆಲಸ ಮಾಡುವುದನ್ನು ಮುಂದುವರಿಸಬೇಕಾಗಿಲ್ಲ ಎಂದು ಅವರಿಗೆ ತಿಳಿಸಲಾಯಿತು.

ಅಂದರೆ ಇಲ್ಲಿ ಶಾಲೆಯ ಆಡಳಿತ ಮಂಡಳಿ ಇವರ ಬೋಧನಾ ಸಾಮರ್ಥ್ಯಗಳನ್ನು ಉಲ್ಲೇಖಿಸಿಲ್ಲ. ಬದಲಾಗಿ ಶಾಲೆಗೆ ಹೊಸ ದಾಖಲಾತಿ ಮಾಡಿಸುವಲ್ಲಿ ಇವರು ತಮ್ಮ ಟಾರ್ಗೆಟ್‌ ಮುಟ್ಟಿಲ್ಲ ಎಂಬುದು ಆಡಳಿತ ಮಂಡಳಿಯ ಆಕ್ಷೇಪಣೆ. ಲಾಕ್‌ಡೌನ್‌ ಸಮಯದಲ್ಲಿ ನಾವು ಮನೆ ಮನೆಗೆ ಹೋಗಿ ಪೋಷಕರ ಮನವೊಲಿಸಲು ಸಾಧ್ಯವಾಗುತ್ತಿಲ್ಲ, ಹೊಸ ದಾಖಲಾತಿ ಮಾಡಿಸಲು ಹೇಗೆ ಸಾಧ್ಯ, ಹಾಗಾದರೆ ನಾವು ಅಸಮರ್ಥರೆ? ಎಂಬುದು ವೆಂಕಟಸುಬ್ಬಯ್ಯನವರ ಪ್ರಶ್ನೆಯಾಗಿದೆ.

“2007 ರಲ್ಲಿ ನಾನು ಕಲಿಸಿದ್ದ ಹಳೆಯ ವಿದ್ಯಾರ್ಥಿಯ ತಂದೆ ತನ್ನ ಬಾಳೆಹಣ್ಣಗಳನ್ನು ಮಾರಾಟ ಮಾಡಲು ನನಗೆ ಅವಕಾಶ ಮಾಡಿಕೊಡುವ ಮೂಲಕ ನನಗೆ ಸಹಾಯ ಮಾಡಿದರು” ಎಂದು ತೆಲುಗು ಮತ್ತು ಸಾರ್ವಜನಿಕ ಆಡಳಿತದಲ್ಲಿ ಎರಡು ಸ್ನಾತಕೋತ್ತರ ಪದವಿಗಳನ್ನು ಪಡೆದಿರುವ ವೆಂಕಟಸುಬ್ಬಯ್ಯ ಹೇಳುತ್ತಾರೆ. ಅವರೊಂದಿಗೆ ಕೆಲಸ ಕಳೆದುಕೊಂಡ ಅವರ ಕೆಲವು ಸಹೋದ್ಯೋಗಿಗಳು ತಮ್ಮ ಗ್ರಾಮಗಳಿಗೆ ಮರಳಿದ್ದಾರೆ ಎಂದು ಅವರು ಹೇಳುತ್ತಾರೆ.

ಖಾಸಗಿ ಶಾಲೆಗಳ ಧನದಾಹಿತನ

ಶ್ರೀ ಚೈತನ್ಯ, ನಾರಾಯಣ ಮತ್ತು ಭಾಷ್ಯಾಮ್ ಶಾಲೆಗಳು ಎಂಬ ಹೆಸರಿನ ಕೆಲವೇ ಮಾಲೀಕರು ಸಾವಿರಾರು ಶಾಳೆಗಳು ಆಂಧ್ರ ತೆಲಂಗಾಣದಲ್ಲಿ ತಲೆಎತ್ತಿವೆ. ಹೆಚ್ಚಿನ ಲಾಭ ಮಾಡುವುದೇ ಈ ಶಾಲೆಗಳ ಏಕೈಕ ಗುರಿಯಾಗಿದೆ. ಹಾಗಾಗಿ ಹೆಚ್ಚಿನ ಮಕ್ಕಳ ದಾಖಲಾತಿ ಮಾಡಿಸುವಂತೆ ಶಿಕ್ಷಕರ ಮೇಲೆ ಒತ್ತಡ ಹೇರಲಾಗುತ್ತದೆ. ಟಾರ್ಗೆಟ್‌ ಮುಟ್ಟದ ಶಿಕ್ಷಕರನ್ನು ಕೆಲಸದಿಂದ ವಜಾ ಮಾಡಲಾಗುತ್ತದೆ ಎಂದು ಎಂದು ಆಂಧ್ರಪ್ರದೇಶದ ಖಾಸಗಿ ಶಾಲಾ ಶಿಕ್ಷಕರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳಿಂದ ಅತಿ ಹೆಚ್ಚು ಶುಲ್ಕ ವಸೂಲಿ ಮಾಡುವ ಈ ಶಾಲೆಗಳು ಶಿಕ್ಷಕರಿಗೆ ಪೂರ್ಣ ವೇತನ ನೀಡದೇ ಸತಾಯಿಸುತ್ತಿದ್ದಾರೆ. ಶಿಕ್ಷಕ ರು ಶಾಲೆಯಲ್ಲಿ ಪಾಠ ಮಾಡುವುದಲ್ಲದೇ ಮನೆ ಮನೆಗೆ ತೆರಳಿ ದಾಖಲಾತಿ ಮಾಡಿಸುವುದೇ ಪ್ರಧಾನ ಕೆಲಸವಾಗಿದೆ ಎಂಬ ದೊಡ್ಡ ಆರೋಪ ಈ ಶಾಲೆಗಳ ಮೇಲಿದೆ. ಲಾಕ್‌ಡೌನ್‌ನಂತಹ ಸಂಕಷ್ಟದ ಕಾಲದಲ್ಲಿಯೂ ಸಹ ಈ ಶಾಲೆಗಳು ಧನದಾಹಿತನಕ್ಕೆ ಬಿದ್ದು ಶಿಕ್ಷಕರನ್ನು ನಿರುದ್ಯೋಗಿಗಳನ್ನಾಗಿ ಮಾಡುತ್ತಿವೆ.

ಇಂತಹ ಸಂಕಷ್ಟದ ಸಮಯದಲ್ಲಿ ಖಾಸಗಿ ಶಿಕ್ಷಕ ಸಂಘಗಳು ರಾಜ್ಯ ಸರ್ಕಾರದ ಸಹಾಯವನ್ನು ಕೋರಿವೆ. ಈ ಸಮಯದಲ್ಲಿ ಹೆಚ್ಚಿನ ಬೋಧನಾ ಉದ್ಯೋಗಗಳು ಲಭ್ಯವಿಲ್ಲದ ಕಾರಣ ಸರ್ಕಾರವು ಕೆಲವು ಜೀವನೋಪಾಯ ಆಯ್ಕೆಗಳನ್ನು ನೀಡುವ ಮೂಲಕ ನಮಗೆ ಬೆಂಬಲ ನೀಡಬೇಕೆಂದು ನಾನು ಬಯಸುತ್ತೇನೆ ”ಎಂದು ವೆಂಕಟಸುಬ್ಬಯ್ಯ ಒತ್ತಾಯಿಸುತ್ತಾರೆ.


ಮತ್ತಷ್ಟು ಸುದ್ದಿಗಳು

JNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

ಮೋಡಿಯ ಮಾಡಿದವರ ಪರಸಂಗ: ಡಿಜಿಟಲ್ ಕಾಲದಲ್ಲೊಂದು ತಾರತಮ್ಯದ ತಕರಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...